Homeಮುಖಪುಟʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

- Advertisement -
- Advertisement -

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ವಿಲಾತಿಕುಲಂ ವಿಧಾನಸಭಾ ಕ್ಷೇತ್ರದಲ್ಲಿರುವ ಈ ಗ್ರಾಮದಲ್ಲಿ ಸುಮಾರು 900 ಮತದಾರರಿದ್ದು, ಅವರಲ್ಲಿ ಸುಮಾರು 500 ಜನರು ಎಸ್‌ಸಿ ಸಮುದಾಯಗಳಿಗೆ ಸೇರಿದವರು.

ಚರ್ಚ್‌ಗೆ ಹೋಗುವ ದಾರಿಯನ್ನು ವಿವಾದಿತ ಜಾಗದಲ್ಲಿ ಗೋಡೆ ನಿರ್ಮಿಸುವ ಮೂಲಕ ತಡೆಯಲಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ಹಲವು ಕಾಲದಿಂದ ಗ್ರಾಮಸ್ಥರು ಸಾರ್ವಜನಿಕವಾಗಿ ಬಳಸುತ್ತಿದ್ದ ಒಂದು ಎಕರೆ ಸರ್ಕಾರಿ ‘ಪೋರಂಬೋಕು’ (ಸರ್ಕಾರಿ ಪಡೀಲು ಭೂಮಿ) ಭೂಮಿಗೆ ಪಟ್ಟಾ (ಹಕ್ಕು ಪತ್ರ) ನೀಡಲು ಕಂದಾಯ ಅಧಿಕಾರಿಗಳು ಖಾಸಗಿ ವ್ಯಕ್ತಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಗ್ರಾಮಸ್ಥರ ಪ್ರಕಾರ, ಕಾನೂನುಬಾಹಿರವಾಗಿ ಖಾಸಗಿ ವ್ಯಕ್ತಿಗೆ ಹಕ್ಕು ಪತ್ರ ನೀಡಲಾಗಿದ್ದು, ಇದರಿಂದಾಗಿ ಅವರು ಗೋಡೆ ನಿರ್ಮಿಸಿದ್ದಾರೆ.

ಗೋಡೆಯನ್ನು ಕೆಡವಲು ಮತ್ತು ಹಕ್ಕು ಪತ್ರವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 2024ರಿಂದಲೇ ಶಂಕರಲಿಂಗಪುರಂ ಗ್ರಾಮದ ಎಸ್‌ಸಿ ಸಮುದಾಯದ ನಿವಾಸಿಗಳು ಹಲವಾರು ಪ್ರತಿಭಟನೆಗಳನ್ನು ನಡೆಸುತ್ತಾ ಬಂದಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ಸದ್ಯ ವಿಲಾತಿಕುಲಂ ಉಪ ನ್ಯಾಯಾಲಯ ಮತ್ತು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ವಿಚಾರಣೆಯ ಹಂತದಲ್ಲಿವೆ.

2025ರಲ್ಲಿ, ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ. ಇಳಂಬಗವತ್ ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು. ಇದರ ನಂತರ, ಭೂಮಿಯ ಒಂದು ಭಾಗಕ್ಕೆ ಬೇಲಿ ಹಾಕಲು ಅನುಮತಿ ನೀಡಿದ್ದ 2012 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಆದರೆ, ಮೇಲ್ಮನವಿ ಸಲ್ಲಿಸಲು ನಿಗದಿಪಡಿಸಿದ ಕಾಲಮಿತಿ ಮೀರಿಹೋದ ಕಾರಣ ಆ ಅರ್ಜಿ ತಿರಸ್ಕತಗೊಂಡಿತ್ತು.

ಈ ವಿಷಯದಲ್ಲಿ ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ವಿಡುದಲೈ ಚಿರೂತೈಗಲ್ ಕಚ್ಚಿ (ವಿಸಿಕೆ) ಪಕ್ಷದ ಮುರಸು ತಮಿಳಪ್ಪನ್ ಅವರು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯೊಂದಿಗೆ ಮಾತನಾಡಿ, “ಗ್ರಾಮದಲ್ಲಿ ಒಟ್ಟು 30 ಎಕರೆ ಪೋರಂಬೋಕು ಭೂಮಿಯಿದ್ದು, ಅದರಲ್ಲಿ ಎಸ್‌ಸಿ ನಿವಾಸಿಗಳು ಕೇವಲ ಒಂದು ಎಕರೆಯನ್ನು ಮಾತ್ರ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸುತ್ತಿದ್ದರು. ಆದರೆ, ಕಂದಾಯ ಅಧಿಕಾರಿಗಳ ಬೆಂಬಲದೊಂದಿಗೆ ಮೇಲ್ಜಾತಿಯ ಗುಂಪುಗಳು ಆ ಜಾಗವನ್ನು ಆಕ್ರಮಿಸಿಕೊಂಡಿವೆ” ಎಂದು ದೂರಿದ್ದಾರೆ.

ದಲಿತ ಹಕ್ಕುಗಳ ಒಕ್ಕೂಟದ ಸಂಯೋಜಕರಾದ ಎಂ. ನಾಗರಾಜ್ ಅವರು ಮಾತನಾಡಿ, 2024ರಿಂದಲೂ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. “ಕಳೆದ ಒಂದು ವರ್ಷದಿಂದ ಭೂಮಿಯನ್ನು ಮರಳಿ ಪಡೆಯಲು ಮತ್ತು ಗೋಡೆಯನ್ನು ತೆರವುಗೊಳಿಸಲು ಪ್ರತಿ ವಾರಾಂತ್ಯದಲ್ಲಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ, ಆದರೆ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅವರು ದೂರಿದ್ದಾರೆ. ಅಲ್ಲದೆ, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತಮಗೆ ಬೆಂಬಲ ನೀಡುವಲ್ಲಿ ವಿಫಲವಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗೆ ಯಾವುದೇ ಪರಿಹಾರ ಸಿಗದ ಕಾರಣ ಅತೃಪ್ತರಾದ ಗ್ರಾಮಸ್ಥರು ಈಗ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಲ್ಪಟ್ಟಿ ಉಪವಿಭಾಗಾಧಿಕಾರಿ ಹಿಮಾಂಶು ಮಂಗಲ್ ಅವರು ಮಾತನಾಡಿ, ನಿವಾಸಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವೊಲಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಇಂತಹ ಘಟನೆಗಳು ಹೊಸದೇನಲ್ಲ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ರಾಜ್ಯದ ಹಲವು ಗ್ರಾಮಗಳು ಜಾತಿ ತಾರತಮ್ಯ, ಮೂಲಸೌಕರ್ಯಗಳ ಕೊರತೆ, ಪರಿಸರ ಕಾಳಜಿ ಮತ್ತು ಈಡೇರದ ಅಭಿವೃದ್ಧಿ ಭರವಸೆಗಳ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಿದ್ದವು. 

ಪುದುಕ್ಕೊಟ್ಟೈ ಜಿಲ್ಲೆಯ ವೆಂಗವಯಲ್ ಮತ್ತು ಎರೈಯೂರು, ತೂತುಕುಡಿಯ ಪೊಟ್ಟಲೂರಾನಿ, ತಿರುವಣ್ಣಾಮಲೈ ಜಿಲ್ಲೆಯ ಮೋತಕ್ಕಲ್, ತಿರುವಳ್ಳೂರಿನ ಕಟ್ಟುಪಲ್ಲಿ, ವಿಲ್ಲುಪುರಂನ ವೇದಂಪಟ್ಟು, ತಿರುನಲ್ವೇಲಿಯ ನೆಲ್ಲೈತಿರುತ್ತು, ಕಾಂಚೀಪುರಂನ ಏಕನಾಪುರಂ ಮತ್ತು ನಾಗಪಟ್ಟು, ರಾಣಿಪೇಟೆಯ ಅವಲೂರು, ಧರ್ಮಪುರಿಯ ಜ್ಯೋತಿಹಳ್ಳಿ, ದಿಂಡಿಗಲ್‌ನ ಸೀರಂಗಂಪಟ್ಟಿ, ಕಡಲೂರು ಜಿಲ್ಲೆಯ ವಿರುತ್ತಾಚಲಂ ಮತ್ತು ಸುತ್ತಮುತ್ತಲಿನ ಹಳ್ಳಿಗಳು ಹಾಗೂ ವಿಲ್ಲುಪುರಂನ ಸಿತೇರಿ ಸೇರಿದಂತೆ ಹಲವು ಗ್ರಾಮಗಳು ಚುನಾವಣೆ ಬಹಿಷ್ಕಾರ ಮಾಡಿದ್ದವು.

Courtesy : maktoobmedia.com



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...