Homeಕರ್ನಾಟಕಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

ಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

- Advertisement -
- Advertisement -

ಎಲೆಮರೆ – 13

ಈಚೆಗೆ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಿ ಎಂದು ಸಿ.ಐ.ಟಿ.ಯು ಸಂಘಟನೆಯು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯಿತು. ರಾಜ್ಯವ್ಯಾಪಿ ಗಮನ ಸೆಳೆಯಿತು. ಇದೀಗ ಸರಕಾರದ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿದೆ. ಆದರೆ ಇಲ್ಲೊಬ್ಬ ಅಂಗನವಾಡಿ ಕಾರ್ಯಕರ್ತೆ ಸರಕಾರ ಅಧಿಕೃತವಾಗಿ ಎಲ್.ಕೆ.ಜಿ. ಯು.ಕೆ.ಜಿಯನ್ನು ಅಂಗನವಾಡಿಗಳಲ್ಲಿ ಆರಂಭಿಸುವ ಮುನ್ನವೇ ಕಾನ್ವೆಂಟುಗಳಿಗೂ ಸವಾಲೆಸೆಯುವಂತೆ ಅಂಗನವಾಡಿಯನ್ನು ರೂಪಿಸಿದ್ದಾರೆ. ಈಚೆಗೆ ದೇವದುರ್ಗ ಭಾಗದ 40 ಜನ ಅಂಗನವಾಡಿ ಕಾರ್ಯಕರ್ತೆಯರ ತಂಡ ಈ ಅಂಗನವಾಡಿಯನ್ನು ಭೇಟಿ ಮಾಡಿ ನಾವೂ ಹೀಗೆ ಮಾಡಬಹುದೇ ಎಂದು ಪರಿಶೀಲಿಸಿದ್ದಾರೆ. ಈ ಭಾಗದ ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ಈ ಅಂಗನವಾಡಿಯ ಮಾದರಿಯನ್ನು ಇಡೀ ತಾಲೂಕಿಗೆ ವಿಸ್ತರಿಸುವ ಯೋಚನೆ ಮಾಡಿದ್ದಾರೆ. ಹಾಗಾದರೆ ಇದರ ವಿಶೇಷತೆಯೇನು?

ಜೀರೋದಿಂದ ಮೂರು ನಾಲ್ಕು ವರ್ಷದ ಮಕ್ಕಳು ಚಿಲಿಪಿಲಿಗುಟ್ಟುವ ಈ ಪುಟ್ಟ ಕೋಣೆಯಲ್ಲಿ ಟೀಚರ್ ಕೇಳುವ ಪ್ರತಿ ಪ್ರಶ್ನೆಗಳಿಗೂ ಮಕ್ಕಳು ಸ್ಪರ್ಧೆಗೆ ಬಿದ್ದಂತೆ ಪಟಪಟನೆ ಉತ್ತರಿಸುತ್ತಾರೆ. ಚಕಚಕನೆ ಇಂತಿಷ್ಟು ಪ್ಲಾಸ್ಟಿಕ್ ಕಪ್‍ಗಳನ್ನು ಜೋಡಿಸುತ್ತಾ ಸೂಪರ್ ಮಿನಿಟ್ ರಿಯಾಲಿಟಿ ಶೋನ ಅಣಕು ಮಾಡಿ ಚಪ್ಪಾಳೆ ತಟ್ಟುತ್ತಾರೆ. ಬಾಸ್ಕೆಟ್‍ಬಾಲನ್ನು ನೆಟ್‍ನಲ್ಲಿ ಮಗುವೊಂದು ಎಸೆಯುವಾಗ ಉಳಿದೆಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಗಾಂಧೀಜಿ ಎಂದ ತಕ್ಷಣ ಗಾಂಧೀಜಿಗೆ ಸಂಬಂಧಿಸಿದ ಹತ್ತಾರು ಸಂಗತಿಗಳನ್ನು ಒಬ್ಬರಾದ ನಂತರ ಒಬ್ಬರಂತೆ ಪಟಪಟನೆ ಹೇಳುತ್ತಾ ಗಾಂಧಿಯ ಜೀವನ ಕಥನವನ್ನು ಅರಳಿಸುತ್ತಾರೆ. ಸ್ವಾತಂತ್ರ್ಯ ಎಂದತಕ್ಷಣ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಹೆಸರನ್ನು ಉಲಿಯುತ್ತಾರೆ. ಸೊಳ್ಳೆ ಎಂದ ತಕ್ಷಣ ಅದರ ಪರಿಚಯ ಹೇಳುತ್ತಲೆ ಅದರಿಂದ ಹರಡುವ ರೋಗಗಳಾವುವು, ಈ ರೋಗಗಳು ಹರಡದಂತೆ ಮನೆಯಲ್ಲಿ ಏನೇನು ಮುಂಜಾಗ್ರತೆ ವಹಿಸಬೇಕು ಎಂದು ಮಕ್ಕಳು ವಿವರಿಸುತ್ತಾರೆ. ಹೀಗೆ ಒಂದೊಂದು ಸಂಗತಿಯ ಬಗೆಗೂ ಸಾಮೂಹಿಕವಾಗಿ ಒಬ್ಬರಾದನಂತರ ಒಬ್ಬರಂತೆ ಉತ್ತರದ ಸರಪಳಿ ಹೆಣೆಯುವ ಈ ಮಕ್ಕಳು ಇಂಟರ್‍ನ್ಯಾಷನಲ್ ಎಂದು ಕರೆದುಕೊಳ್ಳುವ ಯಾವುದೇ ಖಾಸಗಿ ಕಾನ್ವೆಂಟ್ ಸ್ಕೂಲಿನಲ್ಲಿ ಓದುತ್ತಿಲ್ಲ. ಹತ್ತಾರು ಅವಕಾಶಗಳಿರುವ ಸರಕಾರಿ ಶಾಲೆಯ ಮಕ್ಕಳೂ ಅಲ್ಲ. ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಿಗಿಯಿಂದ ಪಶ್ಚಿಮಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಗಜಾಪುರದ ಅಂಗನವಾಡಿ ಬಿ ಕೇಂದ್ರದ ಮಕ್ಕಳು.

ಹೌದು ಅಂಗನವಾಡಿ ಕಾರ್ಯಕರ್ತೆ ಇಷ್ಟೆಲ್ಲಾ ಪ್ರಯೋಗ ಮಾಡಿದ್ದಾರಾ? ಎಂದು ನೀವು ಈ ಪುಟ್ಟ ಶಾಲೆಯನ್ನು ಪ್ರವೇಶಿಸಿದರೆ, ಹುಬ್ಬೇರಿಸುವಂತೆ ಈ ಅಂಗನವಾಡಿ ಹತ್ತಾರು ಹೊಸ ಹೊಸ ಪ್ರಯೋಗಗಳ ಕಲಿಕಾ ಸಾಮಗ್ರಿಗಳ ಅಕ್ಷಯ ಪಾತ್ರೆಯಂತೆ ಗಮನ ಸೆಳೆಯುತ್ತದೆ. ಮಕ್ಕಳ ಸೃಜನಶೀಲತೆಯನ್ನು ಅವರದೇ ಪರಿಸರದಲ್ಲಿ ಬಳಸಿ ಬಿಸಾಡಿದ, ಮಕ್ಕಳಿಂದಲೇ ಸಂಗ್ರಹಿಸಿದ ವಸ್ತುಗಳನ್ನು ಬಳಸಿಯೇ ತಯಾರಿಸಲಾಗಿದೆ. ಮನೆಗಳಲ್ಲಿ ಲಭ್ಯವಿರುವ ಬೀಜಗಳನ್ನು ಕಲೆ ಹಾಕಿ ಸಂಗ್ರಹ ಮಾಡಲಾಗಿದೆ. ಒಂದೊಂದು ಬೀಜವನ್ನು ತೋರಿಸಿದಾಗಲೂ ಆ ಬೀಜದ ಬೆಳೆ, ಹಣ್ಣು, ಕಾಯಿ, ಬೆಳೆಯುವ ಕಾಲಮಾನ, ಬೆಳೆಯ ಅವಧಿ ಇತ್ಯಾದಿಗಳನ್ನು ಮಕ್ಕಳು ಹೇಳುತ್ತಾರೆ.

ಪ್ರತಿದಿನ ಹನ್ನೊಂದು ಗಂಟೆಯ ಹೊತ್ತಿಗೆ ಒಬ್ಬ ಮಗು ಶಾಲೆಯಿಂದ ಹೊರಗಡೆ ಬಂದು ವಾತಾವರಣವನ್ನು ಅವಲೋಕಿಸಿ, ಮಕ್ಕಳಿಗೆ ಈ ದಿನದ ಹವಾಮಾನ ಹೇಗಿದೆ ಎಂದು ವಿವರಿಸುತ್ತದೆ. ಪ್ರತೀ ಮಕ್ಕಳಿಗೂ ಅವರದೇ ಆದ ಒಂದು ಚೀಲವಿದೆ. ಆ ಮಗು ಒಂದು ವಾರದಲ್ಲಿ ಬರೆಯುವ ಡ್ರಾಯಿಂಗ್, ಬರಹದ ಪುಟಗಳನ್ನು ಆಯಾ ಮಗುವಿನ ಚೀಲದಲ್ಲಿ ಶೇಖರಿಸಲಾಗುತ್ತದೆ. ವಾರಕ್ಕೊಮ್ಮೆ ಪೋಷಕರನ್ನು ಕರೆಸಿ ಆಯಾ ಮಕ್ಕಳ ವಾರದ ಚಟುವಟಿಕೆಯನ್ನು ವಿವರಿಸಲಾಗುತ್ತದೆ. ಕನ್ನಡ ಇಂಗ್ಲಿಷ್ ಅಂಕೆಸಂಖ್ಯೆಯ ಅಕ್ಷರಗಳನ್ನು ಗುರುತಿಸುತ್ತಲೇ ಓದುವ ಪ್ರಯತ್ನ ಮಾಡುವ ಮಕ್ಕಳನ್ನು ನೋಡಿ ಪ್ರತಿ ತಂದೆತಾಯಿ ಅಥವಾ ಪೋಷಕರಿಗೆ ತಮ್ಮ ಮಗು ಏನೇನು ಕಲಿಯುತ್ತಿದೆ ಎನ್ನುವ ಸ್ಪಷ್ಟತೆ ಸಿಕ್ಕು ಖುಷಿಗೊಳ್ಳುತ್ತಾರೆ.

ಹಳ್ಳಿಯಲ್ಲಿ ಬಳಸಿ ಬಿಸಾಡುವ ಅನೇಕ ಚಿಕ್ಕಪುಟ್ಟ ವಸ್ತುಗಳೆಲ್ಲಾ ಕಲಿಕಾ ಸಾಮಗ್ರಿಗಳಾಗಿ ಅಂಗನವಾಡಿ ಸೇರುತ್ತವೆ. ದಿನಬಳಕೆಯ ವಸ್ತುಗಳ ಖಾಲಿ ಸಾಮಾನುಗಳಿಂದ ಆಯಾ ಸಾಮಗ್ರಿಯ ಬಳಕೆಯ ಬಗ್ಗೆ ಕಲಿತ ಮಕ್ಕಳು ಅದನ್ನು ಮನೆಯಲ್ಲಿ ತಂದೆತಾಯಿಯರಿಗೆ ವಿವರಿಸುತ್ತಾರೆ. ಪ್ರತೀ ವಾರ ಒಂದು ವಿಷಯ ಆಯ್ದುಕೊಂಡು ಆ ವಿಷಯದ ಬಗ್ಗೆ ಚಿತ್ರಗಳನ್ನು ತೋರಿಸುತ್ತಾ ಅವುಗಳ ಲಕ್ಷಣಗಳನ್ನು ವಿವರಿಸುತ್ತಾ ಹೋಗುತ್ತಾರೆ. ಒಂದು ಚಿತ್ರವನ್ನು ತೋರಿಸಿದ ತಕ್ಷಣ ಮಕ್ಕಳು ಆ ಚಿತ್ರಕ್ಕೊಂದು ಕತೆ ಕಟ್ಟುತ್ತಾರೆ. ಮೋಡ, ಹವಾಮಾನ, ಹೊಲಗಳಲ್ಲಿ ಬೆಳೆಯುವ ಬೆಳೆಗಳು, ಸುತ್ತಮುತ್ತಣ ಪರಿಸರ ಎಲ್ಲದರ ಬಗ್ಗೆಯೂ ಮಕ್ಕಳು ಮಾತನಾಡುತ್ತಾರೆ. ಖಾಲಿ ರಟ್ಟಿದ ಬಾಕ್ಸ್‍ಗಳನ್ನು ಬಳಸಿ ಮನೆ, ಆಸ್ಪತ್ರೆ, ಶಾಲೆಯ ಮಾದರಿಗಳನ್ನು ತಯಾರಿಸಿ ಸ್ವಚ್ಛ ಹಳ್ಳಿಯೊಂದರ ಚಿತ್ರಣವನ್ನು ಕಣ್ಣಮುಂದೆ ತರುತ್ತಾರೆ. ತೂಗುಹಾಕಿದ ಚೀಲಗಳ ಬಣ್ಣವನ್ನು ಗುರುತಿಸಿ ಆಯಾ ಬಣ್ಣದ ಹತ್ತಾರು ಸಂಗತಿಗಳನ್ನು ಜೋಡಿಸಿ ಹೇಳುತ್ತಾರೆ. ಹೀಗೆ ಮಕ್ಕಳ ಗ್ರಹಿಕೆಯನ್ನು ಸೂಕ್ಷ್ಮಗೊಳಿಸಲಾಗಿದೆ. ಮಕ್ಕಳು ಪ್ರತಿಯೊಂದರ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲಿಗಳಾಗಿದ್ದಾರೆ. ಸಮಗ್ರ ಬಾಲವಿಕಾಸ ಯೋಜನೆಯ ಪೂರ್ವ ಪ್ರಾಥಮಿಕ ಶಿಕ್ಷಣದ ಉದ್ದೇಶ ಇಲ್ಲಿ ಸಾಕಾರಗೊಂಡಿದೆ. ಇದನ್ನು ಅವಿರತ ಶ್ರಮಿಸಿ ರೂಪಿಸಿದವರು ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ.

ಅಂಗನವಾಡಿ ಕಾರ್ಯಕರ್ತೆಯಾಗಿ ಕಳೆದ ಏಳು ವರ್ಷದಿಂದ ಕೆಲಸ ಮಾಡುವ ವಸಂತ ಅವರು ತನಗಿರುವ ಅಂಗವೈಕಲ್ಯವನ್ನು ಮರೆತು ಮಕ್ಕಳ ಜತೆ ಮಕ್ಕಳಂತೆಯೇ ಬೆರೆಯುತ್ತಾರೆ. ನಾಳೆ ಮಕ್ಕಳಿಗೆ ಯಾವ ಪ್ರಯೋಗ ಮಾಡಬೇಕು, ಹೊಸದೇನನ್ನು ಕಲಿಸಬೇಕು ಎನ್ನುವ ಯೋಚನೆಯೇ ಅವರನ್ನು ಕ್ರಿಯಾಶೀಲವಾಗಿಟ್ಟಿದೆ. `ನನಗಿನ್ನೂ ತುಂಬಾ ಕನಸುಗಳಿವೆ ಸರ್, ನಮ್ಮ ಇಲಾಖೆ ಮತ್ತು ಊರಿನ ಗ್ರಾಮಸ್ಥರಿಂದ ಒಳ್ಳೆಯ ಪ್ರೋತ್ಸಾಹವಿದೆ. ಆದರೆ ಈ ತರಹದ ಪ್ರಯೋಗಗಳಿಗೆ ಇಲಾಖೆಯಿಂದ ಹಣ ಕೊಡುವ ನಿಯಮವಿಲ್ಲ. ಹಾಗಾಗಿ ಅಗತ್ಯವಿದ್ದ ಹಣವನ್ನು ನಾವೇ ಕೈಯಿಂದ ಹಾಕಬೇಕು. ಅಥವಾ ಹಣವಿಲ್ಲದೆ ಪುಕ್ಕಟೆಯಾಗಿ ಸಿಗುವ ವಸ್ತುಗಳನ್ನೆ ಬಳಸಿ ಪ್ರಯೋಗಗಳನ್ನು ಮಾಡಬೇಕು’ ಎನ್ನುತ್ತಾರೆ.

ಪತ್ರಕರ್ತರಾದ ಗಜಾಪುರದ ಭೀಮಣ್ಣ `ಇಲ್ಲಿ ಆಟದ ಜೊತೆಗೆ ಮಕ್ಕಳ ಕಲಿಕೆ ವಿಶಿಷ್ಟವಾಗಿದೆ. ಈ ಕೇಂದ್ರ ಇತರೆ ಅಂಗನವಾಡಿಗಳಿಗೆ ಮಾದರಿಯಂತಿದೆ’ ಎನ್ನುತ್ತಾರೆ. `ನಾವು ಬಡವರು ಕಾನ್ವೆಂಟಿಗೆ ಕಳಿಸೋವಷ್ಟು ದುಡ್ಡಿಲ್ಲ ತನ್ನ ಮಗಳು ಕಾನ್ವೆಂಟಿಗೆ ಹೋಗುವ ಮಕ್ಕಳಿಗಿಂತ ಚೆನ್ನಾಗಿ ಓದ್ತಾಳೆ’ ಎಂದು ಅಂಗನವಾಡಿಯಲ್ಲಿರುವ ತನ್ನ ಮಗಳ ಬಗ್ಗೆ ಭಾಗ್ಯಮ್ಮ ಹೆಮ್ಮೆಯ ಮಾತುಗಳನ್ನಾಡುತ್ತಾರೆ. ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಎ.ಆರ್. ಮಧುಸೂದನ ಅವರು ` ಅಂಗನವಾಡಿ ಕಾರ್ಯಕರ್ತೆ ವಸಂತ ಅವರು ಪೂರ್ವ ಪ್ರಾಥಮಿಕ ಮಕ್ಕಳ ಶಿಕ್ಷಣವನ್ನು ಕಲಿಕಾ ಸಾಮಗ್ರಿಗಳನ್ನು ಬಳಸಿ, ಹಲವು ಹೊಸ ಪ್ರಯೋಗಗಳನ್ನು ಮಾಡಿ ಪರಿಣಾಮಕಾರಿಯಾಗಿ ಕಲಿಸುತ್ತಿದ್ದಾರೆ. ಈ ಮಾದರಿಯನ್ನು ತಾಲೂಕಿನ ಇತರೆ ಅಂಗನವಾಡಿಗಳಲ್ಲಿ ಅಳವಡಿಸಿಕೊಳ್ಳಲು ತಿಳಿಸಿದ್ದೇವೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...