Homeಮುಖಪುಟಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

- Advertisement -
- Advertisement -

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ ಆಘಾತ ನಿಡಿದೆ.

ಮತ ಚಲಾಯಿಸದವರಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಶಾಸಕ ಫೈಸಲ್ ರೆಹಮಾನ್ ಮತ್ತು ಮೂವರು ಕಾಂಗ್ರೆಸ್ ಶಾಸಕರಾದ ಮನೋಹರ್ ಪ್ರಸಾದ್, ಸುರೇಂದ್ರ ಕುಶ್ವಾಹ ಮತ್ತು ಮನೋಜ್ ಬಿಸ್ವಾಸ್ ಸೇರಿದ್ದಾರೆ.

ಮತದಾನ ಮುಂದುವರೆದಂತೆ ಮೂವರು ಕಾಂಗ್ರೆಸ್ ಶಾಸಕರು ದಿನವಿಡೀ ಪಕ್ಷದೊಂದಿಗೆ ಸಂಪರ್ಕದಿಂದ ಹೊರಗಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಶಾಸಕರ ಫೋನ್‌ಗಳು ಸ್ವಿಚ್ ಆಫ್ ಆಗಿದ್ದವು. ಅವರ ಈ ನಡೆಯು ವಿರೋಧ ಪಕ್ಷದ ಬಣದೊಳಗೆ ಕಳವಳವನ್ನುಂಟುಮಾಡಿತು.

ನಾಲ್ವರು ಶಾಸಕರ ಅನುಪಸ್ಥಿತಿಯು ನಿರ್ಣಾಯಕ ಕ್ಷಣದಲ್ಲಿ ಬಂದಿತು. ಐದನೇ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಇಮಡಿಯಾ ಬಣ ನೇರ ಸ್ಪರ್ಧೆಯಲ್ಲಿ ಸಿಲುಕಿದೆ.

ಜೆಡಿ(ಯು) ನಾಯಕರಾದ ನಿತೀಶ್ ಕುಮಾರ್ ಮತ್ತು ರಾಮನಾಥ್ ಠಾಕೂರ್, ಬಿಜೆಪಿಯ ನಿತಿನ್ ನಬಿನ್ ಮತ್ತು ಶಿವಂ ಕುಮಾರ್ ಅವರ ಗೆಲುವು ಖಚಿತವೆಂದು ಪರಿಗಣಿಸಲಾಗಿದ್ದರೂ, ಅಂತಿಮ ಸ್ಥಾನಕ್ಕೆ ನಡೆಯುವ ಹೋರಾಟವು ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಕುಶ್ವಾಹ ಮತ್ತು ಮಹಾಘಟಬಂಧನ್ ಅಭ್ಯರ್ಥಿ ಎ.ಡಿ. ಸಿಂಗ್ ನಡುವೆ ತೀವ್ರ ಪೈಪೋಟಿಯಾಗಿ ಮಾರ್ಪಟ್ಟಿದೆ.

ಎನ್‌ಡಿಎಗೆ ಸೇರಿದ ಎಲ್ಲಾ 202 ಶಾಸಕರು ಈಗಾಗಲೇ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ನಾಲ್ವರು ಶಾಸಕರು ಮತದಾನಕ್ಕೆ ಹಾಜರಾಗದ ಕಾರಣ ಮಹಾಘಟಬಂಧನ್‌ನ ಮತ ಎಣಿಕೆ 37 ರಲ್ಲೇ ಉಳಿದಿದೆ.

243 ಸದಸ್ಯರ ವಿಧಾನಸಭೆಯಲ್ಲಿ 35 ಶಾಸಕರನ್ನು ಹೊಂದಿರುವ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಗೆಲುವು ಖಚಿತಪಡಿಸಿಕೊಳ್ಳಲು ಕನಿಷ್ಠ 41 ಶಾಸಕರ ಬೆಂಬಲ ಅಗತ್ಯವಿತ್ತು. ಮೈತ್ರಿಕೂಟವು ಐದು ಎಐಎಂಐಎಂ ಶಾಸಕರ ಬೆಂಬಲವನ್ನು ಪಡೆದುಕೊಂಡಿತ್ತು. ಬಿಎಸ್‌ಪಿ ಶಾಸಕರ ಬೆಂಬಲವನ್ನು ಸಹ ನಿರೀಕ್ಷಿಸುತ್ತಿತ್ತು.

ಕುಶ್ವಾಹ ಗೆಲ್ಲಲು, ಎನ್‌ಡಿಎಗೆ ಮಹಾಘಟಬಂಧನ್‌ನ ಕನಿಷ್ಠ ಮೂವರು ಶಾಸಕರ ಮತಗಳು ಬೇಕಾಗಿದ್ದವು. ಈ ಸಂದರ್ಭದಲ್ಲಿ, ವಾಲ್ಮೀಕಿನಗರದ ಸುರೇಂದ್ರ ಕುಶ್ವಾಹ, ಫೋರ್ಬ್ಸ್‌ಗಂಜ್‌ನ ಮನೋಜ್ ಬಿಸ್ವಾಸ್ ಮತ್ತು ಮಣಿಹರಿಯ ಮನೋಹರ್ ಪ್ರಸಾದ್ ಎಂಬ ಮೂವರು ಕಾಂಗ್ರೆಸ್ ಶಾಸಕರ ವಿವರಣೆಯಿಲ್ಲದ ಅನುಪಸ್ಥಿತಿಯು ಮಹತ್ವ ಪಡೆದುಕೊಂಡಿತು.

ಚುನಾವಣೆಗೆ ಮುನ್ನ, ಅಕ್ರಮ ಕುದುರೆವ್ಯಾಪಾರ ಪ್ರಯತ್ನಗಳನ್ನು ತಡೆಗಟ್ಟಲು ಮಹಾ ಮೈತ್ರಿಕೂಟವು ತನ್ನ ಶಾಸಕರನ್ನು ಪಾಟ್ನಾದ ಹೋಟೆಲ್‌ನಲ್ಲಿ ಇರಿಸಿತ್ತು. ಈ ಮಧ್ಯೆ, ಎನ್‌ಡಿಎ ಭಾನುವಾರ ರಾಜ್ಯ ರಾಜಧಾನಿಯಲ್ಲಿ ಸಚಿವರು ಮತ್ತು ಹಿರಿಯ ನಾಯಕರ ನಿವಾಸಗಳಲ್ಲಿ ತನ್ನ ಶಾಸಕರೊಂದಿಗೆ ಸಭೆಗಳನ್ನು ನಡೆಸಿತು.

243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ, ಎನ್‌ಡಿಎ 202 ಶಾಸಕರೊಂದಿಗೆ ಆರಾಮದಾಯಕ ಬಹುಮತವನ್ನು ಹೊಂದಿದೆ. ಆದರೂ ಐದು ರಾಜ್ಯಸಭಾ ಸ್ಥಾನಗಳನ್ನು ಪಡೆಯಲು ಅಗತ್ಯವಿರುವ 205 ಸ್ಥಾನಗಳಲ್ಲಿ ಈ ಸಂಖ್ಯೆಗೆ ಮತಗಳು ಮೂರು ಕಡಿಮೆಯಾಗಿದೆ. ಬಿಹಾರದಿಂದ ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 41 ಶಾಸಕರ ಬೆಂಬಲ ಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...