Homeಮುಖಪುಟಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.

ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ ಜಿಲ್ಲೆಯ ತಿರುಚ್ಚಿ ಪೂರ್ವ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ವಿಜಯ್ ತಿಳಿಸಿದ್ದಾರೆ.

ಭಾನುವಾರ (ಮಾ.29) ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಪ್ರಕಟಿಸಿದ ವಿಜಯ್, “ಚೊಚ್ಚಲ ಚುನಾವಣೆಯಲ್ಲಿ ನಮಗೊಂದು ಅವಕಾಶ ನೀಡಿ” ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

“ವಿಸಿಲ್‌ಗೆ ಮತ ಚಲಾಯಿಸಿ, ಇದು ವಿಸಿಲ್ ಕ್ರಾಂತಿಯ ಚುನಾವಣೆ” ಎಂದು ವಿಜಯ್ ತಮ್ಮ ಪಕ್ಷದ ಚುನಾವಣಾ ಚಿಹ್ನೆಯನ್ನು ಪ್ರದರ್ಶಿಸುತ್ತಾ ಹೇಳಿದ್ದಾರೆ. “ಮತದಾರರು ನನ್ನ ಮತ್ತು ಇತರ ಟಿವಿಕೆ ಅಭ್ಯರ್ಥಿಗಳ ನಡುವೆ ವ್ಯತ್ಯಾಸವನ್ನು ತೋರಿಸಬಾರದು, ನಾವೆಲ್ಲರೂ ಒಂದೇ” ಎಂದಿದ್ದಾರೆ.

“ಇದು ಕೇವಲ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಕಾರ್ಯಕ್ರಮವಲ್ಲ, ಬದಲಿಗೆ ಜನರ ರಕ್ಷಕರ ಹೆಸರುಗಳನ್ನು ಘೋಷಿಸುವ ಸಭೆಯಾಗಿದೆ. ನಮ್ಮ ಅಭ್ಯರ್ಥಿಗಳು ಸಾಮಾನ್ಯ ಹಿನ್ನೆಲೆಯಿಂದ ಬಂದವರಾಗಿದ್ದಾರೆಯೇ ಹೊರತು, ಯಾವುದೇ ಪ್ರಭಾವಿ ವ್ಯಕ್ತಿಗಳಲ್ಲ. ನಮ್ಮ ಶಾಸಕರು ಲೂಟಿ ಹೊಡೆಯುವ, ಅಕ್ರಮ ಗಣಿಗಾರಿಕೆ ನಡೆಸುವ ಅಥವಾ ಪ್ರಶ್ನಿಸುವ ಪತ್ರಕರ್ತರ ಮೇಲೆ ಹಲ್ಲೆ ಮಾಡುವಂತಹ ಅನುಭವ ಹೊಂದಿರಬಾರದು. ಡಿಎಂಕೆ ಅಭ್ಯರ್ಥಿಯೊಬ್ಬರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ, ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಅವರು ಯಾರೆಂದು ನೀವೇ ಯೋಚಿಸಿ” ಎಂದು ಹೇಳಿದ್ದಾರೆ.

ಟಿವಿಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ತಾವು ಶ್ರಮವಹಿಸಿರುವುದಾಗಿ ತಿಳಿಸಿದ ವಿಜಯ್, “ಈ ಚುನಾವಣೆಯು ನಮ್ಮ ಜನರ ಮೈತ್ರಿಕೂಟ ಮತ್ತು ಎಂ.ಕೆ ಸ್ಟಾಲಿನ್ ಸರ್ ಅವರ ಮೈತ್ರಿಕೂಟದ ನಡುವಿನ ನೇರ ಹಣಾಹಣಿಯಾಗಿದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಗೆದ್ದರೆ ತಮಿಳುನಾಡನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ ಮಾಡುವುದಾಗಿ ವಿಜಯ್ ಭರವಸೆ ನೀಡಿದ್ದಾರೆ. ಅಲ್ಲದೆ, 29 ವರ್ಷದ ನಂತರವೂ ಉದ್ಯೋಗ ಸಿಗದವರಿಗೆ ಮಾಸಿಕ ಆರ್ಥಿಕ ನೆರವು ನೀಡುವುದಾಗಿ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸಲು ಹೊಸ ಕಾನೂನು ತರುವುದಾಗಿ ಅವರು ಘೋಷಿಸಿದ್ದಾರೆ.

ವಿಜಯ್ ಹೊರತು ಟಿವಿಕೆಯಿಂದ ಸ್ಪರ್ಧಿಸುತ್ತಿರುವ ಇತರ ಅಭ್ಯರ್ಥಿಗಳನ್ನು ನೋಡುವುದಾದರೆ..ತಮಿಳುನಾಡು ಚುನಾವಣೆಯ ಹೈ-ವೋಲ್ಟೇಜ್ ಕ್ಷೇತ್ರ ಕೊಳತ್ತೂರಿನಲ್ಲಿ ಡಿಎಂಕೆ ನಾಯಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ವಿರುದ್ಧ ಟಿವಿಕೆಯ ವಿ.ಎಸ್. ಬಾಬು ಸ್ಪರ್ಧೆಗಿಳಿದಿದ್ದಾರೆ.

ಚೇಪಾಕ್-ತಿರುವಲ್ಲಿಕೇಣಿ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಕಾಂಗ್ರೆಸ್ ತೊರೆದು ಟಿವಿಕೆ ಸೇರಿರುವ ಸೆಲ್ವಂ ಅವರನ್ನು ವಿಜಯ್ ಕಣಕ್ಕಿಳಿಸಿದ್ದಾರೆ.

ವಿಲ್ಲಿವಾಕ್ಕಂನಲ್ಲಿ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆದವ್ ಅರ್ಜುನಾ ಸ್ಪರ್ಧಿಸುತ್ತಿದ್ದಾರೆ. ಗೋಪಿಚೆಟ್ಟಿಪಾಳ್ಯಂನಲ್ಲಿ ಟಿವಿಕೆ ಪರವಾಗಿ ಸೆಂಗೊಟ್ಟಯ್ಯನ್ ಅವರು ಸ್ಪರ್ಧೆಯಲ್ಲಿದ್ದಾರೆ.

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಐದು ಕೋನಗಳ ಸ್ಪರ್ಧೆಯನ್ನು ಎದುರಿಸುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿಯ ಎನ್‌ಡಿಎ ಬಣವು ಮತ್ತೆ ಅಧಿಕಾರಕ್ಕೆ ಬರಲು ಎದುರು ನೋಡುತ್ತಿದೆ. ವಿಜಯ್ ಅವರ ಟಿವಿಕೆ ದೊಡ್ಡ ಚೊಚ್ಚಲ ಪ್ರವೇಶಕ್ಕೆ ಸಜ್ಜಾಗಿದೆ. ಎಸ್. ರಾಮದಾಸ್ ನೇತೃತ್ವದ ಪಿಎಂಕೆ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸಹಾಯಕಿ ಶಶಿಕಲಾ ಸ್ಥಾಪಿಸಿದ ಪಕ್ಷದ ಮೈತ್ರಿ ನಾಲ್ಕನೇ ರಂಗವನ್ನು ತೆರೆದಿದೆ. ಸೀಮನ್ ನೇತೃತ್ವದ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ವಿಜಯ್ ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಎರಡೂ ಸ್ಥಾನಗಳು ಪ್ರಸ್ತುತ ಡಿಎಂಕೆ ಪ್ರತಿನಿಧಿಸುತ್ತಿವೆ. ಆರ್‌ಡಿ ಶೇಖರ್ ಪೆರಂಬೂರು ಶಾಸಕರಾಗಿದ್ದು, ಇನಿಗೋ ಎಸ್ ಇರುದಯರಾಜ್ ತಿರುಚ್ಚಿ ಪೂರ್ವದ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...