Homeನಿಜವೋ ಸುಳ್ಳೋಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

ಬಂಧನಕೇಂದ್ರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಯ ಕುರಿತು ಮೋದಿ, ಅಮಿತ್‌ ಶಾ ಹೇಳಿದ್ದು ನಿಜವೇ? ಸುಳ್ಳೇ?

- Advertisement -
- Advertisement -

ಈ ವಾರದ ಟಾಪ್‌5 ಫೇಕ್‌ ನ್ಯೂಸ್‌ಗಳು

1. ಭಾರತದಲ್ಲಿ ಒಂದೂ ಬಂಧನ ಕೇಂದ್ರಗಳಿಲ್ಲ: ನರೇಂದ್ರ ಮೋದಿ

ಡಿಸೆಂಬರ್ 22ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರಧಾನಿ ಮೋದಿಯವರು ಮಾತನಾಡುತ್ತಾ ದೇಶದಲ್ಲಿನ ಮುಸ್ಲಿಮರಿಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಯಾವ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳಿಸುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ದೇಶದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದರೆ ಸುಲಭವಾಗಿ ಮೋದಿಯ ಈ ಎಲ್ಲಾ ಹೇಳಿಕೆಗಳು ಸುಳ್ಳು ಎಂದು ಮೇಲ್ನೋಟಕ್ಕೆ ಗೊತ್ತಾಗಲಿದೆ.

ಅಸ್ಸಾಂನಲ್ಲಿ ಈಗಾಗಲೇ ಬಂಧನಕೇಂದ್ರವಿದ್ದು ಅಲ್ಲಿ 970 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಅಲ್ಲದೇ ತಲಾ 50 ಕೋಟಿ ರೂ. ವೆಚ್ಚದಲ್ಲಿ ಇನ್ನು 7 ಬಂಧನ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರಿನ ನೆಲಮಂಗಲದ ಬಳಿಯೂ ಬಂಧನ ಕೇಂದ್ರ ಸಿದ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಹಿಂದಿನ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಂಧನ ಕೇಂದ್ರ ಕಟ್ಟಲು ಮೂರು ಎಕರೆ ಜಾಗವನ್ನು ಗುರುತಿಸಿದ್ದರು. ದೇಶದ ಹಲವಾರು ಕಡೆ ಬಂಧನ ಕೇಂದ್ರ ನಿರ್ಮಿಸಲು ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಬಂಧನ ಕೇಂದ್ರ

ಈ ಅಂಶಗಳನ್ನು ಗಮನಿಸಿದಾಗ ಜನರನ್ನು ದಿಕ್ಕುತಪ್ಪಿಸಲು ಮೋದಿಯವರು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅಸ್ಸಾಂ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸೇನಾಧಿಕಾರಿ ಸನಾವುಲ್ಲರವರು ದಾಖಲೆಗಳಿಲ್ಲ ಕಾರಣಕ್ಕೆ ಅಕ್ರಮ ವಲಸಿಗರು ಎಂದು ಕರೆಯಲ್ಪಟ್ಟಿದ್ದಾರೆ. ಅವರು “ದೇಶದಲ್ಲಿ ಒಂದೂ ಬಂಧನಕೇಂದ್ರಗಳಿಲ್ಲದಿದ್ದರೆ ನಾನು 11 ಭಯಾನಕ ದಿನಗಳನ್ನು ಕಳೆದ ಸ್ಥಳ ಯಾವುದು” ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬೃಹತ್‌ ಬಂಧನಕೇಂದ್ರ

2. ಮಂಗಳೂರಿನಿಂದ ಜಮ್ಮು ರೈಲಿಗೆ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಕೊಟ್ಟ ಮೋದಿ?

ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್‌ಕಾರ್ಡ್ ಕನ್ನಡ “ಮಂಗಳೂರಿನಿಂದ ಜಮ್ಮುಗೆ ತೆರಳುವ ನವಯುಗ ರೈಲಿನಲ್ಲಿ ಸಿಆರ್‌ಪಿಎಫ್ ಯೋಧರಿಗೆ ಮೂರು ಎಸಿ ಕೋಚ್ ಮೀಸಲಿಡಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆ ಮತ್ತು ಮೋದಿಗೆ ಧನ್ಯವಾದ” ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿ ಅರ್ಧ ನಿಜವಾಗಿದೆ. ಅಂದರೆ 3 ಎಸಿ ಕೋಚ್‌ಗಳು ಯೋಧರಿಗೆ ಮೀಸಲಿರುವುದು ನಿಜ. ಆದರೆ ಈ ಕ್ರಮ ತೆಗೆದುಕೊಂಡವರು ಮೋದಿಯಲ್ಲ ಬದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್. ಹಾಗಾಗಿ ಅದರ ಕ್ರೆಡಿಟ್ ಮೋದಿಗೆ ಕೊಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಈ ಯೋಜನೆಯು ಮೇ 19, 2013ರಲ್ಲಿಯೇ ಆರಂಭವಾಗಿದ್ದು ಆಗ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತೆ ಹೊರತು ಮೋದಿಯಲ್ಲ…

3. ನೆಹರು 10 ಲಕ್ಷ ಹಿಂದೂಗಳನ್ನು ಕೊಂದರೆ?

ನೆಹರು ವಿರುದ್ಧ ಸದಾ ಕಿಡಿಕಾರುವ ಕನ್ನಡದ ಸುಳ್ಳು ಹರಡುವ ವೆಬ್‌ಸೈಟ್ ಪೋಸ್ಟ್ಕಾರ್ಡ್ ಕನ್ನಡ ಈ ಸುದ್ದಿ ಹಬ್ಬಿಸಿದೆ. ಅಲ್ಲದೇ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯ ವಿರುದ್ಧವೂ ಸುಳ್ಳು ಹರಡಿದೆ.

ಇದು ಸಂಪೂರ್ಣ ಸುಳ್ಳಾಗಿದ್ದು ಇದಕ್ಕೆ ಯಾವುದೇ ದಾಖಲೆಗಳಿಲ್ಲ. ನೆಹರು ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಈ ಸುಳ್ಳು ಸುದ್ದಿ ಹರಡಲಾಗಿದೆ ಅಷ್ಟೇ. ದುರಂತವೆಂದರೆ ಈ ಅಪ್ಪಟ ಸುಳ್ಳನ್ನು 300 ಜನ ನಂಬಿದ್ದಾರೆ. 155 ಜನ ಷೇರ್ ಮಾಡಿದ್ದಾರೆ!

4. ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ : ಅಮಿತ್ ಶಾ

ಎನ್‌ಪಿಆರ್‌ಗೂ ಎನ್‌ಆರ್‌ಸಿಗೂ ಸಂಬಂಧವಿಲ್ಲ. ಎನ್‌ಪಿಆರ್ ಡೇಟಾವನ್ನು ಎನ್‌ಆರ್‌ಸಿಗೆ ಬಳಸುವುದಿಲ್ಲ. ಅಲ್ಪಸಂಖ್ಯಾತರರು ವದಂತಿಗಳಿಗೆ ಹೆದರಬಾರದು ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ಎನ್‌ಪಿಆರ್ ಆಧಾರದಲ್ಲಿಯೇ ಅದರ ಡೇಟಾವನ್ನು ಬಳಸಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುತ್ತದೆ. 1995ರ ಪೌರತ್ವ ಕಾಯ್ದೆಯ 2003ರ ನಿಯಮಗಳು ಇದನ್ನು ಸ್ಪಷ್ಟಪಡಿಸಿವೆ. ಹಾಗಾಗಿ ಎನ್‌ಪಿಆರ್ ಎನ್‌ಆರ್‌ಸಿಯ ಭಾಗವಾಗಿದೆ. ಇಲ್ಲದಿದ್ದಲ್ಲಿ ಎನ್‌ಪಿಆರ್ ಬದಲು ಜನಗಣತಿ ಸಾಕಾಗುತ್ತಿತ್ತು..

ಅಲ್ಲದೇ ಇದೇ ಕೇಂದ್ರ ಸರ್ಕಾರವು ಸುಮಾರು ಒಂಭತ್ತು ಬಾರಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಸಂಬಂಧವಿದೆಯೆಂದು ಅದರ ಆಧಾರದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ಸಾಕ್ಷಿ ಸಮೇತ ವರದಿ ಮಾಡಿದೆ.

ಕೇಂದ್ರ ಸಚಿವ ಕಿರಣ್ ರಿಜ್ಜುರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ದೇಶದ ಪ್ರತಿಯೊಬ್ಬ ನಿವಾಸಿಗಳ ಪೌರತ್ವವನ್ನು ಪರಿಶೀಲಿಸಲು ಎನ್‌ಪಿಆರ್ ನಡೆಸಲಿದ್ದು ಇದು ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5. ಲಕ್ನೋ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ?

ಡಿಸೆಂಬರ್ 28ರಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಪೌರತ್ವ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ವಿಡಿಯೋಗಳ ಕಾಲ. ಹಾಗಾಗಿ ಇನ್ನೊಮ್ಮೆ ಅವರು ಪ್ರತಿಭಟನೆ ನಡೆಸುವಾಗ ಭಾರತದ ತ್ರಿವರ್ಣ ಧ್ವಜಗಳನ್ನು ಮತ್ತು ಗಾಂಧೀಜಿಯವರು ಫೋಟೊಗಳನ್ನು ತನ್ನಿ ಎಂದು ಯಾರಾದರೂ ಅವರಿಗೆ ಹೇಳಿ ಎಂದು ಲೇವಡಿ ಮಾಡಿದ್ದಾರೆ.

ಈ ವಿಷಯದ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ವಿಡಿಯೋವನ್ನು ಪ್ರೀಮಿಯರ್ ಎಡಿಟಿಂಗ್ ಸಾಫ್ಟ್ವೇರ್‌ನಲ್ಲಿ ನಿಧಾನವಾಗಿ ಕೇಳಿಸಿದಾಗ ಅದು ಹಿಂದೂಸ್ತಾನ್ ಜಿಂದಾಬಾದ್ ಮತ್ತು ಖಾಸಿಫ್ ಸಾಬ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿರುವುದು ಕೇಳಿಸುತ್ತದೆ.

ಖಾಸಿಫ್ ಸಾಬ್ ಅಂದು ಲಕ್ನೋದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಂಐಎಂ ಪಕ್ಷದ ಮುಖಂಡರು ಮತ್ತು ಲಕ್ನೋ ಜಿಲ್ಲಾಧ್ಯಕ್ಷರಾಗಿದ್ದಾರೆ.

ಆದರೆ ಅಮಿತ್ ಮಾಳವೀಯ ಜೊತೆಗೆ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಕೂಡ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಅದು ಎಂದು ಸುಳ್ಳು ಸುದ್ದಿ ಹರಡಿವೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...