Homeಮುಖಪುಟಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

- Advertisement -
- Advertisement -

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಖರಾತ್‌ನ ಮಾಜಿ ಉದ್ಯೋಗಿಯೊಬ್ಬರು ನೀಡಿದ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಾಗಿದ್ದು, ಆಧ್ಯಾತ್ಮಿಕ ಆಚರಣೆಗಳನ್ನು ಮಾಡುವ ನೆಪದಲ್ಲಿ ನವೆಂಬರ್ 2023ರಿಂದ ಡಿಸೆಂಬರ್ 2025ರ ಅವಧಿಯಲ್ಲಿ ನನ್ನ ಪತ್ನಿ ಮೇಲೆ ಖರಾತ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪತ್ನಿ ಏಳು ತಿಂಗಳ ಗರ್ಭಿಣಿಯಾಗಿದ್ದಾಗಲೂ ಆಕೆಯ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

2019ರಲ್ಲಿ ನಾನು ನಾಸಿಕ್ ನಗರದಲ್ಲಿರುವ ಖರಾತ್‌ನ ಆಸ್ತಿ ಅಭಿವೃದ್ಧಿ ಕಚೇರಿಗೆ ಕೆಲಸಕ್ಕೆ ಸೇರಿದ್ದೆ. ನಾನು ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆರೋಗ್ಯವಂತ ಮಗುವಿಗಾಗಿ ಆಶೀರ್ವದಿಸುವ ನೆಪದಲ್ಲಿ ಖರಾತ್ ನನ್ನ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪತ್ನಿಈ ವಿಷಯ ನನಗೆ ತಿಳಿಸಿದಾಗ ನಾನು ಆತನ ಚಟುವಟಿಕೆಗಳ ಬಗ್ಗೆ ಆಳವಾಗಿ ತನಿಖೆ ನಡೆಸಲು ನಿರ್ಧರಿಸಿದೆ. ಆತ ಮಹಿಳೆಯರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಕಚೇರಿ ಕ್ಯಾಬಿನ್‌ನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ತನ್ನ ಕಚೇರಿಗೆ ಭೇಟಿ ನೀಡುವ ಮಹಿಳೆಯರಿಗೆ ಅಘೋರಿ ಆಚರಣೆಯ ಭಾಗವೆಂದು ಅಮಲು ಪದಾರ್ಥ ಬೆರೆಸಿದ ಪಾನೀಯಗಳನ್ನು ಕುಡಿಯಲು ಖರಾತ್ ಬಲವಂತಪಡಿಸುತ್ತಿದ್ದ. ಅದನ್ನು ಕುಡಿದು ಮಹಿಳೆಯರು ಪ್ರಜ್ಞೆ ಕಳೆದುಕೊಂಡಾಗ ಅಥವಾ ಅಸಹಾಯಕರಾದಾಗ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂಬುವುದು ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ನಾನು ಖರಾತ್‌ನನ್ನು ಪ್ರಶ್ನಿಸಿದಾಗ ಕೆಲಸದಿಂದ ವಜಾಗೊಳಿಸಿದ್ದ. ನನ್ನ ಬಳಿ ಆತನ ಅಪರಾಧ ಕೃತ್ಯಗಳ ವಿಡಿಯೋ ಸಾಕ್ಷ್ಯವಿರುವುದು ತಿಳಿದಾಗ, ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಹಾಕಲು ಪ್ರಾರಂಭಿಸಿದ. ಆತನಿಗೆ ಹಿರಿಯ ರಾಜಕಾರಣಿಗಳೊಂದಿಗೆ ಇದ್ದ ಪ್ರಭಾವ ಮತ್ತು ಸಂಪರ್ಕದ ಕಾರಣದಿಂದ ನಾನು ಈ ಹಿಂದೆ ಪೊಲೀಸರಿಗೆ ದೂರು ನೀಡಿರಲಿಲ್ಲ. ಇತ್ತೀಚೆಗೆ ನಾಸಿಕ್ ಪೊಲೀಸರು ಆತನನ್ನು ಬಂಧಿಸಿದ ವಿಷಯ ಗೊತ್ತಾಗಿ ನಾನೂ ದೂರು ದಾಖಲಿಸಲು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಎರಡನೇ ಎಫ್‌ಐಆರ್‌ ಮಹಿಳೆಯೊಬ್ಬರ ದೂರಿನ ಮೇರೆಗೆ ದಾಖಲಾಗಿದೆ. ವಿಚ್ಛೇದನದ ನಂತರ ನನ್ನ ಭವಿಷ್ಯವನ್ನು ಉಜ್ವಲಗೊಳಿಸುವ ಭರವಸೆಯ ನೆಪದಲ್ಲಿ ಫೆಬ್ರವರಿ 2020ರಿಂದ ಈ ವರ್ಷದ ಮಾರ್ಚ್‌ವರೆಗೆ ಖರಾತ್ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಖರಾತ್‌ಗೆ ಮಹಿಳೆಗೆ ಅಮಲು ಪದಾರ್ಥ ನೀಡಿ ದೌರ್ಜನ್ಯವೆಸಗುತ್ತಿದ್ದ. ಆಕೆ ಗರ್ಭಿಣಿಯಾದ ವಿಷಯ ತಿಳಿಸಿದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಎಂದು ವರದಿಯಾಗಿದೆ.

ಸರ್ಕಾರವಾಡ ಪೊಲೀಸರು ಅತ್ಯಾಚಾರದ ಆರೋಪದ ಜೊತೆಗೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಮಹಾರಾಷ್ಟ್ರದ ನರಬಲಿ ಮತ್ತು ಇತರ ಅಮಾನವೀಯ, ದುಷ್ಟ ಮತ್ತು ಅಘೋರಿ ಆಚರಣೆಗಳು ಹಾಗೂ ಮಾಟಮಂತ್ರ ತಡೆಗಟ್ಟುವಿಕೆ ಮತ್ತು ನಿರ್ಮೂಲನೆ ಕಾಯ್ದೆಯ ಸೆಕ್ಷನ್ 3(1) ಮತ್ತು 3(2) ಅನ್ನು ಸಹ ಈ ಪ್ರಕರಣದಲ್ಲಿ ಅನ್ವಯಿಸಲಾಗಿದೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...