Homeಅಂತರಾಷ್ಟ್ರೀಯಆಸ್ಕರ್ ನಾಮನಿರ್ದೇಶಿತ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

- Advertisement -
- Advertisement -

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಲನಚಿತ್ರದ ಪ್ರದರ್ಶನಕ್ಕೆ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ.

ಸಿನಿಮಾ ಇಸ್ರೇಲ್ ಸೈನಿಕರ ದೌರ್ಜನ್ಯವನ್ನು ವಿವರಿಸುವ ಕಾರಣ, ಇಸ್ರೇಲ್‌ನೊಂದಿಗೆ ಭಾರತ ಹೊಂದಿರುವ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದಿಂದ ಅದರ ಪ್ರದರ್ಶನವನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ತಡೆಹಿಡಿದಿದೆ ಎಂದು ವರದಿಗಳು ವಿವರಿಸಿವೆ.

ಟ್ಯುನೀಶಿಯಾದ ಚಲನಚಿತ್ರ ನಿರ್ದೇಶಕಿ ಕೌತರ್ ಬೆನ್ ಹನಿಯಾ ಅವರು ನಿರ್ದೇಶಿಸಿರುವ ‘ದಿ ವಾಯ್ಸ್ ಆಫ್ ಹಿಂದ್ ರಜಬ್ ಡಾಕ್ಯುಡ್ರಾಮಾ (ಸಾಕ್ಷ್ಯಚಿತ್ರ ಮತ್ತು ನಾಟಕದ ಮಿಶ್ರಣ)’ ಈ ವರ್ಷದ ಆಸ್ಕರ್ ಪ್ರಶಸ್ತಿಯ (ಅಕಾಡೆಮಿ ಅವಾರ್ಡ್‌) ಅಂತಿಮ ಪಟ್ಟಿಗೆ ಆಯ್ಕೆಯಾಗಿತ್ತು.

ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ (Best International Feature Film) ವಿಭಾಗದಲ್ಲಿ ಟುನೀಶಿಯಾ ದೇಶದಿಂದ ಅಧಿಕೃತವಾಗಿ ಚಿತ್ರವು ಆಸ್ಕರ್‌ಗೆ ಪ್ರವೇಶ ಪಡೆದಿತ್ತು.

ಸೆಪ್ಟೆಂಬರ್ 3, 2025ರಂದು ವೆನಿಸ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೂಡ ಈ ಚಿತ್ರ ಪ್ರದರ್ಶನಗೊಂಡಿತ್ತು. ಆಗ ಪ್ರೇಕ್ಷಕರು ಸುಮಾರು 23 ನಿಮಿಷಗಳ ಕಾಲ ಎದ್ದು ನಿಂತು ಚಿತ್ರಕ್ಕೆ ಗೌರವ ಸೂಚಿಸಿದ್ದರು. ಈ ಮೂಲಕ ಚಿತ್ರ ಹೊಸ ದಾಖಲೆ ಬರೆದಿತ್ತು.

ಅಲ್ಲದೆ, ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಮತ್ತು ಇತರ ಆರು ಸಮಾನಾಂತರ ಬಹುಮಾನಗಳನ್ನು ಗೆದ್ದುಕೊಂಡಿತ್ತು. 2025ರ ಸೆಪ್ಟೆಂಬರ್ 10ರಂದು ಟುನೀಶಿಯಾದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರ, ನಂತರ ನವೆಂಬರ್ 26 ರಂದು ದಿ ಪಾರ್ಟಿ ಫಿಲ್ಮ್ ಸೇಲ್ಸ್‌ನಿಂದ ಫ್ರಾನ್ಸ್‌ನಲ್ಲಿ ಬಿಡುಗಡೆಗೊಂಡಿತ್ತು.

ಹಿಂದ್ ರಜಬ್ ಗಾಝಾದ ಆರು ವರ್ಷದ ಫ್ಯಾಲೆಸ್ತೀನ್ ಬಾಲಕಿ. 2024ರ ಜನವರಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಸಂದರ್ಭದಲ್ಲಿ ಈಕೆ ಜಗತ್ತಿನಾದ್ಯಂತ ಸುದ್ದಿಯಾಗಿದ್ದಳು.

ಜನವರಿ 29, 2024ರಂದು ಹಿಂದ್ ರಜಬ್ ತನ್ನ ಕುಟುಂಬದೊಂದಿಗೆ ಗಾಝಾ ನಗರದಿಂದ ಪಲಾಯನ ಮಾಡುವಾಗ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇಸ್ರೇಲ್ ಸೇನೆ ಸುಮಾರು 300 ಸುತ್ತು ಗುಂಡುಗಳ ಭೀಕರ ದಾಳಿ ನಡೆಸಿತ್ತು.

ದಾಳಿಯಲ್ಲಿ ಕಾರಿನಲ್ಲಿದ್ದ ಕುಟುಂಬದ ಇತರ ಆರು ಸದಸ್ಯರು ತಕ್ಷಣ ಮೃತಪಟ್ಟಾಗ, ಬಾಲಕಿ ಹಿಂದ್ ಮಾತ್ರ ಬದುಕುಳಿದಿದ್ದಳು. ಸುಮಾರು ಮೂರು ಗಂಟೆಗಳ ಕಾಲ ಆಕೆ ತನ್ನವರ ಶವಗಳ ನಡುವೆ ಕಾರಿನಲ್ಲಿ ಸಿಲುಕಿಕೊಂಡಿದ್ದಳು. ಈ ಸಂದರ್ಭದಲ್ಲಿ ಆಕೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿಗೆ (ಪಿಆರ್‌ಸಿಎಸ್‌) ಫೋನ್ ಮಾಡಿ ತನ್ನನ್ನು ರಕ್ಷಿಸುವಂತೆ ಅಳುತ್ತಾ ಬೇಡಿಕೊಂಡಿದ್ದಳು.

ಆಕೆಯನ್ನು ರಕ್ಷಿಸಲು ಹೋದ ಪಿಆರ್‌ಸಿಎಸ್‌ನ ಇಬ್ಬರು ಅರೆವೈದ್ಯಕೀಯ ಸಿಬ್ಬಂದಿ ಕೂಡಾ ದಾಳಿಯಲ್ಲಿ ಮೃತಪಟ್ಟಿದ್ದರು. ಸುಮಾರು 12 ದಿನಗಳ ನಂತರ ಹಿಂದ್ ರಜಬ್‌ಳ ಶವ ಗುಂಡಿನ ದಾಳಿಯಿಂದ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಪತ್ತೆಯಾಗಿತ್ತು.

ಈ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕೊಲಂಬಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ಸೇನೆಯ ಆಕ್ರಮಣವನ್ನು ಪ್ರತಿಭಟಿಸಿ ತಮ್ಮ ಹ್ಯಾಮಿಲ್ಟನ್ ಹಾಲ್‌ಗೆ ‘ಹಿಂದ್ ಹಾಲ್’ ಎಂದು ಮರುನಾಮಕರಣ ಮಾಡಿದ್ದರು.

ಹಿಂದ್ ರಜಬ್ ಇಂದು ಗಾಝಾದ ನಾಗರಿಕರ, ವಿಶೇಷವಾಗಿ ಮಕ್ಕಳ ಸಂಕಷ್ಟದ ಸಂಕೇತವಾಗಿ ಗುರುತಿಸಲ್ಪಡುತ್ತಿದ್ದಾಳೆ.

ಮಾರ್ಚ್ ಮಧ್ಯಭಾಗದಲ್ಲಿ, ಅಂದರೆ 2026ರ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆಗೆ ಈ ಚಿತ್ರವು ಭಾರತದಲ್ಲಿ ಬಿಡುಗಡೆಯಾಗಬೇಕಿತ್ತು. ಈಗ ತಡವಾಗಿ ಬಿಡುಗಡೆಗೆ ಮುಂದಾದರೂ ನಿರ್ಬಂಧ ವಿಧಿಸಲಾಗಿದೆ. ಚಿತ್ರದ ವಿತರಕರಾದ ಮನೋಜ್ ನಂದವಾನ ಅವರು ‘ವೆರೈಟಿ’ ನಿಯತಕಾಲಿಕೆಗೆ ಮಾಹಿತಿ ನೀಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಇಸ್ರೇಲ್ ಪ್ರವಾಸ ಮುಗಿಸಿ ಮರಳಿದ ಮರುದಿನವೇ, ಅಂದರೆ ಫೆಬ್ರವರಿ 27ರಂದು ತಾವು ಸಿಬಿಎಫ್‌ಸಿ ಸದಸ್ಯರಿಗಾಗಿ ಚಿತ್ರದ ಪ್ರದರ್ಶನವನ್ನು ಏರ್ಪಡಿಸಿದ್ದಾಗಿ ತಿಳಿಸಿದ್ದಾರೆ.

ಆದರೆ, ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡಿದರೆ, ಅದು “ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧವನ್ನು ಹಾಳುಗೆಡವುತ್ತದೆ” ಎಂದು ಅವರಿಗೆ ನಂತರ ತಿಳಿಸಲಾಯಿತು ಎಂದಿದ್ದಾರೆ.

ಕಳೆದ ಒಂದು ದಶಕದಲ್ಲಿ ರಕ್ಷಣೆ ಮತ್ತು ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮತ್ತು ಇಸ್ರೇಲ್ ಅತ್ಯಂತ ಬಲವಾದ ಸಂಬಂಧವನ್ನು ಬೆಳೆಸಿಕೊಂಡಿವೆ ಎಂಬುದು ರಹಸ್ಯವಾಗೇನೂ ಉಳಿದಿಲ್ಲ.

ಗಾಝಾ ಸಂಘರ್ಷದ ಕುರಿತಾದ ವಿಶ್ವಸಂಸ್ಥೆಯ ನಿರ್ಣಯಗಳಲ್ಲಿ ಭಾರತವು ಇಸ್ರೇಲ್ ಅನ್ನು ನೇರವಾಗಿ ಖಂಡಿಸುವುದರಿಂದ ದೂರ ಉಳಿದಿದೆ. ಇರಾನ್ ಯುದ್ಧದ ಅವಧಿಯಲ್ಲೂ ಸಹ, ಭಾರತವು ಸಮತೋಲಿತ ನಿಲುವನ್ನು ಕಾಯ್ದುಕೊಂಡಿದೆ ಮತ್ತು ಯಾವುದೇ ಒಂದು ಪಕ್ಷದ ಪರವಾಗಿ ನಿಂತಿಲ್ಲ. ಅದೇ ಸಮಯದಲ್ಲಿ, ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳನ್ನು ಕೂಡ ಭಾರತ ಖಂಡಿಸಿಲ್ಲ.

ಚಿತ್ರ ನಿರ್ದೇಶಕಿಯಿಂದ ಟೀಕೆ

ಭಾರತದಲ್ಲಿ ಚಲನಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸಿರುವ ಕ್ರಮವು ಕೇವಲ ವಿರೋಧ ಪಕ್ಷಗಳಿಂದ ಮಾತ್ರವಲ್ಲದೆ, ಪ್ರಶಸ್ತಿ ವಿಜೇತ ಚಿತ್ರದ ನಿರ್ದೇಶಕಿಯಿಂದಲೂ ತೀವ್ರ ಟೀಕೆಗೆ ಗುರಿಯಾಗಿದೆ.

“ನಾನು ಭಾರತವನ್ನು ಪ್ರೀತಿಸುತ್ತಾ ಬೆಳೆದವಳು. ಬಾಲಿವುಡ್ ನನ್ನ ಬಾಲ್ಯದ ಒಂದು ಭಾಗವಾಗಿತ್ತು. ಒಂದು ಹಂತದಲ್ಲಂತೂ, ನನ್ನನ್ನು ನಾನು ವಿಶೇಷವಾಗಿ ಭಾವಿಸಿಕೊಳ್ಳಲು ನನಗೂ ಭಾರತೀಯ ಮೂಲದ ನಂಟಿದೆ ಎಂದು ಊಹಿಸಿಕೊಳ್ಳುತ್ತಿದ್ದೆ. ‘ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ’ ಮತ್ತು ‘ಮಧ್ಯಪ್ರಾಚ್ಯದ ಏಕೈಕ ಪ್ರಜಾಪ್ರಭುತ್ವ’ ರಾಷ್ಟ್ರಗಳ ನಡುವಿನ ಈ ಸಂಬಂಧದ ಅವಧಿ ಎಷ್ಟು ದುರ್ಬಲವಾಗಿದೆಯೆಂದರೆ, ಒಂದು ಚಲನಚಿತ್ರ ಅದನ್ನು ಮುರಿದುಬಿಡಬಹುದೇ?” ಎಂದು ಚಿತ್ರದ ನಿರ್ದೇಶಕಿ ಬೆನ್ ಹನಿಯಾ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಗಮನಾರ್ಹ ವಿಷವೆಂದರೆ, ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರವು ಅಮೆರಿಕ, ಬ್ರಿಟನ್, ಇಟಲಿ ಮತ್ತು ಫ್ರಾನ್ಸ್‌ನಂತಹ ದೇಶಗಳಲ್ಲಿ ಈಗಾಗಲೇ ಬಿಡುಗಡೆಯಾಗಿದೆ. ಇವುಗಳಲ್ಲಿ ಹೆಚ್ಚಿನ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ಉತ್ತಮ ಸಂಬಂಧವನ್ನು ಹೊಂದಿವೆ. ಕುತೂಹಲಕಾರಿ ವಿಷಯವೆಂದರೆ, ಸ್ವತಃ ಇಸ್ರೇಲ್‌ನಲ್ಲಿ ಟೆಲ್ ಅವಿವ್ ನ್ಯಾಯಾಲಯವು ಈ ಚಿತ್ರದ ಮೇಲಿದ್ದ ನಿಷೇಧವನ್ನು ತೆರವುಗೊಳಿಸಿದ ನಂತರವೂ ಚಿತ್ರ ಬಿಡುಗಡೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ವಿಪಕ್ಷ ನಾಯಕರಿಂದ ಟೀಕೆ

ಮಧ್ಯಪ್ರಾಚ್ಯದ ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ರೀತಿಯ ಬಗ್ಗೆ ಈಗಾಗಲೇ ಟೀಕೆಗಳನ್ನು ಎದುರಿಸುತ್ತಿರುವ ನರೇಂದ್ರ ಮೋದಿ ಸರ್ಕಾರವು, ಇದೀಗ ಜಗತ್ತಿನಾದ್ಯಂತ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿರುವ ಚಲನಚಿತ್ರವನ್ನು ನಿಷೇಧಿಸಿರುವುದಕ್ಕಾಗಿ ವಿರೋಧ ಪಕ್ಷಗಳಿಂದ ಮತ್ತೊಮ್ಮೆ ತೀವ್ರ ಟೀಕೆಗೆ ಗುರಿಯಾಗಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಈ ವಿಚಾರದಲ್ಲಿ ಮೊದಲ ಸಾಲಿನಲ್ಲಿದ್ದಾರೆ. ಇದು “ಅಪಮಾನಕರ” ಮತ್ತು “ಪರಿಪಕ್ವ ಪ್ರಜಾಪ್ರಭುತ್ವಕ್ಕೆ ಅಯೋಗ್ಯವಾದ” ನಡೆ ಎಂದು ಕರೆಯುವ ಮೂಲಕ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

“ಒಂದು ಪ್ರಜಾಪ್ರಭುತ್ವದಲ್ಲಿ, ಚಲನಚಿತ್ರದ ಪ್ರದರ್ಶನವು ನಮ್ಮ ಸಮಾಜದ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರತಿಬಿಂಬವಾಗಿದೆ. ಅದಕ್ಕೂ ಸರ್ಕಾರಗಳ ನಡುವಿನ ಸಂಬಂಧಕ್ಕೂ ಯಾವುದೇ ಸಂಬಂಧವಿಲ್ಲ. ವಿದೇಶಗಳಿಗೆ ಅಸಮಾಧಾನವಾಗಬಹುದು ಎಂಬ ಕಾರಣಕ್ಕೆ ಚಲನಚಿತ್ರ ಅಥವಾ ಪುಸ್ತಕಗಳನ್ನು ನಿಷೇಧಿಸುವ ಈ ಪದ್ಧತಿಯು ತಕ್ಷಣವೇ ನಿಲ್ಲಬೇಕು” ಎಂದು ತರೂರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುಪ್ರಿಯಾ ಶ್ರೀನೇತ್ ಕೂಡ ಸಿನಿಮಾವನ್ನು ತಡೆ ಹಿಡಿದಿದ್ದಕ್ಕಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎನ್‌ಸಿಪಿ ನಾಯಕ ಅನೀಶ್ ಗವಾಂಡೆ ಈ ಕ್ರಮವನ್ನು “ನಮ್ಮ ಸಾಮೂಹಿಕ ವಿವೇಕಕ್ಕೆ ಅಂಟಿದ ಕಪ್ಪು ಚುಕ್ಕೆ” ಎಂದು ಕರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...