Homeಮುಖಪುಟಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌'ಸೀಲ್' ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ- ಸಿಪಿಐ (ಎಂ) ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪತ್ರದ ವಿಷಯ ಬೆಳಕಿಗೆ ಬಂದಿತ್ತು.

2019ಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯ ವಿವರಗಳ ಪ್ರಕಟಣೆಗೆ ಸಂಬಂಧಿಸಿದ ಚುನಾವಣಾ ಆಯೋಗದ ಪತ್ರದಲ್ಲಿ ಆಯೋಗದ ಸೀಲ್ ಬದಲು ಬಿಜೆಪಿ ಕೇರಳ ಘಟಕದ ಸೀಲ್ ಇತ್ತು.

ಈ ಪತ್ರವನ್ನು ಅನೇಕ ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿತ್ತು. ಇದನ್ನು ಗಮನಿಸಿದ ಸಿಪಿಐ(ಎಂ), ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವೆ ‘ಒಂದೇ ರೀತಿಯ ಒಳಸಂಚು’ ಇದೆ ಎಂದು ಗಂಭೀರ ಆರೋಪ ಮಾಡಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿದ ಕೇರಳದ ಮುಖ್ಯ ಚುನಾವಣಾ ಅಧಿಕಾರಿ ಡಾ. ರತನ್ ಯು. ಖೇಲ್ಕರ್, “ಈ ಹಿಂದೆ ಬಿಜೆಪಿ ಘಟಕವು ವಿವರಣೆ ಕೇಳಲು ಬಂದಾಗ ಸಲ್ಲಿಸಿದ್ದ ಪೋಟೋಕಾಪಿ (ನಕಲು) ಪತ್ರವನ್ನು ಕಚೇರಿಯ ಸಿಬ್ಬಂದಿ ಅರಿಯದೇ ಇತರ ಪಕ್ಷಗಳಿಗೂ ವಿತರಿಸಿದ್ದಾರೆ. ಇದು ಕೇವಲ ಒಂದು ‘ಲಿಪಿಕ ದೋಷ’ (ಬರವಣಿಗೆಯ ದೋಷ/ ಸಿಬ್ಬಂದಿ ದೋಷ/ ತಾಂತ್ರಿಕ ತಪ್ಪು-clerical error)” ಎಂದು ತಿಳಿಸಿದ್ದಾರೆ.

“ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯು ಈ ಲೋಪವನ್ನು ಪತ್ತೆಹಚ್ಚಿದ ಕೂಡಲೇ ಅದನ್ನು ಒಪ್ಪಿಕೊಂಡಿದೆ. ಅದರಂತೆ, ಮಾರ್ಚ್ 21ರಂದು ಉಪ ಮುಖ್ಯ ಚುನಾವಣಾ ಅಧಿಕಾರಿಯು ಆ ತಪ್ಪಾದ ಪತ್ರವನ್ನು ಹಿಂಪಡೆಯುವ ಅಧಿಕೃತ ಪತ್ರವನ್ನು ಹೊರಡಿಸಿದ್ದಾರೆ” ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಹಾಯಕ ವಿಭಾಗೀಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಿಪಿಐ(ಎಂ)ನ ಕೇರಳ ಘಟಕವು ಸೋಮವಾರ ಮಧ್ಯಾಹ್ನ ಪತ್ರದ ವಿಷಯವನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿತ್ತು. ಮಾರ್ಚ್ 21ರ ಇ-ಮೇಲ್ ಒಂದರ ಸ್ಕ್ರೀನ್‌ಶಾಟ್ ಅನ್ನು ಪಕ್ಷವು ಹಂಚಿಕೊಂಡಿತ್ತು. ಅದರಲ್ಲಿ ದೇಶದ ರಾಜಕೀಯ ಪಕ್ಷಗಳಿಗೆ ಮಾರ್ಚ್ 19, 2019ರಂದು ಕಳುಹಿಸಲಾಗಿದ್ದ ಪತ್ರಕ್ಕೆ ಸಂಬಂಧಿಸಿದ ಅಫಿಡವಿಟ್ (ಪ್ರಮಾಣಪತ್ರ) ಲಗತ್ತಿಸಲಾಗಿತ್ತು.

2019ರ ಆ ಪತ್ರವು ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಗೆ ಸಂಬಂಧಿಸಿದ ನಿಯಮಗಳನ್ನು ವಿವರಿಸಿತ್ತು. ಆ ಪತ್ರದ ಮೇಲೆ ಬಿಜೆಪಿ ಕೇರಳ ಘಟಕದ ಸೀಲ್ ಇತ್ತು ಮತ್ತು ಅದರ ಮೇಲೆ ಚುನಾವಣಾ ಆಯೋಗದ ಅಧಿಕಾರಿಯ ಸಹಿ ಕೂಡ ಇತ್ತು.

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಪಕ್ಷದ ಸೀಲ್ ಇರುವುದನ್ನು ನೋಡಿ, “ಇವರು ಸರ್ಕಾರಿ ಸೀಲ್ ಮತ್ತು ಬಿಜೆಪಿ ಸೀಲ್‌ಗಳ ನಡುವೆ ವ್ಯತ್ಯಾಸವೇ ಇಲ್ಲದಂತೆ ಬೇಕಾಬಿಟ್ಟಿ ಬಳಸುತ್ತಿದ್ದಾರೆ” ಎಂದು ಸಿಪಿಐ(ಎಂ) ಟೀಕಿಸಿತ್ತು. ಚುನಾವಣಾ ಆಯೋಗ ಮತ್ತು ಬಿಜೆಪಿ ಒಂದೇ ಆಗಿಬಿಟ್ಟಿವೆಯೇ? ಇಷ್ಟು ದಿನ ತಾವು ಬೇರೆ ಬೇರೆ ಎಂದು ಮಾಡುತ್ತಿದ್ದ ನಾಟಕವನ್ನು ಈಗ ಪೂರ್ತಿಯಾಗಿ ಬಿಟ್ಟುಬಿಟ್ಟಿದ್ದಾರೆಯೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿತ್ತು.

“ಚುನಾವಣಾ ಆಯೋಗ ಮತ್ತು ಬಿಜೆಪಿ ಎರಡನ್ನೂ ಒಂದೇ ಅಧಿಕಾರ ಕೇಂದ್ರ ನಿಯಂತ್ರಿಸುತ್ತಿದೆ ಎಂಬುದು ಗುಟ್ಟಾಗಿಯೇನೂ ಉಳಿದಿಲ್ಲ. ಹಾಗಿದ್ದರೂ ಸಹ, ಕನಿಷ್ಠ ಸೌಜನ್ಯಕ್ಕಾದರೂ ಇವೆರಡಕ್ಕೂ ಪ್ರತ್ಯೇಕ ಕಚೇರಿ ಅಥವಾ ವ್ಯವಸ್ಥೆಯನ್ನು ನಿರ್ವಹಿಸಿ” ಎಂದು ವ್ಯಂಗ್ಯವಾಗಿ ಹೇಳಿತ್ತು.

ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಕೂಡ ಸಿಪಿಐ(ಎಂ) ಆರೋಪಗಳನ್ನು ಬೆಂಬಲಿಸಿದ್ದವು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಚುನಾವಣಾ ಆಯೋಗವು ಕೊನೆಗೂ ಬಿಜೆಪಿ ಸೀಲ್ ಇರುವ ಅಧಿಕೃತ ಪತ್ರಗಳನ್ನು ಹೊರಡಿಸುವ ಧೈರ್ಯವನ್ನು ತೋರಿದೆ” ಎಂದು ವ್ಯಂಗ್ಯವಾಗಿ ಕಿಡಿಕಾರಿದ್ದರು.

ಕಾಂಗ್ರೆಸ್‌ನ ಕೇರಳ ಘಟಕವು ಚುನಾವಣಾ ಸಂಸ್ಥೆಯನ್ನು ಪ್ರಶ್ನಿಸುತ್ತಾ, “ನೀವು ಬಿಜೆಪಿಯ ಕಚೇರಿಯಿಂದಲೇ ಕಾರ್ಯನಿರ್ವಹಿಸುತ್ತಿದ್ದೀರಾ?” ಎಂದು ಕೇಳಿತ್ತು. ಅಲ್ಲದೆ, “ಚುನಾವಣಾ ಅಧಿಕಾರಿಗಳಿಗೆ ಬಿಜೆಪಿಯ ಅಧಿಕೃತ ಮುದ್ರೆಗಳು (ಸೀಲುಗಳು) ಸಿಕ್ಕಿದ್ದಾದರೂ ಹೇಗೆ?” ಎಂದು ಆಶ್ಚರ್ಯ ವ್ಯಕ್ತಪಡಿಸಿತ್ತು.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಈ ಬಗ್ಗೆ ವ್ಯಂಗ್ಯವಾಡುತ್ತಾ, ಬಿಜೆಪಿಯ ಘೋಷಣೆಯಾದ “ಅಬ್ಕಿ ಬಾರ್, ಮೋದಿ ಸರ್ಕಾರ್” (ಈ ಬಾರಿ ಮೋದಿ ಸರ್ಕಾರ) ಎಂಬುದು ಕೂಡ ಇದೇ ರೀತಿಯ “ಲಿಪಿಕ ದೋಷ”ದ ಫಲಿತಾಂಶವೇ? ಎಂದು ಪ್ರಶ್ನಿಸಿದ್ದರು.

ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಪ್ರಕಟಿಸುವ ಕುರಿತಾದ 2019ರ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟನೆ ಕೋರಿ ಬಿಜೆಪಿ ಕೇರಳ ಘಟಕವು ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು, ಈ ಸಂದರ್ಭದಲ್ಲಿ ಈ ತಪ್ಪು ಸಂಭವಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿ ಸಲ್ಲಿಸಿದ ದಾಖಲೆಯಲ್ಲಿ ಪಕ್ಷದ ಸೀಲ್ ಇರುವುದನ್ನು ಕಚೇರಿಯ ಸಿಬ್ಬಂದಿ ಗಮನಿಸದ ಕಾರಣ ಈ ಅಚಾತುರ್ಯ ಸಂಭವಿಸಿದೆ. ಸ್ಪಷ್ಟನೆ ಕೇಳಿ ಬಂದಿದ್ದ ಸಮಯದಲ್ಲಿ, ಅದೇ ದಾಖಲೆಯನ್ನು ಅಜಾಗರೂಕತೆಯಿಂದ ಇತರ ರಾಜಕೀಯ ಪಕ್ಷಗಳಿಗೂ ವಿತರಿಸಲಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ.

ಆ ತಪ್ಪನ್ನು ಗಮನಿಸಿದ ತಕ್ಷಣವೇ, ಎಲ್ಲಾ ರಾಜಕೀಯ ಪಕ್ಷಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ರಿಟರ್ನಿಂಗ್ ಆಫೀಸರ್‌ಗಳಿಗೆ ಅಧಿಕೃತ ಪತ್ರದ ಮೂಲಕ ಈ ‘ತಪ್ಪಾದ ದಾಖಲೆ’ಯನ್ನು ಹಿಂಪಡೆಯಲಾಗಿದೆ ಮತ್ತು ಅದನ್ನು ಪರಿಗಣಿಸಬಾರದು ಎಂದು ತಿಳಿಸಲಾಗಿದೆ ಎಂದು ಆಯೋಗವು ಹೇಳಿದೆ.

ಈ ಲಿಪಿಕ ದೋಷದ ಆಧಾರದ ಮೇಲೆ ತಪ್ಪು ಮಾಹಿತಿಯನ್ನು ಹರಡದಂತೆ ಸಾರ್ವಜನಿಕರು ಮತ್ತು ಮಾಧ್ಯಮಗಳಲ್ಲಿ ವಿನಂತಿಸುತ್ತೇವೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಪ್ರಕ್ರಿಯೆಯು ಯಾವುದೇ ಹೊರಗಿನ ಹಸ್ತಕ್ಷೇಪ ಅಥವಾ ಪ್ರಭಾವಕ್ಕೆ ಒಳಗಾಗದಂತೆ ತಡೆಯಲು ಚುನಾವಣಾ ಆಯೋಗವು ಅತ್ಯಂತ ಕಟ್ಟುನಿಟ್ಟಾದ ಮತ್ತು ದೋಷರಹಿತ ವ್ಯವಸ್ಥೆಯನ್ನು ಹೊಂದಿದೆ ಎಂದು ಅದು ಹೇಳಿಕೊಂಡಿದೆ.




 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...