Homeಮುಖಪುಟಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

- Advertisement -
- Advertisement -

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಆರೋಪಿಯಿಂದ ಮಹಿಳೆಯರಿಗೆ ಸಂಬಂಧಿಸಿದ 58 ಆಕ್ಷೇಪಾರ್ಹ ವೀಡಿಯೊಗಳನ್ನು ವಶಪಡಿಸಿಕೊಂಡಿದ್ದಾರೆ. ಖಾರಟ್ ಹಲವಾರು ರಾಜಕಾರಣಿಗಳು, ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದನೆಂದು ವರದಿಯಾಗಿದೆ, ಅವರಲ್ಲಿ ಅನೇಕರು ವಿವಿಧ ವಿಷಯಗಳ ಬಗ್ಗೆ ಈತನ ಸಲಹೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಾಕಣಕರ್ ಹಾಗೂ ಡಿಸಿಎಂ ಏಕನಾಥ್ ಶಿಂದೆ ಅವರೊಂದಿಗೆ ಖಾರಟ್ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಒಂದು ವಿಡಿಯೋದಲ್ಲಿ ಚಾಕಣಕರ್ ಅವರು ಭಕ್ತಿಯಿಂದ ಖಾರಟ್ ಅವರ ಕಾಲು ತೊಳೆಯುತ್ತಿರುವುದು ಕಂಡುಬಂದಿದ್ದು, ಮತ್ತೊಂದರಲ್ಲಿ ಅವರನ್ನು ತಮ್ಮ ಗುರು ಎಂದು ಸಂಬೋಧಿಸಿದ್ದಾರೆ. ಅಲ್ಲದೆ, ಖಾರಟ್ ಅಧ್ಯಕ್ಷರಾಗಿರುವ ‘ಶಿವನಿಕ’ ಎಂಬ ಟ್ರಸ್ಟ್‌ನಲ್ಲಿ ಚಾಕಣಕರ್ ಅವರು ಸದಸ್ಯರಾಗಿದ್ದಾರೆ.

ಚಾಕಣಕರ್ ಅವರು ಸಾಮಾಜಿಕ ಕೆಲಸಗಳಿಗಾಗಿ ಶಿವನಿಕ ಟ್ರಸ್ಟ್‌ನ ಸಭೆಗಳಲ್ಲಿ ಭಾಗವಹಿಸುತ್ತಿದ್ದಾಗ ಖಾರಟ್‌ ಅವರ ಸಂಪರ್ಕಕ್ಕೆ ಬಂದಿದ್ದಾಗಿ ಒಪ್ಪಿಕೊಂಡಿದ್ದಾರೆ. ಅವರ ಮೇಲಿರುವ ಈ ಗಂಭೀರ ಆರೋಪಗಳ ಬಗ್ಗೆ ತಮಗೆ ಅರಿವಿರಲಿಲ್ಲ ಎಂದು ತಿಳಿಸಿರುವ ಅವರು, ಸತ್ಯಾಸತ್ಯತೆಯನ್ನು ಹೊರತರಲು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಖಾರಟ್ ಮಹಿಳೆಯರಿಗೆ ಅಮಲು ಪದಾರ್ಥಗಳನ್ನು ನೀಡಿ, ಅವರನ್ನು ಅಸಭ್ಯವಾಗಿ ಚಿತ್ರೀಕರಿಸಿ, ನಂತರ ಆ ದೃಶ್ಯಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮತ್ತು ಶೋಷಣೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಈತನ ವಿರುದ್ಧ ಅತ್ಯಾಚಾರದ ಆರೋಪಗಳೂ ಕೇಳಿಬಂದಿದ್ದು, ಈಗಾಗಲೇ ಔಪಚಾರಿಕ ದೂರು ದಾಖಲಾಗಿದೆ.

ಹಲವಾರು ಸೆಲೆಬ್ರಿಟಿಗಳು, ಉದ್ಯಮಿಗಳು ಮತ್ತು ರಾಜಕಾರಣಿಗಳು ಸಲಹೆಗಾಗಿ ಈತನನ್ನು ಸಂಪರ್ಕಿಸುತ್ತಿದ್ದರು. ಖಾರಟ್ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ವಿಶ್ವವಿಜ್ಞಾನ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪರಿಣಿತನೆಂದು ಗುರುತಿಸಿಕೊಂಡಿದ್ದನು. ಈತ ನಾಸಿಕ್ ಮತ್ತು ಇತರ ಮಹಾನಗರಗಳಲ್ಲಿ ಹಲವಾರು ಎಕರೆ ಭೂಮಿಯನ್ನು ಕೂಡ ಸಂಪಾದಿಸಿದ್ದಾನೆ ಎಂದು ವರದಿಗಳು ವಿವರಿಸಿವೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆ ಅವರು, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ ಮತ್ತು ರೂಪಾಲಿ ಚಾಕಣಕರ್ ಅವರು ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಖಾರಟ್‌ನ ಚಟುವಟಿಕೆಗಳ ಬಗ್ಗೆ ಚಾಕಣಕರ್ ಅವರಿಗೆ ಮೊದಲೇ ತಿಳಿದಿರುವ ಸಾಧ್ಯತೆಯಿದೆ ಮತ್ತು ಅವರು ಆತನಿಗೆ ರಾಜಕೀಯ ರಕ್ಷಣೆ ನೀಡಿರಬಹುದು ಎಂದು ಅಂಧಾರೆ ಆರೋಪಿಸಿದ್ದಾರೆ. ಆದ್ದರಿಂದ ಅವರು ತಕ್ಷಣವೇ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿದ್ದಾರೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...