Homeಮುಖಪುಟಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

- Advertisement -
- Advertisement -

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯನ್ನು ಸುಪ್ರೀಂ ಕೋರ್ಟ್ ಗುರುವಾರ (ಏ.2) ಗಂಭೀರವಾಗಿ ಪರಿಗಣಿಸಿದೆ.

ಮಧ್ಯರಾತ್ರಿಯ ನಂತರ ಅಧಿಕಾರಿಗಳನ್ನು ಸ್ಥಳಾಂತರಿಸುವಾಗ ಅವರ ವಾಹನಗಳ ಮೇಲೆ ಕಲ್ಲು ಮತ್ತು ಕೋಲುಗಳಿಂದ ದಾಳಿ ನಡೆಸಲಾಗಿದೆ ಎಂಬ ಆರೋಪವೂ ಕೇಳಿ ಬಂದಿದ್ದು, ಈ ವಿಷಯವನ್ನೂ ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ.

ಮಾಲ್ಡಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಘಟನೆಯ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಬಂದ ಪತ್ರವನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಅಧಿಕೃತ ಕರ್ತವ್ಯ ನಿರ್ವಹಿಸುತ್ತಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನೆಯ ಸಂದರ್ಭದಲ್ಲಿ ಸುತ್ತುವರಿದು, ಅವರು ಆ ಪ್ರದೇಶದಿಂದ ಹೊರಹೋಗದಂತೆ ತಡೆಯಲಾದ ಘಟನೆಯ ವಿವರಗಳು ಈ ಪತ್ರದಲ್ಲಿದ್ದವು ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು, ಈ ಪ್ರಕರಣವನ್ನು ಇಂದು ವಿಚಾರಣೆಗೆ ಪಟ್ಟಿ ಮಾಡಿರದಿದ್ದರೂ, ವಿಷಯದ ಗಂಭೀರತೆಯನ್ನು ಪರಿಗಣಿಸಿ ಇಂದು ಬೆಳಿಗ್ಗೆ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಈ ತುರ್ತು ವಿಚಾರಣೆಯಲ್ಲಿ ಅರ್ಜಿದಾರರು ಮತ್ತು ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್, ಶ್ಯಾಮ್ ದಿವಾನ್, ಗೋಪಾಲ್ ಸಂಕರನಾರಾಯಣನ್ ಮತ್ತು ಮೇನಕಾ ಗುರುಸ್ವಾಮಿ ಅವರು ಹಾಜರಿದ್ದರು. ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಭಾರತೀಯ ಚುನಾವಣಾ ಆಯೋಗದ ಪರವಾಗಿ ಹಿರಿಯ ವಕೀಲ ದಮ ಶೇಷಾದ್ರಿ ನಾಯ್ಡು ಅವರು ಸಹ ಉಪಸ್ಥಿತರಿದ್ದರು.

ಈ ಘಟನೆಯನ್ನು ನ್ಯಾಯಾಂಗ ಅಧಿಕಾರಿಗಳ ಮೇಲೆ ನಡೆಸಿದ ‘ಪೂರ್ವ ಯೋಜಿತ’ ದಾಳಿ ಎಂದು ಬಣ್ಣಿಸಿದ ಪೀಠವು, ಇದು ನ್ಯಾಯಾಲಯದ ಅಧಿಕಾರಕ್ಕೆ ಸವಾಲು ಹಾಕುವಂತಿದೆ ಮತ್ತು ಕ್ರಿಮಿನಲ್ ನ್ಯಾಯಾಂಗ ನಿಂದನೆಯ ಅಡಿಯಲ್ಲಿ ಬರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪಶ್ಚಿಮ ಬಂಗಾಳದ ನಾಗರಿಕ ಮತ್ತು ಪೊಲೀಸ್ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಾಂಗ ಅಧಿಕಾರಿಗಳು ಮತ್ತು ಅವರ ಕುಟುಂಬದ ರಕ್ಷಣೆಗಾಗಿ ದೇಶದ ಯಾವುದೇ ಭಾಗದಿಂದಲಾದರೂ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಈ ಘಟನೆಯ ಬಗ್ಗೆ ಸಿಬಿಐ ಅಥವಾ ಎನ್‌ಐಎ ಮೂಲಕ ತನಿಖೆ ನಡೆಸಲು ಚುನಾವಣಾ ಆಯೋಗಕ್ಕೆ ಪೀಠವು ಅನುಮತಿ ನೀಡಿದೆ.

livelaw.in ವರದಿ ಪ್ರಕಾರ, ಕಳೆದ ತಡರಾತ್ರಿ ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಾವೇ ಖುದ್ದಾಗಿ ತುರ್ತು ಆದೇಶಗಳನ್ನು ಹೊರಡಿಸಬೇಕಾಯಿತು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಬಹಿರಂಗಪಡಿಸಿದ್ದಾರೆ. ಅಧಿಕಾರಿಗಳ ಪ್ರಾಣಕ್ಕೆ ಅಪಾಯವಿರುವಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ, ನ್ಯಾಯಾಲಯವು ಮಧ್ಯರಾತ್ರಿಯಲ್ಲೇ ಹಸ್ತಕ್ಷೇಪ ಮಾಡುವುದು ಅನಿವಾರ್ಯವಾಗಿತ್ತು ಎಂದು ಅವರು ತಿಳಿಸಿದ್ದಾರೆ.

“ರಾತ್ರಿ 11 ಗಂಟೆಯವರೆಗೂ ನಿಮ್ಮ ಕಲೆಕ್ಟರ್ (ಜಿಲ್ಲಾಧಿಕಾರಿ) ಅಲ್ಲಿ ಇರಲಿಲ್ಲ. ಅನಿವಾರ್ಯವಾಗಿ ನಾನು ಮಧ್ಯರಾತ್ರಿಯಲ್ಲಿ ಅತ್ಯಂತ ಕಠಿಣವಾದ ಮೌಖಿಕ ಆದೇಶಗಳನ್ನು ನೀಡಬೇಕಾಯಿತು. ಅಲ್ಲಿ ಒಂದು 5 ವರ್ಷದ ಮಗುವಿಗೆ ಆಹಾರ ಮತ್ತು ನೀರನ್ನು ಸಹ ನೀಡಲು ಬಿಟ್ಟಿರಲಿಲ್ಲ!” ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಾ ರಾಜ್ಯ ಸರ್ಕಾರಕ್ಕೆ ಹೇಳಿದ್ದಾರೆ.

ವಿಚಾರಣೆ ವೇಳೆ ವಕೀಲೆ ಮೇನಕಾ ಗುರುಸ್ವಾಮಿ ಅವರು ಇದು “ರಾಜಕೀಯೇತರ ಪ್ರತಿಭಟನೆ” ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಒಂದು ವೇಳೆ ಪ್ರತಿಭಟನೆ ರಾಜಕೀಯೇತರವಾಗಿದ್ದರೆ, ಅಲ್ಲಿ ರಾಜಕೀಯ ನಾಯಕರು ಏನು ಮಾಡುತ್ತಿದ್ದರು? ಅಲ್ಲಿ ಏನು ನಡೆಯುತ್ತಿದೆ ಎಂದು ಸ್ಥಳಕ್ಕೆ ಹೋಗಿ ನೋಡುವುದು ಅವರ ಕರ್ತವ್ಯವಾಗಿರಲಿಲ್ಲವೇ? ಯಾರೋ ಒಬ್ಬರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಅವರು ಸುಮ್ಮನಿದ್ದರೇ? ಸಂಜೆ 5 ಗಂಟೆಗೆ ಈ ಜನರು ಅಧಿಕಾರಿಗಳನ್ನು ಘೇರಾವ್ ಮಾಡಿದ್ದಾರೆ. ರಾತ್ರಿ 11 ಗಂಟೆಯವರೆಗೂ ನಿಮ್ಮ ಕಲೆಕ್ಟರ್ (ಜಿಲ್ಲಾಧಿಕಾರಿ) ಅಲ್ಲಿ ಇರಲಿಲ್ಲ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಕೀಲ ಗೋಪಾಲ್ ಸಂಕರನಾರಾಯಣನ್ ಅವರು ಪಶ್ಚಿಮ ಬಂಗಾಳದ ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಅಧಿಕಾರಿಗಳ ರಕ್ಷಣೆಗಾಗಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದ ಪೊಲೀಸ್ ಮತ್ತು ನಾಗರಿಕ ಆಡಳಿತವು ವಿಫಲವಾಗಿರುವ ಹಿನ್ನೆಲೆಯಲ್ಲಿ, ಕೇಂದ್ರ ಪಡೆಗಳ ಹಸ್ತಕ್ಷೇಪ ಅತ್ಯಗತ್ಯ ಎಂದು ಅವರು ವಾದಿಸಿದ್ದಾರೆ.

ಚುನಾವಣಾ ಆಯೋಗದ ಪರ ವಕೀಲ ದಮ ಶೇಷಾದ್ರಿ ನಾಯ್ಡು ಅವರು ಇಂತಹ “ಗುಂಪುಶಾಹಿ” (mobocracy) ಅಥವಾ ಪುಂಡಾಟಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ವಾದಿಸಿದ್ದಾರೆ. ಇದೇ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೂಡ ತೀವ್ರವಾಗಿ ಪ್ರತಿಕ್ರಿಯಿಸಿ, “ಇದು ಕೇವಲ ಅಧಿಕಾರಿಗಳ ಮೇಲಿನ ದಾಳಿಯಲ್ಲ, ಬದಲಿಗೆ ಸುಪ್ರೀಂ ಕೋರ್ಟ್ ಮೇಲೆಯೇ ನಡೆದ ದಾಳಿ” ಎಂದು ಬಣ್ಣಿಸಿದ್ದಾರೆ.

ಸುಪ್ರೀಂ ಕೋರ್ಟ್ ವಹಿಸಿದ ಜವಾಬ್ದಾರಿಯನ್ನು ಈ ನ್ಯಾಯಾಂಗ ಅಧಿಕಾರಿಗಳು ನಿರ್ವಹಿಸುತ್ತಿದ್ದರಿಂದ, ಅವರ ಮೇಲೆ ನಡೆದ ಈ ಕೃತ್ಯವು “ಅಪರಾಧ ಸದೃಶ ಮತ್ತು ಅಕ್ಷಮ್ಯ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...