Homeಮುಖಪುಟಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

- Advertisement -
- Advertisement -

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ 

ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ. 

ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ ರಟ್ಟನ್‌ಗಢ ಗ್ರಾಮದಲ್ಲಿ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿದ್ದು, ಏಪ್ರಿಲ್ 2ರ, ಬುಧವಾರ ಸಂಜೆ ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪ ಅವರ ಮೇಲಿದೆ.

ಪೊಲೀಸ್ ಅಧಿಕಾರಿಗಳು ದೃಢೀಕರಿಸದಿದ್ದರೂ, ಕುಟುಂಬ ಸದಸ್ಯರು ಅಮನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ, ದಾಳಿಯ ಸಮಯದಲ್ಲಿ ಪೊಲೀಸರಿಗೆ ಪ್ರಮುಖ ಆರೋಪಿ ಗುರ್ತೇಜ್ ಸಿಂಗ್ ಪತ್ತೆಯಾಗಲಿಲ್ಲ.

ಮೂಲಗಳ ಪ್ರಕಾರ, ಸ್ಫೋಟದಲ್ಲಿ ರ್ಯಾಪಿಡೊ ಬೈಕ್ ಸವಾರ ಗುರ್ತೇಜ್ ಭಾಗಿಯಾಗಿದ್ದಾನೆ ಎಂಬ ಶಂಕೆ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಮನ್ ಪ್ರೀತ್ ಸಿಂಗ್ ಅವರ ಪತ್ನಿ ತಮ್ಮ ಪತಿಗೆ ಗುರ್ತೇಜ್ ಸಿಂಗ್ ಜೊತೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಇದಲ್ಲದೆ, ಗುರ್ತೇಜ್ ಅವರ ತಾಯಿ, ಕಳೆದ 3-4 ವರ್ಷಗಳಿಂದ ಅವರ ಕುಟುಂಬವು ಅವರ ಸಂಪರ್ಕದಲ್ಲಿಲ್ಲ ಮತ್ತು ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಮಗ ಚಂಡೀಗಢದಲ್ಲಿ ರ್ಯಾಪಿಡೋ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆಂದು ಜನರಿಂದ ತಿಳಿದುಕೊಂಡೆ ಎಂದಿರುವ ಅವರು, “ಅವನು ಏನಾದರೂ ತಪ್ಪು ಮಾಡಿದ್ದರೆ ಪೊಲೀಸರು ಅವನನ್ನು ಬಂಧಿಸಬೇಕು, ಆದರೆ ಕುಟುಂಬದ ಇತರ ಸದಸ್ಯರಿಗೆ ಕಿರುಕುಳ ನೀಡಬಾರದು” ಎಂದು ಕೇಳಿಕೊಂಡಿದ್ದಾರೆ. 

ಪ್ರಧಾನ ಕಚೇರಿಯ ಪೊಲೀಸ್ ತಂಡಗಳು ದಾಳಿ ನಡೆಸಿದ್ದು, ಅದರ ಬಗ್ಗೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಎಸ್‌ಎಸ್‌ಪಿ ರೋಪರ್ ಮಣಿಂದರ್ ಸಿಂಗ್ ಹೇಳಿದ್ದಾರೆ.

ಘಟನೆ ಹಿನ್ನೆಲೆ

ಚಂಡೀಗಢದ ಸೆಕ್ಟರ್ 37 ರಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಮೇಲೆ ಬುಧವಾರ ಸಂಜೆ ಇಬ್ಬರು ವ್ಯಕ್ತಿಗಳು ಹ್ಯಾಂಡ್ ಗ್ರೆನೇಡ್ ಎಸೆದಿದ್ದು, ಆ ಪ್ರದೇಶದಲ್ಲಿ ಭೀತಿ ಉಂಟಾಗಿದ್ದು, ಭದ್ರತಾ ಎಚ್ಚರಿಕೆ ನೀಡಲಾಗಿತ್ತು. 

ಅದೃಷ್ಟವಶಾತ್, ಬಿಜೆಪಿ ಕಚೇರಿಯ ಆವರಣ ಗೋಡೆಯಿಂದ ಕೆಳಗೆ ಬಿದ್ದು ಪಾರ್ಕಿಂಗ್ ಸ್ಥಳದಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ. ಸಿಸಿಟಿವಿ ಕ್ಯಾಮೆರಾಗಳು ಇಬ್ಬರು ಶಂಕಿತರ ಮುಖಗಳನ್ನು ಸೆರೆಹಿಡಿದಿದ್ದು, ಅವರನ್ನು ಗುರುತಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...