Homeಮುಖಪುಟ'ನೀವು ಶಂಕಿತ' : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

- Advertisement -
- Advertisement -

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ ಮಾಡಿದೆ.

ತನ್ನ ವಿರುದ್ಧ ಬಲಪಂಥೀಯ ಗುಂಪು ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ದೀಪಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರು, “ದೀಪಕ್ ತನ್ನ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸುವ ಮೂಲಕ ಪೊಲೀಸರ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎಫ್‌ಐಆರ್ ರದ್ದುಗೊಳಿಸುವಂತೆ ಸಲ್ಲಿಸಲಾದ ಅರ್ಜಿಯಲ್ಲಿ ದೀಪಕ್ ಬೆದರಿಕೆಗಳಿಂದ ರಕ್ಷಣೆ ಪಡೆಯುವುದು ಹೇಗೆ ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಇದು ಸಂಪೂರ್ಣವಾಗಿ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ. ಆರೋಪಿಯಾಗಿರುವ ವ್ಯಕ್ತಿಯು ರಕ್ಷಣೆಗಾಗಿ ಪ್ರಾರ್ಥಿಸುತ್ತಿದ್ದಾರೆಯೇ? ಅವರು [ಪೊಲೀಸರು] ಸಮರ್ಥರಾಗಿದ್ದಾರೆ. ಅವರ ಮೇಲೆ ನಂಬಿಕೆಯಿರಲಿ. ನೀವು ಶಂಕಿತ ಆರೋಪಿ” ಎಂದು ನ್ಯಾಯ ಪೀಠ ಹೇಳಿದೆ.

ಈ ಪ್ರಕರಣದಲ್ಲಿ ಪಕ್ಷಪಾತದ ವರ್ತನೆ ತೋರಿದ್ದಾರೆ ಎನ್ನಲಾದ ‘ತಪ್ಪಿತಸ್ಥ’ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಕೋರಿ ದೀಪಕ್ ಸಲ್ಲಿಸಿದ ಅರ್ಜಿಯನ್ನು ಸಹ ನ್ಯಾಯಾಲಯ ಪ್ರಶ್ನಿಸಿದೆ.

“ಇದು ಯಾವ ರೀತಿಯ ಕೋರಿಕೆ? ನೀವು ಈ ರೀತಿ ಕೋರಲು ಸಾಧ್ಯವೇ? ಇದು ಕೇವಲ ಒತ್ತಡ ಹೇರುವ ತಂತ್ರವಾಗಿದೆ. ನಾನು ನಿಮ್ಮ ಮೇಲೆ ದಂಡ ವಿಧಿಸಿ ಈ ಅರ್ಜಿಯನ್ನು ವಜಾಗೊಳಿಸುತ್ತೇನೆ. ನೀವು ಅರ್ಜಿ ಸಲ್ಲಿಸುವಾಗ, ನೀವು ಯಾರು ಮತ್ತು ಅರ್ಜಿಯಲ್ಲಿ ನಿಮ್ಮ ಸ್ಥಾನಮಾನವೇನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರಸ್ತುತ ನಿಮ್ಮ ಸ್ಥಾನಮಾನ ಒಬ್ಬ ಶಂಕಿತ ಆರೋಪಿಯದ್ದು. ಶಂಕಿತ ಆರೋಪಿಯಾಗಿರುವ ವ್ಯಕ್ತಿಯೊಬ್ಬರು ಇಲಾಖಾ ತನಿಖೆಗಾಗಿ ಕೋರುತ್ತಿದ್ದಾರೆ. ಒಬ್ಬ ಶಂಕಿತ ಆರೋಪಿ ರಕ್ಷಣೆಗಾಗಿ ಕೋರುತ್ತಿದ್ದಾರೆ” ಎಂದು ನ್ಯಾಯಾಪೀಠ ಖಾರವಾಗಿ ಹೇಳಿದೆ.

ದೀಪಕ್ ಈ ವಿಷಯವನ್ನು ಸಂವೇದನಾಶೀಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಈ ಅರ್ಜಿಯನ್ನು ಸಲ್ಲಿಸುವ ಮೂಲಕ ಅವರು ಪೊಲೀಸರ ಮೇಲೆ ‘ಹೊರೆ’ ಹೇರುತ್ತಿದ್ದಾರೆ ಎಂದು ನ್ಯಾಯಾಲಯವು ಇದೇ ಸಂದರ್ಭದಲ್ಲಿ ತಿಳಿಸಿದೆ.

ದೀಪಕ್ ಪರ ವಕೀಲರಾದ ನವನೀಶ್ ನೇಗಿ ಅವರು ವಾದ ಮಂಡಿಸುತ್ತಾ, “ದ್ವೇಷ ಭಾಷಣ ಮತ್ತು ಕ್ರಿಮಿನಲ್ ಬೆದರಿಕೆಯ ಘಟನೆ ನಡೆದಾಗ ದೀಪಕ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ಬಜರಂಗದಳದ ಸದಸ್ಯರ ವಿರುದ್ಧ ಕುಮಾರ್ ಮತ್ತು ಇತರರು ಸಲ್ಲಿಸಿದ್ದ ದೂರುಗಳನ್ನು ಸಹ ನೇಗಿ ಅವರು ಈ ಸಂದರ್ಭದಲ್ಲಿ ಓದಿದ್ದಾರೆ.

ನ್ಯಾಯಾಲಯವು ಈ ಹಂತದಲ್ಲಿ ಮಧ್ಯಪ್ರವೇಶಿಸಿ, ವಕೀಲರು ಘಟನೆಯ ವಿವರಗಳ ಮೇಲೆ ಗಮನ ಹರಿಸದೆ, ಅರ್ಜಿಯಲ್ಲಿ ಕೋರಿರುವ ಪರಿಹಾರಗಳ ಬಗ್ಗೆ ಮಾತನಾಡಲು ಸೂಚಿಸಿದ್ದಾರೆ. ಎಫ್‌ಐಆರ್ ರದ್ದುಪಡಿಸುವ ಕುರಿತಾದ ಕೋರಿಕೆಯನ್ನು ಪರಿಗಣಿಸಬಹುದು ಎಂದಿರುವ ನ್ಯಾಯಾಧೀಶರು, ದೀಪಕ್ ಅವರು ಕೋರಿರುವ ಇತರ ಪರಿಹಾರಗಳ (ಪೊಲೀಸರ ವಿರುದ್ದ ಇಲಾಖಾ ತನಿಖೆ ಇತ್ಯಾದಿ) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ನೀವು ರಿಟ್ ವ್ಯಾಪ್ತಿಯಲ್ಲಿ ಇದನ್ನು ಕೋರಲು ಸಾಧ್ಯವೇ? ನೀವು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರುತ್ತಿದ್ದೀರಿ” ಎಂದು ನ್ಯಾಯಾಲಯವು ಹೇಳಿದೆ.

ಪೂರಕ ಪೊಲೀಸ್ ರಕ್ಷಣೆಯ ಬೇಡಿಕೆಗೆ ಸಂಬಂಧಿಸಿದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಆಡಳಿತವು ಸಮರ್ಥವಾಗಿದೆ ಮತ್ತು ಅದಕ್ಕೆ ಕಾನೂನುಬದ್ಧ ಹೊಣೆಗಾರಿಕೆಯನ್ನು ಹೊಂದಿದೆ ಎಂದು ನ್ಯಾಯಾಲಯವು ತಿಳಿಸಿದೆ.

ದೀಪಕ್ ಅವರಿಗೆ ಯಾವುದೇ ಜೀವ ಬೆದರಿಕೆಯ ಆತಂಕವಿಲ್ಲ ಎಂಬ ಸರ್ಕಾರದ ಸಲ್ಲಿಕೆಯನ್ನು ಕೂಡ ನ್ಯಾಯಾಲಯವು ಗಮನಿಸಿದೆ.

ದೀಪಕ್ ಅವರು ಸತತವಾಗಿ ಬೆದರಿಕೆಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದರು. ಆದಾಗ್ಯೂ, ದೀಪಕ್ ಅವರು ತನಿಖೆಯನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಜೀವ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವುದು ಪೊಲೀಸರ ಕಾನೂನುಬದ್ಧ ಹೊಣೆಗಾರಿಕೆಯಾಗಿದೆ ಎಂದು ನ್ಯಾಯಾಲಯವು ಪುನರುಚ್ಚರಿಸಿದೆ.

ಕೆಲವು ಪ್ರಕರಣಗಳು ಸಾಮಾನ್ಯವಾಗಿ ಸಮಾಜದ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯವು ದೀಪಕ್ ಅವರ ಕೋರಿಕೆಗಳನ್ನು ತಿರಸ್ಕರಿಸುವ ಒಲವು ಹೊಂದಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಅಂಶಗಳನ್ನು ಪರಿಶೀಲಿಸಲು ವಕೀಲರು ಸಮಯಾವಕಾಶ ಕೋರಿದ ನಂತರ ವಿಚಾರಣೆಯನ್ನು ಶುಕ್ರವಾರಕ್ಕೆ (ಮಾ.20) ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...