Homeಅಂತರಾಷ್ಟ್ರೀಯಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

- Advertisement -
- Advertisement -

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಿಟಲ್‌ಸನ್ ರಸ್ತೆ ಬದಿ ನಿಂತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ.

ಇರಾಕ್‌ನ ಆಂತರಿಕ ಸಚಿವಾಲಯವು ಅಪಹರಣವನ್ನು ಖಚಿತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಮತ್ತು ಅವರು ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಅಪಹರಣದಲ್ಲಿ ಇರಾನ್ ಬೆಂಬಲಿತ ಮಿಲಿಟರಿ ಗುಂಪಾದ ಕತೈಬ್ ಹೆಜ್ಬುಲ್ಲಾ ಕೈವಾಡವಿರುವ ಸಾಧ್ಯತೆಯಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಕಿಟಲ್‌ಸನ್ ಅವರು ಐಸಿಸ್ (ISIS) ಮತ್ತು ಅಫ್ಘಾನಿಸ್ತಾನದ ಸಂಘರ್ಷಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ್ದರು. ಅಪಾಯದ ಮುನ್ಸೂಚನೆ ಇದ್ದರೂ ಅವರು ವರದಿಗಾರಿಕೆಗಾಗಿ ಇರಾಕ್‌ಗೆ ತೆರಳಿದ್ದರು ಎಂದು ಬಿಬಿಸಿ ವರದಿ ಮಾಡಿದೆ.

ಪತ್ರಕರ್ತೆಯ ಅಪಹರಣದ ದೃಶ್ಯವನ್ನು ಪ್ರತ್ಯಕ್ಷದರ್ಶಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇರಾಕ್‌ ಅಧಿಕಾರಿಗಳು ಅಪಹರಣದ ಸುದ್ದಿ ತಿಳಿದು ಕಾರನ್ನು ಹಿಂಬಾಲಿಸಿದ್ದರು. ಕಾರು ಪತ್ತೆಯಾಗಿದೆ. ಆದರೆ, ಅದರಲ್ಲಿ ಶೆಲ್ಲಿ ಕಿಟಲ್‌ಸನ್ ಇರಲಿಲ್ಲ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಹೇಳಿದೆ.

ಪತ್ರಕರ್ತೆ ಜಿಲ್ ಕ್ಯಾರೊಲ್ ಅಪಹರಣ

ಈ ಹಿಂದೆ, ಜನವರಿ 7, 2006ರಂದು ‘ದಿ ಕ್ರಿಶ್ಚಿಯನ್ ಸೈನ್ಸ್ ಮಾನಿಟರ್’ ಪತ್ರಿಕೆಯ ವರದಿಗಾರ್ತಿಯಾಗಿದ್ದ ಜಿಲ್ ಕ್ಯಾರೊಲ್ ಅವರನ್ನು ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಈ ಸಮಯದಲ್ಲಿ ಕ್ಯಾರೊಲ್ ಅವರ ಇರಾಕಿ ಭಾಷಾಂತರಕಾರ ಅಲಾನ್ ಎನ್ವಿಯಾ ಅವರನ್ನು ಅಪಹರಣಕಾರರು ಹತ್ಯೆ ಮಾಡಿದ್ದರು.

ಸುಮಾರು 82 ದಿನಗಳ ಕಾಲ ಒತ್ತೆಯಾಳಾಗಿ ಇರಿಸಲ್ಪಟ್ಟಿದ್ದ ಕ್ಯಾರೊಲ್ ಅವರನ್ನು ಮಾರ್ಚ್ 30, 2006 ರಂದು ಯಾವುದೇ ಹಾನಿಯಿಲ್ಲದೆ ಬಿಡುಗಡೆ ಮಾಡಲಾಗಿತ್ತು.

ಸಂಶೋಧಕಿ ಎಲಿಜಬೆತ್ ತರ್ಕೋವ್ ಅಪಹರಣ

2023ರಲ್ಲಿ ಇಸ್ರೇಲಿ-ರಷ್ಯನ್ ಸಂಶೋಧಕಿ ಎಲಿಜಬೆತ್ ತರ್ಕೋವ್ ಅವರನ್ನು ಕೂಡ ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಎಲಿಜಬೆತ್ ಅವರು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದು, ತಮ್ಮ ಸಂಶೋಧನೆಗಾಗಿ ಮಾರ್ಚ್ 2023ರಲ್ಲಿ ಬಗ್ದಾದ್‌ಗೆ ಭೇಟಿ ನೀಡಿದ್ದರು. ಬಗ್ದಾದ್‌ನ ಕರ್ರಾಡಾ ಜಿಲ್ಲೆಯ ಕೆಫೆಯೊಂದರಿಂದ ಹೊರಬರುವಾಗ ಅವರನ್ನು ಅಪಹರಣ ಮಾಡಲಾಗಿತ್ತು.

ಎಲಿಜಬೆತ್ ಅವರನ್ನೂ ಕೂಡ ಕತೈಬ್ ಹೆಜ್ಬುಲ್ಲಾ ಗುಂಪು ಅಪಹರಿಸಿತ್ತು. ಈ ಗುಂಪು ಎಲಿಜಬೆತ್ ಅವರನ್ನು ಅಮೆರಿಕದ ಸಿಐಎ ಮತ್ತು ಇಸ್ರೇಲ್‌ನ ಮೊಸಾದ್ ಗುಪ್ತಚರ ಏಜೆಂಟ್ ಎಂದು ಆರೋಪಿಸಿತ್ತು.

ಒಟ್ಟು 903 ದಿನಗಳ ಕಾಲ (ಸುಮಾರು ಎರಡೂವರೆ ವರ್ಷ) ಎಲಿಜಬೆತ್ ಅವರು ಕತೈಬ್ ಹೆಜ್ಬುಲ್ಲಾದ ವಶದಲ್ಲಿದ್ದರು. ಈ ಸಮಯದಲ್ಲಿ ಅವರು ತೀವ್ರ ದೈಹಿಕ ಹಿಂಸೆ, ಚಾವಟಿ ಏಟು ಮತ್ತು ಎಲೆಕ್ಟ್ರಿಕ್ ಶಾಕ್‌ಗಳಂತಹ ಚಿತ್ರಹಿಂಸೆಗಳನ್ನು ಅನುಭವಿಸಿದ್ದಾಗಿ ಬಿಡುಗಡೆಯ ನಂತರ ಹೇಳಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಒತ್ತಡ ಮತ್ತು ಅಮೆರಿಕದ ಮಧ್ಯಸ್ಥಿಕೆಯ ನಂತರ, ಸೆಪ್ಟೆಂಬರ್ 2025ರಲ್ಲಿ ಎಲಿಜಬೆತ್ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಈ ಬಿಡುಗಡೆಯನ್ನು ಅಧಿಕೃತವಾಗಿ ಘೋಷಿಸಿದ್ದರು.

ಪ್ರಸ್ತುತ ಅವರು ಸುರಕ್ಷಿತವಾಗಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸಂಶೋಧನೆಯನ್ನು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...