Homeಮುಖಪುಟಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

- Advertisement -
- Advertisement -

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ ಅವರನ್ನು ಗ್ವಾಲಿಯರ್‌ನಲ್ಲಿ ಬಂಧಿಸಿ ಪಟಿಯಾಲಕ್ಕೆ ಕರೆತರಲಾಗಿದೆ ಎಂದು ಪಟಿಯಾಲ ಎಸ್‌ಎಸ್‌ಪಿ ವರುಣ್ ಶರ್ಮಾ ತಿಳಿಸಿದ್ದಾರೆ.

ನಂತರ ಶಾಸಕರನ್ನು ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಪಠಣಮಜ್ರಾ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1, 2025 ರಂದು, ಪೊಲೀಸರು ಪಠಾಣಮಜ್ರಾ ವಿರುದ್ಧ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು.

ಜಿರಾಕ್‌ಪುರ ಮೂಲದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಶಾಸಕರು ತಮ್ಮನ್ನು ವಿಚ್ಛೇದಿತ ಎಂದು ತಪ್ಪಾಗಿ ಬಿಂಬಿಸಿಕೊಂಡು, ನನ್ನೊಂದಿಗೆ ಸಂಬಂಧ ಬೆಳೆಸಿದ್ದರು, ನಂತರ 2021 ರಲ್ಲಿ ನಮ್ಮಿಬ್ಬರಿಗೂ ಮದುವೆಯಾಗಿದ್ದರೂ ವಿವಾಹವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಆತ ನನ್ನ ಮೇಲೆ ಲೈಂಗಿಕ ಶೋಷಣೆ ಮಾಡಿ, ಬೆದರಿಕೆ ಹಾಕಿದ್ದು, “ಅಶ್ಲೀಲ” ವಿಷಯಗಳನ್ನು ಕಳುಹಿಸಿದ್ದಾನೆ ಎಂದು ದೂರು ದಾಖಲಿಸಿದ್ದಳು. 

ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಎಎಪಿ ಶಾಸಕನನ್ನು ಘೋಷಿತ ಅಪರಾಧಿ ಎಂದು ಘೋಷಿಸಲಾಗಿತ್ತು. ಪಟಿಯಾಲ ಪೊಲೀಸರು ಶಾಸಕನ ವಿರುದ್ಧ ಲುಕ್-ಔಟ್ ನೋಟಿಸ್ ಸಹ ಹೊರಡಿಸಿದ್ದರು.

ಅತ್ಯಾಚಾರ ಪ್ರಕರಣದಲ್ಲಿ ಪಠಾಣಮಜ್ರಾ ಸೆಪ್ಟೆಂಬರ್ 2 ರಿಂದ ತಲೆಮರೆಸಿಕೊಂಡಿದ್ದ. ಪಂಜಾಬ್ ಪೊಲೀಸರು ಆತನನ್ನು ಬಂಧಿಸಲು ಹರಿಯಾಣದ ಕರ್ನಾಲ್‌ಗೆ ಹೋದಾಗ ಆತ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ.

ಕರ್ನಾಲ್ ಜಿಲ್ಲೆಯ ದಾಬ್ರಿ ಗ್ರಾಮದಲ್ಲಿ ಶಾಸಕರನ್ನು ಬಂಧಿಸಲು ಪೊಲೀಸ್ ತಂಡ ಹೋದಾಗ ಅವರ ಬೆಂಬಲಿಗರು ಗುಂಡು ಹಾರಿಸಿದರು ಮತ್ತು ಕಲ್ಲುಗಳನ್ನು ಎಸೆದರು ಎಂದು ಪೊಲೀಸರು ಹೇಳಿಕೊಂಡಿದ್ದರು. ಶಾಸಕನು ತನ್ನ ಸಂಬಂಧಿಕರೊಬ್ಬರ ಮನೆಯಲ್ಲಿದ್ದನು.

ಆದಾಗಲೂ, ಪೊಲೀಸರ ಮೇಲೆ ಗುಂಡು ಹಾರಿಸಿದ್ದರಲ್ಲಿ ಭಾಗಿಯಾಗಿದ್ದೇನೆ ಎಂಬ ಪೊಲೀಸರ ಹೇಳಿಕೆಯನ್ನು ಪಠಾಣ್‌ಮಜ್ರಾ ನಿರಾಕರಿಸಿದ್ದರು ಮತ್ತು “ನಕಲಿ ಎನ್‌ಕೌಂಟರ್” ನಲ್ಲಿ ಕೊಲ್ಲಲ್ಪಡುತ್ತೇನೆ ಎಂದು ತಿಳಿದ ನಂತರ ತಾನು ಪರಾರಿಯಾಗಿದ್ದೇನೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...