Homeಮುಖಪುಟ'ನೀವು ಶಂಕಿತ' : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

- Advertisement -
- Advertisement -

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ ಮಾಡಿದೆ.

ತನ್ನ ವಿರುದ್ಧ ಬಲಪಂಥೀಯ ಗುಂಪು ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ದೀಪಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರು, “ದೀಪಕ್ ತನ್ನ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸುವ ಮೂಲಕ ಪೊಲೀಸರ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎಫ್‌ಐಆರ್ ರದ್ದುಗೊಳಿಸುವಂತೆ ಸಲ್ಲಿಸಲಾದ ಅರ್ಜಿಯಲ್ಲಿ ದೀಪಕ್ ಬೆದರಿಕೆಗಳಿಂದ ರಕ್ಷಣೆ ಪಡೆಯುವುದು ಹೇಗೆ ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಇದು ಸಂಪೂರ್ಣವಾಗಿ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ. ಆರೋಪಿಯಾಗಿರುವ ವ್ಯಕ್ತಿಯು ರಕ್ಷಣೆಗಾಗಿ ಪ್ರಾರ್ಥಿಸುತ್ತಿದ್ದಾರೆಯೇ? ಅವರು [ಪೊಲೀಸರು] ಸಮರ್ಥರಾಗಿದ್ದಾರೆ. ಅವರ ಮೇಲೆ ನಂಬಿಕೆಯಿರಲಿ. ನೀವು ಶಂಕಿತ ಆರೋಪಿ” ಎಂದು ನ್ಯಾಯ ಪೀಠ ಹೇಳಿದೆ.

ಈ ಪ್ರಕರಣದಲ್ಲಿ ಪಕ್ಷಪಾತದ ವರ್ತನೆ ತೋರಿದ್ದಾರೆ ಎನ್ನಲಾದ ‘ತಪ್ಪಿತಸ್ಥ’ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಕೋರಿ ದೀಪಕ್ ಸಲ್ಲಿಸಿದ ಅರ್ಜಿಯನ್ನು ಸಹ ನ್ಯಾಯಾಲಯ ಪ್ರಶ್ನಿಸಿದೆ.

“ಇದು ಯಾವ ರೀತಿಯ ಕೋರಿಕೆ? ನೀವು ಈ ರೀತಿ ಕೋರಲು ಸಾಧ್ಯವೇ? ಇದು ಕೇವಲ ಒತ್ತಡ ಹೇರುವ ತಂತ್ರವಾಗಿದೆ. ನಾನು ನಿಮ್ಮ ಮೇಲೆ ದಂಡ ವಿಧಿಸಿ ಈ ಅರ್ಜಿಯನ್ನು ವಜಾಗೊಳಿಸುತ್ತೇನೆ. ನೀವು ಅರ್ಜಿ ಸಲ್ಲಿಸುವಾಗ, ನೀವು ಯಾರು ಮತ್ತು ಅರ್ಜಿಯಲ್ಲಿ ನಿಮ್ಮ ಸ್ಥಾನಮಾನವೇನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರಸ್ತುತ ನಿಮ್ಮ ಸ್ಥಾನಮಾನ ಒಬ್ಬ ಶಂಕಿತ ಆರೋಪಿಯದ್ದು. ಶಂಕಿತ ಆರೋಪಿಯಾಗಿರುವ ವ್ಯಕ್ತಿಯೊಬ್ಬರು ಇಲಾಖಾ ತನಿಖೆಗಾಗಿ ಕೋರುತ್ತಿದ್ದಾರೆ. ಒಬ್ಬ ಶಂಕಿತ ಆರೋಪಿ ರಕ್ಷಣೆಗಾಗಿ ಕೋರುತ್ತಿದ್ದಾರೆ” ಎಂದು ನ್ಯಾಯಾಪೀಠ ಖಾರವಾಗಿ ಹೇಳಿದೆ.

ದೀಪಕ್ ಈ ವಿಷಯವನ್ನು ಸಂವೇದನಾಶೀಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಈ ಅರ್ಜಿಯನ್ನು ಸಲ್ಲಿಸುವ ಮೂಲಕ ಅವರು ಪೊಲೀಸರ ಮೇಲೆ ‘ಹೊರೆ’ ಹೇರುತ್ತಿದ್ದಾರೆ ಎಂದು ನ್ಯಾಯಾಲಯವು ಇದೇ ಸಂದರ್ಭದಲ್ಲಿ ತಿಳಿಸಿದೆ.

ದೀಪಕ್ ಪರ ವಕೀಲರಾದ ನವನೀಶ್ ನೇಗಿ ಅವರು ವಾದ ಮಂಡಿಸುತ್ತಾ, “ದ್ವೇಷ ಭಾಷಣ ಮತ್ತು ಕ್ರಿಮಿನಲ್ ಬೆದರಿಕೆಯ ಘಟನೆ ನಡೆದಾಗ ದೀಪಕ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ಬಜರಂಗದಳದ ಸದಸ್ಯರ ವಿರುದ್ಧ ಕುಮಾರ್ ಮತ್ತು ಇತರರು ಸಲ್ಲಿಸಿದ್ದ ದೂರುಗಳನ್ನು ಸಹ ನೇಗಿ ಅವರು ಈ ಸಂದರ್ಭದಲ್ಲಿ ಓದಿದ್ದಾರೆ.

ನ್ಯಾಯಾಲಯವು ಈ ಹಂತದಲ್ಲಿ ಮಧ್ಯಪ್ರವೇಶಿಸಿ, ವಕೀಲರು ಘಟನೆಯ ವಿವರಗಳ ಮೇಲೆ ಗಮನ ಹರಿಸದೆ, ಅರ್ಜಿಯಲ್ಲಿ ಕೋರಿರುವ ಪರಿಹಾರಗಳ ಬಗ್ಗೆ ಮಾತನಾಡಲು ಸೂಚಿಸಿದ್ದಾರೆ. ಎಫ್‌ಐಆರ್ ರದ್ದುಪಡಿಸುವ ಕುರಿತಾದ ಕೋರಿಕೆಯನ್ನು ಪರಿಗಣಿಸಬಹುದು ಎಂದಿರುವ ನ್ಯಾಯಾಧೀಶರು, ದೀಪಕ್ ಅವರು ಕೋರಿರುವ ಇತರ ಪರಿಹಾರಗಳ (ಪೊಲೀಸರ ವಿರುದ್ದ ಇಲಾಖಾ ತನಿಖೆ ಇತ್ಯಾದಿ) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ನೀವು ರಿಟ್ ವ್ಯಾಪ್ತಿಯಲ್ಲಿ ಇದನ್ನು ಕೋರಲು ಸಾಧ್ಯವೇ? ನೀವು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರುತ್ತಿದ್ದೀರಿ” ಎಂದು ನ್ಯಾಯಾಲಯವು ಹೇಳಿದೆ.

ಪೂರಕ ಪೊಲೀಸ್ ರಕ್ಷಣೆಯ ಬೇಡಿಕೆಗೆ ಸಂಬಂಧಿಸಿದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಆಡಳಿತವು ಸಮರ್ಥವಾಗಿದೆ ಮತ್ತು ಅದಕ್ಕೆ ಕಾನೂನುಬದ್ಧ ಹೊಣೆಗಾರಿಕೆಯನ್ನು ಹೊಂದಿದೆ ಎಂದು ನ್ಯಾಯಾಲಯವು ತಿಳಿಸಿದೆ.

ದೀಪಕ್ ಅವರಿಗೆ ಯಾವುದೇ ಜೀವ ಬೆದರಿಕೆಯ ಆತಂಕವಿಲ್ಲ ಎಂಬ ಸರ್ಕಾರದ ಸಲ್ಲಿಕೆಯನ್ನು ಕೂಡ ನ್ಯಾಯಾಲಯವು ಗಮನಿಸಿದೆ.

ದೀಪಕ್ ಅವರು ಸತತವಾಗಿ ಬೆದರಿಕೆಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದರು. ಆದಾಗ್ಯೂ, ದೀಪಕ್ ಅವರು ತನಿಖೆಯನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಜೀವ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವುದು ಪೊಲೀಸರ ಕಾನೂನುಬದ್ಧ ಹೊಣೆಗಾರಿಕೆಯಾಗಿದೆ ಎಂದು ನ್ಯಾಯಾಲಯವು ಪುನರುಚ್ಚರಿಸಿದೆ.

ಕೆಲವು ಪ್ರಕರಣಗಳು ಸಾಮಾನ್ಯವಾಗಿ ಸಮಾಜದ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯವು ದೀಪಕ್ ಅವರ ಕೋರಿಕೆಗಳನ್ನು ತಿರಸ್ಕರಿಸುವ ಒಲವು ಹೊಂದಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಅಂಶಗಳನ್ನು ಪರಿಶೀಲಿಸಲು ವಕೀಲರು ಸಮಯಾವಕಾಶ ಕೋರಿದ ನಂತರ ವಿಚಾರಣೆಯನ್ನು ಶುಕ್ರವಾರಕ್ಕೆ (ಮಾ.20) ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...