Homeಮುಖಪುಟಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

- Advertisement -
- Advertisement -

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಜಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಅಂಜನಿ ಅಂಜನ್ ಮತ್ತು ಹಜಾರಿಬಾಗ್ ಡಿಐಜಿ ಅಂಜನಿ ಝಾ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಬಂಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಬಾಲಕಿಯ ತಾಯಿ ರೇಶ್ಮಿ ದೇವಿ, ಮಾಂತ್ರಿಕನಾದ 55 ವರ್ಷದ ಶಾಂತಿ ದೇವಿ ಮತ್ತು 40 ವರ್ಷದ ಭೀಮ್ ರಾಮ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಇವರೆಲ್ಲರೂ ಒಂದೇ ಗ್ರಾಮದವರು.

ರೇಶ್ಮಿ ದೇವಿ ಮಾನಸಿಕ ಮತ್ತು ದೈಹಿಕ ಕಾಯಿಲೆಯಿಂದ ಬಳಲುತ್ತಿರುವ ತನ್ನ ಕಿರಿಯ ಮಗನ ಚಿಕಿತ್ಸೆಗಾಗಿ ತನ್ನ ಹಳ್ಳಿಯಲ್ಲಿರುವ ‘ತಾಂತ್ರಿಕ’ (ಮಾಂತ್ರಿಕ) ವನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದರು ಎಂದು ಅಂಜನಿ ಅಂಜನ್ ಹೇಳಿದರು.

“ಮಗನ ಎಲ್ಲಾ ಕಾಯಿಲೆಗಳನ್ನು ಗುಣಪಡಿಸಲು ಕನ್ಯೆಯಾಗಿರುವ ಹುಡುಗಿಯನ್ನು ಬಲಿ ನೀಡಬೇಕೆಂದು ಮಾಂತ್ರಿಕ ತಾಯಿಗೆ ಹೇಳಿದರು” ಎಂದು ಅವರು ಹೇಳಿದರು.

ಮಾರ್ಚ್ 24 ರಂದು ಅಷ್ಟಮಿಯ ರಾತ್ರಿ ಇಡೀ ಗ್ರಾಮವು ಹಬ್ಬದ ಆಚರಣೆಯಲ್ಲಿ ತೊಡಗಿ ಮಂಗಳ ಜುಲುಸ್ (ರಾಮನವಮಿ ಮೆರವಣಿಗೆ) ನೋಡುತ್ತಿದ್ದಾಗ, ಶಾಂತಿ ದೇವಿಯ ಮನೆಯಲ್ಲಿ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಅಧಿಕಾರಿ ಹೇಳಿದರು.

ಮಾಂತ್ರಿಕನು ಬಾಲಕಿಯ ಗುಪ್ತಾಂಗದೊಳಗೆ ಮರದ ಕೋಲು ಹಾಕಿದ್ದಾನೆ, ಭೀಮ್ ರಾಮ್ ಆಕೆಯ ತಲೆಗೆ ಹೊಡೆದು ರಕ್ತ ಸಂಗ್ರಹಿಸಿದ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಬಾಲಕಿಯನ್ನು ಕೊಂದ ನಂತರ, ಆಕೆಯ ದೇಹವನ್ನು ತೋಟದಲ್ಲಿ ಹೂಳಿದರು.

ಮೂವರು ಅತ್ಯಾಚಾರದ ಆರೋಪ ಹೊರಿಸುವ ಮೂಲಕ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು ಎಂದು ಅಂಜನ್ ಹೇಳಿದರು. ಆದರೆ ಇದು ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಯಲ್ಲಿ ಸಾಬೀತಾಗಿಲ್ಲ ಎಂದರು.

ಭೀಮ್ ರಾಮ್, ತನ್ನ ಅತ್ತಿಗೆ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪವನ್ನೂ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಹಜಾರಿಬಾಗ್‌ನ ಬಿಷ್ಣುಗಢದಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ -ಕೊಲೆ ಪ್ರಕರಣವನ್ನು ಸೋಮವಾರ ಜಾರ್ಖಂಡ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣಿಸಿ ರಾಜ್ಯ ಆಡಳಿತ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ.

ಮಾಧ್ಯಮ ವರದಿಗಳ ಆಧಾರದ ಮೇಲೆ ನ್ಯಾಯಮೂರ್ತಿ ಸುಜಿತ್ ನಾರಾಯಣ್ ಪ್ರಸಾದ್ ಮತ್ತು ನ್ಯಾಯಮೂರ್ತಿ ಸಂಜಯ್ ಪ್ರಸಾದ್ ಅವರಿದ್ದ ವಿಭಾಗೀಯ ಪೀಠವು ಘಟನೆಯನ್ನು ಗಮನಿಸಿತು.

ಈ ಹಿಂದೆ, ಬಾಲಕಿಯ ತಾಯಿ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದ್ದರು. ಮಾರ್ಚ್ 25 ರಂದು ಗ್ರಾಮದ ಹೊಲವೊಂದರಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಹತ್ಯೆಯನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಸೋಮವಾರ ಹಜಾರಿಬಾಗ್‌ನಲ್ಲಿ 12 ಗಂಟೆಗಳ ಬಂದ್ ನಡೆಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...