Homeದಲಿತ್ ಫೈಲ್ಸ್ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 42 ಆರೋಪಿಗಳಲ್ಲಿ ಐವರನ್ನು ದೋಷಿಗಳು ಹೇಳಿದೆ. ಇತರ 37 ಜನರನ್ನು ಖುಲಾಸೆಗೊಳಿಸಿದ್ದು, ಪ್ರಕರಣದ ಇಬ್ಬರು ಆರೋಪಿಗಳು ವಿಚಾರಣಾ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ.

ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. ತಪ್ಪಿತಸ್ಥರೆಂದು ಸಾಬೀತಾದ ಐದು ಆರೋಪಿಗಳು ರಮೇಶ್ ಜಾದವ್, ರಾಕೇಶ್ ಜೋಶಿ, ಪ್ರಮೋದ್ ಗೋಸ್ವಾಮಿ, ನಾಗ್ಜಿ ದಯಾ ಮತ್ತು ಬಲವಂತ್ ಗೋಸ್ವಾಮಿ.

ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿದಂತೆ 37 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಖುಲಾಸೆಗೊಂಡ ಪೊಲೀಸ್ ಸಿಬ್ಬಂದಿಗಳಲ್ಲಿ ಕಾಂಚನ್‌ಬೆನ್, ಆಗ ಪಿಎಸ್‌ಐ ಪಾಂಡೆ, ಆಗ ಉನಾ ಪಿಎಸ್‌ಒ ಕರ್ಶನ್‌ಭಾಯ್ ಮತ್ತು ನಿರ್ಮಲ್ ಜಲಾ ಸೇರಿದ್ದಾರೆ, ಅವರಲ್ಲಿ ಕೊನೆಯವರು ಈಗ ನಿಧನರಾಗಿದ್ದಾರೆ.

ದೇಶವನ್ನು ತಲ್ಲಣಗೊಳಿಸಿದ್ದ ಊನಾ ಘಟನೆ

ಜುಲೈ 11, 2016ರಂದು ’ಗಿರ್ ಸೋಮನಾಥ’ ಜಿಲ್ಲೆಯ ’ಊನಾ’ದ ಬಳಿಯಲ್ಲಿರುವ ’ಮೋಟ ಸಮಾಧಿಯಾಲ’ ಎಂಬ ಹಳ್ಳಿಯಲ್ಲಿ ಸತ್ತ ದನದ ಚರ್ಮವನ್ನು ತಲತಲಾಂತರದಿಂದ ಸುಲಿಯುವ ದಲಿತ ಕುಟುಂಬದ ಏಳು ಯುವಕರು ಎಂದಿನಂತೆ ತಮ್ಮ ಕಾಯಕ ಮಾಡುತ್ತಿದ್ದರು. ಆ ಸತ್ತ ದನವನ್ನವರು ಬೇಡಿಯಾ ಜಿಲ್ಲೆಯಿಂದ ತಂದಿದ್ದರು. ಆಗ ಅಲ್ಲಿಗೆ ಎರಡು ಕಾರಿನಲ್ಲಿ ಬಂದ ಒಂದಷ್ಟು ಜನ ಕೆಳಗಿಳಿದು ಅವರ ಬಳಿ ಬಂದು ’ನಾವು ಗೋ ರಕ್ಷಕರು’ ಎಂದರು. ’ದನವನ್ನು ಕೊಂದು ಚರ್ಮ ಸುಲಿಯುತ್ತಿದ್ದೀರಿ’ ಎಂದು ದಲಿತರ ಮೇಲೆ ಆರೋಪ ಹೊರಿಸಿದರು. ಆ ದಲಿತ ಯುವಕರು ’ತಾವು ಸತ್ತ ದನದ ಚರ್ಮ ಸುಲಿಯುತ್ತಿರುವುದಾಗಿ’ ಎಷ್ಟೇ ಹೇಳಿದರೂ ಧರ್ಮಾಂಧತೆಯ ಅಮಲಿನಲ್ಲಿದ್ದ ಆ ಗೋ ರಕ್ಷಕರೆಂಬ ಭಯೋತ್ಪಾದಕರು ಏಳು ಜನ ದಲಿತರನ್ನೂ ಕಾರಿಗೆ ಕಟ್ಟಿಹಾಕಿ ದೊಣ್ಣೆ ಹಾಗೂ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛ ಥಳಿಸಿದರು. ಅದಷ್ಟಕ್ಕೆ ಅವರ ವಿಕೃತಿ ಸಮಾಧಾನವಾಗಲಿಲ್ಲ. ಎರಡೂ ಕಾರಿನಲ್ಲಿ ನಾಲ್ವರನ್ನು ತುಂಬಿಕೊಂಡು ಊನಾ ಪಟ್ಟಣಕ್ಕೆ ಬಂದರು. ಅಲ್ಲಿ ಬೃಹತ್ ಸರ್ಕಲ್‌ನಲ್ಲಿ ಬಟ್ಟೆ ಬಿಚ್ಚಿ ಬೆತ್ತಲಾಗಿಸಿ ಮತ್ತೆ ಥಳಿಸಿದರು. ಇದನ್ನು ತಮ್ಮ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಂಡರು. ಪೊಲೀಸರು ಅಲ್ಲಿಗೆ ಬರುವುದನ್ನು ಕಂಡು ಗೋರಕ್ಷಕ ಭಯೋತ್ಪಾದಕರು ನಂತರ ಓಡಿಹೋದರು.

ನಂತರ ಆ ಏಳು ದಲಿತರಿಗೆ ಊನಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಮೇಲೆ ಹೆಚ್ಚಿನ ಚಿಕಿತ್ಸೆಗೆ ರಾಜಕೋಟ್‌ನ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ದಲಿತರನ್ನು ಮಾರಣಾಂತಿಕವಾಗಿ ಥಳಿಸಿದ್ದ ವಿಡಿಯೋ ಇಡೀ ಗುಜರಾತಿನ ದಲಿತರ ನಿದ್ದೆಗೆಡಿಸಿತು. ರಾಜ್ಯಾದ್ಯಂತ ಸರಣಿ ಹೋರಾಟಗಳು ಜರುಗಿದವು. ಜುಲೈ 12ರಂದೇ ಗುಜರಾತಿನ ಅಹಮದಾಬಾದ್‌ನಲ್ಲಿ ಹಲವು ದಲಿತ ನಾಯಕರು ಬೀದಿಗಿಳಿದ ಪರಿಣಾಮ ದಲಿತ ಯುವಕರು ಸಿಟ್ಟಿಗೆದ್ದು ಪ್ರತಿಭಟಿಸಿದರು. ರಾಜ್ಯ ಹೆದ್ದಾರಿಯನ್ನು ತಡೆಹಿಡಿದರು. ಸತ್ತ ಪ್ರಾಣಿಗಳ ಕಳೇಬರಗಳನ್ನು ಸರ್ಕಾರಿ ಕಚೇರಿಗಳ ಮುಂದೆ ಎಸೆದರು. ರಸ್ತೆರಸ್ತೆಯಲ್ಲಿ ಕಳೇಬರಗಳನ್ನು ಬಿಸಾಡಿದರು. ಅಕ್ಷರಶಃ ಗುಜರಾತ್ ಒಂದು ವಾರ ಗಬ್ಬು ನಾರುತ್ತಿತ್ತು. ದಲಿತರು ರೊಚ್ಚಿಗೆದ್ದರೆ ಆಗುವ ಪರಿಣಾಮವನ್ನು ಗುಜರಾತ್ ಕಂಡಿತ್ತು. 12 ದಲಿತ ಯುವಕರು ಆತ್ಮಹತ್ಯೆಗೆ ಪ್ರಯತ್ನಿಸಿದರು. ಅದರಲ್ಲಿ ಒಬ್ಬ ಯುವಕ ಅಸುನೀಗಿದನು. ಇದರ ಪರಿಣಾಮವಾಗಿ ಜುಲೈ 21ರಂದು ರಾಜ್ಯಸಭೆಯಲ್ಲಿ ಈ ಘಟನೆ ಪ್ರತಿಧ್ವನಿಸಿತು.

ದಲಿತ ಯುವಕ ಜಿಗ್ನೇಶ್ ಮೆವಾನಿ ನೇತೃತ್ವದಲ್ಲಿ ಆಗಸ್ಟ್ 15, 2016ರ ಸ್ವಾತಂತ್ರ್ಯ ದಿನಾಚರಣೆಯಂದು ಅಹಮದಾಬಾದ್‌ನಿಂದ ಊನಾದವರೆಗೆ ದಲಿತ ಅಸ್ಮಿತೆ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಯಾತ್ರೆಯಲ್ಲಿ ಸುಮಾರು 20,000 ಹೋರಾಟಗಾರರು ಭಾಗವಹಿಸಿದ್ದರು. ಅತಿ ಪ್ರಮುಖವಾಗಿ ಈ ಯಾತ್ರೆಯಲ್ಲಿ ಭಾಗವಹಿಸಿದ್ದ ದಲಿತರು ’ಇನ್ನು ಮುಂದೆ ಸಾಂಪ್ರದಾಯಿಕ ವೃತ್ತಿಯಾದ ಸತ್ತ ಪ್ರಾಣಿಗಳ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ಮಾಡಲಾರೆವು’ ಎಂಬ ಪ್ರತಿಜ್ಞೆಯನ್ನು ಕೈಗೊಂಡರು. ಆ ಹೋರಾಟದಲ್ಲಿಯೇ ’ದಲಿತರಿಗೆ ಉಳುಮೆ ಮಾಡಲು ಭೂಮಿ ಕೊಡಿ’ ಎಂಬ ಘೋಷವಾಕ್ಯವೂ ಮೊಳಗಿತು. ಬರೋಬ್ಬರಿ ಹತ್ತು ದಿನಗಳು ನಡೆದ ಈ ಯಾತ್ರೆಯಿಂದ ಮನೆಗೆ ಮರಳುತ್ತಿದ್ದಾಗ ದಲಿತರ ಮೇಲೆ ಬಾಂಬ್ ದಾಳಿ ಮಾಡಲಾಯಿತು. 10 ಜನರು ಗಂಭೀರವಾಗಿ ಗಾಯಗೊಂಡರು. ಆಶ್ಚರ್ಯವೆಂದರೆ ಅಲ್ಲಿನ ಬಿಜೆಪಿ ಸರ್ಕಾರ ದಲಿತರ ಮೇಲೆ ಬಾಂಬು ಹಾಕಿದವರನ್ನು ಬಂಧಿಸದೇ, ಅದನ್ನು ಸುಳ್ಳು ಸುದ್ದಿಯೆಂದು ಪ್ರಚಾರಮಾಡಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...