Homeಮುಖಪುಟಜನಗಣತಿ-2027 : 'ಸ್ಥಿರ' ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

- Advertisement -
- Advertisement -

ತಮ್ಮ ಸಂಬಂಧ ‘ಸ್ಥಿರ’ ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ.

ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ಅಲ್ಲಿ, “ಸಹಜೀವನದಲ್ಲಿರುವ (live-in relationship) ಜೋಡಿಯನ್ನು ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆಯೇ?” ಎಂಬ ಪ್ರಶ್ನೆಗೆ, “ಒಂದು ವೇಳೆ ಆ ಜೋಡಿ ತಮ್ಮ ಸಂಬಂಧವನ್ನು ‘ಸ್ಥಿರ’ ಎಂದು ಹೇಳಿಕೊಳ್ಳುವುದಾದರೆ ಅವರನ್ನು ವಿವಾಹಿತ ದಂಪತಿಯೆಂದು ಪರಿಗಣಿಸಬೇಕು” ಎಂಬುವುದಾಗಿ ಉತ್ತರಿಸಲಾಗಿದೆ ಎಂದು indianexpress.com ವರದಿ ಮಾಡಿದೆ.

2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಮನೆಗಳ ಪಟ್ಟಿ ಮಾಡುವಿಕೆ ಮತ್ತು ವಸತಿ ಗಣತಿ ನಡೆಯಲಿದ್ದು, ಆಯಾ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ನಿರ್ಧಾರದಂತೆ 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ ನಡುವಿನ 30 ದಿನಗಳಲ್ಲಿ ಮನೆ-ಮನೆಗೆ ತೆರಳಿ ಕ್ಷೇತ್ರ ಕಾರ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಮೊದಲ ಹಂತದಲ್ಲಿ ಮನೆಗಳ ಸ್ಥಿತಿಗತಿ, ಕುಟುಂಬದ ವಿವರಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಅಡುಗೆಗೆ ಬಳಸುವ ಇಂಧನ ಮತ್ತು ಇಂಟರ್ನೆಟ್‌ನಂತಹ ಸೌಲಭ್ಯಗಳ ಲಭ್ಯತೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಇದರೊಂದಿಗೆ ರೇಡಿಯೋ, ಟಿವಿ, ಕಂಪ್ಯೂಟರ್, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ ವಾಹನಗಳಂತಹ ಆಸ್ತಿಗಳ ವಿವರಗಳನ್ನು ಸಹ ಆಯಾ ಕುಟುಂಬಗಳಿಂದ ಪಡೆಯಲಾಗುತ್ತದೆ.

ಎರಡನೇ ಹಂತದಲ್ಲಿ, ಫೆಬ್ರವರಿ 2027 ರಿಂದ ಭಾರತದಾದ್ಯಂತ ಜನಗಣತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಆದರೆ ಲಡಾಖ್ ಮತ್ತು ಜಮ್ಮು ಕಾಶ್ಮೀರದ ಹಿಮಪಾತ ಪ್ರದೇಶಗಳು ಹಾಗೂ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇದನ್ನು ಸೆಪ್ಟೆಂಬರ್ 2026ರಲ್ಲೇ ನಡೆಸಲಾಗುತ್ತದೆ.

ಈ ಹಂತದಲ್ಲಿ ವ್ಯಕ್ತಿಗಳ ಹೆಸರು, ವಯಸ್ಸು, ಲಿಂಗ, ವೈವಾಹಿಕ ಸ್ಥಿತಿ, ಜಾತಿ, ಧರ್ಮ, ಶಿಕ್ಷಣ, ಭಾಷೆ, ಅಂಗವೈಕಲ್ಯ, ವಲಸೆ, ಉದ್ಯೋಗ ಮತ್ತು ಸಂತಾನೋತ್ಪತ್ತಿಯ (ವಿವಾಹಿತ ಮಹಿಳೆಯರಿಗೆ ಸಂಬಂಧಿಸಿದಂತೆ) ವಿವರಗಳನ್ನು ಸಂಗ್ರಹಿಸಲಾಗುತ್ತದೆ.

ಈ ಬಾರಿ ವಿಶೇಷವೆಂದರೆ, ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆಯುವ ಸಾಂಪ್ರದಾಯಿಕ ವಿಧಾನದ ಜೊತೆಗೆ, ನಾಗರಿಕರು ತಾವಾಗಿಯೇ ಮಾಹಿತಿ ದಾಖಲಿಸಲು ‘ಸ್ವಯಂ-ಗಣತಿ’ (self-enumeration) ಆಯ್ಕೆಯನ್ನು ಸಹ ನೀಡಲಾಗಿದೆ.

ಸ್ವಯಂ-ಗಣತಿಯು ನಾಗರಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ವೆಬ್ ಪೋರ್ಟಲ್ ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ಭರ್ತಿ ಮಾಡಲು ಅವಕಾಶ ನೀಡುತ್ತದೆ. ಅಂದರೆ, ವ್ಯಕ್ತಿಯೊಬ್ಬರು ಸ್ವಯಂ-ಗಣತಿ ಪೋರ್ಟಲ್‌ನಲ್ಲಿ ವಿವರಗಳನ್ನು ನೀಡುವ ಮೂಲಕ ಈ ಆಯ್ಕೆಯನ್ನು ಬಳಸಿಕೊಳ್ಳಬಹುದು. ಇದಾದ ನಂತರ, ಗಣತಿದಾರರು ಆ ಮನೆಗೆ ಭೇಟಿ ನೀಡಿ, ಸ್ವಯಂ-ಗಣತಿಯ ಐಡಿ (SE ID) ಪಡೆದುಕೊಂಡು ಮಾಹಿತಿಯನ್ನು ದೃಢೀಕರಿಸುತ್ತಾರೆ.

ಸಾಮಾನ್ಯ, ಸಾಂಸ್ಥಿಕ ಮತ್ತು ವಸತಿರಹಿತ ಸೇರಿದಂತೆ ಎಲ್ಲಾ ಕುಟುಂಬಗಳು ಸ್ವಯಂ ಗಣತಿ ಮಾಡಬಹುದೇ?

2027ರ ಜನಗಣತಿಯ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ರೀತಿಯ ಕುಟುಂಬಗಳಿಗೆ ಸ್ವಯಂ-ಗಣತಿ (Self-enumeration) ಲಭ್ಯವಿಲ್ಲ.

ಕೇವಲ ಸಾಮಾನ್ಯ ಕುಟುಂಬಗಳಿಗೆ ಮಾತ್ರ ಸ್ವಯಂ-ಗಣತಿ ಮಾಡಲು ಅವಕಾಶ ನೀಡಲಾಗಿದೆ. ಈ ಕುಟುಂಬಗಳು ನಿಗದಿತ ವೆಬ್ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದು.

2011ರ ಜನಗಣತಿಯ ಪ್ರಕಾರ, ‘ಸಾಮಾನ್ಯ ಕುಟುಂಬ’ ಎಂದರೆ ಸಾಮಾನ್ಯವಾಗಿ ಒಟ್ಟಿಗೆ ವಾಸಿಸುವ ಮತ್ತು ಒಂದೇ ಅಡುಗೆಮನೆಯಲ್ಲಿ ಸಿದ್ಧಪಡಿಸಿದ ಆಹಾರವನ್ನು ಸೇವಿಸುವ ವ್ಯಕ್ತಿಗಳ ಗುಂಪು. ಕೆಲಸದ ಒತ್ತಡ ಅಥವಾ ಅನಿವಾರ್ಯ ಕಾರಣಗಳಿಂದಾಗಿ ಯಾರಾದರೂ ಹೊರಗಡೆ ಊಟ ಮಾಡಬೇಕಾದ ಸಂದರ್ಭಗಳನ್ನು ಹೊರತುಪಡಿಸಿ, ಈ ಗುಂಪು ಒಂದೇ ಅಡುಗೆಮನೆಯನ್ನು ಅವಲಂಬಿಸಿರುತ್ತದೆ. ಅಂತಹ ಕುಟುಂಬದ ಸದಸ್ಯರು ಪರಸ್ಪರ ಸಂಬಂಧಿಕರಾಗಿರಬಹುದು, ಸಂಬಂಧವಿಲ್ಲದವರಾಗಿರಬಹುದು ಅಥವಾ ಎರಡೂ ರೀತಿಯ ವ್ಯಕ್ತಿಗಳ ಮಿಶ್ರಣವಾಗಿರಬಹುದು.

ಆದಾಗ್ಯೂ, ಸಂಬಂಧವಿಲ್ಲದ ವ್ಯಕ್ತಿಗಳ ಗುಂಪು ಒಂದು ಮನೆಯಲ್ಲಿ ವಾಸವಿದ್ದು, ಒಂದೇ ಅಡುಗೆಮನೆಯಿಂದ ಊಟ ಮಾಡದಿದ್ದರೆ, ಅವರನ್ನು ಒಂದೇ ಕುಟುಂಬದ ಭಾಗವೆಂದು ಪರಿಗಣಿಸಲಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನೂ ಪ್ರತ್ಯೇಕ ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಜನಗಣತಿಯ ಮೊದಲ ಹಂತದಲ್ಲಿ ಸ್ವಯಂ-ಗಣತಿಯನ್ನು ಮಾಡಬಹುದು. ಆಯಾ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ 30 ದಿನಗಳ ಕಾಲ ನಡೆಯುವ ಮನೆಗಳ ಪಟ್ಟಿ ಮಾಡುವ ಪ್ರಕ್ರಿಯೆ (Houselisting Operations) ಆರಂಭವಾಗುವ ಮೊದಲು, ಕೇವಲ 15 ದಿನಗಳ ಕಾಲ ಈ ವೆಬ್ ಪೋರ್ಟಲ್ ಸಾರ್ವಜನಿಕರಿಗೆ ತೆರೆದಿರುತ್ತದೆ.



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...