Homeಮುಖಪುಟಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

- Advertisement -
- Advertisement -

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಖರಾತ್‌ನ ಮಾಜಿ ಉದ್ಯೋಗಿಯೊಬ್ಬರು ನೀಡಿದ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಾಗಿದ್ದು, ಆಧ್ಯಾತ್ಮಿಕ ಆಚರಣೆಗಳನ್ನು ಮಾಡುವ ನೆಪದಲ್ಲಿ ನವೆಂಬರ್ 2023ರಿಂದ ಡಿಸೆಂಬರ್ 2025ರ ಅವಧಿಯಲ್ಲಿ ನನ್ನ ಪತ್ನಿ ಮೇಲೆ ಖರಾತ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪತ್ನಿ ಏಳು ತಿಂಗಳ ಗರ್ಭಿಣಿಯಾಗಿದ್ದಾಗಲೂ ಆಕೆಯ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

2019ರಲ್ಲಿ ನಾನು ನಾಸಿಕ್ ನಗರದಲ್ಲಿರುವ ಖರಾತ್‌ನ ಆಸ್ತಿ ಅಭಿವೃದ್ಧಿ ಕಚೇರಿಗೆ ಕೆಲಸಕ್ಕೆ ಸೇರಿದ್ದೆ. ನಾನು ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆರೋಗ್ಯವಂತ ಮಗುವಿಗಾಗಿ ಆಶೀರ್ವದಿಸುವ ನೆಪದಲ್ಲಿ ಖರಾತ್ ನನ್ನ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪತ್ನಿಈ ವಿಷಯ ನನಗೆ ತಿಳಿಸಿದಾಗ ನಾನು ಆತನ ಚಟುವಟಿಕೆಗಳ ಬಗ್ಗೆ ಆಳವಾಗಿ ತನಿಖೆ ನಡೆಸಲು ನಿರ್ಧರಿಸಿದೆ. ಆತ ಮಹಿಳೆಯರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಕಚೇರಿ ಕ್ಯಾಬಿನ್‌ನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ತನ್ನ ಕಚೇರಿಗೆ ಭೇಟಿ ನೀಡುವ ಮಹಿಳೆಯರಿಗೆ ಅಘೋರಿ ಆಚರಣೆಯ ಭಾಗವೆಂದು ಅಮಲು ಪದಾರ್ಥ ಬೆರೆಸಿದ ಪಾನೀಯಗಳನ್ನು ಕುಡಿಯಲು ಖರಾತ್ ಬಲವಂತಪಡಿಸುತ್ತಿದ್ದ. ಅದನ್ನು ಕುಡಿದು ಮಹಿಳೆಯರು ಪ್ರಜ್ಞೆ ಕಳೆದುಕೊಂಡಾಗ ಅಥವಾ ಅಸಹಾಯಕರಾದಾಗ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂಬುವುದು ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ ಎಂದು ಮಾಜಿ ಉದ್ಯೋಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ನಾನು ಖರಾತ್‌ನನ್ನು ಪ್ರಶ್ನಿಸಿದಾಗ ಕೆಲಸದಿಂದ ವಜಾಗೊಳಿಸಿದ್ದ. ನನ್ನ ಬಳಿ ಆತನ ಅಪರಾಧ ಕೃತ್ಯಗಳ ವಿಡಿಯೋ ಸಾಕ್ಷ್ಯವಿರುವುದು ತಿಳಿದಾಗ, ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಹಾಕಲು ಪ್ರಾರಂಭಿಸಿದ. ಆತನಿಗೆ ಹಿರಿಯ ರಾಜಕಾರಣಿಗಳೊಂದಿಗೆ ಇದ್ದ ಪ್ರಭಾವ ಮತ್ತು ಸಂಪರ್ಕದ ಕಾರಣದಿಂದ ನಾನು ಈ ಹಿಂದೆ ಪೊಲೀಸರಿಗೆ ದೂರು ನೀಡಿರಲಿಲ್ಲ. ಇತ್ತೀಚೆಗೆ ನಾಸಿಕ್ ಪೊಲೀಸರು ಆತನನ್ನು ಬಂಧಿಸಿದ ವಿಷಯ ಗೊತ್ತಾಗಿ ನಾನೂ ದೂರು ದಾಖಲಿಸಲು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಎರಡನೇ ಎಫ್‌ಐಆರ್‌ ಮಹಿಳೆಯೊಬ್ಬರ ದೂರಿನ ಮೇರೆಗೆ ದಾಖಲಾಗಿದೆ. ವಿಚ್ಛೇದನದ ನಂತರ ನನ್ನ ಭವಿಷ್ಯವನ್ನು ಉಜ್ವಲಗೊಳಿಸುವ ಭರವಸೆಯ ನೆಪದಲ್ಲಿ ಫೆಬ್ರವರಿ 2020ರಿಂದ ಈ ವರ್ಷದ ಮಾರ್ಚ್‌ವರೆಗೆ ಖರಾತ್ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಖರಾತ್‌ಗೆ ಮಹಿಳೆಗೆ ಅಮಲು ಪದಾರ್ಥ ನೀಡಿ ದೌರ್ಜನ್ಯವೆಸಗುತ್ತಿದ್ದ. ಆಕೆ ಗರ್ಭಿಣಿಯಾದ ವಿಷಯ ತಿಳಿಸಿದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಎಂದು ವರದಿಯಾಗಿದೆ.

ಸರ್ಕಾರವಾಡ ಪೊಲೀಸರು ಅತ್ಯಾಚಾರದ ಆರೋಪದ ಜೊತೆಗೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಮಹಾರಾಷ್ಟ್ರದ ನರಬಲಿ ಮತ್ತು ಇತರ ಅಮಾನವೀಯ, ದುಷ್ಟ ಮತ್ತು ಅಘೋರಿ ಆಚರಣೆಗಳು ಹಾಗೂ ಮಾಟಮಂತ್ರ ತಡೆಗಟ್ಟುವಿಕೆ ಮತ್ತು ನಿರ್ಮೂಲನೆ ಕಾಯ್ದೆಯ ಸೆಕ್ಷನ್ 3(1) ಮತ್ತು 3(2) ಅನ್ನು ಸಹ ಈ ಪ್ರಕರಣದಲ್ಲಿ ಅನ್ವಯಿಸಲಾಗಿದೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...