Homeಮುಖಪುಟಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

- Advertisement -
- Advertisement -

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ. ಬದಲಾಗಿ, ಯುವಜನರ ಕಲ್ಯಾಣದ ಕುರಿತು ಮಾತನಾಡಲಾರಂಭಿಸಿದ್ದಾರೆ.

ಶನಿವಾರ (ಏ.4) ಗುವಾಹಟಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಿಜುಷ್ ಹಜಾರಿಕಾ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಯ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿವೆ” ಎಂದು ಹೇಳಿದ್ದಾರೆ. ತಮ್ಮ ಸರ್ಕಾರಗಳ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.

ಬಿಜೆಪಿಯ ಈ ಹಠಾತ್ ಬದಲಾವಣೆಯು, ಕಳೆದ ಹತ್ತು ವರ್ಷಗಳಿಂದ  ಬಿಜೆಪಿ ಬಳಸುತ್ತಿದ್ದ ‘ನುಸುಳುಕೋರ’ ಎಂಬ ಹಳೆಯ ರಾಗವು ಯುವ ಮತದಾರರನ್ನು ಪ್ರಭಾವಿಸಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡಂತಿದೆ. ಅಲ್ಲದೆ, ಯುವಜನತೆಯಲ್ಲಿ ಎನ್‌ಡಿಎ ವಿರುದ್ಧ ಮೌನ ಅಲೆ ಇರುವ ಸಾಧ್ಯತೆಯನ್ನು ಬಿಜೆಪಿ ಅರಿತುಕೊಂಡಿದೆ. ಆದ್ದರಿಂದ, ಸರ್ಕಾರದ ಕಾರ್ಯವೈಖರಿ ಬರಿ ಭಾಷಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ಜೀವನೋಪಾಯದ ಸಮಸ್ಯೆಗಳಿಗೂ ಸ್ಪಂದಿಸುತ್ತಿದೆ ಎಂದು ಮನವರಿಕೆ ಮಾಡಲು ಪ್ರಯತ್ನಿಸುತ್ತಿದೆ.

ಸಚಿವರು ನೀಡಿದ ಭರವಸೆಯ ಪ್ರಕಾರ, ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಜನರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 10 ಲಕ್ಷ ಯುವಜನರಿಗೆ ತಲಾ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡುವ ಯೋಜನೆಯನ್ನು ಬಿಜೆಪಿ ಹೊಂದಿದೆ ಎಂದು ವಿವರಿಸಿದ್ದಾರೆ.

2021ರಿಂದ 615 ಸ್ಟಾರ್ಟ್‌ಅಪ್‌ಗಳಿಗೆ ನೆರವು ನೀಡಲಾಗಿದ್ದು, ಎಂಎಸ್‌ಎಂಇ ವಲಯವು 82 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಮೂಲಕ ತಳಮಟ್ಟದ ಉದ್ಯಮಶೀಲತೆಯನ್ನು ವಿಸ್ತರಿಸಿದೆ ಎಂದು ಸಚಿವರು ಹೇಳಿಕೊಂಡಿದ್ದಾರೆ.

ಇದುವರೆಗೆ ಬಿಜೆಪಿ ‘ಜಾತಿ, ಮಾತಿ ಮತ್ತು ಭೇಟಿ’ (ಸಮುದಾಯ, ಭೂಮಿ ಮತ್ತು ಅಡಿಪಾಯ) ಎಂಬ ಘೋಷಣೆಯಡಿ ಧ್ರುವೀಕರಣದ ರಾಜಕಾರಣ ಮಾಡಿತ್ತು. ವಿಶೇಷವಾಗಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಸಲಾದ ಒತ್ತುವರಿ ತೆರವು ಕಾರ್ಯಾಚರಣೆಗಳ ಮೂಲಕ ಮತ ಸೆಳೆಯಲು ಪ್ರಯತ್ನಿಸಿತ್ತು.

ಶುಕ್ರವಾರ, ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪ್ರಚಾರದಲ್ಲಿ ನುಸುಳುಕೋರರನ್ನು ಹೊರಹಾಕುವ ಮಾತನ್ನೇ ಆಡಿದ್ದರು. ಆದರೆ, ರಾಜಕೀಯ ವಿಶ್ಲೇಷಕರ ಪ್ರಕಾರ ನುಸುಳುಕೋರರ ವಿಚಾರ ಈಗ ಯುವ ಮತದಾರರನ್ನು ಹೆಚ್ಚು ಆಕರ್ಷಿಸುತ್ತಿಲ್ಲ. ಬದಲಿಗೆ, ನಾಡಿನ ಜನಪ್ರಿಯ ಗಾಯಕ ದಿ. ಜುಬೀನ್ ಗಾರ್ಗ್ ಅವರ ಸಾವಿನ ಪ್ರಕರಣದಲ್ಲಿನ ತನಿಖೆ ಮತ್ತು ನ್ಯಾಯದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಯುವಜನತೆ ಹೆಚ್ಚು ಆಕ್ರೋಶಗೊಂಡಿದ್ದಾರೆ.

ಗುವಾಹಟಿಯ ಹೊರವಲಯದಲ್ಲಿರುವ ಹಾತಿಮುರಾದಲ್ಲಿ ಜುಬೀನ್ ಅವರ ಸಮಾಧಿ ಸ್ಥಳದ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲು ರಾಜ್ಯ ಸರ್ಕಾರ ಆರು ತಿಂಗಳು ತೆಗೆದುಕೊಂಡಿದ್ದರಿಂದ ಯುವ ವರ್ಗವು ಅಸಮಾಧಾನಗೊಂಡಿದೆ. ಅಲ್ಲದೆ, ಅವರ ಸಾವಿನ ಕುರಿತ ಹೈಪ್ರೊಫೈಲ್ ಪ್ರಕರಣದ ವಿಚಾರಣೆಯು ಇತ್ತೀಚೆಗಷ್ಟೇ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ಪ್ರಾರಂಭವಾಗಿದೆ. ಇನ್ನು ಬಿಜೆಪಿಗೆ ಪರಿಸ್ಥಿತಿಯನ್ನು ಮತ್ತಷ್ಟು ಕಷ್ಟವಾಗಿಸಿರುವ ವಿಷಯವೇನೆಂದರೆ, ಜುಬೀನ್ ಗಾರ್ಗ್ ಅವರು ಬಿಜೆಪಿ ಪಕ್ಷದ ಪ್ರಬಲ ಟೀಕಾಕಾರರಾಗಿದ್ದರು.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ವಿಧಾನಸಭೆಯಲ್ಲಿ ಜುಬೀನ್ ಅವರನ್ನು ‘ಕೊಲೆ’ ಮಾಡಲಾಗಿದೆ ಎಂದು ಹೇಳಿದ ನಂತರ ‘ಜಸ್ಟೀಸ್ ಫಾರ್ ಜುಬೀನ್’ ಎಂಬ ಅಭಿಯಾನವು ತೀವ್ರಗೊಂಡಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಂಧಿತರಾದ ಏಳು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆಯಾದರೂ, ಸಿಂಗಾಪುರ ಸರ್ಕಾರ ಗಾರ್ಗ್ ಅವರು ‘ಅಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾರೆ’ ಎಂದು ಹೇಳಿ ಕೊಲೆಯ ಆರೋಪವನ್ನು ತಳ್ಳಿಹಾಕಿರುವ ಹಿನ್ನೆಲೆಯಲ್ಲಿ, ಆರೋಪಿಗಳು ಶೀಘ್ರದಲ್ಲೇ ಜೈಲಿನಿಂದ ಹೊರಬರುತ್ತಾರೆ ಎಂಬ ಭಾವನೆ ಯುವಜನರಲ್ಲಿ ಮೂಡಿದೆ.

ಲಂಡನ್‌ನಲ್ಲಿ ಶಿಕ್ಷಣ ಪಡೆದ ಮತ್ತು ಗುವಾಹಟಿ ಸೆಂಟ್ರಲ್ ಕ್ಷೇತ್ರದ ಅಸ್ಸಾಂ ಜಾತೀಯ ಪರಿಷತ್ತಿನ (ಎಜೆಪಿ) ‘ಜೆನ್ ಝಿ’ (Gen Z) ಅಭ್ಯರ್ಥಿ ಕುಂಕಿ ಚೌಧರಿ ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಕ್ಕಾಗಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು, ವಿಶೇಷವಾಗಿ ಯುವಜನರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಟೀಕಿಸಿದ್ದಾರೆ. ಇದರಿಂದ ಎಚ್ಚತ್ತ ಬಿಜೆಪಿ ಈಗ ತನ್ನ ಹಿಂದುತ್ವ ಮತ್ತು ನುಸುಳುಕೋರರ ವಿಷಯಕ್ಕಿಂತ ಉದ್ಯೋಗ ಮತ್ತು ಯುವ ಕಲ್ಯಾಣದ ಮಾತನ್ನು ಆಡಲು ಪ್ರಾರಂಭಿಸಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...