Homeಕರ್ನಾಟಕಉಪಮುಖ್ಯಮಂತ್ರಿಗಳ ಅಗತ್ಯವಿದೆಯೇ? : ರೇಣುಕಾಚಾರ್ಯ ಪುನರುಚ್ಚಾರ!

ಉಪಮುಖ್ಯಮಂತ್ರಿಗಳ ಅಗತ್ಯವಿದೆಯೇ? : ರೇಣುಕಾಚಾರ್ಯ ಪುನರುಚ್ಚಾರ!

- Advertisement -
- Advertisement -

ರಾಜ್ಯದಲ್ಲಿ ಸಮರ್ಥ ಮುಖ್ಯಮಂತ್ರಿ ಇದ್ದಾಗ ಉಪಮುಖ್ಯಮಂತ್ರಿಗಳು ಬೇಕೆ ಎಂಬ ಮಾಹಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಯಾರಿಗೆ ತಲುಪಿಸಬೇಕೋ ಅವರಿಗೆ ತಲುಪಿಸಿಯಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಉಪಮುಖ್ಯಮಂತ್ರಿಗಳ ಹುದ್ದೆ ಬೇಡ ಎಂಬುದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದರು. .

ತುಮಕೂರಿಗೆ ಆಗಮಿಸಿದ್ದ ಅವರು, “ನಾನು ಪಕ್ಷದ ಹೈಕಮಾಂಡ್ ವಿರುದ್ಧ ಮಾತನಾಡಲಾರೆ. ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಕಾರ್ಯಕರ್ತರು ಹೇಳಿದ ಅಭಿಪ್ರಾಯಗಳನ್ನೇ ನಾನು ರಾಜ್ಯಾಧ್ಯಕ್ಷರಿಗೆ ಹೇಳಿದ್ದೇನೆ. ನಾನು ದಾವಣಗೆರೆ ಮತ್ತು ಬೆಂಗಳೂರಿನಲ್ಲಿ 15 ದಿನಗಳಿಂದ ಹೇಳುತ್ತ ಬಂದಿರುವ ಮಾತುಗಳಿಗೆ ಬದ್ದನಾಗಿದ್ದೇನೆ. ಆದರೆ ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಉಪಮುಖ್ಯಮಂತ್ರಿಗಳ ವಿರುದ್ಧ ಸಹಿಸಂಗ್ರಹ ಮಾಡಿಲ್ಲ. ಬೇರೆಯವರು ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಅದು ನನ್ನ ಗಮನಕ್ಕೂ ಬಂದಿಲ್ಲ. ಉಪಮುಖ್ಯಮಂತ್ರಿಗಳ ವಿರುದ್ಧ ಸಹಿ ಸಂಗ್ರಹಕ್ಕೆ ಮುಖ್ಯಮಂತ್ರಿಗಳು ಬೆಂಬಲ ನೀಡಿದ್ದಾರೆಂಬುದು ಸುಳ್ಳು. ಅವರು ನನಗೆ ಏನೂ ಹೇಳಿಯೂ ಇಲ್ಲ. ಬೆಂಬಲಿಸಿಯೂ ಇಲ್ಲ. ಆದರೆ ಹಲವಾರು ಶಾಸಕರ, ಕಾರ್ಯಕರ್ತರ ಅಭಿಪ್ರಾಯಗಳನ್ನು ಹೈಕಮಾಂಡ್ ನಾಯಕರಿಗೆ ತಲುಪಿಸಿಯಾಗಿದೆ ಎಂದರು.

ನಾನು ಹಾದಿಬೀದಿಯಲ್ಲಿ ಮಲಗಿ ಹೋರಾಟ ಮಾಡಿದ್ದೇನೆ. ಹೊನ್ನಾಳಿಯ ಜನ ನನ್ನನ್ನು ಮೂರು ಬಾರಿ ಶಾಸಕರನ್ನಾಗಿ ಮಾಡಿದ್ದಾರೆ. ನನ್ನ ಮೇಲೆ 200 ಕೇಸುಗಳಿವೆ. ಜನರ ಪರವಾಗಿ ಹೋರಾಟ ಮಾಡಿದ್ದರಿಂದಲೇ ನನ್ನ ಮತ್ತೆಮತ್ತೆ ಆಯ್ಕೆ ಮಾಡಿರುವುದು ಎನ್ನುವ ಮೂಲಕ ನಾನೂ ಕೂಡ ಸಚಿವನಾಗಲು ಸಮರ್ಥ ಎಂಬುದನ್ನು ಒತ್ತಿಹೇಳಿದರು.

ಬೆಂಗಳೂರು, ದಾವಣಗೆರೆಯಲ್ಲಿ ಮಾತನಾಡಿದ ಮೇಲೆ ಅವರು ಉಪಮುಖ್ಯಮಂತ್ರಿಗಳು ಕೂಡ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಏಕೆ ಹೇಳಿದರು. ಪಕ್ಷದ ವೇದಿಕೆಯಲ್ಲಿ ಚರ್ಚಿಸಬಹುದಿಲ್ಲವೇ? ಹೈಕಮಾಂಡ್ ಗಮನಕ್ಕೆ ತರಬಹುದಿಲ್ಲವೇ? ನಾನು ಮಾತನಾಡಿದರೆ ಹಾದಿಬೀದಿಯಲ್ಲಿ ಮಾತನಾಡುತ್ತಾರೆ ಎನ್ನುವುದು. ಅವರು ಮಾತನಾಡಿದರೆ ಹಾದಿಬೀದಿಯಲ್ಲವೇ ಎಂದು ಕಿಡಿಕಾರಿದರು.

ಉಪಮುಖ್ಯಮಂತ್ರಿ ಬೇಡವೆಂಬುದು ಬಹುತೇಕ ಶಾಸಕರ ಭಾವನೆಯಾಗಿದೆ ಎಂದು ಪರೋಕ್ಷವಾಗಿ ಒತ್ತಿ ಹೇಳಿದರು. ಯಡಿಯೂರಪ್ಪ ಸಮರ್ಥ ನಾಯಕರೆಂದು ಬಲವಾಗಿ ಸಮರ್ಥಿಸಿಕೊಂಡರು. ಮಾತುಮಾತಿಗೂ ನಾನು ಮೂರು ಬಾರಿ ಆಯ್ಕೆಯಾಗಿದ್ದೇನೆ. ನಾನು ದಿಢೀರ್ ಹುಟ್ಟಿಕೊಂಡ ನಾಯಕನಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ಬೇಗುದಿ ಹೊರಹಾಕಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗಳ ಮುಂದೆ ಯಾವುದನ್ನೂ ಚರ್ಚಿಸಬೇಡಿ ಎಂದು ಹೇಳಿದ್ದಾರೆ. ಆ ಕಾರಣಕ್ಕೋಸ್ಕರ ಸುಮ್ಮನಿದ್ದೇನೆ. ನಾನು ಆರ್‌ಎಸ್ಎಸ್ ಹಿನ್ನೆಲೆಯಿಂದ ಬಂದವನು. ನನಗೂ ರಾಜಕಾರಣ ಏನೆಂಬುದು ತಿಳಿಯುತ್ತದೆ. ಪಕ್ಷದ ಹೈಕಮಾಂಡ್ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...