Homeಕರ್ನಾಟಕಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು...

ಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು…

- Advertisement -
- Advertisement -

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಇದು ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕೆರಳುವಂತೆ ಮಾಡಿದೆ. ವ್ಯಾಪಾರಕ್ಕೂ ಸಾರ್ವಜನಿಕರು ವಾಹನ ನಿಲ್ಲಿಸುವುದಕ್ಕೂ ತೊಂದರೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಹೊನ್ನಾವರ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸಿದ್ದಗಂಗಾ ಮಠದಿಂದ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಸಲಾಕೆಗಳನ್ನು ಕಟ್ಟಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಕ್ರಮ ವಹಿಸಿದ್ದು ವಾಹನ ಮತ್ತು ಜನ ಸಂದಣಿ ಇಲ್ಲದೆ ಅಘೋಷಿತ ಬಂದ್ ಆಚರಣೆಯಲ್ಲಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿ.ಎಚ್.ರಸ್ತೆಯಲ್ಲಿನ ವ್ಯಾಪಾರ ವಹಿವಾಟು ಸ್ಥಬ್ದವಾಗಿದೆ.

ಬಿ.ಎಚ್.ರಸ್ತೆಯಲ್ಲೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಟೌನ್ ಹಾಲ್, ಆಶೋಕ ರಸ್ತೆ, ಸೋಮೇಶ್ವರಪುರಂ, ಎಸ್.ಐ.ಟಿ ಮುಖ್ಯರಸ್ತೆ, ಜನರಲ್ ಕಾರಿಯಪ್ಪ ರಸ್ತೆ, ಉಪ್ಪಾರಹಳ್ಳಿ ರಸ್ತೆ ಹೀಗೆ ಪ್ರಮುಖ ವ್ಯಾಪಾರ ನಡೆಯುವ ಜಾಗಗಳಲ್ಲೇ ವಾಹನ ನಿಲುಗಡೆಗೆ ನಿರ್ಬಂಧ ಹಾಕಿರುವುದರಿಂದ ವ್ಯಾಪಾರದ ಮೇಲೆ ಭಾರಿ ಹೊಡೆತ ಬೀಳಲಿದೆ ಎಂಬುದು ವ್ಯಾಪಾರಿಗಳು ಅಳಲು. ಅದೇ ಕಾರಣಕ್ಕೆ ವಾಹನ ನಿಲ್ಲಿಸಬೇಡಿ ಎನ್ನುವ ಬದಲು ಅಂಗಡಿ ಬಾಗಿಲು ಹಾಕಿ ಅಂದ್ರೆ ಆಗಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಕಾರ್ಯಕ್ರಮ ನಡೆಯೋದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ. ಇಲ್ಲಿಗೆ ಒಂದು ಕಿಲೋಮೀಟರ್ ದೂರವಾಗುತ್ತೆ. ಅಲ್ಲಿ ನಡೆಯೋ ಕಾರ್ಯಕ್ರಮಕ್ಕೆ ಇಲ್ಲೇಕೆ ವಾಹನ ನಿಲ್ಸಬಾರ್ದು. ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ. ಅವರೆಲ್ಲಿ ನಿಲ್ಲಿಸಬೇಕು ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರ ಜೊತೆಗೆ ಬಿ.ಎಚ್. ರಸ್ತೆಯ ಸಿದ್ದಗಂಗಾ ಆಸ್ಪತ್ರೆಗೆ ಯಾರೂ ಹೋಗಲು ಸಾಧ್ಯವಾಗುತ್ತಿಲ್ಲ. ಬಿ.ಎಚ್.ರಸ್ತೆಗೆ ಹೊಂದಿಕೊಂಡಂತೆ ಆಸ್ಪತ್ರೆ ಇರುವುದರಿಂದ ರೋಗಿಗಳನ್ನು ಕರೆತರುವ ವಾಹನಗಳು ಅಲ್ಲಿಗೆ ಪ್ರವೇಶಿಸಲು ಸಾಧ್ಯವಿಲ್ಲ.

ಸಂಚಾರಿ ಪೊಲೀಸ್ ವಾಹನಗಳು ರಸ್ತೆಗಳಲ್ಲಿ ಗಸ್ತುತಿರುಗುತ್ತ ವಾಹನಗಳನ್ನು ನಿಲ್ಲಿಸದಂತೆ ಮೈಕ್ ಮೂಲಕ ಹೇಳುತ್ತಿದ್ದಾರೆ. ರಸ್ತೆಯಲ್ಲಿ ಕಾವಲು ಕಾಯುತ್ತಿರುವ ಸಂಚಾರಿ ಪೊಲೀಸರು ಸಾರ್ವಜನಿಕರ ಬೈಗುಳ, ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿದೆ. ‘ಅಲ್ಲಾ ಸಾ ಅಲ್ಲೆಲ್ಲೋ ನಡೆಯೋ ಕಾರ್ಯಕ್ರಮಕ್ಕೆ ಇಲ್ಲ್ಯಾಕೆ ತೊಂದರೆ ಕೊಡ್ತೀರಾ, ಜನ ಎಲ್ಲಿ ನಿಲ್ಸಿಬೇಕು ಹೇಳಿ ಎಂದು ಜಗಳಕ್ಕೆ ಬೀಳುತ್ತಿದ್ದಾರೆ. ‘ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್‌ಪಿಜಿ ಕಮಾಂಡೋಗಳು ಕೂಡ ಕಾವಲಿಗೆ ಸಜ್ಜಾಗಿ ನಿಂತಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ನಿಲ್ದಾಣವೂ ಇದಕ್ಕೆ ಭಿನ್ನವಾಗೇನೂ ಇಲ್ಲ. ಆಟೋ ಸಂಚಾರವೂ ಇಲ್ಲದಂತಾಗಿ ಜನರು ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಎಲ್ಲಿಗೆ ಹೋಗಬೇಕೆಂದರೂ ಸುತ್ತಿಬಳಸಿ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಬಟವಾಡಿಯಿಂದ ಟೌನ್ ಹಾಲ್ ವರೆಗೆ ಜಿರೋ ಟ್ರಾಫಿಕ್ ಇದೆ.

ರೈತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜು, ತುಮಕೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಸೈನ್ಸ್ ಮತ್ತು ಆರ್ಟ್ಸ್ ಕಾಲೇಜು, ಸಿದ್ದಗಂಗಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪುರಷರ ಮತ್ತು ಮಹಿಳೆಯರ ಪದವಿ ಕಾಲೇಜು, ವಿದ್ಯಾನಿಕೇತನ,ಮಾರುತಿ ವಿದ್ಯಾ ಕೇಂದ್ರ ಹೀಗೆ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಿದೆ.

ಒಂದಂತೂ ಸತ್ಯ ನಗರ ಸ್ಥಬ್ದವಾಗಿದೆ. ಅಘೋಷಿತ ಬಂದ್ ಆಚರಣೆಯಲ್ಲಿದೆ. ಜನ ಕಿರಿಕಿರಿ ಅನುಭವಿಸುವಂತೆ ಆಗಿದೆ. ತುಮಕೂರಿನ ಮೇಲೆ ಪೊಲೀಸರು, ಎಸ್ಪಿಜಿ ಪಡೆ ಹದ್ದಿನ ಕಣ್ಣಿಟ್ಟಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...