Homeನಾನು ಗೌರಿಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

- Advertisement -
- Advertisement -

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ ಡಾ.ಎಲ್.ಹನುಮಂತಯ್ಯ ತಿಳಿಸಿದ್ದಾರೆ.

ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಹಮ್ಮಿಕೊಂಡಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರು ಮತ್ತು ಭಕ್ತರ ನಡುವಿನ ಭಾಷೆಯಲ್ಲಿ ಕಂದಕ ಇರಬಾರದು. ಪ್ರಪಂಚದಲ್ಲಿ ಲಭ್ಯವಿರುವ ಎಲ್ಲ ಧರ್ಮಗಳಿಗೂ ಇರಬೇಕಾದಂತ ಸಾಮಾನ್ಯ ಕಾನೂನುನೆಂದರೆ ದೇವರು ಮತ್ತು ಭಕ್ತರ ನಡುವಿನ ಸಂವಾದ ಅವರಿಬ್ಬರಿಗೂ ತಿಳಿದಿರುವ ಭಾಷೆಯಲ್ಲಿ ನಡೆಯಬೇಕು. ಇದು ಸರಳವಾದ ಸತ್ಯ ಎಂದರು.

ನಾವು ವ್ಯಾಟಿಕನ್ ನಗರದಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿಲ್ಲ. ಬೆಂಗಳೂರು ಮತ್ತು ರಾಜ್ಯಾದ್ಯಂತ ಇರುವ ಚರ್ಚ್ಗಳಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿದ್ದೇವೆ. ಇದಕ್ಕೆ ಸುಪ್ರೀಂಕೋರ್ಟ್ ಕೂಡ ವಿರೋಧಿಸಲು ಸಾಧ್ಯವಿಲ್ಲ. ಕನ್ನಡಕ್ಕೆ ಕ್ರೈಸ್ತರ ಕೊಡುಗೆ ದೊಡ್ಡದು. ರೆವರೆಂಡ್ ಕಿಟ್ಟಲ್ ಅವರು ಕನ್ನಡಕ್ಕೆ ದೊಡ್ಡ ನಿಘಂಟನ್ನು ಕೊಟ್ಟವರು ಎಂದು ಹನುಮಂತಯ್ಯ ಸ್ಮರಿಸಿದರು.

ಕ್ರೈಸ್ತರು ತಮ್ಮ ಮಿಷನರಿಗಳ ಮೂಲಕ ಅಂಚಿನಲ್ಲಿರುವ ಜನರಿಗೆ ಶಿಕ್ಷಣ ಕೊಡಿಸುವ ಕೆಲಸ ಮಾಡಿದ್ದಾರೆ ಮತ್ತು ಸ್ಥಳೀಯ ಭಾಷೆಯಲ್ಲಿಯೇ ಶಿಕ್ಷಣ ಕೊಡಬೇಕೆನ್ನುವುದನ್ನು ಹೇಳಿಕೊಟ್ಟಿದ್ದಾರೆ. ಇದು ಯಾಕೆ ಈಗಿನ ಧರ್ಮದ ಅತ್ಯುನ್ನತ ಸ್ಥಾನದಲ್ಲಿರುವ ಧರ್ಮಾಧ್ಯಕ್ಷರಿಗೆ ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ. ಇದರಿಂದ ನಿಮಗಾಗುವ ಸಮಸ್ಯೆ ಏನು? ಕನ್ನಡ ಭಾಷೆಯಲ್ಲಿ ತೊಡಕುಗಳಿದ್ದರೆ ನಿವಾರಿಸುವ ಕೆಲಸ ಮಾಡೋಣ. ಅದಕ್ಕೆ ಸಾಹಿತ್ಯ ಪರಿಷತ್ತು ಒಳಗೊಂಡಂತೆ ಅನೇಕ ಸಂಸ್ಥೆಗಳು, ಸರಕಾರಿ ಇಲಾಖೆಗಳು ತಯಾರಾಗಿವೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಅನ್ಯ ಭಾಷಿಗರು ಕನ್ನಡ ಜಾಗವನ್ನು ಆಕ್ರಮಿಸಿಕೊಳ್ಳಲು ಪ್ರಯತ್ತಿಸುತ್ತಿದ್ದಾರೆ. ಹಿಂದಿ ವಲಸಿಗರು ಅತಿಹೆಚ್ಚು ಕೆಲಸಕ್ಕಾಗಿ, ಅನ್ನಕ್ಕಾಗಿ ನಗರಕ್ಕೆ ಬರುತ್ತಿದ್ದಾರೆ. ಇಲ್ಲಿಗೆ ಬಂದಿರುವ ಹಲವರು ಕನ್ನಡವನ್ನು ಕಲಿತು ಮಾತನಾಡುವವರು ಇದ್ದಾರೆ. ಆದರೆ ಇನ್ನು ಕೆಲವರು ಕನ್ನಡವನ್ನು ಕಲಿಯದೇ ಹಿಂದಿಯಲ್ಲಿಯೇ ವ್ಯವಹರಿಸುತ್ತಿದ್ದಾರೆ. ಹಿಂದಿ ಹೇರಿಕೆಯನ್ನು ಪ್ರಭುತ್ವವು ಮಾಡುತ್ತಿದೆ, ಬೇರೆ ರಾಜ್ಯಗಳು ಮಾಡುತ್ತಿವೆ. ಈ ಹಿಂದಿ ಏರಿಕೆಯನ್ನು ತೀವ್ರವಾಗಿ ವಿರೋಧಿಸಬೇಕು ಎಂದು ಹನುಮಂತಯ್ಯ ಕರೆ ನೀಡಿದರು.

ಸಂಘದ ಅಧ್ಯಕ್ಷ ಎ.ಐಸಾಕ್ ಮಾತನಾಡಿ, ದ್ವಿತೀಯ ವಾಟಿಕನ್ ಕೌನ್ಸಿಲ್ ನೀಡಿದ ಮಾರ್ಗದರ್ಶನದ ಪ್ರಕಾರ ಕರ್ನಾಟಕ ಚರ್ಚ್ಗಳಲ್ಲಿ ಕನ್ನಡವನ್ನು ಸಾಮಾನ್ಯ ವರ್ಣಾಕ್ಯುಲರ್ ಪ್ರಾಂತೀಯ ಭಾಷೆಯಾಗಿ ಪರಿಗಣಿಸಿ, ನಿಯಮಿತವಾಗಿ ಕನ್ನಡ ಪೂಜೆಗಳನನ್ನು ನಡೆಸಬೇಕು. ಪ್ರಾದೇಶಿಕ ಗುರುಮಠ ಸ್ಥಾಪನೆ, ಸಂತ ಪೇತ್ರರ ಗುರುಮಂದಿರದ ಸಂಪೂರ್ಣ ಆಡಳಿತ ಕರ್ನಾಟಕ ಧರ್ಮಾಧ್ಯಕ್ಷರುಗಳಿಗೇ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಡಾ.ರಾಜ್ ಕುಮಾರ್ ಆಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಸಾಹಿತಿಗಳಾದ ಡಾ.ಮನು ಬಳಿಗಾರ್, ಡಾ.ರೀಟಾ, ಕನ್ನಡಪರ ಹೋರಾಟಗಾರರಾದ ರಾ.ನಂ.ಚಂದ್ರಶೇಖರ್, ಡಾ.ಆರ್.ಎ.ಪ್ರಸಾಧ್, ವ.ಚ.ಚನ್ನೇಗೌಡ, ಪದ್ಮಿನಿ ನಾಗರಾಜ್, ಸಂಘದ ಪದಾಧಿಕಾರಿಗಳಾದ ಅಂತೋಣಿ ರಾಜ್, ಜಾನ್ ಬ್ರಿಟ್ಟೋ, ಬರ್ತಲೋಮಿಯೋ, ಜಾರ್ಜ್ ಕುಮಾರ್, ದೇವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

#Church #Karnataka #Kannada #ChurchFather #KarnatakaNews #LocalNews #BreakingNews

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...