Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...