Homeಮುಖಪುಟಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

- Advertisement -
- Advertisement -

“ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ” ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ (ಏ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ನಿರ್ಧಾರವನ್ನು ಗೌರವಿಸಿದ್ದಕ್ಕಾಗಿ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ತಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಬದಲಾಗಿ ಎನ್‌ಡಿಎ ಪರ ಪ್ರಚಾರ ಮಾಡುವುದಾಗಿ ಈಗಾಗಲೇ ಲಿಖಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೇನೆ” ಎಂದಿದ್ದಾರೆ.

“ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂಬುವುದು ಮಾಧ್ಯಮಗಳಲ್ಲಿ ಚರ್ಚೆಯ ವಿಷಯವಾಗಿದೆ. ಹಾಗಾಗಿ, ನಾನು ಇಲ್ಲಿ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮೊದಲೇ ಹೈಕಮಾಂಡ್‌ಗೆ ತಿಳಿಸಿದ್ದೆ. ನನಗೇ ಆಸಕ್ತಿ ಇಲ್ಲದಿರುವಾಗ ಹೈಕಮಾಂಡ್ ಟಿಕೆಟ್ ಕೊಡಲು ಹೇಗೆ ಸಾಧ್ಯ? ನಾನು ಸ್ಪರ್ಧಿಸಲು ಇಚ್ಚಿಸಿದ್ದರೆ ಎಲ್ಲಿಂದ ಬೇಕಾದರು ಸ್ಪರ್ಧಿಸಬಹುದಿತ್ತು. ಅಲ್ಲಿ ಯಾವ ಕ್ಷೇತ್ರ ಎಂಬ ವಿಚಾರ ಬರುತ್ತಿರಲಿಲ್ಲ” ಎಂದು ಅಣ್ಣಾಮಲೈ ಹೇಳಿದ್ದಾರೆ.

ಎಐಎಡಿಎಂಕೆ ಜೊತೆಗಿನ ಮೈತ್ರಿಯಿಂದಾಗಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂಬ ಚರ್ಚೆಗಳ ನಡುವೆ ಅಣ್ಣಾಮಲೈ ಸ್ಪಷ್ಟೀಕರಣ ಕೊಟ್ಟಿದ್ದಾರೆ.

ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡಿನಲ್ಲಿ ಬಿಜೆಪಿ ಸೇರಿದವರು. 2021ರಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತಮಿಳುನಾಡು ಘಟಕದ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಲಾಗಿತ್ತು. ಆ ಬಳಿಕ ಅವರು ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದರು.

2024ರ ಲೋಕಸಭೆ ಚುನಾವಣೆಗೆ ಮುನ್ನ ‘ಎನ್‌ ಮಣ್ಣ್ ಎನ್‌ ಮಕ್ಕಳು’ ಎಂಬ ಶೀರ್ಷಿಕೆಯಡಿ ರಾಜ್ಯದಾದ್ಯಂತ ಯಾತ್ರೆಯನ್ನೂ ನಡೆಸಿದ್ದರು. ಅದರೆ, ಇದು ಯಾವುದೂ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಸೋಲಾಯಿತು. ನಂತರ ಬಿಜೆಪಿ ಹೈಕಮಾಂಡ್‌ ಅಣ್ಣಾಮಲೈ ಅವರ ರಾಜ್ಯಾಧ್ಯಕ್ಷ ಸ್ಥಾನವನ್ನು ಕಿತ್ತುಕೊಂಡಿತು.

ಎನ್‌ಡಿಎ ಮೈತ್ರಿಕೂಟದೊಳಗೆ ಮಾತುಕತೆ ನಡೆಸಿದ ನಂತರ, ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಅದರಲ್ಲಿ ಅಣ್ಣಾಮಲೈ ಅವರ ಹೆಸರು ಇರಲಿಲ್ಲ. ಹಾಗಾಗಿ, ಬಿಜೆಪಿ ಅಣ್ಣಾಮಲೈ ಅವರನ್ನು ಮೂಲೆಗುಂಪು ಮಾಡಿತು ಎಂಬ ಚರ್ಚೆಗಳು ಗರಿಗೆದರಿತ್ತು. ಅಣ್ಣಾಮಲೈಗೆ ಅತ್ತ ಐಪಿಎಸ್‌ ಹುದ್ದೆಯೂ ಇಲ್ಲ, ಇತ್ತ ಬಿಜೆಪಿಯಲ್ಲೂ ಮನ್ನಣೆ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆಯುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...