Homeಮುಖಪುಟ'ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು' : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಖಬರ್ ರಾಜ್‌ಕೋಟ್ ಕಿ ನ್ಯೂಸ್’ ಎಂಬ ಆನ್‌ಲೈನ್ ಮಾಧ್ಯಮವನ್ನು ನಡೆಸುತ್ತಿರುವ ವಡೇಚಾ, ರಾಜ್‌ಕೋಟ್ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಗದೀಶ್ ಬಂಗದ್ವಾ ಮತ್ತು ಅವರ ತಂಡ ತನ್ನನ್ನು ಕ್ರೂರವಾಗಿ ಥಳಿಸಿ ಅಮಾನವೀಯವಾಗಿ ನಡೆಸಿಕೊಂಡಿದೆ ಎಂದು ಹೇಳಿದ್ದಾರೆ.

ಪೊಲೀಸರು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, ಇದು ‘ನಾಟಕ’ ಎಂದು ಕರೆದಿದ್ದಾರೆ.

ಸುದ್ದಿ ಸಂಸ್ಥೆ ‘ದಿ ವೈರ್’ ಜೊತೆ ದೂರವಾಣಿಯಲ್ಲಿ ಮಾತನಾಡಿರುವ ವಡೇಚಾ, “ಮನೆಯಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಸ್ಥಳದಿಂದ ಮಾರ್ಚ್ 22ರಂದು ಪೊಲೀಸರು ನನ್ನನ್ನು ಬಂಧಿಸಿದ್ದರು” ಎಂದು ತಿಳಿಸಿದ್ದಾರೆ.

“ಅಪರಾಧ ವಿಭಾಗದ ಸಿಬ್ಬಂದಿ ಯಾವುದೇ ವಿವರಣೆಯನ್ನು ನೀಡದೆ ನನ್ನನ್ನು ಕರೆದೊಯ್ದರು. ನಂತರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಬಟ್ಟೆಗಳನ್ನು ಬಿಚ್ಚಿ ಜನನಾಂಗಕ್ಕೆ ಪೆಟ್ರೋಲ್ ಸುರಿದಿದ್ದಾರೆ. ತಲೆಕೆಳಗಾಗಿ ನೇತುಹಾಕಿ ಪ್ರಾಣಿಯಂತೆ ಥಳಿಸಿದ್ದಾರೆ, ಇದರಿಂದಾಗಿ ಕಿವಿಯ ತಮಟೆ ಹರಿದಿದೆ, ಕಾಲು ಮುರಿದಿದೆ ಮತ್ತು ಬೆನ್ನು ಹಾಗೂ ತಲೆಗೆ ತೀವ್ರ ಗಾಯಗಳಾಗಿವೆ” ಎಂದು ಹೇಳಿಕೊಂಡಿದ್ದಾರೆ.

ವಡೇಚಾ ಅವರ ಪ್ರಕಾರ, ಮಾರ್ಚ್ 23ರಂದು ಅವರನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

“ಬಂಧನದಿಂದ 24 ಗಂಟೆಗಳ ನಂತರ ನಾನು ಬಿಡುಗಡೆಯಾದಾಗ, ನನ್ನ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಾನು 108 ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ತೆರಳಿದ್ದೆ, ಆದರೆ ಅಲ್ಲೂ ಸಹ ನನ್ನನ್ನು ದಾಖಲಿಸಿಕೊಳ್ಳದಂತೆ ಪೊಲೀಸ್ ಅಧಿಕಾರಿಗಳು ವೈದ್ಯರ ಮೇಲೆ ಒತ್ತಡ ಹೇರುತ್ತಿದ್ದರು. ನನ್ನ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡುವುದಾಗಿ ಮತ್ತು ನನ್ನ ಮನೆಯನ್ನು ಕೆಡವುವುದಾಗಿ ನನಗೆ ಬೆದರಿಕೆ ಹಾಕಿದ್ದಾರೆ” ಎಂದು ವಡೇಚಾ ತಿಳಿಸಿದ್ದಾರೆ.

ಈ ಸಂಪೂರ್ಣ ಪ್ರಕರಣವು ಅಸಿಮ್ ಆಗಮ್ ಎಂಬ ಬಿಲ್ಡರ್‌ಗೆ ಸಂಬಂಧಿಸಿದೆ ಎಂದು ವಡೇಚಾ ಹೇಳಿದ್ದಾರೆ. ಅಸಿಮ್ ಅವರ ಅಕ್ರಮ ನಿರ್ಮಾಣ ಚಟುವಟಿಕೆಗಳ ಬಗ್ಗೆ ವಡೇಚಾ ಈ ಹಿಂದೆ ವರದಿ ಮಾಡಿದ್ದರು ಎನ್ನಲಾಗಿದೆ.

“ನನ್ನ ವಿರುದ್ಧ ಯಾವುದೇ ಗಂಭೀರವಾದ ದೂರು ಇರಲಿಲ್ಲ, ಆದರೂ ಅವರ (ಬಿಲ್ಡರ್ ಅಸಿಮ್) ಸೂಚನೆಯ ಮೇರೆಗೆ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಿ, ಈ ರೀತಿ ಹಲ್ಲೆ ನಡೆಸಲಾಗಿದೆ” ಎಂದು ವಡೇಚಾ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ರಾಜ್‌ಕೋಟ್ ಕ್ರೈಂ ಬ್ರಾಂಚ್ ಡಿಸಿಪಿ ಬಂಗದ್ವಾ, ವಡೇಚಾ ಅವರ ಆರೋಪಗಳನ್ನು ತಳ್ಳಿಹಾಕಿದ್ದಾರೆ ಎಂದು ದಿ ವೈರ್ ವರದಿ ತಿಳಿಸಿದೆ.

“ನಾವು ಅವರ ಮೇಲೆ ಯಾವುದೇ ದೈಹಿಕ ಹಲ್ಲೆ ನಡೆಸಿಲ್ಲ. ಅವರು ಒಬ್ಬ ಅಪರಾಧಿಯಾಗಿದ್ದು, ಅವರ ವಿರುದ್ಧ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ” ಎಂದು ಬಂಗದ್ವಾ ಹೇಳಿದ್ದಾರೆ.

ಡಿಸಿಪಿ ಕೆಲವು ದಾಖಲೆಗಳನ್ನು ಹಂಚಿಕೊಂಡಿದ್ದು, ಅವುಗಳ ಪ್ರಕಾರ 2020ಮತ್ತು 2025ರ ನಡುವೆ ವಡೇಚಾ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಹೆಚ್ಚಿನವು ಶಾಂತಿ ಭಂಗ ಮತ್ತು ಸ್ಥಳೀಯ ವಿವಾದಗಳಿಗೆ ಸಂಬಂಧಿಸಿವೆ. ಕೆಲವು ಪ್ರಕರಣಗಳಲ್ಲಿ ದೂರುದಾರರೇ ತದನಂತರ ಅವುಗಳನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ದಿ ವೈರ್ ಉಲ್ಲೇಖಿಸಿದೆ.

ತೀರಾ ಇತ್ತೀಚಿನ ಪ್ರಕರಣವು 2026ರ ಮಾರ್ಚ್ 10ಕ್ಕೆ ಸಂಬಂಧಿಸಿದ್ದಾಗಿದ್ದು, ‘ಭಾಗ್ಯಲಕ್ಷ್ಮಿ ಸ್ಕ್ರ್ಯಾಪ್’ ಎಂಬ ಸಂಸ್ಥೆಯ ಮಾಲೀಕ ಭರತ್‌ಭಾಯಿ ವೀರ್‌ಜಿಭಾಯಿ ಸಾಗರ್ ಎಂಬವರು ವಡೇಚಾ ತಮ್ಮ ವ್ಯವಹಾರದ ಸ್ಥಳದ ವಿಡಿಯೋ ಚಿತ್ರೀಕರಿಸಿ ದೊಡ್ಡ ಮೊತ್ತದ ಹಣ ಸುಲಿಗೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿ ವಿವರಿಸಿದೆ.

ಸಾಗರ್ ಅವರಿಗೆ ಆ ವಿಡಿಯೋದಲ್ಲಿದ್ದ ವಿಷಯದ ಬಗ್ಗೆ ನಿಖರವಾಗಿ ಏನನ್ನೂ ಹೇಳಲು ಸಾಧ್ಯವಾಗಿಲ್ಲ. ಪೊಲೀಸರಂತೆಯೇ ಅವರು ಕೂಡ ದೈಹಿಕ ಹಲ್ಲೆಯ ಆರೋಪಗಳನ್ನು ‘ನಾಟಕ’ ಎಂದು ಕರೆದಿದ್ದಾರೆ.

ಆದಾಗ್ಯೂ, ವಡೇಚಾ ಅವರ ವಿರುದ್ಧ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲ. ಬದಲಿಗೆ ಕೇವಲ ಸಾಗರ್ ಅವರು ಡಿಸಿಪಿ ಕಚೇರಿಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಇದು ಗಮನಾರ್ಹ ಸಂಗತಿ ಎಂದು ದಿ ವೈರ್ ವರದಿ ಹೇಳಿದೆ.

ದಿ ವೈರ್ ಹಿಂದಿ ಜೊತೆ ಮಾತನಾಡಿದ ವಡೇಚಾ, ಸುಲಿಗೆ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಈ ನಡುವೆ, ಮಾರ್ಚ್ 27ರಂದು ವಡ್ಗಾಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಯಲ್ಲಿ ವಡೇಚಾ ಅವರನ್ನು ಭೇಟಿ ಮಾಡಿದ್ದು, ಈ ಕುರಿತ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಮೇವಾನಿ ಅವರು ಗುಜರಾತ್‌ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಡಿಸಿಪಿ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾಗೂ ಅವರ ಬಂಧನ ಮತ್ತು ವಜಾಕ್ಕೆ ಒತ್ತಾಯಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಡಿಸಿಪಿ ಬಂಗದ್ವಾ, “ಅವರ (ವಡೇಚಾ) ವಿರುದ್ಧ ಕ್ರಿಮಿನಲ್ ದೂರು ಬಾಕಿ ಇದೆ. ತನಿಖೆಯಿಂದ ತಪ್ಪಿಸಿಕೊಳ್ಳಲು ಅವರು ಇದೆಲ್ಲವನ್ನೂ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಶಾಸಕ ಮೇವಾನಿ ‘ವೈಯಕ್ತಿಕ ಹಿತಾಸಕ್ತಿಗಾಗಿ’ ಈ ವಿಷಯವನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ರಮೇಶ್ ಸವಾನಿ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ ಅವರು, ವಡೇಚಾ ಪೊಲೀಸರ ವಿರುದ್ದ ಮಾಡಿರುವ ಆರೋಪಗಳನ್ನು ಅತ್ಯಂತ ಗಂಭೀರವೆಂದು ಬಣ್ಣಿಸಿದ್ದು, “ನ್ಯಾಯಾಲಯ ಕೂಡ ಇಂತಹ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಒಂದು ವೇಳೆ ಆರೋಪಗಳು ನಿಜವಾಗಿದ್ದರೆ, ಇಂತಹ ಕ್ರೌರ್ಯವನ್ನು ಎಸಗಲು ಪೊಲೀಸರು ಕಾನೂನಿನ ಮಿತಿಗಳನ್ನು ಯಾಕೆ ಮೀರಿದರು?” ಎಂದು ಅವರು ಪ್ರಶ್ನಿಸಿದ್ದಾರೆ.

“ವಡೇಚಾ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಪ್ರಕರಣಗಳು ಬಾಕಿ ಇಲ್ಲ; ಆದರೂ, ಅವರ ಮೇಲೆ ಇಂತಹ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ಕಳವಳದ ವಿಷಯ. ಇಂತಹ ಕ್ರೌರ್ಯವನ್ನು ಸಾಮಾನ್ಯವಾಗಿ ದುರ್ಬಲ ಮತ್ತು ಅಂಚಿನಲ್ಲಿರುವ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳ ಮೇಲೆ ಎಸಗಲಾಗುತ್ತದೆ” ಎಂದು ಸವಾನಿ ಹೇಳಿದ್ದಾರೆ.

ಪ್ರಸ್ತುತ, ಈ ಪ್ರಕರಣದಲ್ಲಿ ಎರಡೂ ಕಡೆಯವರು ಮಾಡಿರುವ ಆರೋಪಗಳು ಮತ್ತು ಸಮರ್ಥನೆಗಳು ಸಂಪೂರ್ಣವಾಗಿ ತದ್ವಿರುದ್ದವಾಗಿವೆ. ಒಂದು ಕಡೆ ಪತ್ರಕರ್ತ ಗಂಭೀರ ಆರೋಪಗಳನ್ನು ಮಾಡುತ್ತಿದ್ದರೆ, ಮತ್ತೊಂದು ಕಡೆ ಪೊಲೀಸರು ಅವುಗಳನ್ನು ನಿರಾಕರಿಸುತ್ತಿದ್ದಾರೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...