Homeಅಂತರಾಷ್ಟ್ರೀಯ'168 ಮಕ್ಕಳನ್ನು ಕೊಂದವರ ನೆನಪಿಡಿ' : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

- Advertisement -
- Advertisement -

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ. ಯಾರ್ಕ್ ಅವರೇ ಕಾರಣರು ಎಂದು ಇರಾನ್ ಆರೋಪಿಸಿದೆ.

ಈ ಅಧಿಕಾರಿಗಳು ಮೂರು ಬಾರಿ ಟೊಮಾಹಾಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಲು ಆದೇಶಿಸಿದ್ದರು ಎಂದು ಇರಾನ್ ಹೇಳಿಕೊಂಡಿದೆ.

“ಈ ಇಬ್ಬರು ಅಪರಾಧಿಗಳನ್ನು ನೆನಪಿಡಿ. ಮಿನಾಬ್‌ನ ಶಾಲೆಯ ಮೇಲೆ ಮೂರು ಬಾರಿ ಟೊಮಾಹಾಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಲು ಆದೇಶಿಸಿ, 168 ಅಮಾಯಕ ಮಕ್ಕಳ ಸಾವಿಗೆ ಕಾರಣರಾದ ಯುಎಸ್ಎಸ್ ಸ್ಪ್ರೂಯನ್ಸ್‌ನ ಕಮಾಂಡರ್ ಲೀ ಆರ್. ಟೇಟ್ ಮತ್ತು ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ. ಯಾರ್ಕ್ ಇವರೇ ಆ ವ್ಯಕ್ತಿಗಳು” ಎಂದು ಭಾರತದಲ್ಲಿರುವ ಇರಾನ್‌ ರಾಯಭಾರ ಕಚೇರಿ ಭಾನುವಾರ (ಮಾ.29) ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ. ಇಬ್ಬರ ಫೋಟೋಗಳನ್ನು ಹಂಚಿಕೊಂಡಿದೆ.

ದಕ್ಷಿಣ ಇರಾನ್‌ನ ಮಿನಾಬ್‌ ನಗರದಲ್ಲಿರುವ ಬಾಲಕಿಯರ ಪ್ರಾಥಮಿಕ ಶಾಲೆಯ ಮೇಲೆ ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ಜಂಟಿಯಾಗಿ ಭೀಕರ ವೈಮಾನಿಕ ದಾಳಿ ನಡೆಸಿತ್ತು.

ಈ ದಾಳಿಯಲ್ಲಿ ಸುಮಾರು 175 ಮಂದಿ ಮೃತಪಟ್ಟಿದ್ದು, ಇದರಲ್ಲಿ 168 ಮಂದಿ ಶಾಲಾ ಮಕ್ಕಳು. ಹೆಚ್ಚಿನವರು 7 ರಿಂದ 12 ವರ್ಷ ವಯಸ್ಸಿನ ಬಾಲಕಿಯರು ಎಂದು ವರದಿಯಾಗಿದೆ. ಶಾಲೆಯ ಮೇಲೆ ಮೂರು ಬಾರಿ ಕ್ಷಿಪಣಿ ದಾಳಿ ನಡೆಸಲಾಗಿದ್ದು, ಕಟ್ಟಡದ ಛಾವಣಿ ಕುಸಿದು ಮಕ್ಕಳು ಅದರಡಿ ಸಿಲುಕಿದ್ದರು ಎನ್ನಲಾಗಿದೆ.

ಶಾಲೆಯ ಪಕ್ಕದಲ್ಲಿದ್ದ ಇರಾನ್‌ನ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ತಪ್ಪಾಗಿ ಶಾಲೆಯ ಮೇಲೆ ಬಿದ್ದಿದೆ. ಹಳೆಯ ನಕ್ಷೆ ದತ್ತಾಂಶಗಳನ್ನು ಬಳಸಿದ ಕಾರಣದಿಂದಾಗಿ ಈ ದುರಂತ ಸಂಭವಿಸಿರಬಹುದು ಎಂದು ಕೆಲ ಅಮೆರಿಕನ್ ಮಾಧ್ಯಮಗಳು ದಾಳಿಯನ್ನು ಸಮರ್ಥಿಸಿಕೊಂಡಿವೆ.

ವಿಶ್ವಸಂಸ್ಥೆ ಮತ್ತು ಯುನೆಸ್ಕೋ ಈ ದಾಳಿಯನ್ನು “ಮಾನವೀಯ ಕಾನೂನಿನ ಘೋರ ಉಲ್ಲಂಘನೆ” ಎಂದು ಖಂಡಿಸಿವೆ ಮತ್ತು ಸಮಗ್ರ ತನಿಖೆಗೆ ಆಗ್ರಹಿಸಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...