Homeನಿಜವೋ ಸುಳ್ಳೋಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

ಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

- Advertisement -
- Advertisement -

ಈ ವಾರದ ಟಾಪ್‌5 ಫೇಕ್‌ ನ್ಯೂಸ್‌ಗಳು

1. ಭಾರತದಲ್ಲಿ ಒಂದೂ ಬಂಧನ ಕೇಂದ್ರಗಳಿಲ್ಲ: ನರೇಂದ್ರ ಮೋದಿ

ಡಿಸೆಂಬರ್ 22ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರಧಾನಿ ಮೋದಿಯವರು ಮಾತನಾಡುತ್ತಾ ದೇಶದಲ್ಲಿನ ಮುಸ್ಲಿಮರಿಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಯಾವ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳಿಸುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ದೇಶದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದರೆ ಸುಲಭವಾಗಿ ಮೋದಿಯ ಈ ಎಲ್ಲಾ ಹೇಳಿಕೆಗಳು ಸುಳ್ಳು ಎಂದು ಮೇಲ್ನೋಟಕ್ಕೆ ಗೊತ್ತಾಗಲಿದೆ.

ಅಸ್ಸಾಂನಲ್ಲಿ ಈಗಾಗಲೇ ಬಂಧನಕೇಂದ್ರವಿದ್ದು ಅಲ್ಲಿ 970 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಅಲ್ಲದೇ ತಲಾ 50 ಕೋಟಿ ರೂ. ವೆಚ್ಚದಲ್ಲಿ ಇನ್ನು 7 ಬಂಧನ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನ ನೆಲಮಂಗಲದ ಬಳಿಯೂ ಬಂಧನ ಕೇಂದ್ರ ಸಿದ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಹಿಂದಿನ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಂಧನ ಕೇಂದ್ರ ಕಟ್ಟಲು ಮೂರು ಎಕರೆ ಜಾಗವನ್ನು ಗುರುತಿಸಿದ್ದರು. ದೇಶದ ಹಲವಾರು ಕಡೆ ಬಂಧನ ಕೇಂದ್ರ ನಿರ್ಮಿಸಲು ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಬಂಧನ ಕೇಂದ್ರ

ಈ ಅಂಶಗಳನ್ನು ಗಮನಿಸಿದಾಗ ಜನರನ್ನು ದಿಕ್ಕುತಪ್ಪಿಸಲು ಮೋದಿಯವರು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅಸ್ಸಾಂ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸೇನಾಧಿಕಾರಿ ಸನಾವುಲ್ಲರವರು ದಾಖಲೆಗಳಿಲ್ಲ ಕಾರಣಕ್ಕೆ ಅಕ್ರಮ ವಲಸಿಗರು ಎಂದು ಕರೆಯಲ್ಪಟ್ಟಿದ್ದಾರೆ. ಅವರು “ದೇಶದಲ್ಲಿ ಒಂದೂ ಬಂಧನಕೇಂದ್ರಗಳಿಲ್ಲದಿದ್ದರೆ ನಾನು 11 ಭಯಾನಕ ದಿನಗಳನ್ನು ಕಳೆದ ಸ್ಥಳ ಯಾವುದು” ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬೃಹತ್‌ ಬಂಧನಕೇಂದ್ರ

2. ಮಂಗಳೂರಿನಿಂದ ಜಮ್ಮು ರೈಲಿಗೆ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಕೊಟ್ಟ ಮೋದಿ?

ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್‌ಕಾರ್ಡ್ ಕನ್ನಡ “ಮಂಗಳೂರಿನಿಂದ ಜಮ್ಮುಗೆ ತೆರಳುವ ನವಯುಗ ರೈಲಿನಲ್ಲಿ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಮೀಸಲಿಡಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆ ಮತ್ತು ಮೋದಿಗೆ ಧನ್ಯವಾದ” ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿ ಅರ್ಧ ನಿಜವಾಗಿದೆ. ಅಂದರೆ 3 ಎಸಿ ಕೋಚ್‌ಗಳು ಯೋಧರಿಗೆ ಮೀಸಲಿರುವುದು ನಿಜ. ಆದರೆ ಈ ಕ್ರಮ ತೆಗೆದುಕೊಂಡವರು ಮೋದಿಯಲ್ಲ ಬದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್. ಹಾಗಾಗಿ ಅದರ ಕ್ರೆಡಿಟ್ ಮೋದಿಗೆ ಕೊಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಈ ಯೋಜನೆಯು ಮೇ 19, 2013ರಲ್ಲಿಯೇ ಆರಂಭವಾಗಿದ್ದು ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತೆ ಹೊರತು ಮೋದಿಯಲ್ಲ…

3. ನೆಹರು 10 ಲಕ್ಷ ಹಿಂದೂಗಳನ್ನು ಕೊಂದರೆ?

ನೆಹರು ವಿರುದ್ಧ ಸದಾ ಕಿಡಿಕಾರುವ ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್ಕಾರ್ಡ್ ಕನ್ನಡ ಈ ಸುದ್ದಿ ಹಬ್ಬಿಸಿದೆ. ಅಲ್ಲದೇ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯ ವಿರುದ್ಧವೂ ಸುಳ್ಳು ಹರಡಿದೆ.

ಇದು ಸಂಪೂರ್ಣ ಸುಳ್ಳಾಗಿದ್ದು ಇದಕ್ಕೆ ಯಾವುದೇ ದಾಖಲೆಗಳಿಲ್ಲ. ನೆಹರು ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಈ ಸುಳ್ಳು ಸುದ್ದಿ ಹರಡಲಾಗಿದೆ ಅಷ್ಟೇ. ದುರಂತವೆಂದರೆ ಈ ಅಪ್ಪಟ ಸುಳ್ಳನ್ನು 300 ಜನ ನಂಬಿದ್ದಾರೆ. 155 ಜನ ಷೇರ್ ಮಾಡಿದ್ದಾರೆ!

4. ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ : ಅಮಿತ್ ಶಾ

ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ. ಎನ್‌ಪಿಆರ್ ಡೇಟಾವನ್ನು ಎನ್‌ಆರ್‌ಸಿಗೆ ಬಳಸುವುದಿಲ್ಲ. ಅಲ್ಪಸಂಖ್ಯಾತರರು ವದಂತಿಗಳಿಗೆ ಹೆದರಬಾರದು ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ಎನ್‌ಪಿಆರ್ ಆಧಾರದಲ್ಲಿಯೇ ಅದರ ಡೇಟಾವನ್ನು ಬಳಸಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುತ್ತದೆ. 1995ರ ಪೌರತ್ವ ಕಾಯ್ದೆಯ 2003ರ ನಿಯಮಗಳು ಇದನ್ನು ಸ್ಪಷ್ಟಪಡಿಸಿವೆ. ಹಾಗಾಗಿ ಎನ್‌ಪಿಆರ್ ಎನ್‌ಆರ್‌ಸಿಯ ಭಾಗವಾಗಿದೆ. ಇಲ್ಲದಿದ್ದಲ್ಲಿ ಎನ್‌ಪಿಆರ್ ಬದಲು ಜನಗಣತಿ ಸಾಕಾಗುತ್ತಿತ್ತು..

ಅಲ್ಲದೇ ಇದೇ ಕೇಂದ್ರ ಸರ್ಕಾರವು ಸುಮಾರು ಒಂಭತ್ತು ಬಾರಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಸಂಬಂಧವಿದೆಯೆಂದು ಅದರ ಆಧಾರದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಸಾಕ್ಷಿ ಸಮೇತ ವರದಿ ಮಾಡಿದೆ.

ಕೇಂದ್ರ ಸಚಿವ ಕಿರಣ್ ರಿಜ್ಜುರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ದೇಶದ ಪ್ರತಿಯೊಬ್ಬ ನಿವಾಸಿಗಳ ಪೌರತ್ವವನ್ನು ಪರಿಶೀಲಿಸಲು ಎನ್‌ಪಿಆರ್ ನಡೆಸಲಿದ್ದು ಇದು ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5. ಲಕ್ನೋ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಡಿಸೆಂಬರ್ 28ರಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ವಿಡಿಯೋಗಳ ಕಾಲ. ಹಾಗಾಗಿ ಇನ್ನೊಮ್ಮೆ ಅವರು ಪ್ರತಿಭಟನೆ ನಡೆಸುವಾಗ ಭಾರತದ ತ್ರಿವರ್ಣ ಧ್ವಜಗಳನ್ನು ಮತ್ತು ಗಾಂಧೀಜಿಯವರು ಫೋಟೊಗಳನ್ನು ತನ್ನಿ ಎಂದು ಯಾರಾದರೂ ಅವರಿಗೆ ಹೇಳಿ ಎಂದು ಲೇವಡಿ ಮಾಡಿದ್ದಾರೆ.

ಈ ವಿಷಯದ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ವಿಡಿಯೋವನ್ನು ಪ್ರೀಮಿಯರ್ ಎಡಿಟಿಂಗ್ ಸಾಫ್ಟ್ವೇರ್‌ನಲ್ಲಿ ನಿಧಾನವಾಗಿ ಕೇಳಿಸಿದಾಗ ಅದು ಹಿಂದೂಸ್ತಾನ್ ಜಿಂದಾಬಾದ್ ಮತ್ತು ಖಾಸಿಫ್ ಸಾಬ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿರುವುದು ಕೇಳಿಸುತ್ತದೆ.

ಖಾಸಿಫ್ ಸಾಬ್ ಅಂದು ಲಕ್ನೋದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಂಐಎಂ ಪಕ್ಷದ ಮುಖಂಡರು ಮತ್ತು ಲಕ್ನೋ ಜಿಲ್ಲಾಧ್ಯಕ್ಷರಾಗಿದ್ದಾರೆ.

ಆದರೆ ಅಮಿತ್ ಮಾಳವೀಯ ಜೊತೆಗೆ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಕೂಡ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಅದು ಎಂದು ಸುಳ್ಳು ಸುದ್ದಿ ಹರಡಿವೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...