Homeಮುಖಪುಟಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.

ಬುಧವಾರ (ಮಾ.25) ಬಿಜೆಪಿ ಪ್ರಕಟಿಸಿದ 19 ಅಭ್ಯರ್ಥಿಗಳ ಪಟ್ಟಿಯಲ್ಲಿ ಸಂತ್ರಸ್ತೆಯ ತಾಯಿ ರತ್ನ ದೇಬ್ನಾಥ್ ಅವರ ಹೆಸರಿದೆ. ರತ್ನಾ ಅವರು ಉತ್ತರ 24 ಪರಗಣ ಜಿಲ್ಲೆಯ ಪಾಣಿಹತಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಪಾಣಿಹತಿ ಕ್ಷೇತ್ರದಲ್ಲಿ 2011ರಿಂದ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಿರ್ಮಲ್ ಘೋಷ್ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿ ಈ ಕ್ಷೇತ್ರದಿಂದ ನಿರ್ಮಲ್ ಘೋಷ್ ಅವರ ಮಗ ತೀರ್ಥಂಕರ ಘೋಷ್ ಅವರನ್ನು ಟಿಎಂಸಿ ಕಣಕ್ಕಿಳಿಸಿದೆ.

ತನ್ನ ಮಗಳಿಗೆ ನ್ಯಾಯ ದೊರಕಿಸಿ ಕೊಡಲು ಮತ್ತು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯನ್ನು ಕಾಪಾಡಲು ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ರತ್ನ ದೇಬ್ನಾಥ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಗುರುವಾರ ವರದಿ ಮಾಡಿದೆ.

“ಮಹಿಳೆಯರ ಸುರಕ್ಷತೆಯೇ ನನ್ನ ಏಕೈಕ ಕಾಳಜಿ” ಎಂದಿರುವ ರತ್ನ ದೇಬ್ನಾಥ್, “ಪ್ರತಿಭಟಿಸುವುದು ಹೇಗೆ ಎಂಬುದನ್ನು ಮರೆತಿರುವವರಿಗಾಗಿ ನಾನು ಧ್ವನಿ ಎತ್ತುತ್ತೇನೆ” ಎಂದಿದ್ದಾರೆ.

“ನಾನು ಜನರಿಗೆ ಸೇವೆ ಸಲ್ಲಿಸಲು ಸಾಧ್ಯವಾದರೆ, ನನ್ನ ಮಗಳು ಕೂಡ ಸಂತೋಷಪಡುತ್ತಾಳೆ. ಪಶ್ಚಿಮ ಬಂಗಾಳದಾದ್ಯಂತ ಕಮಲ ಅರಳಬೇಕು ಮತ್ತು ಟಿಎಂಸಿಯನ್ನು ಬೇರು ಸಹಿತ ಕಿತ್ತುಹಾಕಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರ ಬೀಳಲಿದೆ.

ಆಗಸ್ಟ್ 9, 2024ರಂದು, 31 ವರ್ಷದ ತರಬೇತಿ ವೈದ್ಯೆ ಕೋಲ್ಕತ್ತಾದ ಸರ್ಕಾರಿ ಸಂಸ್ಥೆಯಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದರು. ಬಳಿಕ, ಯುವ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬುವುದು ಬಯಲಾಗಿತ್ತು. ಈ ಘಟನೆ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಕರಣದಲ್ಲಿ ಬಂಧಿತನಾದ ಸಂಜಯ್ ರಾಯ್‌ ಎಂಬಾತನಿಗೆ 2025ರ ಜನವರಿಯಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಮೇಲ್ಮನವಿಯನ್ನು ಫೆಬ್ರವರಿ 2025 ರಲ್ಲಿ ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಘಟನೆ ಬೆಳಕಿಗೆ ಬಂದ ನಂತರ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರ ಸಂಘವು ಹಿರಿಯ ಅಧಿಕಾರಿಗಳ ರಾಜೀನಾಮೆ ಮತ್ತು ರಾಜ್ಯದ ವೈದ್ಯಕೀಯ ಕೇಂದ್ರಗಳಲ್ಲಿನ ‘ಬೆದರಿಕೆ ಸಂಸ್ಕೃತಿ’ಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಹಲವಾರು ವಾರಗಳ ಕಾಲ ಪ್ರತಿಭಟನೆ ನಡೆಸಿತ್ತು.

ವೈದ್ಯರು ಮುಷ್ಕರ ನಡೆಸಿದ್ದರಿಂದ ಪಶ್ಚಿಮ ಬಂಗಾಳದಾದ್ಯಂತ ಹಲವಾರು ವಾರಗಳ ಕಾಲ ಆರೋಗ್ಯ ಸೇವೆಗಳು ವ್ಯತ್ಯಯಗೊಂಡಿದ್ದವು.

ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿರುವ ಆರೋಪ ಮತ್ತು ವೈದ್ಯಕೀಯ ಸೌಲಭ್ಯದಲ್ಲಿನ ಭ್ರಷ್ಟಾಚಾರದ ಆರೋಪಗಳನ್ನು ಸಿಬಿಐ ಪ್ರತ್ಯೇಕವಾಗಿ ಪರಿಶೀಲಿಸುತ್ತಿದೆ. ಪ್ರಕರಣದ ಆರೋಪಿಗಳಲ್ಲಿ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಉಸ್ತುವಾರಿ ಅಧಿಕಾರಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...