Homeಅಂತರಾಷ್ಟ್ರೀಯದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

- Advertisement -
- Advertisement -

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ ‘ಔಪಚಾರಿಕ ಕ್ಷಮೆಯಾಚನೆ’ ಕೇಳುವುದಾಗಿ ಹೇಳಿದೆ.

ಇದನ್ನು, “ತಲೆಮಾರುಗಳ ಜಾತಿ ಆಧಾರಿತ ತಾರತಮ್ಯ, ಹೊರಗಿಡುವಿಕೆ ಮತ್ತು ಅವಕಾಶ ನಿರಾಕರಣೆಯ ಐತಿಹಾಸಿಕ ಅಂಗೀಕಾರ” ಎಂದು ಸಾಮಾಜಿಕ ಕಾರ್ಯಕರ್ತರು ಬಣ್ಣಿಸಿದ್ದಾರೆ. ಪ್ರಸ್ತಾವಿತ ಕ್ಷಮೆಯಾಚನೆಯು ಸಾಮಾಜಿಕ ನ್ಯಾಯ, ಎಲ್ಲರನ್ನೂ ಒಳಗೊಳ್ಳುವ ಪುನಃಸ್ಥಾಪನೆ ಮತ್ತು ಐತಿಹಾಸಿಕ ಸಮನ್ವಯದ ಕ್ರಮಗಳೊಂದಿಗೆ ಜಾರಿಯಾಗುತ್ತದೆ.

ಕಾರ್ಯಸೂಚಿಯಲ್ಲಿ ಏನಿದೆ..?

“ದಲಿತರು ಮತ್ತು ಐತಿಹಾಸಿಕವಾಗಿ ಅಂಚಿನಲ್ಲಿರುವ ಸಮುದಾಯಗಳ ಮೇಲೆ ಪ್ರಭುತ್ವ, ಸಮಾಜ ಮತ್ತು ನೀತಿ ರಚನೆಗಳಿಂದ ಉಂಟಾದ ಅನ್ಯಾಯ, ತಾರತಮ್ಯ ಮತ್ತು ಅವಕಾಶಗಳ ವಂಚಿತತೆಯನ್ನು ನಾವು ಔಪಚಾರಿಕವಾಗಿ ಒಪ್ಪಿಕೊಳ್ಳುತ್ತೇವೆ. ಸಾಮಾಜಿಕ ನ್ಯಾಯ, ಎಲ್ಲರನ್ನೂ ಒಳಗೊಳ್ಳುವ ಪುನಃಸ್ಥಾಪನೆ ಮತ್ತು ಐತಿಹಾಸಿಕ ಸಮನ್ವಯಕ್ಕೆ ಆಧಾರವನ್ನು ಸಿದ್ಧಪಡಿಸುತ್ತೇವೆ. ಸುಧಾರಣಾ-ಆಧಾರಿತ ಕಾರ್ಯಕ್ರಮವನ್ನು ಸಹ ಘೋಷಿಸಲಾಗುವುದು” ಎಂದು ಅದು ಹೇಳಿದೆ.

ದಲಿತರು ಜನಸಂಖ್ಯೆಯ ಸುಮಾರು ಶೇ.13-14 ರಷ್ಟಿದ್ದರೂ, ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆಯ ವಿರುದ್ಧ ಸಾಂವಿಧಾನಿಕ ಖಾತರಿಗಳು ಮತ್ತು ಕಾನೂನುಗಳ ಹೊರತಾಗಿಯೂ ಅವರು ಬೇರೂರಿರುವ ಹೊರಗಿಡುವಿಕೆಯನ್ನು ಎದುರಿಸುತ್ತಿರುವ ದೇಶದಲ್ಲಿ ಈ ಭರವಸೆ ಗಮನ ಸೆಳೆದಿದೆ. ಸುಮಾರು ಶೇ.42 ದಲಿತರು ಬಡತನ ರೇಖೆಗಿಂತ ಕೆಳಗೆ ವಾಸಿಸುತ್ತಿದ್ದಾರೆ. ಸಾಕ್ಷರತೆ ರಾಷ್ಟ್ರೀಯ ಸರಾಸರಿಗಿಂತ ಕೆಳಗಿದೆ ಮತ್ತು ಪ್ರಮುಖ ಸಂಸ್ಥೆಗಳಲ್ಲಿ ಪ್ರಾತಿನಿಧ್ಯವು ಅಸಮಾನವಾಗಿ ಕಡಿಮೆಯಾಗಿದೆ ಎಂದು ಕಾರ್ಯಕರ್ತರು ಹೇಳಿದ್ದಾರೆ.

ಬೈತಾಡಿಯಲ್ಲಿರುವ ದಲಿತ ಸಮಾಜ ಅಭಿವೃದ್ಧಿ ವೇದಿಕೆಯ ಅಧ್ಯಕ್ಷೆ ಸರಸ್ವತಿ ನೇಪಾಳಿ ಪ್ರತಿಕ್ರಿಯಿಸಿ, ಬಾಲ್ಯದಲ್ಲಿ ತನ್ನ ಸಹಪಾಠಿಗಳಂತೆಯೇ ಅದೇ ನೀರಿನ ಪಾತ್ರೆಯಿಂದ ನೀರು ಕುಡಿಯಲು ನಮಗೆ ಅವಕಾಶವಿರಲಿಲ್ಲ. ನಾನು ದಲಿತಳಾಗಿದ್ದರಿಂದ ನೀರಿಗಾಗಿ ಮನೆಗೆ ನಡೆದುಕೊಂಡು ಹೋಗಬೇಕಾಗಿತ್ತು” ಎಂದು ನೆನಪಿಸಿಕೊಂಡರು. “ಪ್ರಭುತ್ವದ ಅಧಿಕೃತ ಕ್ಷಮೆಯಾಚನೆಯು ನಮ್ಮ ಗಾಯಗಳಿಗೆ ಮುಲಾಮು ಇದ್ದಂತೆ” ಎಂದು ಅವರು ಹೇಳಿದರು.

“ಆದರೆ ಅದು ಸಂಪೂರ್ಣವಾಗಿ ಗುಣವಾಗಲು, ಸರ್ಕಾರವು ನಮ್ಮ ಎಲ್ಲಾ ಖಾತರಿಪಡಿಸಿದ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಖಚಿತಪಡಿಸಿಕೊಳ್ಳಬೇಕು. ಅದು ನಮಗೆ ನ್ಯಾಯ ನೀಡುತ್ತದೆ ಮತ್ತು ನಮ್ಮ ಘನತೆಯನ್ನು ಖಚಿತಪಡಿಸುತ್ತದೆ” ಎಂದರು.

ದಲಿತ ಹಕ್ಕುಗಳ ಕಾರ್ಯಕರ್ತ ಹೀರಾ ಲಾಲ್ ಬಿಶ್ವಕರ್ಮ ಈ ಘೋಷಣೆಯನ್ನು ಸ್ವಾಗತಿಸಿದರು. ಆದರೆ ಅದರ ಅರ್ಥವು ಅನುಷ್ಠಾನದ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅವರು ಹೇಳಿದರು. “ಪ್ರಸ್ತುತ ನಿರ್ಧಾರವು ಗೌರವಾನ್ವಿತವಾಗಿದೆ. ಆದರೆ ಹಿಂದಿನಂತೆ ಅದು ಕೇವಲ ಬಾಯಿ ಮಾತಿನಲ್ಲೇ ಇರುತ್ತದೆ ಎಂಬ ಭಯವಿದೆ” ಎಂದು ಅವರು ಹೇಳಿದರು.

“ಇಂತಹ ಕಾರ್ಯಕ್ರಮಗಳನ್ನು ಘೋಷಿಸಿದ ನಂತರ, ನೀತಿಗಳು, ಬಜೆಟ್‌ಗಳು ಮತ್ತು ರಚನೆಗಳು ಬೇಕಾಗುತ್ತವೆ. ಅವುಗಳಿಲ್ಲದೆ, ಅಂತಹ ಘೋಷಣೆಗಳನ್ನು ಬಾಹ್ಯವಾಗಿ ತೋರಿಸುವುದು ಒಳ್ಳೆಯದು, ಆದರೆ ದಲಿತ ಸಮುದಾಯಕ್ಕೆ ನ್ಯಾಯ ಸಿಗುವುದಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...