Homeಮುಖಪುಟʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

- Advertisement -
- Advertisement -

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ವಿಲಾತಿಕುಲಂ ವಿಧಾನಸಭಾ ಕ್ಷೇತ್ರದಲ್ಲಿರುವ ಈ ಗ್ರಾಮದಲ್ಲಿ ಸುಮಾರು 900 ಮತದಾರರಿದ್ದು, ಅವರಲ್ಲಿ ಸುಮಾರು 500 ಜನರು ಎಸ್‌ಸಿ ಸಮುದಾಯಗಳಿಗೆ ಸೇರಿದವರು.

ಚರ್ಚ್‌ಗೆ ಹೋಗುವ ದಾರಿಯನ್ನು ವಿವಾದಿತ ಜಾಗದಲ್ಲಿ ಗೋಡೆ ನಿರ್ಮಿಸುವ ಮೂಲಕ ತಡೆಯಲಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ಹಲವು ಕಾಲದಿಂದ ಗ್ರಾಮಸ್ಥರು ಸಾರ್ವಜನಿಕವಾಗಿ ಬಳಸುತ್ತಿದ್ದ ಒಂದು ಎಕರೆ ಸರ್ಕಾರಿ ‘ಪೋರಂಬೋಕು’ (ಸರ್ಕಾರಿ ಪಡೀಲು ಭೂಮಿ) ಭೂಮಿಗೆ ಪಟ್ಟಾ (ಹಕ್ಕು ಪತ್ರ) ನೀಡಲು ಕಂದಾಯ ಅಧಿಕಾರಿಗಳು ಖಾಸಗಿ ವ್ಯಕ್ತಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಗ್ರಾಮಸ್ಥರ ಪ್ರಕಾರ, ಕಾನೂನುಬಾಹಿರವಾಗಿ ಖಾಸಗಿ ವ್ಯಕ್ತಿಗೆ ಹಕ್ಕು ಪತ್ರ ನೀಡಲಾಗಿದ್ದು, ಇದರಿಂದಾಗಿ ಅವರು ಗೋಡೆ ನಿರ್ಮಿಸಿದ್ದಾರೆ.

ಗೋಡೆಯನ್ನು ಕೆಡವಲು ಮತ್ತು ಹಕ್ಕು ಪತ್ರವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 2024ರಿಂದಲೇ ಶಂಕರಲಿಂಗಪುರಂ ಗ್ರಾಮದ ಎಸ್‌ಸಿ ಸಮುದಾಯದ ನಿವಾಸಿಗಳು ಹಲವಾರು ಪ್ರತಿಭಟನೆಗಳನ್ನು ನಡೆಸುತ್ತಾ ಬಂದಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ಸದ್ಯ ವಿಲಾತಿಕುಲಂ ಉಪ ನ್ಯಾಯಾಲಯ ಮತ್ತು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ವಿಚಾರಣೆಯ ಹಂತದಲ್ಲಿವೆ.

2025ರಲ್ಲಿ, ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ. ಇಳಂಬಗವತ್ ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು. ಇದರ ನಂತರ, ಭೂಮಿಯ ಒಂದು ಭಾಗಕ್ಕೆ ಬೇಲಿ ಹಾಕಲು ಅನುಮತಿ ನೀಡಿದ್ದ 2012 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಆದರೆ, ಮೇಲ್ಮನವಿ ಸಲ್ಲಿಸಲು ನಿಗದಿಪಡಿಸಿದ ಕಾಲಮಿತಿ ಮೀರಿಹೋದ ಕಾರಣ ಆ ಅರ್ಜಿ ತಿರಸ್ಕತಗೊಂಡಿತ್ತು.

ಈ ವಿಷಯದಲ್ಲಿ ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ವಿಡುದಲೈ ಚಿರೂತೈಗಲ್ ಕಚ್ಚಿ (ವಿಸಿಕೆ) ಪಕ್ಷದ ಮುರಸು ತಮಿಳಪ್ಪನ್ ಅವರು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯೊಂದಿಗೆ ಮಾತನಾಡಿ, “ಗ್ರಾಮದಲ್ಲಿ ಒಟ್ಟು 30 ಎಕರೆ ಪೋರಂಬೋಕು ಭೂಮಿಯಿದ್ದು, ಅದರಲ್ಲಿ ಎಸ್‌ಸಿ ನಿವಾಸಿಗಳು ಕೇವಲ ಒಂದು ಎಕರೆಯನ್ನು ಮಾತ್ರ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸುತ್ತಿದ್ದರು. ಆದರೆ, ಕಂದಾಯ ಅಧಿಕಾರಿಗಳ ಬೆಂಬಲದೊಂದಿಗೆ ಮೇಲ್ಜಾತಿಯ ಗುಂಪುಗಳು ಆ ಜಾಗವನ್ನು ಆಕ್ರಮಿಸಿಕೊಂಡಿವೆ” ಎಂದು ದೂರಿದ್ದಾರೆ.

ದಲಿತ ಹಕ್ಕುಗಳ ಒಕ್ಕೂಟದ ಸಂಯೋಜಕರಾದ ಎಂ. ನಾಗರಾಜ್ ಅವರು ಮಾತನಾಡಿ, 2024ರಿಂದಲೂ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. “ಕಳೆದ ಒಂದು ವರ್ಷದಿಂದ ಭೂಮಿಯನ್ನು ಮರಳಿ ಪಡೆಯಲು ಮತ್ತು ಗೋಡೆಯನ್ನು ತೆರವುಗೊಳಿಸಲು ಪ್ರತಿ ವಾರಾಂತ್ಯದಲ್ಲಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ, ಆದರೆ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅವರು ದೂರಿದ್ದಾರೆ. ಅಲ್ಲದೆ, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತಮಗೆ ಬೆಂಬಲ ನೀಡುವಲ್ಲಿ ವಿಫಲವಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗೆ ಯಾವುದೇ ಪರಿಹಾರ ಸಿಗದ ಕಾರಣ ಅತೃಪ್ತರಾದ ಗ್ರಾಮಸ್ಥರು ಈಗ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಲ್ಪಟ್ಟಿ ಉಪವಿಭಾಗಾಧಿಕಾರಿ ಹಿಮಾಂಶು ಮಂಗಲ್ ಅವರು ಮಾತನಾಡಿ, ನಿವಾಸಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವೊಲಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಇಂತಹ ಘಟನೆಗಳು ಹೊಸದೇನಲ್ಲ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ರಾಜ್ಯದ ಹಲವು ಗ್ರಾಮಗಳು ಜಾತಿ ತಾರತಮ್ಯ, ಮೂಲಸೌಕರ್ಯಗಳ ಕೊರತೆ, ಪರಿಸರ ಕಾಳಜಿ ಮತ್ತು ಈಡೇರದ ಅಭಿವೃದ್ಧಿ ಭರವಸೆಗಳ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಿದ್ದವು. 

ಪುದುಕ್ಕೊಟ್ಟೈ ಜಿಲ್ಲೆಯ ವೆಂಗವಯಲ್ ಮತ್ತು ಎರೈಯೂರು, ತೂತುಕುಡಿಯ ಪೊಟ್ಟಲೂರಾನಿ, ತಿರುವಣ್ಣಾಮಲೈ ಜಿಲ್ಲೆಯ ಮೋತಕ್ಕಲ್, ತಿರುವಳ್ಳೂರಿನ ಕಟ್ಟುಪಲ್ಲಿ, ವಿಲ್ಲುಪುರಂನ ವೇದಂಪಟ್ಟು, ತಿರುನಲ್ವೇಲಿಯ ನೆಲ್ಲೈತಿರುತ್ತು, ಕಾಂಚೀಪುರಂನ ಏಕನಾಪುರಂ ಮತ್ತು ನಾಗಪಟ್ಟು, ರಾಣಿಪೇಟೆಯ ಅವಲೂರು, ಧರ್ಮಪುರಿಯ ಜ್ಯೋತಿಹಳ್ಳಿ, ದಿಂಡಿಗಲ್‌ನ ಸೀರಂಗಂಪಟ್ಟಿ, ಕಡಲೂರು ಜಿಲ್ಲೆಯ ವಿರುತ್ತಾಚಲಂ ಮತ್ತು ಸುತ್ತಮುತ್ತಲಿನ ಹಳ್ಳಿಗಳು ಹಾಗೂ ವಿಲ್ಲುಪುರಂನ ಸಿತೇರಿ ಸೇರಿದಂತೆ ಹಲವು ಗ್ರಾಮಗಳು ಚುನಾವಣೆ ಬಹಿಷ್ಕಾರ ಮಾಡಿದ್ದವು.

Courtesy : maktoobmedia.com



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...