Homeಅಂತರಾಷ್ಟ್ರೀಯಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಈ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 28ರಿಂದ ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಆರಂಭಿಸಿದ ಯುದ್ಧವನ್ನು ವಿರೋಧಿಸಿ ಟೆಲ್ ಅವಿವ್ ಮತ್ತು ಇತರ ಸ್ಥಳಗಳಲ್ಲಿ ಸಾಪ್ತಾಹಿಕ ಪ್ರತಿಭಟನೆಗಳು ನಡೆಯುತ್ತಿವೆ. ಆರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈಗ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಶನಿವಾರ (ಮಾ.28) ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ವೇಳೆ ಪೊಲೀಸರು 21 ಜನರನ್ನು ಬಂಧಿಸಿದ್ದಾರೆ.

ಕಳೆದ ವರ್ಷ ಗಾಝಾ ಯುದ್ಧವನ್ನು ವಿರೋಧಿಸಿ ಹತ್ತಾರು ಸಾವಿರ ಜನರು ಬೀದಿಗಿಳಿದಿದ್ದ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸಂಖ್ಯೆ ಕಡಿಮೆಯಿದ್ದರೂ, ಕ್ರಮೇಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳಿವೆ.

ಶನಿವಾರದ ಪ್ರತಿಭಟನಾ ರ‍್ಯಾಲಿಗಳಲ್ಲಿ ಹಲವಾರು ಮಾಜಿ ಸಂಸದರು ಮತ್ತು ಪ್ರಮುಖ ಎಡಪಂಥೀಯ ಸಂಘಟನೆಗಳು ಭಾಗವಹಿಸಿದ್ದವು. ಇದರಲ್ಲಿ ಸ್ಟ್ಯಾಂಡಿಂಗ್ ಟುಗೆದರ್, ಪೀಸ್ ನೌ ಮತ್ತು ವುಮೆನ್ ವೇಜ್ ಪೀಸ್ ಸಂಘಟನೆಗಳು ಇದ್ದವು.

ಈ ಸಂಘಟನೆಗಳು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೀತಿಗಳನ್ನು ವಿರೋಧಿಸುತ್ತಿದ್ದು, ಪ್ರಜಾಪ್ರಭುತ್ವಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ‘ಶಾಶ್ವತ ಯುದ್ಧ’ ನಿಲ್ಲಿಸುವಂತೆ ಒತ್ತಾಯಿಸುತ್ತಿವೆ.

‘ಸ್ಟ್ಯಾಂಡಿಂಗ್ ಟುಗೆದರ್’ ಒಂದು ಯಹೂದಿ-ಅರಬ್ ಹೋರಾಟಗಾರರ ಗುಂಪಾಗಿದ್ದು, ‘ಪೀಸ್ ನೌ’ ಮತ್ತು ‘ವುಮೆನ್ ವೇಜ್ ಪೀಸ್’ ದೀರ್ಘಕಾಲದಿಂದ ಶಾಂತಿಗಾಗಿ ಶ್ರಮಿಸುತ್ತಿರುವ ಪ್ರಮುಖ ಸಂಘಟನೆಗಳಾಗಿವೆ.

ಇಸ್ರೇಲ್‌ನಲ್ಲಿ ಪ್ರಸ್ತುತ ಯುದ್ಧಕಾಲದ ಭದ್ರತಾ ಮಾರ್ಗಸೂಚಿಗಳ ಅನ್ವಯ 50ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ, ಆದ್ದರಿಂದ ಈ ಪ್ರತಿಭಟನೆಗಳನ್ನು ಪೊಲೀಸರು ‘ಅನಧಿಕೃತ’ ಎಂದು ಪರಿಗಣಿಸಿ ಚದುರಿಸುತ್ತಿದ್ದಾರೆ.

ಟೆಲ್ ಅವಿವ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸುತ್ತಿರುವ ದೃಶ್ಯಗಳು ಎಎಫ್‌ಪಿ ವಿಡಿಯೋ ತುಣುಕುಗಳಲ್ಲಿ ಕಂಡುಬಂದಿವೆ. ಇಂತಹದೇ ದೃಶ್ಯಗಳನ್ನು ಉತ್ತರ ಭಾಗದ ನಗರವಾದ ಹೈಫಾದಲ್ಲಿಯೂ ಹೋರಾಟಗಾರರು ಚಿತ್ರೀಕರಿಸಿದ್ದಾರೆ.

ಪ್ರತಿಭಟನೆಗಳಿಗೆ ಅನುಮತಿ ನೀಡಿರಲಿಲ್ಲ ಎಂದು ಸಂಘಟನಾ ಗುಂಪುಗಳಲ್ಲೊಂದರ ವಕ್ತಾರರು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟೆಲ್ ಅವಿವ್‌ನಲ್ಲಿ ಭದ್ರತಾ ಪಡೆಗಳು ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದ್ದಾರೆ. ಈ ವೇಳೆ ಹಲವರು ನೆಲಕ್ಕೆ ಬಿದ್ದಿದ್ದಾರೆ ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರನ ಕತ್ತನ್ನು ಬಲವಾಗಿ ಹಿಸುಕಿ ಹಿಡಿದಿಡಲಾಗಿತ್ತು ಎಂದು ಎಎಫ್‌ಪಿ ಪತ್ರಕರ್ತರು ವರದಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ನಿಯಮಗಳ ಅಡಿಯಲ್ಲಿ ಪ್ರತಿಭಟನಾ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ‘ಹೋಮ್ ಫ್ರಂಟ್ ಕಮಾಂಡ್’ ಪ್ರತಿನಿಧಿಯು ಸ್ಪಷ್ಟಪಡಿಸಿದ ನಂತರ, ‘ಅನಧಿಕೃತ ಪ್ರತಿಭಟನೆಗಳನ್ನು ಚದುರಿಸಲಾಗಿದೆ ಎಂದು ಇಸ್ರೇಲ್ ಪೊಲೀಸರು ತಿಳಿಸಿದ್ದಾರೆ.

ಟೆಲ್‌ ಅವಿವ್‌ನಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಫಾದಲ್ಲಿ ಮತ್ತೂ ಐದು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಅಲ್ಲಿ ‘ಪ್ರತಿಭಟನಾಕಾರರು ರಸ್ತೆ ತಡೆ ನಡೆಸತೊಡಗಿದರು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಲಿಲ್ಲ’ ಎಂದು ಹೇಳಿದ್ದಾರೆ.

“ಪ್ರತಿಭಟನಾಕಾರರನ್ನು ಬಂಧಿಸಲು ನಡೆಸಲು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿಭಟನೆಗಳು ವ್ಯಾಪಕವಾಗಿ ಹರಡುತ್ತಿರುವುದನ್ನು ಕಂಡು ಸರ್ಕಾರ ಹೆದರುತ್ತಿದೆ” ಎಂದು ‘ಸ್ಟ್ಯಾಂಡಿಂಗ್ ಟುಗೆದರ್’ ಸಂಘಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾವು ಯುದ್ಧದ ನಾಲ್ಕನೇ ವಾರದಲ್ಲಿದ್ದೇವೆ, ಆದರೆ ಈ ಯುದ್ಧದ ನಿಜವಾದ ಗುರಿ ಏನೆಂದು ಯಾರಿಗೂ ತಿಳಿದಿಲ್ಲ” ಎಂದು ಟೆಲ್ ಅವಿವ್‌ನ 52 ವರ್ಷದ ಪ್ರವಾಸ ಮಾರ್ಗದರ್ಶಿ ಯೋರಾಮ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ಇದರಿಂದ (ಯುದ್ದದಿಂದ) ನಾವು ಹೇಗೆ ಹೊರಬರಲಿದ್ದೇವೆ ಎಂದು ಯಾರೂ ಯೋಚನೆ ಮಾಡುತ್ತಿಲ್ಲ. ಇದು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ” ಎಂದು 76 ವರ್ಷದ ಜೋನ್ ಲೆವಿನ್ ಹೇಳಿದ್ದಾರೆ. ಅಲ್ಲದೆ, ಅವರ ಪ್ರಕಾರ ಈ ಯುದ್ಧವು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ರಾಜಕೀಯ ತಂತ್ರದ’ ಭಾಗವಾಗಿದೆ ಎಂದು ವರದಿಗಳು ವಿವರಿಸಿವೆ.

ಇಸ್ರೇಲ್‌ನಲ್ಲಿ ಇರಾನ್ ವಿರುದ್ಧದ ಯುದ್ಧಕ್ಕೆ ಸಾರ್ವಜನಿಕ ಬೆಂಬಲ ಇನ್ನೂ ಹೆಚ್ಚಾಗಿಯೇ ಇದೆ. ಇಸ್ರೇಲ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್ ಶುಕ್ರವಾರ (ಮಾ. 27) ಪ್ರಕಟಿಸಿದ ಸಮೀಕ್ಷೆಯ ಪ್ರಕಾರ, ಶೇ. 78ರಷ್ಟು ಯಹೂದಿ ಇಸ್ರೇಲಿಗಳು ಯುದ್ಧವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಅರಬ್ ಇಸ್ರೇಲಿ ಅಲ್ಪಸಂಖ್ಯಾತರಲ್ಲಿ ಈ ಬೆಂಬಲ ಕೇವಲ ಶೇ. 19ರಷ್ಟು ಮಾತ್ರ ಇದೆ.

ಆದಾಗ್ಯೂ, ಯುದ್ಧವನ್ನು ವಿರೋಧಿಸುವವರ ಪಾಲು ಮಾರ್ಚ್ ಆರಂಭದಲ್ಲಿದ್ದ ಶೇ. 4 ರಿಂದ ಈಗ ಶೇ. 11.5ಕ್ಕೆ ಏರಿದೆ ಎಂದು ಸಂಸ್ಥೆಯ ಸಮೀಕ್ಷೆ ಪತ್ತೆಹಚ್ಚಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...