Homeಮುಖಪುಟಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

ಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

- Advertisement -
- Advertisement -

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ!

ನನಗೂ ಒಬ್ಬ ಹಿರಿಯ ಕವಯತ್ರಿ ಪ್ರಶ್ನೆ ಕೇಳಿದರು. ಮೋದಿ ಪರವೋ? ವಿರೋಧವೋ? ನಾನು ಹೇಳಿದೆ ಅವರ ಪರವೂ ಅಲ್ಲ ವಿರೋಧವೂ ಅಲ್ಲ. ನಾನು ನನ್ನಂಥವರು ಸಂವಿಧಾನದ ಪರ. ಆದರೆ ಮೋದಿಯವರ ಬಗ್ಗೆ ಗೌರವವಿದೆ. ಏಕೆಂದರೆ ಅವರು ಬಿಜೆಪಿ ಪ್ರಧಾನಿಯಲ್ಲ-ದೇಶದ ಪ್ರಧಾನಿ. ಹಾಗಂತ ಅವರು ತರುವ ಕಾಯ್ದೆ ತಿದ್ದುಪಡಿಗಳನ್ನೆಲ್ಲಾ ಒಪ್ಪಿಕೊಳ್ಳಬೇಕಿಲ್ಲ. ರಾಷ್ಟ್ರೀಯತೆಯ ಸೋಗಿನಲ್ಲಿ ಹುಸಿದೇಶಭಕ್ತಿ ತೋರುವ ಬಹುಮತವಿದೆ ಎಂಬ ಅಹಂಕಾರದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬೇರನ್ನೇ ಅಲ್ಲಾಡಿಸಬಹುದೆ. ಪೌರತ್ವ ಕಾಯ್ದೆ ತಿದ್ದುಪಡಿ ಮೂಲಕ ಸಿಎಎ ಮತ್ತು ಎನ್‍ಆರ್‍ಸಿ ತರುವ ತುರ್ತು ಏನಿತು? ಇದು ಸಂವಿಧಾನದ 14, 15ರ ನಿಯಮದ ಉಲ್ಲಂಘನೆಯಲ್ಲವೆ. ಪಾಕಿಸ್ತಾನ, ಬಾಂಗ್ಲಾ, ಆಫ್ಘಾನಿಸ್ಥಾನದಿಂದ ಧರ್ಮದ ಹಿಂಸೆಗೆ ಒಳಗಾಗಿ ಬಂದ ಹಿಂದೂ, ಜೈನ್, ಬೌದ್ಧ, ಸಿಖ್, ಪಾರ್ಸಿ, ಕ್ರೈಸ್ತ ಎಲ್ಲರಿಗೂ ಪೌರತ್ವ ಕೊಡುತ್ತ್ತದೆ, ಮುಸ್ಲಿಮರನ್ನು ಬಿಟ್ಟು. ಇದು ಧರ್ಮಾಧಾರಿತ ತಾರತಮ್ಯ ಹಾಗೂ ಅಸಂವಿಧಾನಿಕ. ದೇಶದ ಸ್ವಾತಂತ್ರ್ಯಕ್ಕಾಗಿ ಹಿಂದೂಗಳ ಜೊತೆ ಮುಸಲ್ಮಾನರೂ ಹೋರಾಟ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ, ಜೈಲು ಸೇರಿದರೂ ಕ್ಷಮಾಪಣೆ ಕೇಳಿ ಆಚೆ ಬಂದವರಿಗೆಲ್ಲಾ ದೇಶದಲ್ಲಿ ಜಾಗವಿದೆ. ಇವರಿಗಿಲ್ಲವೆ? ಈ ದೇಶದ ಮುಸ್ಲಿಮರಿಗೆ ಇದು ಅನ್ವಯಿಸಿಲ್ಲವಂತೆ 1987 ರ ಮೊದಲು ಹುಟ್ಟಿದವರೆಲ್ಲಾ ಭಾರತೀಯರು, ಉಳಿದವರು ದಾಖಲೆ ಕೊಡಬೇಕೆಂಬುದಾದರೂ ಎಷ್ಟು ಸರಿ? ದುಡ್ಡಿರುವ ಮಂದಿ ಎಂತಹ ದಾಖಲೆಗಳನ್ನೂ ಕೊಂಡುಕೊಡಬಲ್ಲರು. ಬದುಕಿರುವವರಿಗೂ ದುಡ್ಡು ಕೊಟ್ಟರೆ ಸಾವಿನ ಪ್ರಮಾಣಪತ್ರ ಸಿಗುವಂತಹ ದುಷ್ಟ ವ್ಯವಸ್ಥೆಯಲ್ಲಿ ಬಡಬಗ್ಗರು, ಅನಕ್ಷರಸ್ಥರು, ಆದಿವಾಸಿಗಳು, ಬುಡಕಟ್ಟು ಜನರ ಪಾಡೇನು? ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುತ್ತಾರೆ. ದೇಶವಾಸಿಗಳಿಗೆ ದಾಖಲೆ ಬೇಕಂತೆ! ಹೊರಗಿನಿಂದ ಬಂದವರಿಗೆಲ್ಲಾ ಪೌರತ್ವ ದಯಪಾಲಿಸಿದರೆ ಅವರಿಗೆಲ್ಲಾ ಊಟ, ವಸತಿ, ಉದ್ಯೋಗ, ಜಮೀನು ಜಹಗೀರು ಕೊಡುವಷ್ಟು ದೇಶ ಶಕ್ತವೆ. ದೇಶದ ಒಳಿತಿಗಾಗಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿರುವವರ ಅಂತರಂಗದಲ್ಲಿ ಒಳಿತು ಕಾಣುತ್ತಿಲ್ಲ. ಒಡೆದು ಆಳುವ ನೀತಿ ಗೋಚರವಾಗುತ್ತಿದೆ. ಪ್ರತಿವರ್ಷ 2 ಕೋಟಿ ಉದ್ಯೋಗವೆಂದರು. ಎಲ್ಲರ ಅಕೌಂಟಿಗೆ 15 ಲಕ್ಷವೆಂದರು. ನೋಟ್‍ಬ್ಯಾನ್ ಮಾಡಿ ಕಪ್ಪುಹಣ ಕೋಟಿ ಕೋಟಿ ತರುತ್ತೇವೆಂದರು. ಆದರೆ ದೇಶದ ಆರ್ಥಿಕ ಪರಿಸ್ಥಿತಿಯೇ ದಿವಾಳಿ ಎದ್ದಿದೆ. ಆರ್ಥಿಕ ಕಾರ್ಯದರ್ಶಿ ಸುಬ್ರಹ್ಮಣ್ಯ ಅವರೇ ವಿಷಾದಿಸಿದ್ದಾಯಿತು. ಆರ್‍ಬಿಐನಿಂದ ಕೋಟಿಗಟ್ಟಲೆ ಹಣ ಪಡೆದಿದ್ದಾಯಿತು. ಜಿಡಿಪಿ ದರ ಕುಸಿಯುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರ ಏರುತ್ತಿದೆ. ರೈತರಿಗೆ ದುಪ್ಪಟ್ಟು ಆದಾಯವೆಂದರು. ರೈತರ ಆತ್ಮಹತ್ಯೆಗಳು ನಡೆದೇ ಇವೆ. ಇದಕ್ಕೆಲ್ಲ ಪರಿಹಾರ ಹುಡುಕುವುದುನ್ನು ಬಿಟ್ಟು “ಎಲ್ಲಾ ಬಿಟ್ಟು ಮಗ ಭಂಗಿ ನೆಟ್ಟ” ಎಂಬಂತೆ ಸಿಎಎ ಎನ್‍ಸಿಆರ್ ತರುವ ತುರ್ತು ಅಗತ್ಯವೇನಿತ್ತು?

ನಡೆಯುತ್ತಿರುವ ಗಲಭೆಗಳಿಗೆ ಕಾಂಗ್ರೆಸಿಗರ ಕುಮ್ಮಕ್ಕಿದೆಯೆಂದರೆ ನಂಬಬಹುದೆ. ಕಾಂಗ್ರೆಸ್ ಎಲ್ಲಾ ಕಡೆ ಸೋತು ಅರ್ಧ ಸತ್ತಿದೆ. ಸಾವಿರಾರು ಯುವಕಯುವತಿಯರನ್ನು ಒಂದೆಡೆ ಸೇರಿಸುವ, ಹೋರಾಟ ರೂಪಿಸುವ ಶಕ್ತಿ ಅವರಿಗೆಲ್ಲಿಂದ ಬಂದೀತು. ಪ್ರಧಾನಿಯ ಹೆಸರಿಡಿದು ಸ್ಲೋಗನ್ ಹಾಕುತ್ತಿದ್ದ ಅದೇ ಯುವಶಕ್ತಿಯೇ ಇಂದು ನ್ಯಾಯಕ್ಕಾಗಿ ಬೀದಿಗಿಳಿದಿದೆ. ಅವರಿಗೆಲ್ಲಾ ಹುಸಿ ದೇಶಭಕ್ತಿ, ರಾಷ್ಟ್ರೀಯತೆ ನೆಪದಲ್ಲಿ ಕವಿದಿದ್ದ ಮಂಜು ಕರಗಿದಂತಿದೆ. ದೇಶದ ವಿಭಜನೆಯ ಕಾರ್ಯ ನೆಹರು ಕಾಲದಲ್ಲೇ ನಡೆದಿತ್ತು ಎಂದರೆ ನಂಬಬೇಕೆ. ಇತಿಹಾಸ ಓದಿದವರಿಗೆ ಗೊತ್ತಿದೆ. ಹಿಂದುತ್ವದ ಆರಾಧಕ ಸಾವರ್ಕರ್ ಮತ್ತು ಮುಸ್ಲಿಂ ಲೀಗಿನ ಜಿನ್ನಾ ಇದರ ರೂವಾರಿಗಳೆಂಬುದು ಗೊತ್ತಿದ್ದೂ ಜಾಣ ಮರವೆ? ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ವಿಶ್ವಾಸ್ ಅನ್ನುವವರು ಉತ್ತರ ಪ್ರದೇಶ, ದೆಹಲಿ ಇತ್ಯಾದಿ ಕಡೆಗಳಲ್ಲಿ ವೃತ್ತ, ಬೀದಿಗಳಿಗೆ ಇಟ್ಟ ಮುಸ್ಲಿಂ ನಾಯಕರ ಹೆಸರನ್ನು ಬದಲಿಸೋದು, ಮುಸ್ಲಿಮರಿಗೆ ಸೀಟು ಕೊಡದಿರೋದು. ಮುಸಲ್ಮಾನರ ಓಟಿಲ್ಲದೇ ಗೆಲ್ಲುತ್ತೇವೆಂದು ಬೀಗುವುದು. ಅದೆಂತಹ ವಿಶ್ವಾಸ! ಸಂವಿಧಾನ ಬದಲಿಸುತ್ತೇವೆಂದು ಹೂಂಕರಿಸೋದು. ಅದನ್ನೇ ದೆಹಲಿಯಂತಹ ಸ್ಥಳದಲ್ಲೇ ಸುಡೋದು. ಗಾಂಧೀಜಿಯನ್ನು ಕೊಂದವನಿಗೆ ಗುಡಿಕಟ್ಟಲು ಹೊರಡೋದು ಎಂತಹ ವಿಕಾಸ? ಪೌರತ್ವ ಕಾಯ್ದೆ ತಿದ್ದುಪಡಿ ಗದ್ದಲದಲ್ಲಿ ಅಗತ್ಯ ದಾಖಲೆಗಳಿಲ್ಲದ ಭಾರತೀಯರೂ ಅಕ್ರಮ ವಲಸಿಗರಾಗಿ ಬಿಡುವ ಸಾಧ್ಯತೆಯಿದೆ. ಎನ್‍ಆರ್‍ಸಿ ಪೂರಕವಾಗಿಯೇ ಎನ್‍ಪಿಆರ್ ತರಲು ಸಿದ್ಧತೆಗಳು ನಡೆದಿವೆ. ಹೀಗಾಗಿಯೇ ಬಿಜೆಪಿಯನ್ನು ಬೆಂಬಲಿಸುವ ಪಾಸ್ವಾನ್, ನಿತೀಶ್‍ಕುಮಾರ್, ಜಗನ್ ಮೋಹನ್‍ರೆಡ್ಡಿ ಅಂಥವರು ಕಾಯ್ದೆ ವಿರೋಧವಾಗಿದ್ದಾರೆ. ಹತ್ತು ರಾಜ್ಯ ಗಳೇಕೆ ವಿರೋಧಿಸಿವೆ. ಕರ್ನಾಟಕ ಒಂದೇ ಹೊತ್ತಿ ಉರಿಯುತ್ತಿಲ್ಲ. ದೆಹಲಿ, ಜಾಮಿಯ, ಗುಜರಾತ್, ಉತ್ತರ ಪ್ರದೇಶ, ಬಿಹಾರ್, ಚೆನ್ನೈ, ಮಧ್ಯ ಪ್ರದೇಶ ಅನೇಕ ರಾಜ್ಯಗಳಲ್ಲಿ ಯುವಕ ಯುವತಿಯರು ಬೀದಿಗಿಳಿದು ದಂಗೆ ಎಂದಿದ್ದಾರೆ. ವಿರೋಧಿಸಿದವರನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆಂದರೆ ಭಾರತವೇನು ಇವರಪ್ಪನ ಪಿತ್ರಾರ್ಜಿತ ಆಸ್ತಿಯೇ?

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ! ರಾಜ್ಯಾಂಗ, ಕಾರ್ಯಾಂಗ, ನ್ಯಾಯಾಂಗ ಬಿಟ್ಟರೆ ವಿರೋಧ ಪಕ್ಷವಾಗಿ ಪ್ರಶ್ನೆ ಮಾಡಬೇಕಾದ ಅನೇಕ ಮಾಧ್ಯಮಗಳು ಆಡಳಿತದ ಪರವಾಗಿ ಪುಂಗಿ ಊದುತ್ತಿವೆ. ಮಾರಿಕೊಂಡಿರಲೂಬಹುದು. ನ್ಯಾಯಾಂಗವನ್ನು ಅನುಮಾನಿಸುವಂತಾಗಿದೆ. ಬಾಬ್ರಿ ಮಸೀದಿ ಕೆಡವಿದ್ದು, ಅಪರಾಧವೆನ್ನುವ ನ್ಯಾಯಾಂಗ ಶಿಕ್ಷೆ ಬಗ್ಗೆ ಚಕಾರವೆತ್ತೋಲ್ಲ. ಅನರ್ಹ ಶಾಸಕರ ಅನರ್ಹತೆ ಒಪ್ಪಿಕೊಂಡರೂ ಶಿಕ್ಷೆಯಿಂದ ಮಾಫಿ! ಸರ್ಕಾರದ ವಿರುದ್ಧ ತೀರ್ಪು ನೀಡದಿರೆ ದೇಶದ್ರೋಹಿಗಳಾಗಿ ಬಿಡುತ್ತೇವೆಂಬ ಅಧೀರತೆ ಇದ್ದೀತೆ! ಇಂದಿನ ಸಂದಿಗ್ಧದಲ್ಲಿ ಯುವಜನತೆ ಜಾಗೃತರಾಗಿರೋದು ಸಂತೋಷವೆನಿಸಿದರೂ ಪ್ರತಿಭಟನೆಗಳು ಶಾಂತಿಯುತವಾಗಿರಲಿ. ಜೀವತೆತ್ತ 20 ಜನರಲ್ಲಿ ಯಾರೊಬ್ಬರೂ ಯಾವ ಪಕ್ಷದ ಲೀಡರ್‍ಗಳಲ್ಲ ಅಮಾಯಕರು. ಇಡೀ ದೇಶ ಗಲಭೆಯ ಗೂಡಾಗೋದು ಶ್ರೇಯಸ್ಸಲ್ಲ. ದ್ವೇಷ ಅಳಿಸಿ, ದೇಶ ಉಳಿಸಬೇಕಿದೆ. ಜಾತಿಕಳೆಯ ಕಿತ್ತು ಪ್ರೀತಿಯ ಬೆಳೆ ತೆಗೆಯಬೇಕಿದೆ, ಹಾಗಾಗಲಿ ಎಂಬುದಷ್ಟೇ ನನ್ನ ಲೇಖನದ ಉದ್ದೇಶ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಾರ್ಮಿಕ ಕಿರುಕುಳ ನೀಡು‌ವ ದೇಶಗಳ ನಡೆ ಎದುರು ಜಗತ್ತಿನ ಮಟ್ಟದಲ್ಲಿ ಹೋರಾಟ ರೂಪಿಸಿ, ಆ ಬಗೆಯ ನಡೆಯನ್ನು ಕೊನೆಗಾಣಿಸಲು ಎಣಗಬೇಕೆ ಹೊರತು, ಕಿರುಕುಳಕ್ಕೆ ಒಳಗಾದವರನ್ನು ಕರೆಸಿಕೊಂಡು ಸಿಟಿಜನ್.ಶಿಪ್ ಕೊಡುವುದು ಈವೊತ್ತಿನ ತಳಮಳಕ್ಕೆ ಪರಿಹಾರವಾಗಲಾರದು. ತಾನು ಹುಟ್ಟಿಬೆಳೆದ ನಾಡಿನ್ನು ಬಿಟ್ಟುಬರುವುದಕ್ಕೆ, ಕಿರುಕುಳ ಕೊಡುವವರಿಗೆ ಇಂಬು ಕೊಡುವಂತಿದೆ ಸಿ.ಎ.ಎ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...