Homeಮುಖಪುಟಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳನ್ನು ಪೂರೈಸುವಂತಿರಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಂದಿರಿಗೆ ಹೆರಿಗೆ ರಜೆ ನೀಡಬೇಕು ಎಂಬ ನಿರ್ಬಂಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ಪೀಠವು ಈ ಸೂಚನೆ ನೀಡಿದೆ.

ಸಾಮಾಜಿಕ ಭದ್ರತಾ ಸಂಹಿತೆ, 2020ರ ಸೆಕ್ಷನ್ 60(4) ಅಡಿಯಲ್ಲಿ ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಿಗೆ 12 ವಾರಗಳ ಹೆರಿಗೆ ರಜೆ ನೀಡಬೇಕು ಎಂಬ ನಿಬಂಧನೆಯು ಅಸಂವಿಧಾನಿಕ ಎಂದು ಪೀಠ ತೀರ್ಪು ನೀಡಿದೆ. ಈ ನಿಬಂಧನೆಯನ್ನು ತಿದ್ದುಪಡಿ ಮಾಡಿ, ಕಾನೂನುಬದ್ಧವಾಗಿ ಮಗುವನ್ನು ದತ್ತು ಪಡೆದ ಮಹಿಳೆಯು ಮಗುವಿನ ವಯಸ್ಸಿನ ಮಿತಿಯಿಲ್ಲದೆ 12 ವಾರಗಳ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಿದೆ.

“ಪಿತೃತ್ವ ರಜೆಯ ಅಗತ್ಯತೆಯ ಕುರಿತು ಹೇಳುವುದಾದರೆ, ಪಿತೃತ್ವ ರಜೆಯನ್ನು ಸಾಮಾಜಿಕ ಭದ್ರತಾ ಸೌಲಭ್ಯವೆಂದು ಗುರುತಿಸುವ ಕಾನೂನು ರೂಪಸಿಲು ನಾವು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಅಂತಹ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳಿಗೆ ಸ್ಪಂದಿಸುವ ರೀತಿಯಲ್ಲಿ ನಿರ್ಧರಿಸಲ್ಪಡಬೇಕು ಎಂದು” ಎಂದು ನ್ಯಾಯಮೂರ್ತಿ ಪಾರ್ದೀವಾಲಾ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

ಪಿತೃತ್ವ ರಜೆ ಎಂದರೆ ಮಗುವಿನ ಜನನ ಅಥವಾ ದತ್ತು ಸ್ವೀಕಾರದ ನಂತರ ತಂದೆಗೆ ನೀಡಲಾಗುವ ವೇತನ ಸಹಿತ ಅಥವಾ ವೇತನ ರಹಿತ ರಜೆಯಾಗಿದೆ. ಇದು ಮಗುವಿನ ಆರಂಭಿಕ ಆರೈಕೆಯಲ್ಲಿ ಪಾಲ್ಗೊಳ್ಳಲು ಮತ್ತು ಹೆರಿಗೆಯ ನಂತರದ ಹಂತದಲ್ಲಿ ತಾಯಿಗೆ ಬೆಂಬಲ ನೀಡಲು ಸಹಕಾರಿಯಾಗುತ್ತದೆ. ಪೋಷಣೆ ಎಂಬುದು ಇಬ್ಬರ ಹಂಚಿಕೆಯ ಜವಾಬ್ದಾರಿಯಾಗಿದ್ದು, ಮಗುವಿನ ಆರಂಭಿಕ ಜೀವನದಲ್ಲಿ ಪೋಷಕರಿಬ್ಬರ ಉಪಸ್ಥಿತಿಯು ಮಗುವಿನ ಉತ್ತಮ ಬೆಳವಣಿಗೆಗೆ ಪೂರಕ ಎಂಬ ಮಾನ್ಯತೆಯ ಮೇಲೆ ಈ ಪರಿಕಲ್ಪನೆಯು ಆಧಾರಿತವಾಗಿದೆ. ಇದು ಕೇವಲ ಮಹಿಳೆಯರಿಗೆ ಸೀಮಿತವಾಗಿರುವ ಸಾಂಪ್ರದಾಯಿಕ ಪೋಷಣೆಯ ಜವಾಬ್ದಾರಿಯನ್ನು ಪ್ರಶ್ನಿಸುವ ಮೂಲಕ ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ಮನೆಗೆಲಸದ ಜವಾಬ್ದಾರಿಗಳನ್ನು ಸಮಾನವಾಗಿ ಹಂಚಿಕೊಳ್ಳಲು ಮತ್ತು ಮಹಿಳೆಯರು ನಿರಂತರವಾಗಿ ಉದ್ಯೋಗದಲ್ಲಿ ಮುಂದುವರಿಯಲು ಸಹಾಯ ಮಾಡುತ್ತದೆ.

ಭಾರತದಲ್ಲಿ ಇನ್ನೂ ಪಿತೃತ್ವ ರಜೆಯನ್ನು ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ, ಆದರೆ ಮಹಿಳೆಯರಿಗೆ 26 ವಾರಗಳವರೆಗೆ ವೇತನ ಸಹಿತ ಹೆರಿಗೆ ರಜೆಗೆ ಅವಕಾಶವಿದೆ. ಇಬ್ಬರಿಗಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳೆಯರಿಗೆ 26 ವಾರಗಳ ವೇತನ ಸಹಿತ ಹೆರಿಗೆ ರಜೆ ಮತ್ತು ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ 12 ವಾರಗಳ ರಜೆಯನ್ನು ಕಾನೂನು ಒದಗಿಸುತ್ತದೆ. ಇದರಲ್ಲಿ ಹೆರಿಗೆಗೆ ಮುನ್ನ 8 ವಾರಗಳವರೆಗೆ ರಜೆ ಪಡೆಯಲು ಅವಕಾಶವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...