Homeಕರ್ನಾಟಕಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

ಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

- Advertisement -
- Advertisement -

ಎಲೆಮರೆ – 13

ಈಚೆಗೆ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಿ ಎಂದು ಸಿ.ಐ.ಟಿ.ಯು ಸಂಘಟನೆಯು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯಿತು. ರಾಜ್ಯವ್ಯಾಪಿ ಗಮನ ಸೆಳೆಯಿತು. ಇದೀಗ ಸರಕಾರದ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿದೆ. ಆದರೆ ಇಲ್ಲೊಬ್ಬ ಅಂಗನವಾಡಿ ಕಾರ್ಯಕರ್ತೆ ಸರಕಾರ ಅಧಿಕೃತವಾಗಿ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಗಳಲ್ಲಿ ಆರಂಭಿಸುವ ಮುನ್ನವೇ ಕಾನ್ವೆಂಟುಗಳಿಗೂ ಸವಾಲೆಸೆಯುವಂತೆ ಅಂಗನವಾಡಿಯನ್ನು ರೂಪಿಸಿದ್ದಾರೆ. ಈಚೆಗೆ ದೇವದುರ್ಗ ಭಾಗದ 40 ಜನ ಅಂಗನವಾಡಿ ಕಾರ್ಯಕರ್ತೆಯರ ತಂಡ ಈ ಅಂಗನವಾಡಿಯನ್ನು ಭೇಟಿ ಮಾಡಿ ನಾವೂ ಹೀಗೆ ಮಾಡಬಹುದೇ ಎಂದು ಪರಿಶೀಲಿಸಿದ್ದಾರೆ. ಈ ಭಾಗದ ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ಈ ಅಂಗನವಾಡಿಯ ಮಾದರಿಯನ್ನು ಇಡೀ ತಾಲೂಕಿಗೆ ವಿಸ್ತರಿಸುವ ಯೋಚನೆ ಮಾಡಿದ್ದಾರೆ. ಹಾಗಾದರೆ ಇದರ ವಿಶೇಷತೆಯೇನು?

ಜೀರೋದಿಂದ ಮೂರು ನಾಲ್ಕು ವರ್ಷದ ಮಕ್ಕಳು ಚಿಲಿಪಿಲಿಗುಟ್ಟುವ ಈ ಪುಟ್ಟ ಕೋಣೆಯಲ್ಲಿ ಟೀಚರ್ ಕೇಳುವ ಪ್ರತಿ ಪ್ರಶ್ನೆಗಳಿಗೂ ಮಕ್ಕಳು ಸ್ಪರ್ಧೆಗೆ ಬಿದ್ದಂತೆ ಪಟಪಟನೆ ಉತ್ತರಿಸುತ್ತಾರೆ. ಚಕಚಕನೆ ಇಂತಿಷ್ಟು ಪ್ಲಾಸ್ಟಿಕ್ ಕಪ್‍ಗಳನ್ನು ಜೋಡಿಸುತ್ತಾ ಸೂಪರ್ ಮಿನಿಟ್ ರಿಯಾಲಿಟಿ ಶೋನ ಅಣಕು ಮಾಡಿ ಚಪ್ಪಾಳೆ ತಟ್ಟುತ್ತಾರೆ. ಬಾಸ್ಕೆಟ್‍ಬಾಲನ್ನು ನೆಟ್‍ನಲ್ಲಿ ಮಗುವೊಂದು ಎಸೆಯುವಾಗ ಉಳಿದೆಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಗಾಂಧೀಜಿ ಎಂದ ತಕ್ಷಣ ಗಾಂಧೀಜಿಗೆ ಸಂಬಂಧಿಸಿದ ಹತ್ತಾರು ಸಂಗತಿಗಳನ್ನು ಒಬ್ಬರಾದ ನಂತರ ಒಬ್ಬರಂತೆ ಪಟಪಟನೆ ಹೇಳುತ್ತಾ ಗಾಂಧಿಯ ಜೀವನ ಕಥನವನ್ನು ಅರಳಿಸುತ್ತಾರೆ. ಸ್ವಾತಂತ್ರ್ಯ ಎಂದತಕ್ಷಣ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಹೆಸರನ್ನು ಉಲಿಯುತ್ತಾರೆ. ಸೊಳ್ಳೆ ಎಂದ ತಕ್ಷಣ ಅದರ ಪರಿಚಯ ಹೇಳುತ್ತಲೆ ಅದರಿಂದ ಹರಡುವ ರೋಗಗಳಾವುವು, ಈ ರೋಗಗಳು ಹರಡದಂತೆ ಮನೆಯಲ್ಲಿ ಏನೇನು ಮುಂಜಾಗ್ರತೆ ವಹಿಸಬೇಕು ಎಂದು ಮಕ್ಕಳು ವಿವರಿಸುತ್ತಾರೆ. ಹೀಗೆ ಒಂದೊಂದು ಸಂಗತಿಯ ಬಗೆಗೂ ಸಾಮೂಹಿಕವಾಗಿ ಒಬ್ಬರಾದನಂತರ ಒಬ್ಬರಂತೆ ಉತ್ತರದ ಸರಪಳಿ ಹೆಣೆಯುವ ಈ ಮಕ್ಕಳು ಇಂಟರ್‍ನ್ಯಾಷನಲ್ ಎಂದು ಕರೆದುಕೊಳ್ಳುವ ಯಾವುದೇ ಖಾಸಗಿ ಕಾನ್ವೆಂಟ್ ಸ್ಕೂಲಿನಲ್ಲಿ ಓದುತ್ತಿಲ್ಲ. ಹತ್ತಾರು ಅವಕಾಶಗಳಿರುವ ಸರಕಾರಿ ಶಾಲೆಯ ಮಕ್ಕಳೂ ಅಲ್ಲ. ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಿಗಿಯಿಂದ ಪಶ್ಚಿಮಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಗಜಾಪುರದ ಅಂಗನವಾಡಿ ಬಿ ಕೇಂದ್ರದ ಮಕ್ಕಳು.

ಹೌದು ಅಂಗನವಾಡಿ ಕಾರ್ಯಕರ್ತೆ ಇಷ್ಟೆಲ್ಲಾ ಪ್ರಯೋಗ ಮಾಡಿದ್ದಾರಾ? ಎಂದು ನೀವು ಈ ಪುಟ್ಟ ಶಾಲೆಯನ್ನು ಪ್ರವೇಶಿಸಿದರೆ, ಹುಬ್ಬೇರಿಸುವಂತೆ ಈ ಅಂಗನವಾಡಿ ಹತ್ತಾರು ಹೊಸ ಹೊಸ ಪ್ರಯೋಗಗಳ ಕಲಿಕಾ ಸಾಮಗ್ರಿಗಳ ಅಕ್ಷಯ ಪಾತ್ರೆಯಂತೆ ಗಮನ ಸೆಳೆಯುತ್ತದೆ. ಮಕ್ಕಳ ಸೃಜನಶೀಲತೆಯನ್ನು ಅವರದೇ ಪರಿಸರದಲ್ಲಿ ಬಳಸಿ ಬಿಸಾಡಿದ, ಮಕ್ಕಳಿಂದಲೇ ಸಂಗ್ರಹಿಸಿದ ವಸ್ತುಗಳನ್ನು ಬಳಸಿಯೇ ತಯಾರಿಸಲಾಗಿದೆ. ಮನೆಗಳಲ್ಲಿ ಲಭ್ಯವಿರುವ ಬೀಜಗಳನ್ನು ಕಲೆ ಹಾಕಿ ಸಂಗ್ರಹ ಮಾಡಲಾಗಿದೆ. ಒಂದೊಂದು ಬೀಜವನ್ನು ತೋರಿಸಿದಾಗಲೂ ಆ ಬೀಜದ ಬೆಳೆ, ಹಣ್ಣು, ಕಾಯಿ, ಬೆಳೆಯುವ ಕಾಲಮಾನ, ಬೆಳೆಯ ಅವಧಿ ಇತ್ಯಾದಿಗಳನ್ನು ಮಕ್ಕಳು ಹೇಳುತ್ತಾರೆ.

ಪ್ರತಿದಿನ ಹನ್ನೊಂದು ಗಂಟೆಯ ಹೊತ್ತಿಗೆ ಒಬ್ಬ ಮಗು ಶಾಲೆಯಿಂದ ಹೊರಗಡೆ ಬಂದು ವಾತಾವರಣವನ್ನು ಅವಲೋಕಿಸಿ, ಮಕ್ಕಳಿಗೆ ಈ ದಿನದ ಹವಾಮಾನ ಹೇಗಿದೆ ಎಂದು ವಿವರಿಸುತ್ತದೆ. ಪ್ರತೀ ಮಕ್ಕಳಿಗೂ ಅವರದೇ ಆದ ಒಂದು ಚೀಲವಿದೆ. ಆ ಮಗು ಒಂದು ವಾರದಲ್ಲಿ ಬರೆಯುವ ಡ್ರಾಯಿಂಗ್, ಬರಹದ ಪುಟಗಳನ್ನು ಆಯಾ ಮಗುವಿನ ಚೀಲದಲ್ಲಿ ಶೇಖರಿಸಲಾಗುತ್ತದೆ. ವಾರಕ್ಕೊಮ್ಮೆ ಪೋಷಕರನ್ನು ಕರೆಸಿ ಆಯಾ ಮಕ್ಕಳ ವಾರದ ಚಟುವಟಿಕೆಯನ್ನು ವಿವರಿಸಲಾಗುತ್ತದೆ. ಕನ್ನಡ ಇಂಗ್ಲಿಷ್ ಅಂಕೆಸಂಖ್ಯೆಯ ಅಕ್ಷರಗಳನ್ನು ಗುರುತಿಸುತ್ತಲೇ ಓದುವ ಪ್ರಯತ್ನ ಮಾಡುವ ಮಕ್ಕಳನ್ನು ನೋಡಿ ಪ್ರತಿ ತಂದೆತಾಯಿ ಅಥವಾ ಪೋಷಕರಿಗೆ ತಮ್ಮ ಮಗು ಏನೇನು ಕಲಿಯುತ್ತಿದೆ ಎನ್ನುವ ಸ್ಪಷ್ಟತೆ ಸಿಕ್ಕು ಖುಷಿಗೊಳ್ಳುತ್ತಾರೆ.

ಹಳ್ಳಿಯಲ್ಲಿ ಬಳಸಿ ಬಿಸಾಡುವ ಅನೇಕ ಚಿಕ್ಕಪುಟ್ಟ ವಸ್ತುಗಳೆಲ್ಲಾ ಕಲಿಕಾ ಸಾಮಗ್ರಿಗಳಾಗಿ ಅಂಗನವಾಡಿ ಸೇರುತ್ತವೆ. ದಿನಬಳಕೆಯ ವಸ್ತುಗಳ ಖಾಲಿ ಸಾಮಾನುಗಳಿಂದ ಆಯಾ ಸಾಮಗ್ರಿಯ ಬಳಕೆಯ ಬಗ್ಗೆ ಕಲಿತ ಮಕ್ಕಳು ಅದನ್ನು ಮನೆಯಲ್ಲಿ ತಂದೆತಾಯಿಯರಿಗೆ ವಿವರಿಸುತ್ತಾರೆ. ಪ್ರತೀ ವಾರ ಒಂದು ವಿಷಯ ಆಯ್ದುಕೊಂಡು ಆ ವಿಷಯದ ಬಗ್ಗೆ ಚಿತ್ರಗಳನ್ನು ತೋರಿಸುತ್ತಾ ಅವುಗಳ ಲಕ್ಷಣಗಳನ್ನು ವಿವರಿಸುತ್ತಾ ಹೋಗುತ್ತಾರೆ. ಒಂದು ಚಿತ್ರವನ್ನು ತೋರಿಸಿದ ತಕ್ಷಣ ಮಕ್ಕಳು ಆ ಚಿತ್ರಕ್ಕೊಂದು ಕತೆ ಕಟ್ಟುತ್ತಾರೆ. ಮೋಡ, ಹವಾಮಾನ, ಹೊಲಗಳಲ್ಲಿ ಬೆಳೆಯುವ ಬೆಳೆಗಳು, ಸುತ್ತಮುತ್ತಣ ಪರಿಸರ ಎಲ್ಲದರ ಬಗ್ಗೆಯೂ ಮಕ್ಕಳು ಮಾತನಾಡುತ್ತಾರೆ. ಖಾಲಿ ರಟ್ಟಿದ ಬಾಕ್ಸ್‍ಗಳನ್ನು ಬಳಸಿ ಮನೆ, ಆಸ್ಪತ್ರೆ, ಶಾಲೆಯ ಮಾದರಿಗಳನ್ನು ತಯಾರಿಸಿ ಸ್ವಚ್ಛ ಹಳ್ಳಿಯೊಂದರ ಚಿತ್ರಣವನ್ನು ಕಣ್ಣಮುಂದೆ ತರುತ್ತಾರೆ. ತೂಗುಹಾಕಿದ ಚೀಲಗಳ ಬಣ್ಣವನ್ನು ಗುರುತಿಸಿ ಆಯಾ ಬಣ್ಣದ ಹತ್ತಾರು ಸಂಗತಿಗಳನ್ನು ಜೋಡಿಸಿ ಹೇಳುತ್ತಾರೆ. ಹೀಗೆ ಮಕ್ಕಳ ಗ್ರಹಿಕೆಯನ್ನು ಸೂಕ್ಷ್ಮಗೊಳಿಸಲಾಗಿದೆ. ಮಕ್ಕಳು ಪ್ರತಿಯೊಂದರ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲಿಗಳಾಗಿದ್ದಾರೆ. ಸಮಗ್ರ ಬಾಲವಿಕಾಸ ಯೋಜನೆಯ ಪೂರ್ವ ಪ್ರಾಥಮಿಕ ಶಿಕ್ಷಣದ ಉದ್ದೇಶ ಇಲ್ಲಿ ಸಾಕಾರಗೊಂಡಿದೆ. ಇದನ್ನು ಅವಿರತ ಶ್ರಮಿಸಿ ರೂಪಿಸಿದವರು ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ.

ಅಂಗನವಾಡಿ ಕಾರ್ಯಕರ್ತೆಯಾಗಿ ಕಳೆದ ಏಳು ವರ್ಷದಿಂದ ಕೆಲಸ ಮಾಡುವ ವಸಂತ ಅವರು ತನಗಿರುವ ಅಂಗವೈಕಲ್ಯವನ್ನು ಮರೆತು ಮಕ್ಕಳ ಜತೆ ಮಕ್ಕಳಂತೆಯೇ ಬೆರೆಯುತ್ತಾರೆ. ನಾಳೆ ಮಕ್ಕಳಿಗೆ ಯಾವ ಪ್ರಯೋಗ ಮಾಡಬೇಕು, ಹೊಸದೇನನ್ನು ಕಲಿಸಬೇಕು ಎನ್ನುವ ಯೋಚನೆಯೇ ಅವರನ್ನು ಕ್ರಿಯಾಶೀಲವಾಗಿಟ್ಟಿದೆ. `ನನಗಿನ್ನೂ ತುಂಬಾ ಕನಸುಗಳಿವೆ ಸರ್, ನಮ್ಮ ಇಲಾಖೆ ಮತ್ತು ಊರಿನ ಗ್ರಾಮಸ್ಥರಿಂದ ಒಳ್ಳೆಯ ಪ್ರೋತ್ಸಾಹವಿದೆ. ಆದರೆ ಈ ತರಹದ ಪ್ರಯೋಗಗಳಿಗೆ ಇಲಾಖೆಯಿಂದ ಹಣ ಕೊಡುವ ನಿಯಮವಿಲ್ಲ. ಹಾಗಾಗಿ ಅಗತ್ಯವಿದ್ದ ಹಣವನ್ನು ನಾವೇ ಕೈಯಿಂದ ಹಾಕಬೇಕು. ಅಥವಾ ಹಣವಿಲ್ಲದೆ ಪುಕ್ಕಟೆಯಾಗಿ ಸಿಗುವ ವಸ್ತುಗಳನ್ನೆ ಬಳಸಿ ಪ್ರಯೋಗಗಳನ್ನು ಮಾಡಬೇಕು’ ಎನ್ನುತ್ತಾರೆ.

ಪತ್ರಕರ್ತರಾದ ಗಜಾಪುರದ ಭೀಮಣ್ಣ `ಇಲ್ಲಿ ಆಟದ ಜೊತೆಗೆ ಮಕ್ಕಳ ಕಲಿಕೆ ವಿಶಿಷ್ಟವಾಗಿದೆ. ಈ ಕೇಂದ್ರ ಇತರೆ ಅಂಗನವಾಡಿಗಳಿಗೆ ಮಾದರಿಯಂತಿದೆ’ ಎನ್ನುತ್ತಾರೆ. `ನಾವು ಬಡವರು ಕಾನ್ವೆಂಟಿಗೆ ಕಳಿಸೋವಷ್ಟು ದುಡ್ಡಿಲ್ಲ ತನ್ನ ಮಗಳು ಕಾನ್ವೆಂಟಿಗೆ ಹೋಗುವ ಮಕ್ಕಳಿಗಿಂತ ಚೆನ್ನಾಗಿ ಓದ್ತಾಳೆ’ ಎಂದು ಅಂಗನವಾಡಿಯಲ್ಲಿರುವ ತನ್ನ ಮಗಳ ಬಗ್ಗೆ ಭಾಗ್ಯಮ್ಮ ಹೆಮ್ಮೆಯ ಮಾತುಗಳನ್ನಾಡುತ್ತಾರೆ. ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ` ಅಂಗನವಾಡಿ ಕಾರ್ಯಕರ್ತೆ ವಸಂತ ಅವರು ಪೂರ್ವ ಪ್ರಾಥಮಿಕ ಮಕ್ಕಳ ಶಿಕ್ಷಣವನ್ನು ಕಲಿಕಾ ಸಾಮಗ್ರಿಗಳನ್ನು ಬಳಸಿ, ಹಲವು ಹೊಸ ಪ್ರಯೋಗಗಳನ್ನು ಮಾಡಿ ಪರಿಣಾಮಕಾರಿಯಾಗಿ ಕಲಿಸುತ್ತಿದ್ದಾರೆ. ಈ ಮಾದರಿಯನ್ನು ತಾಲೂಕಿನ ಇತರೆ ಅಂಗನವಾಡಿಗಳಲ್ಲಿ ಅಳವಡಿಸಿಕೊಳ್ಳಲು ತಿಳಿಸಿದ್ದೇವೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...