Homeಮುಖಪುಟಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

- Advertisement -
- Advertisement -

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ದೆಹಲಿಯ ರಫಿ ಮಾರ್ಗದಲ್ಲಿರುವ ಪ್ರಮುಖ ಆಸ್ತಿ ವಿವಾದದಲ್ಲಿ ಕೇಂದ್ರ ಸರ್ಕಾರದ ಪರವಾಗಿ ತೀರ್ಪು ನೀಡಿದ ದೆಹಲಿ ಹೈಕೋರ್ಟ್ ಆದೇಶದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಕೇಂದ್ರ ಪಡೆಗಳು, ಪತ್ರಕರ್ತರೊಂದಿಗೆ ನೂಕಾಟ-ತಳ್ಳಾಟದ ನಡುವೆಯೇ ಮಾಧ್ಯಮ ಕಚೇರಿಗೆ ಬೀಗ ಜಡಿದು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಭದ್ರತಾ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, “ಹೈಕೋರ್ಟ್ ಆದೇಶವನ್ನು ಜಾರಿಗೆ ತರುವ ಅಗತ್ಯವನ್ನು ಗಿಲ್ಡ್ ಪ್ರಶ್ನಿಸುವುದಿಲ್ಲ, ಆದರೆ, ಸರಿಯಾದ ಪ್ರಕ್ರಿಯೆಯ ಕೊರತೆ ಮತ್ತು ನ್ಯಾಯಾಲಯದ ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಅಧಿಕಾರಿಗಳು ಪ್ರದರ್ಶಿಸಿದ ಅತಿಯಾದ ಬಲಪ್ರಯೋಗ ಇಲ್ಲಿ ಆತಂಕಕಾರಿ ವಿಷಯ” ಎಂದಿದೆ.

“ಹೈಕೋರ್ಟ್ ಆದೇಶವು ಅದರ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುವ ಮೊದಲೇ, ನೂರಾರು ಪೊಲೀಸರು ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿ ಯುಎನ್‌ಐ ಆವರಣಕ್ಕೆ ಆಗಮಿಸಿದ್ದರು. ಮಹಿಳಾ ಸಿಬ್ಬಂದಿ ಸೇರಿದಂತೆ ಪತ್ರಕರ್ತರು ತಮ್ಮ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅವರನ್ನು ಬಲವಂತವಾಗಿ ಹೊರಹಾಕಿದ್ದಾರೆ” ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಕೂಡ ಭದ್ರತಾ ಸಿಬ್ಬಂದಿಯ ದಮನಕಾರಿ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿದೆ.

ಶನಿವಾರ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ, “ಇಂತಹ ದಬ್ಬಾಳಿಕೆ, ಮುನ್ಸೂಚನೆಯ ನಿರಾಕರಣೆ, ವೈಯಕ್ತಿಕ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ಸಮಯ ನೀಡದಿರುವುದು ಮತ್ತು ಮಹಿಳಾ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ನಡೆಸಿಕೊಂಡ ರೀತಿ ವರದಿಯಾಗಿರುವುದು ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ. ನ್ಯಾಯಾಲಯದ ಆದೇಶದ ನೆಪದಲ್ಲಿ ಇದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬೆದರಿಕೆಯ ನೆರಳಿನಲ್ಲಿ ಮುಕ್ತ ಪತ್ರಿಕೋದ್ಯಮ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸಿರುವ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಂತಹ ದುರ್ನಡತೆಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದೆ. ಇದು “ಪತ್ರಿಕಾರಂಗದ ಕೆಲಸ ಮಾಡುವ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂಬ ವಿಶ್ವಾಸವನ್ನು ಪತ್ರಕರ್ತರ ಸಮುದಾಯದಲ್ಲಿ ಮೂಡಿಸಲು ಸಹಾಯ ಮಾಡುತ್ತದೆ” ಎಂದು ಅದು ಹೇಳಿದೆ.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮಗಳ ಮೇಲೆ ನಡೆದ ದಮನಕಾರಿ ಕ್ರಮಗಳ ಹಲವಾರು ನಿದರ್ಶನಗಳನ್ನು ಪಟ್ಟಿ ಮಾಡಿದ್ದಾರೆ. ಇದರಲ್ಲಿ ಎನ್‌ಡಿಟಿವಿ ಮತ್ತು ಬಿಬಿಸಿ ವಿರುದ್ಧದ ಪ್ರಕರಣಗಳು ಹಾಗೂ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ 2022ರಲ್ಲಿ ಜಾರ್ಖಂಡ್‌ನಲ್ಲಿ ಪತ್ರಕರ್ತ ರೂಪೇಶ್ ಸಿಂಗ್ ಅವರ ಬಂಧನವನ್ನೂ ಅವರು ಉಲ್ಲೇಖಿಸಿದ್ದಾರೆ.

ರಣದೀಪ್ ಸುರ್ಜೇವಾಲಾ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ “ಯುಎನ್‌ಐ (ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ) ಆವರಣದಲ್ಲಿ ಪತ್ರಕರ್ತರೊಂದಿಗೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ವರ್ತಿಸಿದ ರೀತಿ ಒಂದು ವಿಷಯವನ್ನು ಸ್ಪಷ್ಟಪಡಿಸುತ್ತದೆ: ಇದು ಬಿಜೆಪಿ ಸರ್ಕಾರದ ಹಿಟ್ಲರ್ ಮಾದರಿಯ ಸರ್ವಾಧಿಕಾರಿ ಆದೇಶ. ನೀವು ಅತಿಯಾಗಿ ಮಾತನಾಡಿದರೆ ನಿಮ್ಮನ್ನು ಹತ್ತಿಕ್ಕಲಾಗುತ್ತದೆ, ನಿಮ್ಮನ್ನು ಹೊಸುಕಿ ಹಾಕಲಾಗುತ್ತದೆ…. ಇದು ಕೇವಲ ಒಂದು ಬಾರಿ ನಡೆದ ಘಟನೆಯಲ್ಲ, ಇದೊಂದು ಕ್ರಮಬದ್ಧ ವಿಧಾನ. ಶರಣಾಗಿ, ಸಾಷ್ಟಾಂಗ ನಮಸ್ಕಾರ ಮಾಡಿ, ಇಲ್ಲದಿದ್ದರೆ ಅಧಿಕಾರದ ದಂಡವು ನಿಮ್ಮ ಮೇಲೆ ಪ್ರಹಾರ ಮಾಡುತ್ತದೆ” ಎಂದು ಬರೆದುಕೊಂಡಿದ್ದಾರೆ.

2025ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತವು 151ನೇ ಸ್ಥಾನದಲ್ಲಿದೆ ಮತ್ತು 2024ರಲ್ಲಿ 159ನೇ ಸ್ಥಾನದಲ್ಲಿತ್ತು ಎಂದು ಅವರು ಹೇಳಿದ್ದಾರೆ. ಮುಂದುವರಿದು, “ಭಾರತದಲ್ಲಿ ನಿಷ್ಪಕ್ಷಪಾತ ಮಾಧ್ಯಮಗಳಿಗೆ ಅವಕಾಶವೇ ಇಲ್ಲ ಎಂದು ಇಡೀ ಜಗತ್ತು ಏಕಕಂಠದಿಂದ ಹೇಳುತ್ತಿದೆ” ಎಂದಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮ ಸಂಸ್ಥೆಗಳು ಸಹ ಈ ದಮನಕಾರಿ ಕ್ರಮವನ್ನು ತೀವ್ರವಾಗಿ ಖಂಡಿಸಿವೆ.

ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್ ತನ್ನ ಹೇಳಿಕೆಯಲ್ಲಿ, “ಈ ಪ್ರಕರಣದ ಕಾನೂನು ಅಂಶಗಳು ಮತ್ತು ಹೈಕೋರ್ಟ್‌ನ ತೀರ್ಪು ಸಾರ್ವಜನಿಕ ವಲಯದಲ್ಲಿ ಲಭ್ಯವಿದೆ ಮತ್ತು ಅದು ತನ್ನದೇ ಆದ ಹಾದಿಯನ್ನು ಅನುಸರಿಸುತ್ತದೆ ಎಂಬುದು ಅರ್ಥವಾಗುವಂತಹ ವಿಷಯ. ಆದರೆ, ರಾಷ್ಟ್ರ ರಾಜಧಾನಿಯ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಯುಎನ್‌ಐನ ಸುದ್ದಿಮನೆಯು ಇಂತಹ ದೃಶ್ಯಗಳಿಗೆ ಸಾಕ್ಷಿಯಾಗುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ” ಎಂದು ಹೇಳಿದೆ.

“ಇವುಗಳು ಸಂಸ್ಥೆಯ ಘನತೆಯನ್ನು ಕುಂದಿಸುತ್ತವೆ, ಪತ್ರಿಕಾ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸುತ್ತವೆ ಮತ್ತು ಇದನ್ನು ಒಂದು ಗಂಭೀರ ಲೋಪ ಎಂದು ಪರಿಗಣಿಸಬಹುದು, ಅದರಲ್ಲೂ ವಿಶೇಷವಾಗಿ ಈ ವೃತ್ತಿಯಲ್ಲಿರುವ ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಷಯದಲ್ಲಿ ಇದು ದೊಡ್ಡ ಹಿನ್ನಡೆಯಾಗಿದೆ” ಎಂದಿದೆ.

ದೆಹಲಿ ಪತ್ರಕರ್ತರ ಸಂಘವು ಸಹ ಪೊಲೀಸರ ದಬ್ಬಾಳಿಕೆಯನ್ನು ತೀವ್ರವಾಗಿ ಖಂಡಿಸಿದೆ.

“ದೆಹಲಿಯ ಹೃದಯಭಾಗದಲ್ಲಿರುವ ಯುಎನ್‌ಐನ ಗುತ್ತಿಗೆ ಭೂಮಿ ಮತ್ತು ಕಚೇರಿಯು ದೀರ್ಘಕಾಲದಿಂದಲೂ ಪ್ರಮುಖ ಗುರಿಯಾಗಿದೆ, ವಿವಿಧ ಮಾಧ್ಯಮ ಸಂಸ್ಥೆಗಳು ಅದರ ನಿಯಂತ್ರಣ ಮತ್ತು ಮಾಲೀಕತ್ವಕ್ಕಾಗಿ ಪೈಪೋಟಿ ನಡೆಸುತ್ತಿವೆ. ಕೇಂದ್ರ ಸರ್ಕಾರವು ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಈ ಸುದ್ದಿ ಸಂಸ್ಥೆಗೆ ಮರಣಾಂತಿಕ ಹೊಡೆತ ನೀಡಿದೆ….” ಎಂದು ಹೇಳಿದೆ.

“ಪ್ರಸ್ತುತ ಹೊಸ ಸವಾಲನ್ನು ಎದುರಿಸುತ್ತಿರುವ ಯುಎನ್‌ಐ ಉದ್ಯೋಗಿಗಳ ಬಗ್ಗೆ ನಮಗೆ ಅಪಾರ ಅನುಕಂಪವಿದೆ. ಈ ಸುದ್ದಿ ಸಂಸ್ಥೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಹೊರಲು, ಹಾಗೂ ಪತ್ರಕರ್ತರಿಗೆ ಮತ್ತು ಇತರ ಉದ್ಯೋಗಿಗಳಿಗೆ ಬರಬೇಕಾದ ಸಂಪೂರ್ಣ ಬಾಕಿ ಹಣವನ್ನು ಪಾವತಿಸಲು ನಾವು ‘ದಿ ಸ್ಟೇಟ್ಸ್‌ಮನ್’ ಆಡಳಿತ ಮಂಡಳಿಗೆ ಕರೆ ನೀಡುತ್ತೇವೆ” ಎಂದು ಅದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...