Homeಅಂತರಾಷ್ಟ್ರೀಯಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

- Advertisement -
- Advertisement -

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಿಟಲ್‌ಸನ್ ರಸ್ತೆ ಬದಿ ನಿಂತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ.

ಇರಾಕ್‌ನ ಆಂತರಿಕ ಸಚಿವಾಲಯವು ಅಪಹರಣವನ್ನು ಖಚಿತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಮತ್ತು ಅವರು ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಅಪಹರಣದಲ್ಲಿ ಇರಾನ್ ಬೆಂಬಲಿತ ಮಿಲಿಟರಿ ಗುಂಪಾದ ಕತೈಬ್ ಹೆಜ್ಬುಲ್ಲಾ ಕೈವಾಡವಿರುವ ಸಾಧ್ಯತೆಯಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಕಿಟಲ್‌ಸನ್ ಅವರು ಐಸಿಸ್ (ISIS) ಮತ್ತು ಅಫ್ಘಾನಿಸ್ತಾನದ ಸಂಘರ್ಷಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ್ದರು. ಅಪಾಯದ ಮುನ್ಸೂಚನೆ ಇದ್ದರೂ ಅವರು ವರದಿಗಾರಿಕೆಗಾಗಿ ಇರಾಕ್‌ಗೆ ತೆರಳಿದ್ದರು ಎಂದು ಬಿಬಿಸಿ ವರದಿ ಮಾಡಿದೆ.

ಪತ್ರಕರ್ತೆಯ ಅಪಹರಣದ ದೃಶ್ಯವನ್ನು ಪ್ರತ್ಯಕ್ಷದರ್ಶಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇರಾಕ್‌ ಅಧಿಕಾರಿಗಳು ಅಪಹರಣದ ಸುದ್ದಿ ತಿಳಿದು ಕಾರನ್ನು ಹಿಂಬಾಲಿಸಿದ್ದರು. ಕಾರು ಪತ್ತೆಯಾಗಿದೆ. ಆದರೆ, ಅದರಲ್ಲಿ ಶೆಲ್ಲಿ ಕಿಟಲ್‌ಸನ್ ಇರಲಿಲ್ಲ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಹೇಳಿದೆ.

ಪತ್ರಕರ್ತೆ ಜಿಲ್ ಕ್ಯಾರೊಲ್ ಅಪಹರಣ

ಈ ಹಿಂದೆ, ಜನವರಿ 7, 2006ರಂದು ‘ದಿ ಕ್ರಿಶ್ಚಿಯನ್ ಸೈನ್ಸ್ ಮಾನಿಟರ್’ ಪತ್ರಿಕೆಯ ವರದಿಗಾರ್ತಿಯಾಗಿದ್ದ ಜಿಲ್ ಕ್ಯಾರೊಲ್ ಅವರನ್ನು ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಈ ಸಮಯದಲ್ಲಿ ಕ್ಯಾರೊಲ್ ಅವರ ಇರಾಕಿ ಭಾಷಾಂತರಕಾರ ಅಲಾನ್ ಎನ್ವಿಯಾ ಅವರನ್ನು ಅಪಹರಣಕಾರರು ಹತ್ಯೆ ಮಾಡಿದ್ದರು.

ಸುಮಾರು 82 ದಿನಗಳ ಕಾಲ ಒತ್ತೆಯಾಳಾಗಿ ಇರಿಸಲ್ಪಟ್ಟಿದ್ದ ಕ್ಯಾರೊಲ್ ಅವರನ್ನು ಮಾರ್ಚ್ 30, 2006 ರಂದು ಯಾವುದೇ ಹಾನಿಯಿಲ್ಲದೆ ಬಿಡುಗಡೆ ಮಾಡಲಾಗಿತ್ತು.

ಸಂಶೋಧಕಿ ಎಲಿಜಬೆತ್ ತರ್ಕೋವ್ ಅಪಹರಣ

2023ರಲ್ಲಿ ಇಸ್ರೇಲಿ-ರಷ್ಯನ್ ಸಂಶೋಧಕಿ ಎಲಿಜಬೆತ್ ತರ್ಕೋವ್ ಅವರನ್ನು ಕೂಡ ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಎಲಿಜಬೆತ್ ಅವರು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದು, ತಮ್ಮ ಸಂಶೋಧನೆಗಾಗಿ ಮಾರ್ಚ್ 2023ರಲ್ಲಿ ಬಗ್ದಾದ್‌ಗೆ ಭೇಟಿ ನೀಡಿದ್ದರು. ಬಗ್ದಾದ್‌ನ ಕರ್ರಾಡಾ ಜಿಲ್ಲೆಯ ಕೆಫೆಯೊಂದರಿಂದ ಹೊರಬರುವಾಗ ಅವರನ್ನು ಅಪಹರಣ ಮಾಡಲಾಗಿತ್ತು.

ಎಲಿಜಬೆತ್ ಅವರನ್ನೂ ಕೂಡ ಕತೈಬ್ ಹೆಜ್ಬುಲ್ಲಾ ಗುಂಪು ಅಪಹರಿಸಿತ್ತು. ಈ ಗುಂಪು ಎಲಿಜಬೆತ್ ಅವರನ್ನು ಅಮೆರಿಕದ ಸಿಐಎ ಮತ್ತು ಇಸ್ರೇಲ್‌ನ ಮೊಸಾದ್ ಗುಪ್ತಚರ ಏಜೆಂಟ್ ಎಂದು ಆರೋಪಿಸಿತ್ತು.

ಒಟ್ಟು 903 ದಿನಗಳ ಕಾಲ (ಸುಮಾರು ಎರಡೂವರೆ ವರ್ಷ) ಎಲಿಜಬೆತ್ ಅವರು ಕತೈಬ್ ಹೆಜ್ಬುಲ್ಲಾದ ವಶದಲ್ಲಿದ್ದರು. ಈ ಸಮಯದಲ್ಲಿ ಅವರು ತೀವ್ರ ದೈಹಿಕ ಹಿಂಸೆ, ಚಾವಟಿ ಏಟು ಮತ್ತು ಎಲೆಕ್ಟ್ರಿಕ್ ಶಾಕ್‌ಗಳಂತಹ ಚಿತ್ರಹಿಂಸೆಗಳನ್ನು ಅನುಭವಿಸಿದ್ದಾಗಿ ಬಿಡುಗಡೆಯ ನಂತರ ಹೇಳಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಒತ್ತಡ ಮತ್ತು ಅಮೆರಿಕದ ಮಧ್ಯಸ್ಥಿಕೆಯ ನಂತರ, ಸೆಪ್ಟೆಂಬರ್ 2025ರಲ್ಲಿ ಎಲಿಜಬೆತ್ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಈ ಬಿಡುಗಡೆಯನ್ನು ಅಧಿಕೃತವಾಗಿ ಘೋಷಿಸಿದ್ದರು.

ಪ್ರಸ್ತುತ ಅವರು ಸುರಕ್ಷಿತವಾಗಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸಂಶೋಧನೆಯನ್ನು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...