Homeಮುಖಪುಟಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.

ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ ಜಿಲ್ಲೆಯ ತಿರುಚ್ಚಿ ಪೂರ್ವ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ವಿಜಯ್ ತಿಳಿಸಿದ್ದಾರೆ.

ಭಾನುವಾರ (ಮಾ.29) ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಪ್ರಕಟಿಸಿದ ವಿಜಯ್, “ಚೊಚ್ಚಲ ಚುನಾವಣೆಯಲ್ಲಿ ನಮಗೊಂದು ಅವಕಾಶ ನೀಡಿ” ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

“ವಿಸಿಲ್‌ಗೆ ಮತ ಚಲಾಯಿಸಿ, ಇದು ವಿಸಿಲ್ ಕ್ರಾಂತಿಯ ಚುನಾವಣೆ” ಎಂದು ವಿಜಯ್ ತಮ್ಮ ಪಕ್ಷದ ಚುನಾವಣಾ ಚಿಹ್ನೆಯನ್ನು ಪ್ರದರ್ಶಿಸುತ್ತಾ ಹೇಳಿದ್ದಾರೆ. “ಮತದಾರರು ನನ್ನ ಮತ್ತು ಇತರ ಟಿವಿಕೆ ಅಭ್ಯರ್ಥಿಗಳ ನಡುವೆ ವ್ಯತ್ಯಾಸವನ್ನು ತೋರಿಸಬಾರದು, ನಾವೆಲ್ಲರೂ ಒಂದೇ” ಎಂದಿದ್ದಾರೆ.

“ಇದು ಕೇವಲ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಕಾರ್ಯಕ್ರಮವಲ್ಲ, ಬದಲಿಗೆ ಜನರ ರಕ್ಷಕರ ಹೆಸರುಗಳನ್ನು ಘೋಷಿಸುವ ಸಭೆಯಾಗಿದೆ. ನಮ್ಮ ಅಭ್ಯರ್ಥಿಗಳು ಸಾಮಾನ್ಯ ಹಿನ್ನೆಲೆಯಿಂದ ಬಂದವರಾಗಿದ್ದಾರೆಯೇ ಹೊರತು, ಯಾವುದೇ ಪ್ರಭಾವಿ ವ್ಯಕ್ತಿಗಳಲ್ಲ. ನಮ್ಮ ಶಾಸಕರು ಲೂಟಿ ಹೊಡೆಯುವ, ಅಕ್ರಮ ಗಣಿಗಾರಿಕೆ ನಡೆಸುವ ಅಥವಾ ಪ್ರಶ್ನಿಸುವ ಪತ್ರಕರ್ತರ ಮೇಲೆ ಹಲ್ಲೆ ಮಾಡುವಂತಹ ಅನುಭವ ಹೊಂದಿರಬಾರದು. ಡಿಎಂಕೆ ಅಭ್ಯರ್ಥಿಯೊಬ್ಬರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ, ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಅವರು ಯಾರೆಂದು ನೀವೇ ಯೋಚಿಸಿ” ಎಂದು ಹೇಳಿದ್ದಾರೆ.

ಟಿವಿಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ತಾವು ಶ್ರಮವಹಿಸಿರುವುದಾಗಿ ತಿಳಿಸಿದ ವಿಜಯ್, “ಈ ಚುನಾವಣೆಯು ನಮ್ಮ ಜನರ ಮೈತ್ರಿಕೂಟ ಮತ್ತು ಎಂ.ಕೆ ಸ್ಟಾಲಿನ್ ಸರ್ ಅವರ ಮೈತ್ರಿಕೂಟದ ನಡುವಿನ ನೇರ ಹಣಾಹಣಿಯಾಗಿದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಗೆದ್ದರೆ ತಮಿಳುನಾಡನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ ಮಾಡುವುದಾಗಿ ವಿಜಯ್ ಭರವಸೆ ನೀಡಿದ್ದಾರೆ. ಅಲ್ಲದೆ, 29 ವರ್ಷದ ನಂತರವೂ ಉದ್ಯೋಗ ಸಿಗದವರಿಗೆ ಮಾಸಿಕ ಆರ್ಥಿಕ ನೆರವು ನೀಡುವುದಾಗಿ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸಲು ಹೊಸ ಕಾನೂನು ತರುವುದಾಗಿ ಅವರು ಘೋಷಿಸಿದ್ದಾರೆ.

ವಿಜಯ್ ಹೊರತು ಟಿವಿಕೆಯಿಂದ ಸ್ಪರ್ಧಿಸುತ್ತಿರುವ ಇತರ ಅಭ್ಯರ್ಥಿಗಳನ್ನು ನೋಡುವುದಾದರೆ..ತಮಿಳುನಾಡು ಚುನಾವಣೆಯ ಹೈ-ವೋಲ್ಟೇಜ್ ಕ್ಷೇತ್ರ ಕೊಳತ್ತೂರಿನಲ್ಲಿ ಡಿಎಂಕೆ ನಾಯಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ವಿರುದ್ಧ ಟಿವಿಕೆಯ ವಿ.ಎಸ್. ಬಾಬು ಸ್ಪರ್ಧೆಗಿಳಿದಿದ್ದಾರೆ.

ಚೇಪಾಕ್-ತಿರುವಲ್ಲಿಕೇಣಿ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಕಾಂಗ್ರೆಸ್ ತೊರೆದು ಟಿವಿಕೆ ಸೇರಿರುವ ಸೆಲ್ವಂ ಅವರನ್ನು ವಿಜಯ್ ಕಣಕ್ಕಿಳಿಸಿದ್ದಾರೆ.

ವಿಲ್ಲಿವಾಕ್ಕಂನಲ್ಲಿ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆದವ್ ಅರ್ಜುನಾ ಸ್ಪರ್ಧಿಸುತ್ತಿದ್ದಾರೆ. ಗೋಪಿಚೆಟ್ಟಿಪಾಳ್ಯಂನಲ್ಲಿ ಟಿವಿಕೆ ಪರವಾಗಿ ಸೆಂಗೊಟ್ಟಯ್ಯನ್ ಅವರು ಸ್ಪರ್ಧೆಯಲ್ಲಿದ್ದಾರೆ.

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಐದು ಕೋನಗಳ ಸ್ಪರ್ಧೆಯನ್ನು ಎದುರಿಸುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿಯ ಎನ್‌ಡಿಎ ಬಣವು ಮತ್ತೆ ಅಧಿಕಾರಕ್ಕೆ ಬರಲು ಎದುರು ನೋಡುತ್ತಿದೆ. ವಿಜಯ್ ಅವರ ಟಿವಿಕೆ ದೊಡ್ಡ ಚೊಚ್ಚಲ ಪ್ರವೇಶಕ್ಕೆ ಸಜ್ಜಾಗಿದೆ. ಎಸ್. ರಾಮದಾಸ್ ನೇತೃತ್ವದ ಪಿಎಂಕೆ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸಹಾಯಕಿ ಶಶಿಕಲಾ ಸ್ಥಾಪಿಸಿದ ಪಕ್ಷದ ಮೈತ್ರಿ ನಾಲ್ಕನೇ ರಂಗವನ್ನು ತೆರೆದಿದೆ. ಸೀಮನ್ ನೇತೃತ್ವದ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ವಿಜಯ್ ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಎರಡೂ ಸ್ಥಾನಗಳು ಪ್ರಸ್ತುತ ಡಿಎಂಕೆ ಪ್ರತಿನಿಧಿಸುತ್ತಿವೆ. ಆರ್‌ಡಿ ಶೇಖರ್ ಪೆರಂಬೂರು ಶಾಸಕರಾಗಿದ್ದು, ಇನಿಗೋ ಎಸ್ ಇರುದಯರಾಜ್ ತಿರುಚ್ಚಿ ಪೂರ್ವದ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...