Homeಅಂತರಾಷ್ಟ್ರೀಯ100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

- Advertisement -
- Advertisement -

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ಯೂರ್ಟೊ ಲೆಗುಯಿಜಾಮೊದ ಕೌಕಾಯಾ ವಿಮಾನ ನಿಲ್ದಾಣದಿಂದ ಪ್ಯೂರ್ಟೊ ಅಸಿಸ್‌ಗೆ ಹೊರಟಿದ್ದ ವಿಮಾನ, ರನ್‌ವೇಯ ಕೊನೆಯ ಭಾಗದ ಬಳಿ ನೆಲಕ್ಕಪ್ಪಳಿಸಿದೆ. ಅವಘಡ ನಡೆದ ಸ್ಥಳ ಪೆರು ಮತ್ತು ಈಕ್ವೆಡಾರ್ ಗಡಿಯ ಸಮೀಪವಿರುವ ಅಮೆಝಾನ್ ಅರಣ್ಯ ಪ್ರದೇಶದಲ್ಲಿದೆ.

ವರದಿಗಳ ಪ್ರಕಾರ, ಕೊಲಂಬಿಯಾದ ಸ್ಥಳೀಯ ಕಾಲಮಾನ ಸೋಮವಾರ (ಮಾ.23) ಬೆಳಿಗ್ಗೆ ಸುಮಾರು 9:50ಕ್ಕೆ ವಿಮಾನ ಪತನಗೊಂಡಿದೆ. ಭಾರತ ಮತ್ತು ಕೊಲಂಬಿಯಾ ನಡುವೆ ಸುಮಾರು 10 ಗಂಟೆ 30 ನಿಮಿಷಗಳ ಸಮಯದ ವ್ಯತ್ಯಾಸವಿದೆ. ಭಾರತವು ಕೊಲಂಬಿಯಾಕ್ಕಿಂತ ಮುಂದಿದೆ. ಹಾಗಾಗಿ, ಕೊಲಂಬಿಯಾದಲ್ಲಿ ಸೋಮವಾರ ಬೆಳಿಗ್ಗೆ 9:50 ಆಗಿದ್ದಾಗ, ಭಾರತದಲ್ಲಿ ರಾತ್ರಿ 8:20 ಆಗಿರುತ್ತದೆ.

ಅಪಘಾತಕ್ಕೀಡಾದ ವಿಮಾನವು ವಾಯುಪಡೆಗೆ ಸೇರಿದ C-130 ಹರ್ಕ್ಯುಲಸ್ ಮಾದರಿಯದ್ದಾಗಿದ್ದು, ಅದರಲ್ಲಿ 125ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ವಿಮಾನದಲ್ಲಿ 114 ಸೇನಾ ಸಿಬ್ಬಂದಿ ಹಾಗೂ 11 ಇತರ ಸಿಬ್ಬಂದಿ ಇದ್ದರು ಎಂದು ವಾಯುಪಡೆಯ ಕಮಾಂಡರ್ ಕಾರ್ಲೋಸ್ ಫೆರ್ನಾಂಡೊ ಸಿಲ್ವಾ ರುಯೇಡಾ ತಿಳಿಸಿದ್ದಾಗಿ ಬಿಬಿಸಿ ವರದಿ ಹೇಳಿದೆ.

ರಕ್ಷಣಾ ತಂಡಗಳು ದುರಂತ ಸ್ಥಳದಲ್ಲಿ ಮೃತದೇಹಗಳಿಗಾಗಿ ಹುಡುಕುತ್ತಿವೆ. ಗಾಯಗೊಂಡವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಬಿಬಿಸಿ ಮಂಗಳವಾರ (ಭಾರತೀಯ ಕಾಲಮಾನ ಮಾ.24) ಬೆಳಿಗ್ಗೆ ವರದಿ ಮಾಡಿದೆ.

ವಾಯುಪಡೆಯ ವಿಮಾನವಾದ್ದರಿಂದ ಅದರಲ್ಲಿ ಮದ್ದುಗುಂಡುಗಳು ಇತ್ತು. ವಿಮಾನಪತನಗೊಂಡ ವೇಳೆ ಆ ಮದ್ದುಗುಂಡುಗಳು ಸ್ಪೋಟಗೊಂಡು ಹೆಚ್ಚಿನ ಬೆಂಕಿ ಆವರಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ.

ಈ ಘಟನೆಯು ಕೊಲಂಬಿಯಾದ ವಾಯುಪಡೆಯ ಇತಿಹಾಸದಲ್ಲಿ ನಡೆದ ಅತ್ಯಂತ ಭೀಕರ ದುರಂತ ಎಂದು ಹೇಳಲಾಗ್ತಿದೆ. ಸ್ಥಳೀಯ ಮಾಧ್ಯಮಗಳು ಹಂಚಿಕೊಂಡ ಫೋಟೋಗಳಲ್ಲಿ, ಘಟನಾ ಸ್ಥಳದಲ್ಲಿ ದಟ್ಟವಾದ ಹೊಗೆ ಮತ್ತು ಸೈನಿಕರನ್ನು ಹೊತ್ತ ಟ್ರಕ್‌ಗಳು ಆ ಪ್ರದೇಶಕ್ಕೆ ಹೋಗುತ್ತಿರುವುದನ್ನು ತೋರಿಸಿವೆ ಎಂದು ಬಿಬಿಸಿ ವರದಿ ಉಲ್ಲೇಖಿಸಿದೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ “ಈ ಭಯಾನಕ ಅಪಘಾತ ಸಂಭವಿಸಬಾರದಿತ್ತು” ಎಂದು ಸಾಮಾಜಿಕ ಜಾಲತಾನ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರ ಮತ್ತು ವಿಮಾನಗಳನ್ನು ಹೊಸದಾಗಿ ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಸರ್ಕಾರಿ ಕೆಲಸಗಳ ವಿಳಂಬವೇ ಕಾರಣ ಎಂದು ಅವರು ತಮ್ಮ ಸುದೀರ್ಘ ಬರಹದಲ್ಲಿ ದೂರಿದ್ದಾರೆ.

“ನಾನು ಇನ್ನು ಮುಂದೆ ಯಾವುದೇ ವಿಳಂಬವನ್ನು ಸಹಿಸುವುದಿಲ್ಲ, ನಮ್ಮ ಯುವಜನರ ಜೀವ ಪಣಕ್ಕಿಡಲಾಗಿದೆ” ಎಂದು ಬರೆದುಕೊಂಡಿರುವ ಅವರು, ಅಪಘಾತಕ್ಕೆ ನಿಖರ ಕಾರಣವೇನಿರಬಹುದು ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಕಳೆದ ತಿಂಗಳು, ಬ್ಯಾಂಕ್‌ನೋಟುಗಳನ್ನು (ನಗದು) ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಯ C-130 ಹರ್ಕ್ಯುಲಸ್ ವಿಮಾನವು ದೇಶದ ಪಶ್ಚಿಮ ಭಾಗದಲ್ಲಿ ಪತನಗೊಂಡು, ಕನಿಷ್ಠ 20 ಜನರು ಸಾವನ್ನಪ್ಪಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...