Homeಮುಖಪುಟ'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ' : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

- Advertisement -
- Advertisement -

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, “ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ” ಎಂದಿದ್ದಾರೆ. “ಸಂಸತ್ತಿನಲ್ಲಿ ನನ್ನ ಉದ್ದೇಶ ಪ್ರಭಾವ ಬೀರುವುದೇ ಹೊರತು, ಗದ್ದಲ ಸೃಷ್ಟಿಸುವುದಲ್ಲ” ಎಂದು ಅವರು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ಚಡ್ಡಾ ಅವರು, ವಿರೋಧ ಪಕ್ಷದ ಸಭಾತ್ಯಾಗಗಳಲ್ಲಿ ತಾನು ಭಾಗವಹಿಸಿಲ್ಲ ಎಂಬ ಆರೋಪಗಳನ್ನು ‘ಸಂಪೂರ್ಣ ಸುಳ್ಳು’ ಎಂದು ತಳ್ಳಿಹಾಕಿದ್ದಾರೆ. ಸಂಸತ್ತಿನ ಕಲಾಪಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ದಾಖಲಾಗಿರುತ್ತವೆ ಎಂದಿರುವ ಅವರು, ತಾನು ಭಾಗವಹಿಸದ ಒಂದೇ ಒಂದು ಸಂದರ್ಭವನ್ನು ಬೆರಳು ಮಾಡಿ ತೋರಿಸುವಂತೆ ಟೀಕಾಕಾರರಿಗೆ ಸವಾಲು ಹಾಕಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಆಗ್ರಹಿಸಿದ ನಿಲುವಳಿ ನೋಟಿಸ್‌ಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂಬ ಮತ್ತೊಂದು ಆರೋಪದ ಕುರಿತು ಪ್ರತಿಕ್ರಿಯಿಸಿದ ಚಡ್ಡಾ, ಈ ಬಗ್ಗೆ ಯಾವುದೇ ಪಕ್ಷದ ನಾಯಕರು ತನ್ನನ್ನು ಔಪಚಾರಿಕವಾಗಿಯಾಗಲಿ ಅಥವಾ ಅನೌಪಚಾರಿಕವಾಗಿಯಾಗಲಿ ಎಂದಿಗೂ ಸಂಪರ್ಕಿಸಿಲ್ಲ. ಅಲ್ಲದೆ, ನಮ್ಮ ಪಕ್ಷದ ಇತರ ಹಲವಾರು ಸಂಸದರು ಕೂಡ ಆ ನೋಟಿಸ್‌ಗೆ ಸಹಿ ಹಾಕಿಲ್ಲ ಎಂದು ಹೇಳಿದ್ದಾರೆ.

ತನ್ನ ಕೆಲಸವನ್ನು ಎತ್ತಿ ತೋರಿಸಿದ ಚಡ್ಡಾ ಅವರು, ಜಿಎಸ್‍ಟಿ, ಆದಾಯ ತೆರಿಗೆ, ದೆಹಲಿಯ ವಾಯು ಮಾಲಿನ್ಯ, ಪಂಜಾಬ್‌ನ ನೀರಿನ ಸಮಸ್ಯೆಗಳು, ಸಾರ್ವಜನಿಕ ಆರೋಗ್ಯ, ಶಿಕ್ಷಣ, ರೈಲ್ವೆ ಪ್ರಯಾಣಿಕರ ಸಮಸ್ಯೆಗಳು, ಋತುಸ್ರಾವದ ಆರೋಗ್ಯ, ನಿರುದ್ಯೋಗ ಮತ್ತು ಹಣದುಬ್ಬರ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಸತತವಾಗಿ ಪ್ರಸ್ತಾಪಿಸುತ್ತಿರುವುದಾಗಿ ತಿಳಿಸಿದ್ದಾರೆ.

ತನ್ನ ಕೆಲಸದ ಹೊಣೆಗಾರಿಕೆಯನ್ನು ಪುನರುಚ್ಚರಿಸಿದ ಚಡ್ಡಾ, “ಸಂಸತ್ತು ಜನರ ತೆರಿಗೆ ಹಣದಿಂದ ನಡೆಯುತ್ತದೆ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದಿದ್ದಾರೆ. “ಪ್ರತಿಯೊಂದು ಸುಳ್ಳು ಕೂಡ ಬಯಲಾಗಲಿದೆ” ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಪಕ್ಷದ ಉಪನಾಯಕನ ಸ್ಥಾನದಿಂದ ಎಎಪಿ ಹಠಾತ್ ತೆಗೆದು ಹಾಕಿದೆ. ಇದು ಚಡ್ಡಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಚಡ್ಡಾ ಇತ್ತೀಚಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಜನರ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದರು. ಅವರು ಪ್ರಸ್ತಾಪಿಸಿದ ವಿಷಯಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಜನರು ಕೂಡ ಈ ಬಗ್ಗೆ ಚರ್ಚೆಗಳನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲೇ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು, ಎಎಪಿಯಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ. ಜನರಲ್ಲೂ ಆಶ್ಚರ್ಯ ಮೂಡಿಸಿದೆ. ಚಡ್ಡಾ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕ ವಿರುದ್ದವೇ ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ಟಿನಲ್ಲಿ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು ಎಎಪಿಯಲ್ಲಿ ವಾಗ್ಯುದ್ಧವಾಗಿ ಪರಿವರ್ತನೆಗೊಂಡಿದೆ. ಹಿರಿಯ ನಾಯಕರು ಚಡ್ಡಾ ಅವರನ್ನು ಬಹಿರಂಗವಾಗಿ ಟೀಕಿಸುತ್ತಾ ಅವರ ರಾಜಕೀಯ ನಿಲುವನ್ನು ಪ್ರಶ್ನಿಸುತ್ತಿದ್ದರೆ, ಚಡ್ಡಾ ಸಂಸತ್ತಿನಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರೂ ಸಹ ತಮ್ಮನ್ನು ಗುರಿ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...