Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...