Homeಮುಖಪುಟವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

- Advertisement -
- Advertisement -

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ ವಿಧಿಸಿದೆ.

ಈ ವಿಷಯವನ್ನು ಸರಿಯಾಗಿ ನಿರ್ವಹಿಸದಿದ್ದಕ್ಕಾಗಿ ರೈಲ್ವೆ ಸಚಿವಾಲಯವು ತನ್ನದೇ ಆದ ಕಂಪನಿಯಾದ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಮೇಲೆ 10 ಲಕ್ಷ ರೂ. ದಂಡ ವಿಧಿಸಿದೆ.

ಮಾರ್ಚ್ 15 ರಂದು, ವಂದೇ ಭಾರತ್ ರೈಲಿನಲ್ಲಿದ್ದ ಏಳು ಪ್ರಯಾಣಿಕರ ಗುಂಪಿಗೆ ಊಟದ ಜೊತೆಗೆ ಪ್ರಸಿದ್ಧ ಬ್ರ್ಯಾಂಡ್‌ನ ಪ್ಯಾಕೇಜ್ ಮಾಡಿದ ಮೊಸರನ್ನು ನೀಡಲಾಯಿತು. ಪ್ಯಾಕೆಟ್‌ಗಳಲ್ಲಿ ಒಂದನ್ನು ತೆರೆದಾಗ, ಅವರು ಒಳಗೆ ಜೀವಂತ ಹುಳುಗಳನ್ನು ನೋಡಿದ್ದಾರೆ. ಪ್ರಯಾಣಿಕ ರಿತೇಶ್ ಸಿಂಗ್ ತಕ್ಷಣವೇ ತನ್ನ ಎಕ್ಸ್‌ ಖಾತೆಯಲ್ಲಿ ಸಮಸ್ಯೆ ಕುರಿತು ಧ್ವನಿ ಎತ್ತಿದ್ದಾರೆ. ಐಆರ್‌ಸಿಟಿಸಿ, ರೈಲ್ವೆ ಸಚಿವರು ಮತ್ತು ಇತರರನ್ನು ಟ್ಯಾಗ್ ಮಾಡಿದ್ದಾರೆ.

ಘಟನೆ ಮತ್ತು ಕ್ರಮ ಕೈಗೊಂಡ ವರದಿಯಲ್ಲಿ, ಐಆರ್‌ಸಿಟಿಸಿ ತನ್ನ ಮೊಸರು ಪ್ಯಾಕೆಟ್ ಅನ್ನು ಪಾಟ್ನಾದಿಂದ ತರಿಸಿಕೊಳ್ಳಲಾಗಿದೆ ಎಂದು ಕಂಡುಹಿಡಿದಿದೆ. ಅದರ ಉತ್ಪಾದನಾ ದಿನಾಂಕ ಮಾರ್ಚ್ 9, 2026 ಮತ್ತು ಮುಕ್ತಾಯ ದಿನಾಂಕ ಏಪ್ರಿಲ್ 7, 2026 ಆಗಿದೆ.

ಪ್ರಯಾಣಿಕನ ಬಳಿ ಅಧಿಕಾರಿಗಳು ಕ್ಷಮೆಯಾಚಿಸಿದ್ದು, ಅವರಿಗೆ ಒಣ ಹಣ್ಣುಗಳ ಮಿಶ್ರಣ ಮತ್ತು ಕೆಲವು ಸಿಹಿ ತಿನಿಸುಗಳನ್ನು ನೀಡಿದರು ಎಂದು ವರದಿಯಲ್ಲಿ ತಿಳಿಸಲಾಗಿದೆ.

“ನಾವು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಪರಿಸ್ಥಿತಿಯನ್ನು ವಿವರಿಸಲು ಪ್ರಯತ್ನಿಸಿದ್ದೇವೆ. ಸ್ಥಳದಲ್ಲಿಯೇ ವಿಷಯವನ್ನು ಪರಿಶೀಲಿಸಲು ವಿನಂತಿಸಿದ್ದೇವೆ. ಆದರೂ, ಅವರು ಟ್ವೀಟ್ ಅನ್ನು ಅಳಿಸಲು ನಿರಾಕರಿಸಿದರು. ವೀಡಿಯೊ ವೈರಲ್ ಆಗಬೇಕು ಮತ್ತು ಟ್ರೆಂಡ್ ಆಗಬೇಕು ಎಂಬ ಉದ್ದೇಶವನ್ನು ವ್ಯಕ್ತಪಡಿಸಿದರು” ಎಂದು ವರದಿ ತಿಳಿಸಿದೆ.

ವರದಿಯ ಪ್ರಕಾರ, ಮಾರಾಟಗಾರರಾದ ಕೃಷ್ಣ ಎಂಟರ್‌ಪ್ರೈಸಸ್‌ಗೆ 25,000 ರೂ. ದಂಡ ವಿಧಿಸಲಾಯಿತು. ಆಹಾರ ನಿರ್ವಹಣೆಯಲ್ಲಿ ನಿರ್ಲಕ್ಷ್ಯಕ್ಕಾಗಿ ಎಚ್ಚರಿಕೆ ನೀಡಲಾಯಿತು. ಸರಿಯಾದ ಕೋಲ್ಡ್ ಚೈನ್ ಅನ್ನು ನಿರ್ವಹಿಸಲು, ಹೆಚ್ಚು ಜಾಗರೂಕರಾಗಿರಲು ಮತ್ತು ಆಹಾರ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಸಂಸ್ಥೆಗೆ ಸೂಚಿಸಲಾಯಿತು.

ಅಧಿಕಾರಿಗಳು ಯ ಕ್ರಮದಿಂದ ಅತೃಪ್ತರಾದ ರೈಲ್ವೆ ಸಚಿವಾಲಯವು ಬುಧವಾರ ಕೃಷ್ಣ ಎಂಟರ್‌ಪ್ರೈಸಸ್‌ನ ಒಪ್ಪಂದವನ್ನು ರದ್ದುಗೊಳಿಸುವ ಜೊತೆಗೆ ದಂಡವನ್ನು 25,000 ರೂ.ಗಳಿಂದ 50 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ನಿರ್ದೇಶಿಸಿದೆ. ಸಚಿವಾಲಯವು ಅಧಿಕಾರಿಗಳು ಐಆರ್‌ಸಿಟಿಸಿಗೆ 10 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

“ಲೋಪದ ತೀವ್ರತೆಯನ್ನು ಪರಿಗಣಿಸಿ, ಸೇವೆಗಳಲ್ಲಿನ ಅಂತಹ ಕೊರತೆಗಾಗಿ ಐಆರ್‌ಸಿಟಿಸಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಲು ಸಕ್ಷಮ ಪ್ರಾಧಿಕಾರ ನಿರ್ಧರಿಸಿದೆ. ಇದಲ್ಲದೆ, ಭವಿಷ್ಯದಲ್ಲಿ ಅಂತಹ ಯಾವುದೇ ಘಟನೆಯನ್ನು ತಡೆಗಟ್ಟಲು ಆನ್‌ಬೋರ್ಡ್ ಸೇವೆಗಳ ಕಟ್ಟುನಿಟ್ಟಿನ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಐಆರ್‌ಸಿಟಿಸಿಗೆ ಸೂಚಿಸಲಾಗಿದೆ” ಎಂದು ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

“ಆಹಾರದ ಗುಣಮಟ್ಟ, ಆಹಾರ ಸುರಕ್ಷತೆ ಮತ್ತು ನೈರ್ಮಲ್ಯವು ಅವರ ಪ್ರಮುಖ ಕಾಳಜಿಯಾಗಿದೆ ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ಸಂಬಂಧಪಟ್ಟ ಐಆರ್‌ಸಿಟಿಸಿ ಮೇಲ್ವಿಚಾರಕರಿಗೆ ನಿರ್ದೇಶನ ನೀಡಬೇಕು” ಎಂದು ಅದು ಹೇಳಿದೆ.

ಸಚಿವಾಲಯವು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಈ ವಿಷಯವನ್ನು ಪೋಸ್ಟ್ ಮಾಡಿ, “ರೈಲು ಸಂಖ್ಯೆ 21896 (ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್) ನಲ್ಲಿ ಪ್ರಯಾಣಿಕರೊಬ್ಬರು ಮಾರ್ಚ್ 15, 2026 ರಂದು ಎತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದೆ” ಎಂದು ಹೇಳಿದೆ.

“ಕ್ರಮ ಕೈಗೊಳ್ಳಲಾಗಿದೆ – ಐಆರ್‌ಸಿಟಿಸಿಗೆ 10 ಲಕ್ಷ ರೂ. ದಂಡ ವಿಧಿಸಲಾಗಿದೆ, ಸೇವಾ ಪೂರೈಕೆದಾರರಿಗೆ 50 ಲಕ್ಷ ರೂ. ದಂಡ ವಿಧಿಸಲಾಗಿದೆ. ಒಪ್ಪಂದವನ್ನು ರದ್ದುಗೊಳಿಸಲು ಆದೇಶಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಗುಣಮಟ್ಟ ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...