Homeಕರ್ನಾಟಕಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ ಬಜರಂಗದಳದ ಕಾರ್ಯಕರ್ತರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11ರಂದು ತನ್ನ ಸ್ನೇಹಿತರೊಂದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ. ರಾತ್ರಿ ಸುಮಾರು 8.30ರ ಸುಮಾರಿಗೆ ಸ್ನೇಹಿತರು ಜಾಯಿಂಟ್ ವ್ಹೀಲ್ ಹತ್ತಿದಾಗ, ಬಾಲಕ ಅವರ ಮೊಬೈಲ್ ಹಿಡಿದು ನಿಂತಿದ್ದ ಎನ್ನಲಾಗಿದೆ. ಈ ವೇಳೆ ಆತನ ಬಳಿಗೆ ಬಂದ ಕೆಲವರ “ನೀನು ಮುಸ್ಲಿಮನಾ?” ಎಂದು ಪ್ರಶ್ನಿಸಿದ್ದಾರೆ. ಬಾಲಕ ಹೌದು ಎಂದಾಗ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಬಾಲಕನನ್ನು ರಕ್ಷಿಸಲು ಮುಂದಾದ ಸ್ನೇಹಿತರ ಮೇಲೂ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಂತರ, ಬಾಲಕನನ್ನು ಬೈಕ್‌ನಲ್ಲಿ ಅಪಹರಿಸಿ ಸುಮಾರು ಐದು ಕಿಲೋಮೀಟರ್ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಹತ್ತಕ್ಕೂ ಹೆಚ್ಚು ಮಂದಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ “ನೀವು ಟೆರರಿಸ್ಟ್‌ಗಳು” ಎಂದು ಅವಹೇಳನಕಾರಿ ಮಾತುಗಳನ್ನಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.

ಹಲ್ಲೆ ವೇಳೆ ಆರೋಪಿಗಳು ಬಾಲಕನಿಗೆ ಬೆದರಿಕೆ ಹಾಕಿ ವಿಡಿಯೋ ರೆಕಾರ್‌ಡ್ ಮಾಡಿಕೊಂಡಿದ್ದಾರೆ. ನಂತರ ತಡರಾತ್ರಿ ಉಜಿರೆಯ ಸಾಯಿರಾಂ ಕಟ್ಟಡದ ಬಳಿ ಆತನನ್ನು ಕರೆತಂದು ಬಿಟ್ಟು, ಹಲ್ಲೆಯ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಘಟನೆಯ ಬಳಿಕ ಮನಗೆ ಬಂದ ಬಾಲಕ ಖಿನ್ನತೆಗೆ ಒಳಗಾಗಿದ್ದ. ಆದರೆ, ಆತ ನಡೆದ ವಿಷಯವನ್ನು ಮನೆಯವರಿಗೆ ತಿಳಿಸಿರಲಿಲ್ಲ. ಆರೋಪಿಗಳು ಪ್ರತಿದಿನ ಬಾಲಕನಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ಕರೆ ಸ್ವೀಕರಿಸದಿದ್ದಾಗ “ನಿನ್ನ ಮನೆಗೆ ಬರುತ್ತೇವೆ” ಎಂಬ ಸಂದೇಶ ಕಳುಹಿಸಿರುವುದಾಗಿ ತಿಳಿದುಬಂದಿದೆ. ಈ ಒತ್ತಡದಿಂದ ಮಾನಸಿಕವಾಗಿ ಕುಗ್ಗಿದ ಬಾಲಕ ಆತ್ಮಹತ್ಯೆ ಯತ್ನಿಸುವ ನಿರ್ಧಾರಕ್ಕೆ ಬಂದು ಡೆತ್ ನೋಟ್ ಬರೆದಿಟ್ಟಿದ್ದ ಎನ್ನಲಾಗಿದೆ.

ಈ ಡೆತ್ ನೋಟ್ ಮನೆಯವರ ಗಮನಕ್ಕೆ ಆಕಸ್ಮಿಕವಾಗಿ ಬಂದಿದ್ದು, ಬಳಿಕ ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಇದರ ಆಧಾರದ ಮೇಲೆ ಬಾಲಕನ ತಂದೆ ಮಾರ್ಚ್ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿಗಳ ವಿರುದ್ದ ಪೊಲೀಸರು ಹಲ್ಲೆ, ಅಪಹರಣ, ಗುಂಪು ದಾಳಿ, ಜೀವ ಬೆದರಿಕೆ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಆರೋಪಗಳ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 137(2), 115(2), 351(2), 352, 353(2) ಮತ್ತು 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಈದಿನ.ಕಾಂ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...