Homeಮುಖಪುಟರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

- Advertisement -
- Advertisement -

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರದ 7, ತಮಿಳುನಾಡಿನ 6, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ತಲಾ 5, ಒಡಿಶಾದ 4, ಅಸ್ಸಾಂನ 3, ಛತ್ತೀಸ್‌ಗಢ, ಹರಿಯಾಣ ಮತ್ತು ತೆಲಂಗಾಣದ ತಲಾ 2 ಮತ್ತು ಹಿಮಾಚಲ ಪ್ರದೇಶದ 1 ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.

ಕೆಲ ರಾಜ್ಯಗಳಲ್ಲಿ ಮತದಾನ ಅಗತ್ಯವಿದ್ದರೂ, ಏಳು ರಾಜ್ಯಗಳ 26 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದೇ ಮತ ಎಣಿಕೆ ನಡೆಯಲಿದೆ.

ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ಮತದಾನ ಅಗತ್ಯವಾಗಿದ್ದು, ಅಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ಸಕ್ರಿಯವಾಗಿ ಸಜ್ಜುಗೊಳಿಸಿವೆ. ಈ ರಾಜ್ಯಗಳು ಒಟ್ಟಾಗಿ 11 ಸ್ಥಾನಗಳನ್ನು ಹೊಂದಿವೆ.

ಈ ಚುನಾವಣೆ ರಾಜಕೀಯ ಚಟುವಟಿಕೆಗಳನ್ನು ಗರಿಗೇರಿಸಿದ್ದು, ಪಕ್ಷಗಳು ವಿಪ್ ಜಾರಿ ಮಾಡುವ ಮೂಲಕ ಅಡ್ಡ ಮತದಾನವನ್ನು ತಡೆಯಲು ಶಾಸಕರನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಬಿಹಾರದಲ್ಲಿ ಎನ್‌ಡಿಎ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದೆ. ಸಿಎಂ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಉಪೇಂದ್ರ ಕುಶ್ವಾಹ ರಾಮ್ ನಾಥ್ ಠಾಕೂರ್ ಶಿವೇಶ್ ಕುಮಾರ್ ಕಣದಲ್ಲಿದ್ದಾರೆ.

ವಿರೋಧ ಪಕ್ಷವಾದ ಆರ್‌ಜೆಡಿ ತೇಜಸ್ವಿ ಯಾದವ್ ಅವರ ಬೆಂಬಲವನ್ನು ನಂಬಿದ್ದು, ಅವರು ಎಐಎಂಐಎಂ ಮತ್ತು ಇತರ ಪಕ್ಷಗಳಿಂದ ಬೆಂಬಲ ಕೋರಿದ್ದಾರೆ.

ಒಡಿಶಾದಲ್ಲಿ ರಾಜ್ಯಸಭಾ ಚುನಾವಣೆ ತೀವ್ರ ರಾಜಕೀಯ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅವರು ಖಾಲಿ ಚೆಕ್‌ನೊಂದಿಗೆ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಇದೇ ಸಮಯದಲ್ಲಿ, ಬಿಜೆಪಿ ತನ್ನ ಶಾಸಕರನ್ನು ರಾಜ್ಯಸಭಾ ಮತದಾನ ಕಾರ್ಯವಿಧಾನದ ತರಬೇತಿ ನೆಪವೊಡ್ಡಿ ಪಾರಾದೀಪ್‌ಗೆ ಸ್ಥಳಾಂತರಿಸಿದೆ.

ಈ ನಡುವೆ, ಮಾಜಿ ಸಿಎಂ ನವೀನ್ ಪಟ್ನಾಯಕ್ ಪಕ್ಷದ ಶಾಸಕರನ್ನು ಭೇಟಿ ಮಾಡಿ ಅಡ್ಡ ಮತದಾನ ಮಾಡದಂತೆ ಮನವಿ ಮಾಡಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ಶಿಮ್ಲಾ ಬಳಿಯ ರೆಸಾರ್ಟ್‌ಗಳಿಂದ ಕಸೌಲಿಗೆ ಬಿಗಿ ಭದ್ರತೆಯ ನಡುವೆ ಸ್ಥಳಾಂತರಿಸಿದೆ. ಸಂಜಯ್ ಭಾಟಿಯಾ, ಕರಮ್ವೀರ್ ಸಿಂಗ್ ಬೌಧ್ ಮತ್ತು ಸತೀಶ್ ನಂದಲ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಮೇಲ್ಮನೆಯಲ್ಲಿ ಸ್ಥಾನ ಪಡೆಯಲು ಪ್ರತಿ ಅಭ್ಯರ್ಥಿಗೆ ಶಾಸಕರ 31 ಮತಗಳು ಬೇಕಾಗುತ್ತವೆ.

ಮಹಾರಾಷ್ಟ್ರದ 7, ತಮಿಳುನಾಡಿನ 6, ತೆಲಂಗಾಣದ 2, ಛತ್ತೀಸ್‌ಗಢದ 2, ಅಸ್ಸಾಂನ 3 ಮತ್ತು ಹಿಮಾಚಲ ಪ್ರದೇಶದ ಒಬ್ಬರು ಅಭ್ಯರ್ಥಿ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧಿಕೃತವಾಗಿ ಮಾತ್ರ ಫಲಿತಾಂಶ ಪ್ರಕಟಗೊಳ್ಳಬೇಕಿದೆ.

ತೆಲಂಗಾಣದ ಅಭಿಷೇಕ್ ಮನು ಸಿಂಘ್ವಿ ಮತ್ತು ತಮಿಳುನಾಡಿನ ಅನ್ಬುಮಣಿ ರಾಮದಾಸ್ ಅವರು ಅವಿರೋಧವಾಗಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳು.

ಇಂದು ಮತದಾನ ನಡೆಯುತ್ತಿರುವ ಆರು ರಾಜ್ಯಗಳಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಎನ್‌ಡಿಎ, 234 ಸದಸ್ಯ ಬಲದ ರಾಜ್ಯಸಭೆಯಲ್ಲಿ 134 ಸ್ಥಾನಗಳನ್ನು ಹೊಂದಿದ್ದು, ತನ್ನ ಬಲವನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಿದೆ.

ಚುನಾವಣೆಯ ನಡೆಯುತ್ತಿರುವ ನಾಲ್ಕು ರಾಜ್ಯಗಳನ್ನು ಆಳುತ್ತಿರುವ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ, ಪ್ರಸ್ತುತ ಮೇಲ್ಮನೆಯಲ್ಲಿ 80 ಸ್ಥಾನಗಳನ್ನು ಹೊಂದಿದೆ.

ಆದ್ದರಿಂದ, ಈ ಚುನಾವಣೆಯ ಫಲಿತಾಂಶ ಮುಂಬರುವ ತಿಂಗಳುಗಳಲ್ಲಿ ರಾಜ್ಯಸಭೆಯಲ್ಲಿ ಅಧಿಕಾರದ ಸಮತೋಲನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...