Homeಅಂತರಾಷ್ಟ್ರೀಯಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

- Advertisement -
- Advertisement -

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಿಟಲ್‌ಸನ್ ರಸ್ತೆ ಬದಿ ನಿಂತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ.

ಇರಾಕ್‌ನ ಆಂತರಿಕ ಸಚಿವಾಲಯವು ಅಪಹರಣವನ್ನು ಖಚಿತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಮತ್ತು ಅವರು ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಅಪಹರಣದಲ್ಲಿ ಇರಾನ್ ಬೆಂಬಲಿತ ಮಿಲಿಟರಿ ಗುಂಪಾದ ಕತೈಬ್ ಹೆಜ್ಬುಲ್ಲಾ ಕೈವಾಡವಿರುವ ಸಾಧ್ಯತೆಯಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಕಿಟಲ್‌ಸನ್ ಅವರು ಐಸಿಸ್ (ISIS) ಮತ್ತು ಅಫ್ಘಾನಿಸ್ತಾನದ ಸಂಘರ್ಷಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ್ದರು. ಅಪಾಯದ ಮುನ್ಸೂಚನೆ ಇದ್ದರೂ ಅವರು ವರದಿಗಾರಿಕೆಗಾಗಿ ಇರಾಕ್‌ಗೆ ತೆರಳಿದ್ದರು ಎಂದು ಬಿಬಿಸಿ ವರದಿ ಮಾಡಿದೆ.

ಪತ್ರಕರ್ತೆಯ ಅಪಹರಣದ ದೃಶ್ಯವನ್ನು ಪ್ರತ್ಯಕ್ಷದರ್ಶಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇರಾಕ್‌ ಅಧಿಕಾರಿಗಳು ಅಪಹರಣದ ಸುದ್ದಿ ತಿಳಿದು ಕಾರನ್ನು ಹಿಂಬಾಲಿಸಿದ್ದರು. ಕಾರು ಪತ್ತೆಯಾಗಿದೆ. ಆದರೆ, ಅದರಲ್ಲಿ ಶೆಲ್ಲಿ ಕಿಟಲ್‌ಸನ್ ಇರಲಿಲ್ಲ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಹೇಳಿದೆ.

ಪತ್ರಕರ್ತೆ ಜಿಲ್ ಕ್ಯಾರೊಲ್ ಅಪಹರಣ

ಈ ಹಿಂದೆ, ಜನವರಿ 7, 2006ರಂದು ‘ದಿ ಕ್ರಿಶ್ಚಿಯನ್ ಸೈನ್ಸ್ ಮಾನಿಟರ್’ ಪತ್ರಿಕೆಯ ವರದಿಗಾರ್ತಿಯಾಗಿದ್ದ ಜಿಲ್ ಕ್ಯಾರೊಲ್ ಅವರನ್ನು ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಈ ಸಮಯದಲ್ಲಿ ಕ್ಯಾರೊಲ್ ಅವರ ಇರಾಕಿ ಭಾಷಾಂತರಕಾರ ಅಲಾನ್ ಎನ್ವಿಯಾ ಅವರನ್ನು ಅಪಹರಣಕಾರರು ಹತ್ಯೆ ಮಾಡಿದ್ದರು.

ಸುಮಾರು 82 ದಿನಗಳ ಕಾಲ ಒತ್ತೆಯಾಳಾಗಿ ಇರಿಸಲ್ಪಟ್ಟಿದ್ದ ಕ್ಯಾರೊಲ್ ಅವರನ್ನು ಮಾರ್ಚ್ 30, 2006 ರಂದು ಯಾವುದೇ ಹಾನಿಯಿಲ್ಲದೆ ಬಿಡುಗಡೆ ಮಾಡಲಾಗಿತ್ತು.

ಸಂಶೋಧಕಿ ಎಲಿಜಬೆತ್ ತರ್ಕೋವ್ ಅಪಹರಣ

2023ರಲ್ಲಿ ಇಸ್ರೇಲಿ-ರಷ್ಯನ್ ಸಂಶೋಧಕಿ ಎಲಿಜಬೆತ್ ತರ್ಕೋವ್ ಅವರನ್ನು ಕೂಡ ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಎಲಿಜಬೆತ್ ಅವರು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದು, ತಮ್ಮ ಸಂಶೋಧನೆಗಾಗಿ ಮಾರ್ಚ್ 2023ರಲ್ಲಿ ಬಗ್ದಾದ್‌ಗೆ ಭೇಟಿ ನೀಡಿದ್ದರು. ಬಗ್ದಾದ್‌ನ ಕರ್ರಾಡಾ ಜಿಲ್ಲೆಯ ಕೆಫೆಯೊಂದರಿಂದ ಹೊರಬರುವಾಗ ಅವರನ್ನು ಅಪಹರಣ ಮಾಡಲಾಗಿತ್ತು.

ಎಲಿಜಬೆತ್ ಅವರನ್ನೂ ಕೂಡ ಕತೈಬ್ ಹೆಜ್ಬುಲ್ಲಾ ಗುಂಪು ಅಪಹರಿಸಿತ್ತು. ಈ ಗುಂಪು ಎಲಿಜಬೆತ್ ಅವರನ್ನು ಅಮೆರಿಕದ ಸಿಐಎ ಮತ್ತು ಇಸ್ರೇಲ್‌ನ ಮೊಸಾದ್ ಗುಪ್ತಚರ ಏಜೆಂಟ್ ಎಂದು ಆರೋಪಿಸಿತ್ತು.

ಒಟ್ಟು 903 ದಿನಗಳ ಕಾಲ (ಸುಮಾರು ಎರಡೂವರೆ ವರ್ಷ) ಎಲಿಜಬೆತ್ ಅವರು ಕತೈಬ್ ಹೆಜ್ಬುಲ್ಲಾದ ವಶದಲ್ಲಿದ್ದರು. ಈ ಸಮಯದಲ್ಲಿ ಅವರು ತೀವ್ರ ದೈಹಿಕ ಹಿಂಸೆ, ಚಾವಟಿ ಏಟು ಮತ್ತು ಎಲೆಕ್ಟ್ರಿಕ್ ಶಾಕ್‌ಗಳಂತಹ ಚಿತ್ರಹಿಂಸೆಗಳನ್ನು ಅನುಭವಿಸಿದ್ದಾಗಿ ಬಿಡುಗಡೆಯ ನಂತರ ಹೇಳಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಒತ್ತಡ ಮತ್ತು ಅಮೆರಿಕದ ಮಧ್ಯಸ್ಥಿಕೆಯ ನಂತರ, ಸೆಪ್ಟೆಂಬರ್ 2025ರಲ್ಲಿ ಎಲಿಜಬೆತ್ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಈ ಬಿಡುಗಡೆಯನ್ನು ಅಧಿಕೃತವಾಗಿ ಘೋಷಿಸಿದ್ದರು.

ಪ್ರಸ್ತುತ ಅವರು ಸುರಕ್ಷಿತವಾಗಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸಂಶೋಧನೆಯನ್ನು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...