Homeಮುಖಪುಟ'ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ'..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ.

ಚುನಾವಣಾ ಪ್ರಚಾರದ ಭಾಗವಾಗಿ ಗೋಪಾಲಕೃಷ್ಣನ್ ಕ್ಷೇತ್ರದಲ್ಲಿ ಬೃಹತ್ ಹೋರ್ಡಿಂಗ್ಸ್ ಹಾಕಿಸಿದ್ದು, ಅದರಲ್ಲಿ 1977ರಿಂದ ಇಲ್ಲಿಯವರೆ ಕ್ಷೇತ್ರದ ಶಾಸಕರಾದವರ ಹೆಸರನ್ನು ಹಾಕಲಾಗಿದೆ. “ನೀವು ಗಮನಿಸಿಲ್ವಾ..? 50 ವರ್ಷಗಳ ನಿರ್ಲಕ್ಷ್ಯ, ಇದು ಬದಲಾಗಬೇಕು. ಬದಲಾವಣೆಗಾಗಿ ಬಿ. ಗೋಪಾಲಕೃಷ್ಣನ್ ಅವರನ್ನು ಬೆಂಬಲಿಸಿ” ಎಂದು ಬರೆಯಲಾಗಿದೆ.

ಈ ಹೋರ್ಡಿಂಗ್ಸ್ ಮೂಲಕ ಗೋಪಾಲಕೃಷ್ಣನ್ ಅವರು, ಇದುವರೆಗೆ ಕ್ಷೇತ್ರದಲ್ಲಿ ಬರೀ ಮುಸ್ಲಿಮರೇ ಶಾಸಕರಾಗಿದ್ದಾರೆ. ಈ ಬಾರಿ ಹಿಂದೂವನ್ನು ಶಾಸಕನನ್ನಾಗಿ ಮಾಡಿ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಮುಸ್ಲಿಮರು ಶಾಸಕರಾಗಿರುವುದೇ ದೊಡ್ಡ ತಪ್ಪು ಅಥವಾ ಅಪಾಯ ಎಂಬಂತೆ ಬಿಂಬಿಸಿದ್ದಾರೆ.

ಹೋರ್ಡಿಂಗ್ಸ್‌ನಲ್ಲಿ ಯಾವುದೇ ಧರ್ಮವನ್ನು ನೇರವಾಗಿ ಉಲ್ಲೇಖಿಸಿಲ್ಲ. ಆದರೂ, ಬರೀ ಮುಸ್ಲಿಂ ಶಾಸಕರ ಹೆಸರುಗಳೇ ಇರುವುದರಿಂದ ಅದನ್ನು ಬಿಡಿಸಿ ಹೇಳುವ ಅಗತ್ಯ ಇಲ್ಲ. ಕೋಮು ಆಧಾರದ ಮೇಲೆ ಜನರನ್ನು ವಿಭಜಿಸಿ ಮತ ಪಡೆಯಲು ಗೋಪಾಲಕೃಷ್ಣನ್ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

ಈ ಹಿಂದಿನ ಗೋಪಾಲಕೃಷ್ಣನ್ ಅವರ ಹೇಳಿಕೆಗಳು ಇಸ್ಲಾಮೋಫೋಬಿಕ್ ಆಗಿದ್ದರಿಂದ, ಈಗ ಅವರು ಹಾಕಿರುವ ಹೋರ್ಡಿಂಗ್ಸ್ ಕೂಡ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

ಈ ಹಿಂದೆ, ಗೋಪಾಲಕೃಷ್ಣನ್ ಅವರು, ಗುರುವಾಯೂರು ಕಳೆದ 50 ವರ್ಷಗಳಲ್ಲಿ ಹಿಂದೂ ಶಾಸಕರನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿದ್ದರು. ಗುರುವಾಯೂರಿನಂತಹ ರಾಷ್ಟ್ರೀಯ ಯಾತ್ರಾ ಕೇಂದ್ರವನ್ನು ಹಿಂದೂ ಶಾಸಕರು ಏಕೆ ಪ್ರತಿನಿಧಿಸಿಲ್ಲ ಎಂದು ಅವರು ಪ್ರಶ್ನಿಸಿದ್ದರು. ಎಲ್‌ಡಿಎಫ್ ಮತ್ತು ಯುಡಿಎಫ್ ಹಿಂದೂ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ ಎಂದು ಆರೋಪಿಸಿದ್ದರು.

ಈ ಹೇಳಿಕೆಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಆಯೋಗ ದೂರನ್ನು ಗುರುವಾಯೂರು ದೇವಸ್ಥಾನ ಠಾಣೆ ಪೊಲೀಸರಿಗೆ ವರ್ಗಾಯಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಪೊಲೀಸರು ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 1951ರ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸೆಕ್ಷನ್ ಧರ್ಮದ ಆಧಾರದಲ್ಲಿ ದ್ವೇಷವನ್ನು ಹರಡುವುದಕ್ಕೆ ಸಂಬಂಧಿಸಿದೆ.

ಪ್ರಕರಣ ದಾಖಲಾಗಿದ್ದರೂ, ಗೋಪಾಲಕೃಷ್ಣನ್ ತಮ್ಮ ಕೋಮುವಾದಿ ಹೇಳಿಕೆಗಳನ್ನು ಮುಂದುವರಿಸಿದ್ದಾರೆ. ಗುರುವಾಯೂರು ದೇವಸ್ಥಾನವನ್ನು ಉಲ್ಲೇಖಿಸಿ ಕೋಮು ಧ್ರುವೀಕರಣದ ಹೇಳಿಕೆ ನೀಡುತ್ತಲೇ ಇದ್ದಾರೆ.

ಧಾರ್ಮಿಕ ನೆಲೆಯಲ್ಲಿ ಪ್ರಚಾರ ಮಾಡುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ಅವರು ತಮ್ಮ ಹೇಳಿಕೆಗಳಿಗೆ ಬದ್ಧರಾಗಿದ್ದೇನೆ ಎಂದಿದ್ದು, ಅವುಗಳನ್ನು ಪುನರಾವರ್ತಿಸುವುದಾಗಿಯೂ ತಿಳಿಸಿದ್ದಾರೆ.

ಗೋಪಾಲಕೃಷ್ಣನ್ ವಿರುದ್ಧ ಸಲ್ಲಿಸಲಾದ ದೂರನ್ನು ಪರಿಗಣಿಸುವಂತೆ ಮಾ.27ರಂದು ಕೇರಳ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ನಾಯಕ ಗೋಕುಲ್ ಗುರುವಾಯೂರು ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಗೋಪಾಲಕೃಷ್ಣನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಲ್‌ಡಿಎಫ್ ಅಭ್ಯರ್ಥಿ ಎನ್.ಕೆ. ಅಕ್ಬರ್, ದೇಶದಲ್ಲಿ ಎಲ್‌ಪಿಜಿ ಕೊರತೆಯಂತಹ ವಿಷಯಗಳ ಕುರಿತು ಟೀಕೆಗಳನ್ನು ಎದುರಿಸುತ್ತಿರುವ ಬಿಜೆಪಿ ಇಂತಹ ತಂತ್ರಗಳನ್ನು ಆಶ್ರಯಿಸುತ್ತಿದೆ ಎಂದಿದ್ದಾರೆ. ಯುಡಿಎಫ್ ಅಭ್ಯರ್ಥಿ ಪಿ.ಎಂ. ಸಾದಿಕಲಿ ಕೂಡ ಗೋಪಾಲಕೃಷ್ಣನ್ ಹೇಳಿಕೆಯನ್ನು ಟೀಕಿಸಿದ್ದು, ಚುನಾವಣೆಗೆ ಮುನ್ನ ಬಿಜೆಪಿ ಕೋಮು ವಿಭಜನೆಗೆ ಪ್ರಯತ್ನಿಸುತ್ತಿದೆ. ಆದರೆ, ಅದು ಕೇರಳದಲ್ಲಿ ಯಶಸ್ವಿಯಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...