Homeಮುಖಪುಟದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪರ್ವೀನ್ ಸಿಂಗ್ ಅವರು ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಲೂಟಿ ಮತ್ತು ಬೆಂಕಿ ಹಚ್ಚುವ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಶಾ ಆಲಂ, ರಶೀದ್ ಸೈಫಿ, ಮೊಹಮ್ಮದ್ ಶದಾಬ್, ಹಬೀಬ್, ಇರ್ಫಾನ್, ಸುಹೇಲ್, ಸಲೀಮ್ ಅಲಿಯಾಸ್ ಆಶು, ಇರ್ಷಾದ್ ಮತ್ತು ಅಜರ್ ಅಲಿಯಾಸ್ ಸೋನು ಎಂಬ ಒಂಬತ್ತು ಜನರ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದರು.

ಮಾರ್ಚ್ 30 ರ ಆದೇಶದಲ್ಲಿ, ನ್ಯಾಯಾಲಯವು, “ಸಾಕ್ಷ್ಯಗಳು ಸಾಮಾನ್ಯ ಸ್ವರೂಪದ್ದಾಗಿದ್ದು, ವಿಶೇಷವಾಗಿ ಈ ಸಾಕ್ಷಿಗಳು ಘಟನೆಯ ಸ್ಥಳಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ದಿಷ್ಟತೆಯ ಕೊರತೆಯಿದೆ… ಆರೋಪಿಗಳನ್ನು ಶಿಕ್ಷಿಸಲು ಈ ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನಾನು ಕಂಡುಕೊಂಡಿದ್ದೇನೆ” ಎಂದು ಅಭಿಪ್ರಾಯಪಟ್ಟಿದೆ.

ರಾಷ್ಟ್ರ ರಾಜಧಾನಿಯ ಚಾಂದ್ ಬಾಗ್ ಪ್ರದೇಶದಲ್ಲಿ ಭುಗಿಲೆದ್ದ ಗಲಭೆಯ ಸಂದರ್ಭದಲ್ಲಿ ಇನ್ನೋವಾ ಕ್ರಿಸ್ಟಾ ಕಾರನ್ನು ಧ್ವಂಸಗೊಳಿಸುವುದು, ಮೋಟಾರ್ ಸೈಕಲ್ ಸುಟ್ಟುಹಾಕುವುದು, ಬೀದಿ ವ್ಯಾಪಾರಿಗಳ ಬಂಡಿಗಳನ್ನು ಲೂಟಿ ಮಾಡುವುದು ಮತ್ತು ‘ರಾಯಲ್ ಮೋಟಾರ್ಸ್’ ಎಂಬ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಯಾಳ್‌ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳಲ್ಲಿ ವಿರೋಧಾಭಾಸಗಳನ್ನು ಗಮನಿಸಿದ ನ್ಯಾಯಾಲಯ, ಪ್ರಕರಣದ ತನಿಖಾಧಿಕಾರಿ ಘಟನೆಯ ದಿನಾಂಕವನ್ನು ಫೆಬ್ರವರಿ 24 ಎಂದು ತಪ್ಪಾಗಿ ದಾಖಲಿಸಿದ್ದಾರೆ. ಆದರೆ, ಘಟನೆ ಫೆಬ್ರವರಿ 25, 2020 ರಂದು ನಡೆದಿದೆ ಎಂದು ಹೇಳಿದೆ.

ಸುದ್ದಿ ವಾಹಿನಿಯೊಂದರ ವಾಹನ (ಇನ್ನೋವಾ ಕ್ರಿಸ್ಟಾ) ಮೇಲಿನ ದಾಳಿಗೆ ಸಂಬಂಧಿಸಿದಂತೆ, ಚಾಲಕ ಮತ್ತು ಪ್ರಯಾಣಿಕನು, ಪೊಲೀಸರರು ಗುರಿತಿಸಿದ ಸ್ಥಳ ಯೋಜನೆ ಹಾಗೂ ಪೊಲೀಸ್ ಸಾಕ್ಷ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಸ್ಥಳ ಮತ್ತು ಸಮಯವನ್ನು ಗುರುತಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.

“ಈ ಘಟನೆಗೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ಗ್ಯಾನ್ ಸಿಂಗ್ ಮತ್ತು ಹೆಡ್ ಕಾನ್‌ಸ್ಟೆಬಲ್ ಸುನಿಲ್ ಅವರ ಸಾಕ್ಷ್ಯಗಳು ಸಂಪೂರ್ಣವಾಗಿ ಸುಳ್ಳು ಎಂದು ಕಂಡುಬಂದಿದೆ” ಎಂದು ನ್ಯಾಯಾಧೀಶರು ಹೇಳಿದರು. ಈ ಘಟನೆ ವಾಸ್ತವವಾಗಿ ಪೊಲೀಸರು ಹೇಳಿಕೊಂಡ ಸ್ಥಳದಿಂದ ದೂರದಲ್ಲಿ ನಡೆದಿದೆ ಎಂದು ಗಮನಿಸಿದರು.

ಪ್ರಮುಖ ಘಟನೆಗಳ ಸಮಯ ಮತ್ತು ಸ್ಥಳದ ಬಗ್ಗೆ ಪ್ರಾಥಮಿಕ ಸಾಕ್ಷಿಗಳು ಸುಳ್ಳು ಹೇಳಿಕೆ ನೀಡಿರುವುದರಿಂದ, ಇತರ ಆಪಾದಿತ ಗಲಭೆಗಳಿಗೆ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಅವರ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಗಮನಿಸಿತು.

“ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಈ ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನಾನು ಕಂಡುಕೊಂಡಿದ್ದೇನೆ. ಅದಕ್ಕೆ ಅನುಗುಣವಾಗಿ ಆರೋಪಿಗಳು ಅನುಮಾನದ ಲಾಭಕ್ಕೆ ಅರ್ಹರು ಎಂದು ನಾನು ಕಂಡುಕೊಂಡಿದ್ದೇನೆ” ಎಂದು ನ್ಯಾಯಾಲಯವು ಹೇಳಿತು. ಅವರ ಜಾಮೀನುದಾರರನ್ನು ಬಿಡುಗಡೆ ಮಾಡಯವ ಜೊತೆಗೆ ಜಾಮೀನು ಬಾಂಡ್‌ಗಳನ್ನು ರದ್ದುಗೊಳಿಸಬೇಕು ಎಂದು ಆದೇಶಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...