Homeಕರ್ನಾಟಕಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

2021ರಲ್ಲಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಚಿಲ್ಲರೆ ಮಾರುಕಟ್ಟೆಯಲ್ಲಿ 13 ರೂಪಾಯಿಗೆ ಸಿಗುತ್ತಿದ್ದ ಬಟ್ಟೆ ಚೀಲವನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ (ಕೆಎಚ್‌ಡಿಸಿ) ಪ್ರತಿ ಚೀಲಕ್ಕೆ 52 ರೂಪಾಯಿ ನೀಡಿ ಖರೀದಿಸಲು ರೋಹಿಣಿ ಸಿಂಧೂರಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಸರ್ಕಾರದ ಖಜಾನೆಗೆ ಒಟ್ಟು 5.88 ಕೋಟಿ ರೂಪಾಯಿಗಳ ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪವಿದೆ.

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, “ಇಲಾಖಾ ವಿಚಾರಣೆಯಲ್ಲಿ ಅಧಿಕಾರಿಯನ್ನು ದೋಷಮುಕ್ತಗೊಳಿಸಿದ ಮಾತ್ರಕ್ಕೆ, ಅದೇ ಸತ್ಯಾಂಶಗಳ ಆಧಾರದ ಮೇಲೆ ಕ್ರಿಮಿನಲ್ ತನಿಖೆಯನ್ನು ಪ್ರಾರಂಭಿಸುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಹೇಳಿದ್ದಾರೆ.

“ದಾಖಲಾದ ದೂರು ಅಸ್ಪಷ್ಟವಾಗಲಿ ಅಥವಾ ಕೇವಲ ಊಹಾಪೋಹದಿಂದ ಕೂಡಿದ್ದಾಗಲಿ ಆಗಿರಲಿಲ್ಲ. ಅದು ಸ್ಪಷ್ಟತೆ ಮತ್ತು ದಾಖಲೆಗಳ ಬೆಂಬಲದೊಂದಿಗೆ, ಮೇಲ್ನೋಟಕ್ಕೆ ಅಧಿಕಾರ ದುರುಪಯೋಗ ಮತ್ತು ರಾಜ್ಯಕ್ಕೆ ಹಣಕಾಸಿನ ನಷ್ಟ ಉಂಟಾಗಿರುವುದನ್ನು ಬಹಿರಂಗಪಡಿಸುವ ಆರೋಪವನ್ನು ಒಳಗೊಂಡಿತ್ತು. ಇಂತಹ ಮಾಹಿತಿಯು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ತನಿಖೆ ಆರಂಭಿಸಲು ಅನುಮೋದನೆ ನೀಡಲು ಅರ್ಹವಲ್ಲದಿದ್ದರೆ, ಬೇರೆ ಯಾವುದು ಅರ್ಹವಾಗುತ್ತದೆ ಎಂದು ಯೋಚಿಸಲು ಈ ನ್ಯಾಯಾಲಯವು ಬದ್ಧವಾಗಿದೆ. ಸೆಕ್ಷನ್ 17ಎ ಅಡಿಯಲ್ಲಿನ ಶಾಸನಬದ್ಧ ರಕ್ಷಣೆಯು ಭ್ರಷ್ಟಾಚಾರದ ಗಂಭೀರ ಆರೋಪಗಳ ಬಗ್ಗೆ ನಡೆಯುವ ಕಾನೂನುಬದ್ಧ ವಿಚಾರಣೆಯನ್ನು ಹತ್ತಿಕ್ಕಲು ಉದ್ದೇಶಿಸಿಲ್ಲ; ಇದನ್ನು ಕ್ಷುಲ್ಲಕ ಕಿರುಕುಳವನ್ನು ತಡೆಯಲು ವಿನ್ಯಾಸಗೊಳಿಸಲಾಗಿದೆಯೇ ಹೊರತು, ಹೊಣೆಗಾರಿಕೆಯನ್ನು ತಡೆಯಲು ಅಲ್ಲ” ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.

ಅಧಿಕಾರಿಯೊಬ್ಬರು ತನ್ನ ಅಧಿಕೃತ ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಸಂಬಂಧಿಸಿದ ಆರೋಪಗಳಿದ್ದಾಗ, ಎಫ್‌ಐಆರ್ ದಾಖಲಿಸಲು ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಸೆಕ್ಷನ್ 17ಎ ಅಡಿಯಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಮೈಸೂರಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಸಲ್ಲಿಸಿದ್ದ ದೂರಿನಲ್ಲಿ, ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಎನ್. ಆರ್ ರವಿಚಂದ್ರೇಗೌಡ ಅವರು, ಬಟ್ಟೆ ಚೀಲಗಳನ್ನು ಕೆಎಚ್‌ಡಿಸಿಯಿಂದ ತಲಾ 52 ರೂಪಾಯಿಗೆ ಖರೀದಿಸಲಾಗಿತ್ತು. ಆದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಅವು ಕೇವಲ 13 ರೂಪಾಯಿಗೆ ಮಾರಾಟವಾಗುತ್ತಿದ್ದವು ಎಂದು ತಿಳಿಸಿದ್ದರು. ಇದರ ಪರಿಣಾಮವಾಗಿ ಸರ್ಕಾರಿ ಖಜಾನೆಗೆ 5.88 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅವರು ಆರೋಪಿಸಿದ್ದರು.

ಮುಂದುವರಿದು, ಗ್ರಾಮ ಪಂಚಾಯತಿಗಳಲ್ಲಿ ಬಡವರಿಗಾಗಿ ಮೀಸಲಿಟ್ಟಿದ್ದ ಕ್ಷೇಮಾಭಿವೃದ್ಧಿ ಯೋಜನೆಗಳ ಹಣವನ್ನು ಈ ಚೀಲಗಳ ಖರೀದಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದರು.

ಈ ಕುರಿತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಎಸಿಬಿಗೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಸರ್ಕಾರದ ಅನುಮತಿಯನ್ನು ಕೋರಲಾಗಿತ್ತು. ಆದರೆ, 2022ರ ಸೆಪ್ಟೆಂಬರ್ 19ರಂದು ಸರ್ಕಾರ ಈ ಮನವಿಯನ್ನು ತಿರಸ್ಕರಿಸಿತ್ತು. ದೂರುದಾರರು ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಪೀಠ, 2025ರ ಫೆಬ್ರವರಿಯಲ್ಲಿ ಈ ವಿಷಯವನ್ನು ಮರುಪರಿಶೀಲಿಸುವಂತೆ ಮತ್ತು ಕಾನೂನಿನ ಪ್ರಕಾರ ಹೊಸದಾಗಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಹಾಗಿದ್ದರೂ, ಸರ್ಕಾರವು 2025ರ ಮೇ 26ರಂದು ಮತ್ತೆ ಅನುಮತಿಯನ್ನು ನಿರಾಕರಿಸಿತ್ತು. ವಿಶೇಷವೆಂದರೆ, ಅಧಿಕಾರಿಯನ್ನು ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ, ಈ ಹೊಸ ಆದೇಶವು ಹಳೆಯ ಆದೇಶದಂತೆಯೇ ಅಕ್ಷರಶಃ ಇತ್ತು. ಇದನ್ನು ಗಮನಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಮೇಲ್ನೋಟಕ್ಕೆ ಭ್ರಷ್ಟಾಚಾರದ ಅಂಶಗಳನ್ನು ಹೊಂದಿರುವ ದೂರಿನ ಮೇಲೆ ತನಿಖೆಗೆ ಅನುಮತಿ ಕೋರಲಾಗಿದೆ ಎಂದು ಉಲ್ಲೇಖಿಸಿದ್ದರು.

“ಪ್ರಸ್ತುತ ವ್ಯಾಜ್ಯದಲ್ಲಿ ಪರಿಗಣನೆಗೆ ಬಂದಿರುವ ವಿವಾದವು ಸಾರ್ವಜನಿಕ ಪ್ರಾಮಾಣಿಕತೆಯ ಬುಡಕ್ಕೇ ಕೈಹಾಕುವಂತದ್ದಾಗಿದೆ. ಇದು ಭ್ರಷ್ಟಾಚಾರದ ಆರೋಪಗಳು ಮತ್ತು ಅದರ ಪರಿಣಾಮವಾಗಿ ಸರ್ಕಾರಿ ಖಜಾನೆಗೆ ಉಂಟಾದ ನಷ್ಟಕ್ಕೆ ಸಂಬಂಧಿಸಿದ್ದಾಗಿದೆ. ಇಲ್ಲಿ ಬಿಂಬಿತವಾಗಿರುವುದು ಕೇವಲ ಆಡಳಿತಾತ್ಮಕ ಲೋಪವಲ್ಲ, ಬದಲಿಗೆ ಸಾರ್ವಜನಿಕ ನಿಧಿಗೆ ಗಂಭೀರ ಆರ್ಥಿಕ ಹಾನಿ ಉಂಟುಮಾಡಿದ ನಿರ್ಧಾರವಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಕೇವಲ 13 ರೂಪಾಯಿಗೆ ಲಭ್ಯವಿರುವ ಬಟ್ಟೆ ಚೀಲವನ್ನು, ಜಿಲ್ಲಾಧಿಕಾರಿಯ ನಿರ್ಧಾರದಂತೆ ತಲಾ 52 ರೂಪಾಯಿಯಂತೆ ಹೆಚ್ಚಿನ ದರದಲ್ಲಿ ಖರೀದಿಸಲು ಪ್ರಯತ್ನಿಸಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅಭಿಪ್ರಾಯಪಟ್ಟಿದ್ದಾರೆ.

“ಇಲಾಖಾ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳು ವಿಭಿನ್ನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತವೆ ಹಾಗೂ ಅವುಗಳು ಸಾಕ್ಷ್ಯಾಧಾರಗಳ ವಿಭಿನ್ನ ಮಾನದಂಡಗಳು ಮತ್ತು ಉದ್ದೇಶಗಳಿಂದ ನಿಯಂತ್ರಿಸಲ್ಪಡುತ್ತವೆ ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಈ ವಿಷಯವನ್ನು ಮತ್ತೊಮ್ಮೆ ಮರುಪರಿಶೀಲನೆಗೆ ಕಳುಹಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಮತ್ತು ಇದು ನ್ಯಾಯದ ಹಿತದೃಷ್ಟಿಯಿಂದ ಪ್ರಕ್ರಿಯೆಯನ್ನು ಮತ್ತಷ್ಟು ವಿಳಂಬಗೊಳಿಸುತ್ತದೆ” ಎಂದಿದೆ.

ವರದಿಗಳ ಸಾಮಾನ್ಯವಾಗಿ, ಹೊಸದಾಗಿ ಪರಿಶೀಲಿಸಲು ಈ ವಿಷಯವನ್ನು ಸರ್ಕಾರಕ್ಕೆ ಮರಳಿ ಕಳುಹಿಸುವುದು ಸೂಕ್ತವೆಂದು ನ್ಯಾಯಾಲಯ ಭಾವಿಸುತ್ತಿತ್ತು. ಆದರೆ, ಈ ಪ್ರಕರಣದ ವಿಶೇಷ ಸನ್ನಿವೇಶಗಳಲ್ಲಿ ಅಂತಹ ಕ್ರಮವು ಅನಗತ್ಯ ಮತ್ತು ಅಸಮರ್ಥನೀಯವಾಗಿದೆ” ಎಂದು ತಿಳಿಸಿದೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...