Homeಮುಖಪುಟವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.

ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿದ ಒಂದು ದಿನದ ನಂತರ, ಅಂದರೆ, 2026ರ ಮಾರ್ಚ್ 25ರಂದು ರಾಜ್ಯಸಭೆಯು ಮಸೂದೆಯನ್ನು ಅಂಗೀಕರಿಸಿತ್ತು. ಟ್ರಾನ್ಸ್‌ಜೆಂಡರ್‌ಗಳ ಘನತೆಯ ಮೇಲೆ ಪರಿಣಾಮ ಬೀರುವ ನಿಬಂಧನೆಗಳನ್ನು ಮಸೂದೆ ಹೊಂದಿರುವುದರಿಂದ, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸದನದ ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

ಮಸೂದೆಯ ವಿರುದ್ಧದ ವಿರೋಧ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್, “ಇದು ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ” ಎಂದು ಹೇಳಿದ್ದರು. ಜೈವಿಕ ಸಮಸ್ಯೆಗಳಿಂದಾಗಿ ತಾರತಮ್ಯವನ್ನು ಎದುರಿಸುವವರಿಗೆ ಈ ಮಸೂದೆ ರಕ್ಷಣೆ ನೀಡುತ್ತದೆ ಮತ್ತು ಟ್ರಾನ್ಸ್‌ಜೆಂಡರ್ ಜನರಿಗೆ ಕಾನೂನು ಮಾನ್ಯತೆ ಮತ್ತು ರಕ್ಷಣೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದರು.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕುರಿತು ಪ್ರಸ್ತುತ ಇರುವ ಅಸ್ಪಷ್ಟ ವ್ಯಾಖ್ಯಾನದಿಂದ ಕಾಯ್ದೆಯ ಪ್ರಯೋಜನಗಳು ತಲುಪಬೇಕಾದ ನಿಜವಾದ ತುಳಿತಕ್ಕೊಳಗಾದ ವ್ಯಕ್ತಿಗಳನ್ನು ಗುರುತಿಸುವುದು ಅಸಾಧ್ಯ ಎಂದು ಸರ್ಕಾರ ಹೇಳಿತ್ತು.

2019ರ ಕಾಯ್ದೆಯ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಯಾವ ವ್ಯಕ್ತಿಯ ಲಿಂಗವು ಹುಟ್ಟಿನ ಸಮಯದಲ್ಲಿ ಗುರುತಿಸಲಾದ ಲಿಂಗಕ್ಕೆ ಹೊಂದಿಕೆಯಾಗುವುದಿಲ್ಲವೋ ಅಂತಹ ವ್ಯಕ್ತಿ”. ಇದರಲ್ಲಿ ಟ್ರಾನ್ಸ್-ಮೆನ್ (trans-man) ಅಥವಾ ಟ್ರಾನ್ಸ್-ವುಮೆನ್ (trans-woman) ಸೇರಿರುತ್ತಾರೆ (ಅಂತಹ ವ್ಯಕ್ತಿಯು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ, ಹಾರ್ಮೋನ್ ಥೆರಪಿ, ಲೇಸರ್ ಥೆರಪಿ ಅಥವಾ ಇನ್ನಾವುದೇ ಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಇಲ್ಲದಿದ್ದರೂ ಸಹ). ಇದರೊಂದಿಗೆ ಅಂತರಲಿಂಗ ವ್ಯತ್ಯಾಸವಿರುವ ವ್ಯಕ್ತಿಗಳು (intersex variations), ಜೆಂಡರ್ ಕ್ವೀರ್ (genderqueer) ಮತ್ತು ಕಿನ್ನರ್, ಹಿಜ್ರಾ, ಅರವಾನಿ ಹಾಗೂ ಜೋಗ್ತಾದಂತಹ ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳೂ ಈ ವ್ಯಾಪ್ತಿಗೆ ಬರುತ್ತಾರೆ.

ಹೊಸ ವ್ಯಾಖ್ಯಾನದ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಕಿನ್ನರ್, ಹಿಜ್ರಾ, ಅರವಾನಿ, ಜೋಗ್ತಾ ಅಥವಾ ನಪುಂಸಕರಂತಹ (eunuch) ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳು”. ಇದರಲ್ಲಿ ಅಂತರಲಿಂಗ ವ್ಯತ್ಯಾಸವಿರುವ (intersex variations) ವ್ಯಕ್ತಿಗಳು ಹಾಗೂ ತಮ್ಮ ಪ್ರಾಥಮಿಕ ಲೈಂಗಿಕ ಲಕ್ಷಣಗಳು, ಬಾಹ್ಯ ಜನನಾಂಗಗಳು, ಕ್ರೋಮೋಸೋಮ್ ಮಾದರಿಗಳು, ಗೊನಾಡಲ್ ಬೆಳವಣಿಗೆ, ಎಂಡೋಜೆನಸ್ ಹಾರ್ಮೋನ್ ಉತ್ಪಾದನೆ ಅಥವಾ ಪ್ರತಿಕ್ರಿಯೆ ಅಥವಾ ಅಂತಹ ಇತರ ವೈದ್ಯಕೀಯ ಸ್ಥಿತಿಗಳಲ್ಲಿ “ಪುರುಷ ಅಥವಾ ಸ್ತ್ರೀ ಬೆಳವಣಿಗೆಗೆ” ಹೋಲಿಸಿದರೆ “ಜನ್ಮಜಾತ ವ್ಯತ್ಯಾಸಗಳನ್ನು” (congenital variations) ಹೊಂದಿರುವ ವ್ಯಕ್ತಿಗಳು ಸೇರುತ್ತಾರೆ.

ಮುಂದುವರಿದು, ಈ ವ್ಯಾಖ್ಯಾನವು “ಯಾವುದೇ ವ್ಯಕ್ತಿ ಅಥವಾ ಮಗುವನ್ನು ಅಂಗಚ್ಛೇದನ, ನಪುಂಸಕೀಕರಣ (emasculation), ವೃಷಣಗಳನ್ನು ತೆಗೆಯುವುದು (castration), ಕಾಲು ಅಥವಾ ಕೈಗಳ ಕತ್ತರಿಸುವಿಕೆ (amputation), ಅಥವಾ ಯಾವುದೇ ಶಸ್ತ್ರಚಿಕಿತ್ಸೆ, ರಾಸಾಯನಿಕ ಅಥವಾ ಹಾರ್ಮೋನ್ ಪ್ರಕ್ರಿಯೆ ಅಥವಾ ಇನ್ನಾವುದೇ ವಿಧಾನದ ಮೂಲಕ ತೃತೀಯಲಿಂಗಿ ಗುರುತನ್ನು ಅಳವಡಿಸಿಕೊಳ್ಳಲು ಅಥವಾ ಹೊರಜಗತ್ತಿಗೆ ಪ್ರದರ್ಶಿಸಲು ಒತ್ತಾಯಿಸಲ್ಪಟ್ಟಿದ್ದರೆ”, ಅಂತಹವರನ್ನೂ ಒಳಗೊಳ್ಳುತ್ತದೆ ಎಂದು ಹೇಳುತ್ತದೆ. ಆದರೆ, “ವಿಭಿನ್ನ ಲೈಂಗಿಕ ದೃಷ್ಟಿಕೋನ (sexual orientation) ಮತ್ತು ಸ್ವಯಂ-ಗ್ರಹಿಸಿದ ಲೈಂಗಿಕ ಗುರುತುಗಳನ್ನು (self-perceived sexual identities) ಹೊಂದಿರುವ ವ್ಯಕ್ತಿಗಳನ್ನು” ಈ ವ್ಯಾಖ್ಯಾನವು ಒಳಗೊಳ್ಳುವುದಿಲ್ಲ ಎಂದು ಇದು ಸ್ಪಷ್ಟಪಡಿಸುತ್ತದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ 2026’ಕ್ಕೆ ಅಂಕಿತ ಹಾಕಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇದು ಭಾರತದಲ್ಲಿ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ಕಾನೂನು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹೊಸ ಕಾನೂನು ಸ್ವಯಂ-ಘೋಷಿತ ಲಿಂಗ ಗುರುತಿನ ಹಕ್ಕನ್ನು ತೆಗೆದುಹಾಕಿರುವುದು, ವೈದ್ಯಕೀಯ ಮಂಡಳಿಯ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದು ಮತ್ತು ಟ್ರಾನ್ಸ್‌ಜೆಂಡರ್ ಎಂಬ ವ್ಯಾಖ್ಯಾನವನ್ನು ಸಂಕುಚಿತಗೊಳಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರ್ಕಾರದ ಈ ಕ್ರಮವು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅನೇಕರು ದೂರಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...