Homeಮುಖಪುಟಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; 'ಇಸ್ಲಾಮೋಫೋಬಿಕ್' ಕುರಿತು ಆತಂಕ ವ್ಯಕ್ತಪಡಿಸಿದ...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು ಕೋಮುವಾದಿ ಮನಸ್ಥಿತಿಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಓಲಾ ಚಾಲಕನೊಬ್ಬ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಲ್ಲದೆ, ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳನ್ನು ಹೆಮ್ಮೆಯಿಂದ ವಿವರಿಸಿದ್ದಾನೆ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಡಾ. ಸೈಫ್ ಮೆಹಮೂದ್ ಹೇಳಿದ್ದಾರೆ.

ಮೆಹಮೂದ್ ಪ್ರಕಾರ, ಮಾರ್ಚ್ 15 ರಂದು ಸಂಜೆ 5:22 ಕ್ಕೆ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಿಂದ ಮಧ್ಯ ದೆಹಲಿಯ ಮ್ಯಾಕ್ಸ್ ಮುಲ್ಲರ್ ಭವನಕ್ಕೆ ಪ್ರಯಾಣಿಸಲು ಓಲಾ ಮೂಲಕ ಕ್ಯಾಬ್ ಬುಕ್ ಮಾಡಿದಾಗ ಈ ಘಟನೆ ಸಂಭವಿಸಿದೆ. ಪ್ರಯಾಣದ ಸಮಯದಲ್ಲಿ, ಚಾಲಕ ತನ್ನ ಮುಸ್ಲಿಂ ಗುರುತಿನ ಬಗ್ಗೆ ತಿಳಿದ ನಂತರ ಕೋಮುವಾದಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ, ನನ್ನನ್ನು ಬೆದರಿಸಲು ಪ್ರಯತ್ನಿಸಿದನು ಎಂದು ಆರೋಪಿಸಲಾಗಿದೆ.

ಮಾರ್ಚ್ 16 ರಂದು ಓಲಾ ಮತ್ತು ಅದರ ಸಿಇಒ ಭವಿಶ್ ಅಗರ್ವಾಲ್ ಅವರಿಗೆ ಕಳುಹಿಸಲಾದ ವಿವರವಾದ ದೂರು ಮತ್ತು ಕಾನೂನು ನೋಟಿಸ್‌ನಲ್ಲಿ, ಡಾ. ಮೆಹಮೂದ್ ಘಟನೆಯ ಬಗ್ಗೆ ಆಘಾತ ಮತ್ತು ಎಚ್ಚರಿಕೆ ವ್ಯಕ್ತಪಡಿಸಿದ್ದಾರೆ. ಓಲಾ ಪ್ರಯಾಣದಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಆ್ಯಪ್‌ನಲ್ಲಿ “ಶ್ರೀ ರಾಮ್” ಎಂಬ ಹೆಸರಿನ ಚಾಲಕ ಪ್ರತ್ಯೇಕ ಘಟನೆಗಳಲ್ಲಿ ಮುಸ್ಲಿಂ ಪ್ರಯಾಣಿಕರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಿದ್ದಾಗಿ ಹೇಳಿಕೊಮಡು ಹೆಮ್ಮೆಪಡುತ್ತಾನೆ ಎಂದು ವಕೀಲರು ಆರೋಪಿಸಿದ್ದಾರೆ. ಅಂತಹ ಒಂದು ಪ್ರಕರಣದಲ್ಲಿ ಆತ “ಅನ್ಸಾರಿ-ವನ್ಸಾರಿ” ಎಂಬ ಪ್ರಯಾಣಿಕನ ಮೇಲೆ ರಸ್ತೆಬದಿಯ ಧಾಬಾದಲ್ಲಿ ಹೊಡೆದಿದ್ದಾಗಿ ಅವರು ಹೇಳಿಕೊಂಡರು. ಇತರರು ಕೂಡ ಹಲ್ಲೆಗೆ ಸಹಕರಿಸಿದ್ದರು. ನೋಯ್ಡಾದಲ್ಲಿ ನಡೆದ ಮತ್ತೊಂದು ಘಟನೆ ಕುರಿತು ಕೂಡ ಚಾಲಕ ವಿವರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿತ ಬಲಿಪಶುಗಳ ಧಾರ್ಮಿಕ ಗುರುತನ್ನು ಚಾಲಕ ಪದೇ ಪದೇ ಒತ್ತಿ ಹೇಳಿದ್ದು, “ಅಂತಹ ಜನರಿಗೆ ಪಾಠ ಕಲಿಸಿದ್ದಕ್ಕಾಗಿ” ಉತ್ತರ ಪ್ರದೇಶ ಸರ್ಕಾರವನ್ನು ಹೊಗಳಿದ ಎಂದು ಹೇಳಿದ್ದಾರೆ.

ವಕೀಲರ ಪ್ರಕಾರ, ಚಾಲಕನ ಹೇಳಿಕೆಗಳು ಉದ್ದೇಶಪೂರ್ವಕ ಮತ್ತು ಇಸ್ಲಾಮೋಫೋಬಿಯಾದ ಮಾದರಿಯನ್ನು ಪ್ರತಿಬಿಂಬಿಸುತ್ತವೆ, ಇದು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಎಚ್ಚರಿಕೆ ಮೂಡಿಸಿದೆ ಎಂದು ವರದಿಯಾಗಿದೆ.

ದೂರಿನ ನಂತರ, ಓಲಾ ಸಂಸ್ಥೆಯು ಚಾಲಕನನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಆದರೂ, ಕಂಪನಿಯ ಪ್ರತಿಕ್ರಿಯೆ ಟೀಕೆಗೆ ಗುರಿಯಾಗಿದೆ.

ಇಮೇಲ್‌ನಲ್ಲಿ ಬರೆದಿರುವ ಓಲಾ, “ನಿಮಗೆ ಇಂತಹ ಅಹಿತಕರ ಅನುಭವ ಸಿಕ್ಕಿದ್ದಕ್ಕೆ ನಮಗೆ ವಿಷಾದವಿದೆ… ಅಸುರಕ್ಷಿತ ನಡವಳಿಕೆಗಾಗಿ ನಾವು ಪ್ರಶ್ನೆಯಲ್ಲಿರುವ ಚಾಲಕನನ್ನು ಅಮಾನತುಗೊಳಿಸಿದ್ದೇವೆ” ಎಮದು ಹೇಳಿದೆ.

ಈ ಪ್ರತಿಕ್ರಿಯೆಯನ್ನು “ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ” ಎಂದು ಮೆಹಮೂದ್ ಹೇಳಿದ್ದಾರೆ. ಇದು ಕೋಮು ಹಿಂಸಾಚಾರದ ಬಗ್ಗೆ ಕಳವಳ ಮತ್ತು ಅಂತಹ ನಡವಳಿಕೆಯನ್ನು ತಡೆಗಟ್ಟಲು ವ್ಯವಸ್ಥಿತ ಸುರಕ್ಷತಾ ಕ್ರಮಗಳನ್ನು ಒಳಗೊಂಡಂತೆ ಘಟನೆಯ ಗಂಭೀರತೆಯನ್ನು ಪರಿಹರಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಕಂಪನಿಯ ಪ್ರಯಾಣಿಕರ ಸುರಕ್ಷತಾ ನೀತಿಗಳು ಮತ್ತು ಧರ್ಮದ ಆಧಾರದ ಮೇಲೆ ಚಾಲಕರು ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುವುದನ್ನು ತಡೆಯಲು ಇರುವ ಕಾರ್ಯವಿಧಾನಗಳನ್ನು ಸಹ ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ದ್ವೇಷಪೂರಿತ ನಡವಳಿಕೆಗೆ ಈ ಘಟನೆಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಧರ್ಮದ ಆಧಾರದ ಮೇಲೆ ವ್ಯಕ್ತಿಗಳನ್ನು ಗುರಿಯಾಗಿಸುವುದು, ಹಿಂಸಾಚಾರವನ್ನು ವೈಭವೀಕರಿಸುವುದು ತೀವ್ರವಾಗಿ ಖಂಡನೀಯ ಮಾತ್ರವಲ್ಲದೆ ಕಾನೂನಿನ ನಿಯಮ ಮತ್ತು ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುವ ಗಂಭೀರ ಅಪರಾಧ ವಿಷಯವಾಗಿದೆ ಎಂದಿದ್ದಾರೆ.

ಇಂತಹ ಕೃತ್ಯಗಳು ಕಟ್ಟುನಿಟ್ಟಾದ ಹೊಣೆಗಾರಿಕೆಯನ್ನು ಒಳಗೊಂಡ ವ್ಯಕ್ತಿಗಳಿಂದ ಮಾತ್ರವಲ್ಲದೆ, ತಾರತಮ್ಯ ಮತ್ತು ಬೆದರಿಕೆಯ ವಿರುದ್ಧ ಬಲವಾದ ಸುರಕ್ಷತೆಗಳನ್ನು ಖಚಿತಪಡಿಸಿಕೊಳ್ಳಬೇಕಾದ ಸೇವಾ ಪೂರೈಕೆದಾರರಿಂದಲೂ ಬಯಸುತ್ತವೆ. ಎಲ್ಲಾ ಪ್ರಯಾಣಿಕರ ಸುರಕ್ಷತೆ ಮತ್ತು ಘನತೆಯನ್ನು ಖಚಿತಪಡಿಸಿಕೊಳ್ಳುವುದು, ಅವರ ಗುರುತನ್ನು ಲೆಕ್ಕಿಸದೆ, ನಿರ್ಲಕ್ಷಿಸಲಾಗದ ಮೂಲಭೂತ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...